Homeಮುಖಪುಟಲಖಿಂಪುರ್ ಖೇರಿ ಹತ್ಯಾಕಾಂಡ ಪೂರ್ವಯೋಜಿತವಾದುದು: SIT

ಲಖಿಂಪುರ್ ಖೇರಿ ಹತ್ಯಾಕಾಂಡ ಪೂರ್ವಯೋಜಿತವಾದುದು: SIT

SIT ಯು ಕಾರು ಹರಿಸಿ ಕೊಂದ 13 ಆರೋಪಿಗಳ ವಿರುದ್ಧ ಶಸಸ್ತ್ರ ಕಾಯ್ದೆಯಡಿಯಲ್ಲಿ ಕೊಲೆಯತ್ನ ಸೇರಿ ನಾಲ್ಕು ಹೊಸ ಸೆಕ್ಷನ್‌ಗಳನ್ನು ಸೇರಿಸಲು CJM ಮುಂದೆ ಅರ್ಜಿ ಸಲ್ಲಿಸಿದೆ.

- Advertisement -
- Advertisement -

ನಾಲ್ವರು ರೈತರು ಸೇರಿದಂತೆ ಒಟ್ಟು 8 ಜನರ ಅಮಾನುಷ ಸಾವಿಗೆ ಕಾರಣವಾದ ಅಕ್ಟೋಬರ್ 3 ರ ಉತ್ತರ ಪ್ರದೇಶದ ಲಖೀಂಪುರ್ ಖೇರಿ ಹತ್ಯಾಕಾಂಡವು ಯೋಜಿತವಾದ ಮತ್ತು ಉದ್ದೇಶಪೂರ್ವಕ ಕೃತ್ಯವಾಗಿದೆಯೆ ಹೊರತು ನಿರ್ಲಕ್ಷತನದಿಂದ ಆಗಿದ್ದಲ್ಲ ಎಂದು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ತಿಳಿಸಿದೆ.

ಹಾಗಾಗಿ SIT ಯು ಕಾರು ಹರಿಸಿ ಕೊಂದ 13 ಆರೋಪಿಗಳ ವಿರುದ್ಧ ಶಸಸ್ತ್ರ ಕಾಯ್ದೆಯಡಿಯಲ್ಲಿ ಕೊಲೆಯತ್ನ ಸೇರಿ ನಾಲ್ಕು ಹೊಸ ಸೆಕ್ಷನ್‌ಗಳನ್ನು ಸೇರಿಸಲು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (CJM) ಮುಂದೆ ಅರ್ಜಿ ಸಲ್ಲಿಸಿದೆ.

ಈಗಾಗಲೇ ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ಅವರ ಪುತ್ರ ಆಶಿಶ್ ಮಿಶ್ರಾ ವಿರುದ್ಧ ಕೊಲೆಯತ್ನದ ಪ್ರಕರಣ ದಾಖಲಾಗಿದೆ. ನಂತರದ ತನಿಖೆಯ ಸಂದರ್ಭದಲ್ಲಿ ಹೊಸ ಸಾಕ್ಷ್ಯಗಳು ಸಿಕ್ಕಿದ್ದರಿಂದ ಈಗ ಎಲ್ಲಾ 13 ಆರೋಪಿಗಳ ಮೇಲೆ ಕೊಲೆಯತ್ನ ಪ್ರಕರಣ ಸೇರಿಸಲು ಮನವಿ ಮಾಡಿದೆ. ಜೊತೆಗೆ ಆರೋಪಿಗಳ ವಿರುದ್ಧದ ಮೂರು ಆರೋಪಗಳನ್ನು ಕೈಬಿಡುವಂತೆ ಸಹ ಎಸ್‌ಐಟಿ ನ್ಯಾಯಾಲಯಕ್ಕೆ ಮನವಿ ಮಾಡಿದೆ. ಅವುಗಳೆಂದರೆ ಐಪಿಸಿ ಸೆಕ್ಷನ್‌ 279 (ಸಾರ್ವಜನಿಕ ಮಾರ್ಗದಲ್ಲಿ ದುಡುಕಿನ ಚಾಲನೆ), 338 (ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕ್ರಿಯೆ) ಮತ್ತು 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ).

ಅವುಗಳ ಬದಲಿಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 (ಕೊಲೆಯ ಯತ್ನ), 326 (ಸ್ವಯಂಪ್ರೇರಿತವಾಗಿ ಅಪಾಯಕಾರಿ ಶಸ್ತ್ರಾಸ್ತ್ರಗಳು ಅಥವಾ ವಿಧಾನಗಳಿಂದ ಗಂಭೀರವಾದ ಗಾಯವನ್ನು ಉಂಟುಮಾಡುವುದು), 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು) ಸೇರಿಸಲು ವಿನಂತಿಸಲಾಗಿದೆ.

ರೈತರು ಮತ್ತು ಪತ್ರಕರ್ತನ ಮೇಲೆ ಯೋಜನಾಬದ್ದವಾಗಿ ಮತ್ತು ಕೊಲ್ಲುವ ಉದ್ದೇಶದಿಂದಲೇ ಎಸ್‌ಯವಿ ಕಾರುಗಳು ಹರಿದಿವೆ ಎಂದು ಎಸ್‌ಐಟಿ ತಿಳಿಸಿದೆ.

ಅಕ್ಟೋಬರ್ 3 ರಂದು, ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಸೇರಿದ ಎಸ್‌ಯುವಿ ಮತ್ತು ಇತರ ಎರಡು ಬೆಂಗಾವಲು ವಾಹನಗಳು ಶಾಂತಿಯುತ ಪ್ರತಿಭಟನೆ ನಡೆಸಿ ತೆರಳುತ್ತಿದ್ದ ರೈತರ ಮೇಲೆ ಹರಿದವು. ಈ ಹತ್ಯಾಕಾಂಡದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದರು. ಪ್ರಕರಣದ ಆರೋಪಿಗಳಾಗಿ ಆಶಿಶ್ ಮಿಶ್ರಾ, ಲುವ್ಕುಶ್, ಆಶಿಶ್ ಪಾಂಡೆ, ಶೇಖರ್ ಭಾರ್ತಿ, ಅಂಕಿತ್ ದಾಸ್, ಲತೀಫ್, ಶಿಶುಪಾಲ್, ನಂದನ್ ಸಿಂಗ್, ಸತ್ಯಂ ತ್ರಿಪಾಠಿ, ಸುಮಿತ್ ಜೈಸ್ವಾಲ್, ಧರ್ಮೇಂದ್ರ ಬಂಜಾರಾ, ರಿಂಕು ರಾಣಾ ಮತ್ತು ಉಲ್ಲಾಸ್ ತ್ರಿವೇದಿ ಅವರನ್ನು ಎಸ್‌ಐಟಿ ಇದುವರೆಗೆ ಬಂಧಿಸಿದೆ.

ಅವರನ್ನು ಲಖಿಂಪುರ ಖೇರಿ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿದೆ. ಈ ನಡುವೆ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಆಶಿಶ್ ಮಿಶ್ರಾನ ಜಾಮೀನು ಅರ್ಜಿಗೆ ಪ್ರತಿ-ಅಫಿಡವಿಟ್ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಎರಡು ವಾರಗಳ ಕಾಲಾವಕಾಶ ನೀಡಿದೆ.


ಇದನ್ನೂ ಓದಿ: ನೆಲಮಂಗಲ: ತಮಟೆ ಬಾರಿಸಿದ್ದಕ್ಕೆ ದಲಿತನಿಗೆ ಥಳಿತ; ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...