Homeರಾಷ್ಟ್ರೀಯಲಖಿಂಪುರ್‌ ಹತ್ಯಾಕಾಂಡ: ಕೇಂದ್ರ ಸಚಿವರ ಮಗನ ಜಾಮೀನು ರದ್ದು ಮಾಡಿದ ಸುಪ್ರೀಂ; 1 ವಾರದೊಳಗೆ ಶರಣಾಗುವಂತೆ...

ಲಖಿಂಪುರ್‌ ಹತ್ಯಾಕಾಂಡ: ಕೇಂದ್ರ ಸಚಿವರ ಮಗನ ಜಾಮೀನು ರದ್ದು ಮಾಡಿದ ಸುಪ್ರೀಂ; 1 ವಾರದೊಳಗೆ ಶರಣಾಗುವಂತೆ ಆದೇಶ

- Advertisement -
- Advertisement -

ಕಳೆದ ವರ್ಷ ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ರೈತ ಹತ್ಯಾಕಾಂಡ ನಡೆಸಿದ ಆರೋಪ ಹೊತ್ತಿರುವ ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ತೇನಿ ಅವರ ಪುತ್ರ ಆಶಿಶ್ ಮಿಶ್ರಾಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಒಂದು ವಾರದಲ್ಲಿ ಶರಣಾಗುವಂತೆ ಕೋರ್ಟ‌ ಆರೋಪಿಗೆ ಆದೇಶಿಸಿದೆ.

ಉತ್ತರ ಪ್ರದೇಶ ಚುನಾವಣೆಯ ಪ್ರಚಾರದ ಮಧ್ಯೆ ಫೆಬ್ರವರಿ 10ರ ಆಶಿಶ್ ಮಿಶ್ರಾಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿತ್ತು. ಅಕ್ಟೋಬರ್ 3 ರಂದು ನಡೆದ ಹತ್ಯಾಕಾಂಡದಲ್ಲಿ ಹತ್ಯೆಗೀಡಾದ ರೈತರ ಕುಟುಂಬಗಳಿಂದ ಆಶಿಶ್ ಮಿಶ್ರಾಗೆ ನೀಡಿದ್ದ ಜಾಮೀನನ್ನು ಪ್ರಶ್ನಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್‌, “ಹೈಕೋರ್ಟ್ ಆದೇಶವು ಅಪ್ರಸ್ತುತ ಅವಲೋಕನಗಳು ಮತ್ತು ನಿರ್ಲಕ್ಷಿಸಲಾದ ಸಂಬಂಧಿತ ಪರಿಗಣನೆಗಳನ್ನು ಆಧರಿಸಿದೆ” ಎಂದು ತೀರ್ಪು ನೀಡಿದೆ.

ಇದನ್ನೂ ಓದಿ: ರೈತರ ಹತ್ಯಾಕಾಂಡ ನಡೆದ ಲಖಿಂಪುರ್‌ ಖೇರಿ ಚುನಾವಣಾ ಫಲಿತಾಂಶ ಹೀಗಿದೆ 

“ಸಂತ್ರಸ್ತರಿಗೆ ಪರಿಣಾಮಕಾರಿ ವಿಚಾರಣೆಯ ಅವಕಾಶವನ್ನು ನಿರಾಕರಿಸಲಾಗಿದೆ ಎಂದು ನಾವು ಭಾವಿಸುತ್ತೇವೆ” ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ನಿರ್ಧಾರವನ್ನು ಪ್ರಕಟಿಸುವಾಗ ಹೇಳಿದ್ದಾರೆ. ಪ್ರತ್ಯೇಕ ಪೀಠ ಜಾಮೀನು ಅರ್ಜಿಯ ವಿಚಾರಣೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಲಖಿಂಪುರ ಖೇರಿಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಆಶಿಶ್ ಮಿಶ್ರಾ, ನಾಲ್ವರು ರೈತರು ಮತ್ತು ಪತ್ರಕರ್ತರ ಮೇಲೆ ಕಾರುಚಲಾಯಿಸಿ ಹತ್ಯ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಅವರ ವಿರುದ್ದ ಕ್ರಮ ಕೈಗೊಳ್ಳಲು ಯುಪಿ ಪೋಲಿಸ್ ಮತ್ತು ಆಡಳಿತವು ವಿಳಂಬ ಮಾಡುತ್ತಿದೆ ಎಂದು ದೇಶದಾದ್ಯಂತ ಆಕ್ರೋಶ ವ್ಯಕ್ತವಾದ ನಂತರ, ಘಟನೆ ನಡೆದು ಹಲವಾರು ದಿನಗಳ ಬಳಿಕ ಆರೋಪಿಯನ್ನು ಬಂಧಿಸಲಾಗಿತ್ತು.

ಆಶಿಶ್‌‌‌ ಮಿಶ್ರಾ ಸಾಕ್ಷಿಗಳಿಗೆ ಬೆದರಿಕೆಯೊಡ್ಡಿರುವ ಕಾರಣ ಅವರ ಜಾಮೀನು ರದ್ದುಗೊಳಿಸಬೇಕು ಎಂದು ರೈತರ ಕುಟುಂಬಗಳು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. “ಕಳೆದ ಮಾರ್ಚ್‌ನಲ್ಲಿ ಪ್ರಕರಣದ ಸಾಕ್ಷಿಯೊಬ್ಬರ ಮೇಲೆ ದಾಳಿ ನಡೆಸಲಾಯಿತ್ತು. ಅಲ್ಲದೆ ಇತ್ತೀಚಿಗೆ ಯುಪಿ ಚುನಾವಣೆಯಲ್ಲಿ ಬಿಜೆಪಿಯ ಗೆಲುವನ್ನು ಉಲ್ಲೇಖಿಸಿ ದಾಳಿಕೋರರು ತಮಗೆ ಬೆದರಿಕೆ ಹಾಕಿದ್ದರು” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಲಖೀಂಪುರ್ ರೈತ ಹತ್ಯೆ; ಅಧಿಕಾರದ ಪರವಾಗಿ ನಿಂತ ಮಾಧ್ಯಮಗಳ ದುರುಳತನ

ಅಕ್ಟೋಬರ್ 3 ರಂದು ಲಖಿಂಪುರ ಖೇರಿಯಲ್ಲಿ ನಡೆದ ಹತ್ಯಾಕಾಂಡದ ಸಮಯದಲ್ಲಿ ಎಂಟು ಜನರು ಸಾವನ್ನಪ್ಪಿದ್ದರು. ಒಕ್ಕೂಟ ಸರ್ಕಾರದ ಸಚಿವರ ಬೆಂಗಾವಲು ವಾಹನ ಐದು ಜನರ ಮೇಲೆ ಹರಿದು ಸಾವಿಗೀಡಾಗಿದ್ದರು. ಇದರ ನಂತರ ಭುಗಿಲೆದ್ದ ಹಿಂಸಾಚಾರದಲ್ಲಿ ಬಿಜೆಪಿ ಕಾರ್ಯಕರ್ತರು ಸೇರಿದಂತೆ ಇನ್ನೂ ಮೂವರು ಕೊಲ್ಲಲ್ಪಟ್ಟಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...