Homeಮುಖಪುಟಲಖಿಂಪುರ್ ಖೇರಿ ಹತ್ಯಾಕಾಂಡ ಪೂರ್ವಯೋಜಿತವಾದುದು: SIT

ಲಖಿಂಪುರ್ ಖೇರಿ ಹತ್ಯಾಕಾಂಡ ಪೂರ್ವಯೋಜಿತವಾದುದು: SIT

SIT ಯು ಕಾರು ಹರಿಸಿ ಕೊಂದ 13 ಆರೋಪಿಗಳ ವಿರುದ್ಧ ಶಸಸ್ತ್ರ ಕಾಯ್ದೆಯಡಿಯಲ್ಲಿ ಕೊಲೆಯತ್ನ ಸೇರಿ ನಾಲ್ಕು ಹೊಸ ಸೆಕ್ಷನ್‌ಗಳನ್ನು ಸೇರಿಸಲು CJM ಮುಂದೆ ಅರ್ಜಿ ಸಲ್ಲಿಸಿದೆ.

- Advertisement -
- Advertisement -

ನಾಲ್ವರು ರೈತರು ಸೇರಿದಂತೆ ಒಟ್ಟು 8 ಜನರ ಅಮಾನುಷ ಸಾವಿಗೆ ಕಾರಣವಾದ ಅಕ್ಟೋಬರ್ 3 ರ ಉತ್ತರ ಪ್ರದೇಶದ ಲಖೀಂಪುರ್ ಖೇರಿ ಹತ್ಯಾಕಾಂಡವು ಯೋಜಿತವಾದ ಮತ್ತು ಉದ್ದೇಶಪೂರ್ವಕ ಕೃತ್ಯವಾಗಿದೆಯೆ ಹೊರತು ನಿರ್ಲಕ್ಷತನದಿಂದ ಆಗಿದ್ದಲ್ಲ ಎಂದು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ತಿಳಿಸಿದೆ.

ಹಾಗಾಗಿ SIT ಯು ಕಾರು ಹರಿಸಿ ಕೊಂದ 13 ಆರೋಪಿಗಳ ವಿರುದ್ಧ ಶಸಸ್ತ್ರ ಕಾಯ್ದೆಯಡಿಯಲ್ಲಿ ಕೊಲೆಯತ್ನ ಸೇರಿ ನಾಲ್ಕು ಹೊಸ ಸೆಕ್ಷನ್‌ಗಳನ್ನು ಸೇರಿಸಲು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (CJM) ಮುಂದೆ ಅರ್ಜಿ ಸಲ್ಲಿಸಿದೆ.

ಈಗಾಗಲೇ ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ಅವರ ಪುತ್ರ ಆಶಿಶ್ ಮಿಶ್ರಾ ವಿರುದ್ಧ ಕೊಲೆಯತ್ನದ ಪ್ರಕರಣ ದಾಖಲಾಗಿದೆ. ನಂತರದ ತನಿಖೆಯ ಸಂದರ್ಭದಲ್ಲಿ ಹೊಸ ಸಾಕ್ಷ್ಯಗಳು ಸಿಕ್ಕಿದ್ದರಿಂದ ಈಗ ಎಲ್ಲಾ 13 ಆರೋಪಿಗಳ ಮೇಲೆ ಕೊಲೆಯತ್ನ ಪ್ರಕರಣ ಸೇರಿಸಲು ಮನವಿ ಮಾಡಿದೆ. ಜೊತೆಗೆ ಆರೋಪಿಗಳ ವಿರುದ್ಧದ ಮೂರು ಆರೋಪಗಳನ್ನು ಕೈಬಿಡುವಂತೆ ಸಹ ಎಸ್‌ಐಟಿ ನ್ಯಾಯಾಲಯಕ್ಕೆ ಮನವಿ ಮಾಡಿದೆ. ಅವುಗಳೆಂದರೆ ಐಪಿಸಿ ಸೆಕ್ಷನ್‌ 279 (ಸಾರ್ವಜನಿಕ ಮಾರ್ಗದಲ್ಲಿ ದುಡುಕಿನ ಚಾಲನೆ), 338 (ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕ್ರಿಯೆ) ಮತ್ತು 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ).

ಅವುಗಳ ಬದಲಿಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 (ಕೊಲೆಯ ಯತ್ನ), 326 (ಸ್ವಯಂಪ್ರೇರಿತವಾಗಿ ಅಪಾಯಕಾರಿ ಶಸ್ತ್ರಾಸ್ತ್ರಗಳು ಅಥವಾ ವಿಧಾನಗಳಿಂದ ಗಂಭೀರವಾದ ಗಾಯವನ್ನು ಉಂಟುಮಾಡುವುದು), 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು) ಸೇರಿಸಲು ವಿನಂತಿಸಲಾಗಿದೆ.

ರೈತರು ಮತ್ತು ಪತ್ರಕರ್ತನ ಮೇಲೆ ಯೋಜನಾಬದ್ದವಾಗಿ ಮತ್ತು ಕೊಲ್ಲುವ ಉದ್ದೇಶದಿಂದಲೇ ಎಸ್‌ಯವಿ ಕಾರುಗಳು ಹರಿದಿವೆ ಎಂದು ಎಸ್‌ಐಟಿ ತಿಳಿಸಿದೆ.

ಅಕ್ಟೋಬರ್ 3 ರಂದು, ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಸೇರಿದ ಎಸ್‌ಯುವಿ ಮತ್ತು ಇತರ ಎರಡು ಬೆಂಗಾವಲು ವಾಹನಗಳು ಶಾಂತಿಯುತ ಪ್ರತಿಭಟನೆ ನಡೆಸಿ ತೆರಳುತ್ತಿದ್ದ ರೈತರ ಮೇಲೆ ಹರಿದವು. ಈ ಹತ್ಯಾಕಾಂಡದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದರು. ಪ್ರಕರಣದ ಆರೋಪಿಗಳಾಗಿ ಆಶಿಶ್ ಮಿಶ್ರಾ, ಲುವ್ಕುಶ್, ಆಶಿಶ್ ಪಾಂಡೆ, ಶೇಖರ್ ಭಾರ್ತಿ, ಅಂಕಿತ್ ದಾಸ್, ಲತೀಫ್, ಶಿಶುಪಾಲ್, ನಂದನ್ ಸಿಂಗ್, ಸತ್ಯಂ ತ್ರಿಪಾಠಿ, ಸುಮಿತ್ ಜೈಸ್ವಾಲ್, ಧರ್ಮೇಂದ್ರ ಬಂಜಾರಾ, ರಿಂಕು ರಾಣಾ ಮತ್ತು ಉಲ್ಲಾಸ್ ತ್ರಿವೇದಿ ಅವರನ್ನು ಎಸ್‌ಐಟಿ ಇದುವರೆಗೆ ಬಂಧಿಸಿದೆ.

ಅವರನ್ನು ಲಖಿಂಪುರ ಖೇರಿ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿದೆ. ಈ ನಡುವೆ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಆಶಿಶ್ ಮಿಶ್ರಾನ ಜಾಮೀನು ಅರ್ಜಿಗೆ ಪ್ರತಿ-ಅಫಿಡವಿಟ್ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಎರಡು ವಾರಗಳ ಕಾಲಾವಕಾಶ ನೀಡಿದೆ.


ಇದನ್ನೂ ಓದಿ: ನೆಲಮಂಗಲ: ತಮಟೆ ಬಾರಿಸಿದ್ದಕ್ಕೆ ದಲಿತನಿಗೆ ಥಳಿತ; ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...