Homeಮುಖಪುಟಲಖಿಂಪುರ್‌ಖೇರಿ ಹಿಂಸಾಚಾರವು ಕೇಂದ್ರ ಸಚಿವ, ಆತನ ಮಗನಿಂದಾದ ‘ಯೋಜಿತ ಪಿತೂರಿ’: ಎಫ್‌ಐಆರ್‌‌

ಲಖಿಂಪುರ್‌ಖೇರಿ ಹಿಂಸಾಚಾರವು ಕೇಂದ್ರ ಸಚಿವ, ಆತನ ಮಗನಿಂದಾದ ‘ಯೋಜಿತ ಪಿತೂರಿ’: ಎಫ್‌ಐಆರ್‌‌

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ ಖೇರಿ ಜಿಲ್ಲೆಯಲ್ಲಿ ನಡೆದ ರೈತರ ಹತ್ಯೆಯು ಕೇಂದ್ರ ಸಚಿವ ಅಜಯ್‌‌ ಮಿಶ್ರಾ ಹಾಗೂ ಆತನ ಮಗ ಆಶೀಶ್‌ ಮಿಶ್ರಾನಿಂದ ನಡೆದ “ಅತ್ಯಂತ ಯೋಜಿತ ಪಿತೂರಿ” ಎಂದು ಪೊಲೀಸರು ಎಫ್‌ಐಆರ್‌ನಲ್ಲಿ ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ಮಾಡಲು ಸೇರಿದ್ದ ರೈತರ ಮೇಲೆ ಭಾನುವಾರ ವಾಹನಗಳನ್ನು ಹತ್ತಿಸಿದಾಗ ಒಟ್ಟು ಎಂಟು ಜನರು ಸಾವನ್ನಪ್ಪಿದ್ದರು. ಸೋಮವಾರ ಎಫ್‌ಐಆರ್‌ ದಾಖಲಾಗಿತ್ತು.

ಆಶೀಶ್‌ ಮಿಶ್ರಾ ಹಾಗೂ ಇತರರ ಗುಂಪು ರೈತರ ಮೇಲೆ ವಾಹನ ಹತ್ತಿಸಿದ್ದಾರೆ ಎಂದು ರೈತರು ಆರೋಪಿಸಿದ್ದರು. ಆದರೆ ಸಚಿವರು ರೈತರೇ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು ಎಂದು ಆರೋಪಿಸಿದ್ದರು.

ಇದನ್ನೂ ಓದಿರಿ: ನರೇಂದ್ರ ಮೋದಿಯವರೆ ಈ ವಿಡಿಯೋ ನೋಡಿದ್ದೀರಾ? ಪ್ರಿಯಾಂಕ ಗಾಂಧಿ ಆಕ್ರೋಶ

ಮಿಶ್ರಾ ಅವರನ್ನು ಇನ್ನೂ ಬಂಧಿಸಲಾಗಿಲ್ಲ. “ರೈತರೊಂದಿಗೆ ಮಾತುಕತೆ, ಮರಣೋತ್ತರ ಪರೀಕ್ಷೆ ಹಾಗೂ ಅಂತ್ಯಸಂಸ್ಕಾರದ ಕಾರ್ಯದಲ್ಲಿ ಪಾಲ್ಗೊಂಡಿದ್ದರಿಂದ ಇನ್ನೂ ಬಂಧಿಸಲಾಗಿಲ್ಲ” ಎಂದು ಪೊಲೀಸರು ಹೇಳಿದ್ದಾರೆ.

ಉತ್ತರ ಪ್ರದೇಶದ ಬಹರಿಚ್‌‌ ಜಿಲ್ಲೆಯ ನನ್ಪರ ಜಿಲ್ಲೆಯ ಜಗಜೀತ್‌ ಸಿಂಗ್‌ ಅವರ ದೂರಿನ ಅನ್ವಯ ಎಫ್‌ಐಆರ್‌ ದಾಖಲಾಗಿದೆ. ಕೊಲೆ ಹಾಗೂ ನಿರ್ಲಕ್ಷ್ಯದಿಂದ ಸಾವು ಸೇರಿದಂತೆ ವಿವಿಧ ಕಾರಣಗಳಿಗಾಗಿ ಪ್ರಕರಣ ದಾಖಲಿಸಲಾಗಿದೆ.

“ಮೂರು ವಾಹನಗಳಲ್ಲಿ ಆಶೀಶ್‌ ಮಿಶ್ರಾ ಹಾಗೂ ಶಸ್ತ್ರಸಜ್ಜಿತ 10-20 ಮಂದಿ ನುಗ್ಗಿದಾಗ ರೈತರು ಶಾಂತಿಯುತ ಪ್ರತಿಭಟನೆಯಲ್ಲಿ ತೊಡಗಿದ್ದರು” ಎಂದು ಎಫ್‌ಐಆರ್‌ ಹೇಳಿದೆ. ಆತ ಎಡಬದಿಯಲ್ಲಿ ಕುಳಿತ್ತಿದ್ದಾಗ ಗುಂಡು ಹಾರುತ್ತಲೇ ಇದ್ದನು. ಜನರನ್ನು ಮೇಲೆ ಹರಿಯುತ್ತಲೇ ವಾಹನ ಮುನ್ನಡೆಯಿತು” ಎಂದು ಎಫ್‌ಐಆರ್‌ ಉಲ್ಲೇಖಿಸಿದೆ.

“ಗುಂಡು ಹಾರಿಸಿದ್ದರಿಂದ ಗುರ್‍ವಿಂದರ್‌ ಸಿಂಗ್‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎರಡು ಬದಿಯಲ್ಲಿದ್ದ ರೈತರನ್ನು ಅಪ್ಪಚ್ಚಿ ಮಾಡುತ್ತಾ ವಾಹನ ವೇಗವಾಗಿ ಚಲಿಸಿತು. ರೈತರನ್ನು ಛಿದ್ರಛಿದ್ರ ಮಾಡಿದ ನಂತರ, ನಿಯಂತ್ರಣ ಕಳೆದುಕೊಂಡ ವಾಹನ ಕಂದಕಕ್ಕೆ ಉರುಳಿದೆ” ಎಂದು ಹೇಳಲಾಗಿದೆ.

“ಇಲ್ಲಿಯವರೆಗೆ ಬಂದ ಮಾಹಿತಿಯ ಪ್ರಕಾರ, ನಾಲ್ಕು ರೈತರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ” ಎಂದು ಎಫ್ಐಆರ್ ಹೇಳಿದೆ. ಸಚಿವರ ಮಗನ ಹೆಸರನ್ನು ಎಫ್‌ಐಆರ್ ಸೇರಿಸಲಾಗಿದೆ. ಘಟನೆಯ ಬಳಿಕ ಜನರು ಕಬ್ಬಿನ ಹೊಲಕ್ಕೆ ಓಡಿಹೋದರು ಮತ್ತು ಗುಂಡು ಹಾರಿಸುವುದನ್ನು ಮುಂದುವರಿಸಲಾಗಿತ್ತು” ಎಂದು ತಿಳಿಸಲಾಗಿದೆ. ಕೇಂದ್ರ ಸಚಿವರ ವಿಡಿಯೋ ಕೂಡ ಎಫ್‌ಐಆರ್‌ನ ಭಾಗವಾಗಿದೆ.

“ಭಾನುವಾರದ ಘಟನೆಯ ಹಿಂದಿನ ದಿನ, ಕೇಂದ್ರ ಸಚಿವರು ರೈತರಿಗೆ ಬಹಿರಂಗವಾಗಿ ಬೆದರಿಕೆ ಹಾಕಿದ್ದರು” ಎಂದು ಎಫ್ಐಆರ್ ಹೇಳಿದೆ. “ಸಚಿವರು ಮಾತನಾಡುತ್ತಿರುವ ವಿಡಿಯೋ ವೈರಲ್‌ ಆಗಿದೆ.”

ವೀಡಿಯೊದಲ್ಲಿ, ಪ್ರತಿಭಟನಾ ನಿರತ ರೈತರನ್ನು ‘ಸರಿದಾರಿಗೆ ತರುವ ಬಗ್ಗೆ’ ಸಚಿವರು ಮಾತನಾಡಿದ್ದರು. “ನಿಮ್ಮ ಮಾರ್ಗಗಳನ್ನು ಸರಿಪಡಿಸಿಕೊಳ್ಳಿ. ಇಲ್ಲದಿದ್ದರೆ ನಾವು ಅವುಗಳನ್ನು ಸರಿಪಡಿಸುತ್ತೇವೆ” ಎಂದು ಅವರು ಹೇಳಿದ್ದರು. “ಸರಿಪಡಿಸುವ ಕಾರ್ಯ ಕೇವಲ ಎರಡು ನಿಮಿಷಗಳನ್ನು ತೆಗೆದುಕೊಳ್ಳುತ್ತದೆ.” ಎಂದಿದ್ದರು.

ಸ್ಥಳೀಯರು ನೀಡಿದ ದೂರಿನ ಅನ್ವಯ, ನಾಲ್ಕು ಜನರನ್ನು ಹೊಡೆದು ಸಾಯಿಸಿದ ಆರೋಪದ ಮೇಲೆ ಸುಮಿತ್ ಜೈಸ್ವಾಲ್ ಎಂದು ಗುರುತಿಸಲಾಗಿರುವ ವ್ಯಕ್ತಿಯ ವಿರುದ್ಧ ಎರಡನೇ ಎಫ್‌ಐಆರ್ ದಾಖಲಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 302 (ಕೊಲೆ), 323 (ಸ್ವಯಂಪ್ರೇರಿತವಾಗಿ ಹಿಂಸಾಕೃತ್ಯ), 336 (ಇತರರ ಜೀವನ ಮತ್ತು ವೈಯಕ್ತಿಕ ಸುರಕ್ಷತೆಗೆ ಅಪಾಯ ತರುವ ಕ್ರಿಯೆ) ಆಪಾದನೆಗಳನ್ನು ಹೊರಿಸಲಾಗಿದೆ. ಈ ಪ್ರಕರಣದ ತನಿಖೆಗೆ ಇಬ್ಬರು ಉಪ ಅಧೀಕ್ಷಕರ ನೇತೃತ್ವದಲ್ಲಿ ತಂಡ ರಚಿಸಲಾಗಿದೆ.

ಇದನ್ನೂ ಓದಿರಿ: ಲಖಿಂಪುರ್‌‌ ಘಟನೆಯಲ್ಲಿ ಪತ್ರಕರ್ತನ ಹತ್ಯೆ: ನ್ಯಾಯಾಂಗ ತನಿಖೆಗೆ ಎಡಿಟರ್ಸ್‌ ಗಿಲ್ಡ್‌ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...