ಲಖಿಂಪುರ್ ಖೇರಿ ಹತ್ಯಾಕಾಂಡ ಘಟನೆ ನಡೆದು ಮೂರು ದಿನಗಳಾದರೂ ಮುಖ್ಯ ಆರೋಪಿ ಕೇಂದ್ರ ಸಚಿವ ಅಜಯ್ ಮಿಶ್ರಾರವರ ಮಗ ಆಶಿಶ್ ಮಿಶ್ರಾ ಬಂಧನವಾಗಿಲ್ಲದ ಕುರಿತು ರೈತರು ಉತ್ತರ ಪ್ರದೇಶ ಸರ್ಕಾರಕ್ಕೆ ಮೂರು ಪ್ರಶ್ನೆಗಳನ್ನು ಕೇಳಿದ್ದಾರೆ. ಭಾನುವಾರ ಶಾಂತಿಯುತ ಪ್ರತಿಭಟನಾನಿರತ ರೈತರ ಮೇಲೆ ಆಶಿಶ್ ಮಿಶ್ರಾ ಕಾರು ಹತ್ತಿಸಿ ನಾಲ್ವರು ರೈತರು ಸೇರಿ 8 ಜನರ ಸಾವಿಗೆ ಕಾರಣವಾಗಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ.
ಮೊದಲನೇಯದಾಗಿ ಆರೋಪಿ ಆಶಿಶ್ ಮಿಶ್ರಾ ಇಂದು ಬೆಳಿಗ್ಗೆ 10 ಗಂಟೆಯೊಳಗೆ ಅವರು ಯುಪಿ ಕ್ರೈಮ್ ಬ್ರಾಂಚ್ ಎದುರು ಹಾಜರಾಗಬೇಕಿತ್ತು. ಅದಕ್ಕಾಗಿ ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿತ್ತು. ಅವರು ಅಪರಾಧ ಎಸಗದಿದ್ದಲ್ಲಿ ಏಕೆ ವಿಚಾರಣೆಗೆ ಹಾಜಾರಾಗಿಲ್ಲ? ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪ್ರಶ್ನಿಸಿದೆ.
.@Uppolice had issued notice to culprit Monu Mishr Teni to appear before Crime Branch, today at 10:00AM.
Looks like Monu is absconding & will not cooperate.UP police shouldn’t waste time, declare him fugitive & seal international borders with Nepal.#Yogi_Shielding_Terrorists pic.twitter.com/UIKPWCCRw9
— Tractor2ਟਵਿੱਟਰ (@Tractor2twitr) October 8, 2021
ಎರಡನೇಯದಾಗಿ ಘಟನೆ ನಡೆದು ಐದು ದಿನಗಳಾಗಿವೆ. ಆರೋಪಿ ಆಶಿಶ್ ಮಿಶ್ರಾ ರೈತರು ಕೊಲೆಯಾದ ಘಟನೆಯ ಸ್ಥಳದಲ್ಲಿ ಇರದಿದ್ದರೆ, ಬೇರೆ ಎಲ್ಲಿದ್ದರು ಎಂದು ಇದುವರೆಗೂ ಏಕೆ ಸಾಬೀತುಪಡಿಸಿಲ್ಲ ಎಂದು ರೈತರು ಪ್ರಶ್ನಿಸಿದ್ದಾರೆ.
ಲಖಿಂಪುರ್ ಖೇರಿ ಘಟನೆಯಲ್ಲಿ ಆಶಿಶ್ ಮಿಶ್ರಾ ಕೈವಾಡವಿಲ್ಲದಿದ್ದರೆ, ಆತನು ನೇಪಾಳಕ್ಕೆ ಏಕೆ ಓಡಿಹೋಗಿದ್ದಾನೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪ್ರಶ್ನಿಸಿದೆ.
SKM Press Bulletin
10:30am, 8 Oct 2021 pic.twitter.com/CadYCLN66m— Kisan Ekta Morcha (@Kisanektamorcha) October 8, 2021
ಪೊಲೀಸರು ಕೇವಲ ಆಶಿಶ್ ಮಿಶ್ರಾನಿಗೆ ಸಮನ್ಸ್ ಕಳಿಸಿದ್ದಾರೆ. ಆದರೆ ಆತನೊಂದಿಗೆ ಸುಮಿತ್ ಜೈಸ್ವಾಲ್ ಮತ್ತು ಅಂಕಿತ್ ದಾಸ್ ಇದ್ದುದ್ದು ವಿಡಿಯೋಗಳಲ್ಲಿ, ಆನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದರಲ್ಲಿ ದಾಖಲಾಗಿದೆ. ಸುಮಿತ್ ಜೈಸ್ವಾಲ್ ಕಾರಿನಿಂದ ಇಳಿದು ಓಡಿ ಹೋಗುತ್ತಿರುವುದು ಸ್ಪಷ್ಟವಾಗಿ ದಾಖಲಾಗಿದೆ. ಹಾಗಾಗಿ ಅವರನ್ನು ಮತ್ತು ಹತ್ಯಾಕಾಂಡಕ್ಕೆ ಕಾರಣವಾದವರನ್ನು ಸಹ ಬಂಧಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿಕೆಯಲ್ಲಿ ತಿಳಿಸಿದೆ.
ರೈತರು ತಾವೇ ಮೊದಲು ಕಲ್ಲು ಹೊಡೆದು ಪ್ರಚೋದನೆ ನೀಡಿದರು ಎಂಬ ಬಿಜೆಪಿ ಬೆಂಬಲಿಗರ ವಾದವನ್ನು ಸಂಯುಕ್ತ ಕಿಸಾನ್ ಮೋರ್ಚಾ ಅಲ್ಲಗೆಳೆದಿದೆ. ಅದರ ವಿಡಿಯೋ ಸಾಕ್ಷ್ಯ ಒದಿಗಿಸಿ ಆ ಎಸ್ಯುವಿ ಕಾರು ಹೋಗುವಾಗ ರೈತರು ಯಾವುದೇ ಹಾನಿ ಮಾಡದೇ ಶಾಂತಿಯುತ ಪ್ರತಿಭಟನೆ ನಡೆಸಿರುವುದನ್ನು ತೋರಿಸಿದೆ.
The video clearly shows that not even a single violent act was initiated by farmers
Its always the BJP govt who hs to play blame game wd the farmers#BJP_MassacredFarmers pic.twitter.com/3sqzLkSmmn— Kisan Ekta Morcha (@Kisanektamorcha) October 7, 2021
ಉತ್ತರ ಪ್ರದೇಶ ಪೊಲೀಸರು ಆಶಿಶ್ ಮಿಶ್ರಾ ಮತ್ತು ಸಹಚರರನ್ನು ಭಾನುವಾರ ಅಪರಾಧದ ಸ್ಥಳದಿಂದ ತಪ್ಪಿಸಿಕೊಳ್ಳಲು ಮತ್ತು ಈಗ ಬಂಧನದಿಂದ ತಪ್ಪಿಸಿಕೊಳ್ಳಲು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ಆರೋಪಿಸಿದೆ.
ರೈತರ ಮೇಲೆ ಹರಿದ ವಾಹನದ ಮೇಲೆ ಏಕೆ ವಿಐಪಿ ಸೈರನ್ ಅಳವಡಿಸಲಾಗಿದೆ ಎಂದು ಯೋಗಿ ಸರ್ಕಾರ ಹೇಳಬೇಕು? ಮೋದಿಜಿ ಕೆಲವು ವರ್ಷಗಳ ಹಿಂದೆ ಕೆಂಪು ದೀಪವನ್ನು ತೆಗೆದು ವಿಐಪಿ ಸಂಸ್ಕೃತಿಯನ್ನು ಕೊನೆಗೊಳಿಸುತ್ತೇವೆ ಎಂದಿದ್ದರು. ಆದರೂ ಇಲ್ಲಿ ಏಕಿದೆ? ವಾಸ್ತವವಾಗಿ, ಯೋಗಿ ಸರ್ಕಾರವು ರೈತರ ವಿರುದ್ಧದ ಅಪರಾಧವನ್ನು ಉತ್ತೇಜಿಸುತ್ತಿದೆ ಎಂದು ಕಿಸಾನ್ ಮೋರ್ಚಾ ಕಿಡಿಕಾರಿದೆ.
ಹೀಗಿರುವಾಗ ಯುಪಿ ಪೊಲೀಸರು ಸಮಯ ವ್ಯರ್ಥ ಮಾಡಬಾರದು, ಆಶಿಶ್ ಮಿಶ್ರಾ ಪರಾರಿಯಾಗಿದ್ದಾನೆ ಎಂದು ಘೋಷಿಸಬೇಕು ಮತ್ತು ನೇಪಾಳದೊಂದಿಗೆ ಅಂತರರಾಷ್ಟ್ರೀಯ ಗಡಿಗಳನ್ನು ಮುಚ್ಚಬೇಕು, ಅವರ ತಂದೆಯನ್ನು ಕೇಂದ್ರ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಆಗ್ರಹಿಸಿದೆ.
ರೈತರ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮುಂದಿನ ಕ್ರಮದ ನಿರ್ಧಾರವನ್ನು ಅಂತಿಮ್ ಅರ್ದಾಸ್ (antim ardaas) ದಿನದಂದು (ಅಕ್ಟೋಬರ್ 12) ಘೋಷಿಸಲಾಗುವುದು ಎಂದು ಎಸ್ಕೆಎಂ ತಿಳಿಸಿದೆ.
ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಆಶಿಶ್ ಮಿಶ್ರಾ ತಪ್ಪಿಸಿಕೊಳ್ಳಲು ಯುಪಿ ಪೊಲೀಸರೇ ಅನುಕೂಲ ಮಾಡಿಕೊಟ್ಟರು- ಎಸ್ಕೆಎಂ