Homeಮುಖಪುಟಲಖಿಂಪುರ್ ಖೇರಿ ಹತ್ಯಾಕಾಂಡ ಪೂರ್ವಯೋಜಿತವಾದುದು: SIT

ಲಖಿಂಪುರ್ ಖೇರಿ ಹತ್ಯಾಕಾಂಡ ಪೂರ್ವಯೋಜಿತವಾದುದು: SIT

SIT ಯು ಕಾರು ಹರಿಸಿ ಕೊಂದ 13 ಆರೋಪಿಗಳ ವಿರುದ್ಧ ಶಸಸ್ತ್ರ ಕಾಯ್ದೆಯಡಿಯಲ್ಲಿ ಕೊಲೆಯತ್ನ ಸೇರಿ ನಾಲ್ಕು ಹೊಸ ಸೆಕ್ಷನ್‌ಗಳನ್ನು ಸೇರಿಸಲು CJM ಮುಂದೆ ಅರ್ಜಿ ಸಲ್ಲಿಸಿದೆ.

- Advertisement -
- Advertisement -

ನಾಲ್ವರು ರೈತರು ಸೇರಿದಂತೆ ಒಟ್ಟು 8 ಜನರ ಅಮಾನುಷ ಸಾವಿಗೆ ಕಾರಣವಾದ ಅಕ್ಟೋಬರ್ 3 ರ ಉತ್ತರ ಪ್ರದೇಶದ ಲಖೀಂಪುರ್ ಖೇರಿ ಹತ್ಯಾಕಾಂಡವು ಯೋಜಿತವಾದ ಮತ್ತು ಉದ್ದೇಶಪೂರ್ವಕ ಕೃತ್ಯವಾಗಿದೆಯೆ ಹೊರತು ನಿರ್ಲಕ್ಷತನದಿಂದ ಆಗಿದ್ದಲ್ಲ ಎಂದು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ತಿಳಿಸಿದೆ.

ಹಾಗಾಗಿ SIT ಯು ಕಾರು ಹರಿಸಿ ಕೊಂದ 13 ಆರೋಪಿಗಳ ವಿರುದ್ಧ ಶಸಸ್ತ್ರ ಕಾಯ್ದೆಯಡಿಯಲ್ಲಿ ಕೊಲೆಯತ್ನ ಸೇರಿ ನಾಲ್ಕು ಹೊಸ ಸೆಕ್ಷನ್‌ಗಳನ್ನು ಸೇರಿಸಲು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (CJM) ಮುಂದೆ ಅರ್ಜಿ ಸಲ್ಲಿಸಿದೆ.

ಈಗಾಗಲೇ ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ಅವರ ಪುತ್ರ ಆಶಿಶ್ ಮಿಶ್ರಾ ವಿರುದ್ಧ ಕೊಲೆಯತ್ನದ ಪ್ರಕರಣ ದಾಖಲಾಗಿದೆ. ನಂತರದ ತನಿಖೆಯ ಸಂದರ್ಭದಲ್ಲಿ ಹೊಸ ಸಾಕ್ಷ್ಯಗಳು ಸಿಕ್ಕಿದ್ದರಿಂದ ಈಗ ಎಲ್ಲಾ 13 ಆರೋಪಿಗಳ ಮೇಲೆ ಕೊಲೆಯತ್ನ ಪ್ರಕರಣ ಸೇರಿಸಲು ಮನವಿ ಮಾಡಿದೆ. ಜೊತೆಗೆ ಆರೋಪಿಗಳ ವಿರುದ್ಧದ ಮೂರು ಆರೋಪಗಳನ್ನು ಕೈಬಿಡುವಂತೆ ಸಹ ಎಸ್‌ಐಟಿ ನ್ಯಾಯಾಲಯಕ್ಕೆ ಮನವಿ ಮಾಡಿದೆ. ಅವುಗಳೆಂದರೆ ಐಪಿಸಿ ಸೆಕ್ಷನ್‌ 279 (ಸಾರ್ವಜನಿಕ ಮಾರ್ಗದಲ್ಲಿ ದುಡುಕಿನ ಚಾಲನೆ), 338 (ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕ್ರಿಯೆ) ಮತ್ತು 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ).

ಅವುಗಳ ಬದಲಿಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 (ಕೊಲೆಯ ಯತ್ನ), 326 (ಸ್ವಯಂಪ್ರೇರಿತವಾಗಿ ಅಪಾಯಕಾರಿ ಶಸ್ತ್ರಾಸ್ತ್ರಗಳು ಅಥವಾ ವಿಧಾನಗಳಿಂದ ಗಂಭೀರವಾದ ಗಾಯವನ್ನು ಉಂಟುಮಾಡುವುದು), 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು) ಸೇರಿಸಲು ವಿನಂತಿಸಲಾಗಿದೆ.

ರೈತರು ಮತ್ತು ಪತ್ರಕರ್ತನ ಮೇಲೆ ಯೋಜನಾಬದ್ದವಾಗಿ ಮತ್ತು ಕೊಲ್ಲುವ ಉದ್ದೇಶದಿಂದಲೇ ಎಸ್‌ಯವಿ ಕಾರುಗಳು ಹರಿದಿವೆ ಎಂದು ಎಸ್‌ಐಟಿ ತಿಳಿಸಿದೆ.

ಅಕ್ಟೋಬರ್ 3 ರಂದು, ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಸೇರಿದ ಎಸ್‌ಯುವಿ ಮತ್ತು ಇತರ ಎರಡು ಬೆಂಗಾವಲು ವಾಹನಗಳು ಶಾಂತಿಯುತ ಪ್ರತಿಭಟನೆ ನಡೆಸಿ ತೆರಳುತ್ತಿದ್ದ ರೈತರ ಮೇಲೆ ಹರಿದವು. ಈ ಹತ್ಯಾಕಾಂಡದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದರು. ಪ್ರಕರಣದ ಆರೋಪಿಗಳಾಗಿ ಆಶಿಶ್ ಮಿಶ್ರಾ, ಲುವ್ಕುಶ್, ಆಶಿಶ್ ಪಾಂಡೆ, ಶೇಖರ್ ಭಾರ್ತಿ, ಅಂಕಿತ್ ದಾಸ್, ಲತೀಫ್, ಶಿಶುಪಾಲ್, ನಂದನ್ ಸಿಂಗ್, ಸತ್ಯಂ ತ್ರಿಪಾಠಿ, ಸುಮಿತ್ ಜೈಸ್ವಾಲ್, ಧರ್ಮೇಂದ್ರ ಬಂಜಾರಾ, ರಿಂಕು ರಾಣಾ ಮತ್ತು ಉಲ್ಲಾಸ್ ತ್ರಿವೇದಿ ಅವರನ್ನು ಎಸ್‌ಐಟಿ ಇದುವರೆಗೆ ಬಂಧಿಸಿದೆ.

ಅವರನ್ನು ಲಖಿಂಪುರ ಖೇರಿ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿದೆ. ಈ ನಡುವೆ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಆಶಿಶ್ ಮಿಶ್ರಾನ ಜಾಮೀನು ಅರ್ಜಿಗೆ ಪ್ರತಿ-ಅಫಿಡವಿಟ್ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಎರಡು ವಾರಗಳ ಕಾಲಾವಕಾಶ ನೀಡಿದೆ.


ಇದನ್ನೂ ಓದಿ: ನೆಲಮಂಗಲ: ತಮಟೆ ಬಾರಿಸಿದ್ದಕ್ಕೆ ದಲಿತನಿಗೆ ಥಳಿತ; ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....