Homeಮುಖಪುಟಲಖಿಂಪುರ್‌ಖೇರಿ ಹಿಂಸಾಚಾರವು ಕೇಂದ್ರ ಸಚಿವ, ಆತನ ಮಗನಿಂದಾದ ‘ಯೋಜಿತ ಪಿತೂರಿ’: ಎಫ್‌ಐಆರ್‌‌

ಲಖಿಂಪುರ್‌ಖೇರಿ ಹಿಂಸಾಚಾರವು ಕೇಂದ್ರ ಸಚಿವ, ಆತನ ಮಗನಿಂದಾದ ‘ಯೋಜಿತ ಪಿತೂರಿ’: ಎಫ್‌ಐಆರ್‌‌

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ ಖೇರಿ ಜಿಲ್ಲೆಯಲ್ಲಿ ನಡೆದ ರೈತರ ಹತ್ಯೆಯು ಕೇಂದ್ರ ಸಚಿವ ಅಜಯ್‌‌ ಮಿಶ್ರಾ ಹಾಗೂ ಆತನ ಮಗ ಆಶೀಶ್‌ ಮಿಶ್ರಾನಿಂದ ನಡೆದ “ಅತ್ಯಂತ ಯೋಜಿತ ಪಿತೂರಿ” ಎಂದು ಪೊಲೀಸರು ಎಫ್‌ಐಆರ್‌ನಲ್ಲಿ ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ಮಾಡಲು ಸೇರಿದ್ದ ರೈತರ ಮೇಲೆ ಭಾನುವಾರ ವಾಹನಗಳನ್ನು ಹತ್ತಿಸಿದಾಗ ಒಟ್ಟು ಎಂಟು ಜನರು ಸಾವನ್ನಪ್ಪಿದ್ದರು. ಸೋಮವಾರ ಎಫ್‌ಐಆರ್‌ ದಾಖಲಾಗಿತ್ತು.

ಆಶೀಶ್‌ ಮಿಶ್ರಾ ಹಾಗೂ ಇತರರ ಗುಂಪು ರೈತರ ಮೇಲೆ ವಾಹನ ಹತ್ತಿಸಿದ್ದಾರೆ ಎಂದು ರೈತರು ಆರೋಪಿಸಿದ್ದರು. ಆದರೆ ಸಚಿವರು ರೈತರೇ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು ಎಂದು ಆರೋಪಿಸಿದ್ದರು.

ಇದನ್ನೂ ಓದಿರಿ: ನರೇಂದ್ರ ಮೋದಿಯವರೆ ಈ ವಿಡಿಯೋ ನೋಡಿದ್ದೀರಾ? ಪ್ರಿಯಾಂಕ ಗಾಂಧಿ ಆಕ್ರೋಶ

ಮಿಶ್ರಾ ಅವರನ್ನು ಇನ್ನೂ ಬಂಧಿಸಲಾಗಿಲ್ಲ. “ರೈತರೊಂದಿಗೆ ಮಾತುಕತೆ, ಮರಣೋತ್ತರ ಪರೀಕ್ಷೆ ಹಾಗೂ ಅಂತ್ಯಸಂಸ್ಕಾರದ ಕಾರ್ಯದಲ್ಲಿ ಪಾಲ್ಗೊಂಡಿದ್ದರಿಂದ ಇನ್ನೂ ಬಂಧಿಸಲಾಗಿಲ್ಲ” ಎಂದು ಪೊಲೀಸರು ಹೇಳಿದ್ದಾರೆ.

ಉತ್ತರ ಪ್ರದೇಶದ ಬಹರಿಚ್‌‌ ಜಿಲ್ಲೆಯ ನನ್ಪರ ಜಿಲ್ಲೆಯ ಜಗಜೀತ್‌ ಸಿಂಗ್‌ ಅವರ ದೂರಿನ ಅನ್ವಯ ಎಫ್‌ಐಆರ್‌ ದಾಖಲಾಗಿದೆ. ಕೊಲೆ ಹಾಗೂ ನಿರ್ಲಕ್ಷ್ಯದಿಂದ ಸಾವು ಸೇರಿದಂತೆ ವಿವಿಧ ಕಾರಣಗಳಿಗಾಗಿ ಪ್ರಕರಣ ದಾಖಲಿಸಲಾಗಿದೆ.

“ಮೂರು ವಾಹನಗಳಲ್ಲಿ ಆಶೀಶ್‌ ಮಿಶ್ರಾ ಹಾಗೂ ಶಸ್ತ್ರಸಜ್ಜಿತ 10-20 ಮಂದಿ ನುಗ್ಗಿದಾಗ ರೈತರು ಶಾಂತಿಯುತ ಪ್ರತಿಭಟನೆಯಲ್ಲಿ ತೊಡಗಿದ್ದರು” ಎಂದು ಎಫ್‌ಐಆರ್‌ ಹೇಳಿದೆ. ಆತ ಎಡಬದಿಯಲ್ಲಿ ಕುಳಿತ್ತಿದ್ದಾಗ ಗುಂಡು ಹಾರುತ್ತಲೇ ಇದ್ದನು. ಜನರನ್ನು ಮೇಲೆ ಹರಿಯುತ್ತಲೇ ವಾಹನ ಮುನ್ನಡೆಯಿತು” ಎಂದು ಎಫ್‌ಐಆರ್‌ ಉಲ್ಲೇಖಿಸಿದೆ.

“ಗುಂಡು ಹಾರಿಸಿದ್ದರಿಂದ ಗುರ್‍ವಿಂದರ್‌ ಸಿಂಗ್‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎರಡು ಬದಿಯಲ್ಲಿದ್ದ ರೈತರನ್ನು ಅಪ್ಪಚ್ಚಿ ಮಾಡುತ್ತಾ ವಾಹನ ವೇಗವಾಗಿ ಚಲಿಸಿತು. ರೈತರನ್ನು ಛಿದ್ರಛಿದ್ರ ಮಾಡಿದ ನಂತರ, ನಿಯಂತ್ರಣ ಕಳೆದುಕೊಂಡ ವಾಹನ ಕಂದಕಕ್ಕೆ ಉರುಳಿದೆ” ಎಂದು ಹೇಳಲಾಗಿದೆ.

“ಇಲ್ಲಿಯವರೆಗೆ ಬಂದ ಮಾಹಿತಿಯ ಪ್ರಕಾರ, ನಾಲ್ಕು ರೈತರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ” ಎಂದು ಎಫ್ಐಆರ್ ಹೇಳಿದೆ. ಸಚಿವರ ಮಗನ ಹೆಸರನ್ನು ಎಫ್‌ಐಆರ್ ಸೇರಿಸಲಾಗಿದೆ. ಘಟನೆಯ ಬಳಿಕ ಜನರು ಕಬ್ಬಿನ ಹೊಲಕ್ಕೆ ಓಡಿಹೋದರು ಮತ್ತು ಗುಂಡು ಹಾರಿಸುವುದನ್ನು ಮುಂದುವರಿಸಲಾಗಿತ್ತು” ಎಂದು ತಿಳಿಸಲಾಗಿದೆ. ಕೇಂದ್ರ ಸಚಿವರ ವಿಡಿಯೋ ಕೂಡ ಎಫ್‌ಐಆರ್‌ನ ಭಾಗವಾಗಿದೆ.

“ಭಾನುವಾರದ ಘಟನೆಯ ಹಿಂದಿನ ದಿನ, ಕೇಂದ್ರ ಸಚಿವರು ರೈತರಿಗೆ ಬಹಿರಂಗವಾಗಿ ಬೆದರಿಕೆ ಹಾಕಿದ್ದರು” ಎಂದು ಎಫ್ಐಆರ್ ಹೇಳಿದೆ. “ಸಚಿವರು ಮಾತನಾಡುತ್ತಿರುವ ವಿಡಿಯೋ ವೈರಲ್‌ ಆಗಿದೆ.”

ವೀಡಿಯೊದಲ್ಲಿ, ಪ್ರತಿಭಟನಾ ನಿರತ ರೈತರನ್ನು ‘ಸರಿದಾರಿಗೆ ತರುವ ಬಗ್ಗೆ’ ಸಚಿವರು ಮಾತನಾಡಿದ್ದರು. “ನಿಮ್ಮ ಮಾರ್ಗಗಳನ್ನು ಸರಿಪಡಿಸಿಕೊಳ್ಳಿ. ಇಲ್ಲದಿದ್ದರೆ ನಾವು ಅವುಗಳನ್ನು ಸರಿಪಡಿಸುತ್ತೇವೆ” ಎಂದು ಅವರು ಹೇಳಿದ್ದರು. “ಸರಿಪಡಿಸುವ ಕಾರ್ಯ ಕೇವಲ ಎರಡು ನಿಮಿಷಗಳನ್ನು ತೆಗೆದುಕೊಳ್ಳುತ್ತದೆ.” ಎಂದಿದ್ದರು.

ಸ್ಥಳೀಯರು ನೀಡಿದ ದೂರಿನ ಅನ್ವಯ, ನಾಲ್ಕು ಜನರನ್ನು ಹೊಡೆದು ಸಾಯಿಸಿದ ಆರೋಪದ ಮೇಲೆ ಸುಮಿತ್ ಜೈಸ್ವಾಲ್ ಎಂದು ಗುರುತಿಸಲಾಗಿರುವ ವ್ಯಕ್ತಿಯ ವಿರುದ್ಧ ಎರಡನೇ ಎಫ್‌ಐಆರ್ ದಾಖಲಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 302 (ಕೊಲೆ), 323 (ಸ್ವಯಂಪ್ರೇರಿತವಾಗಿ ಹಿಂಸಾಕೃತ್ಯ), 336 (ಇತರರ ಜೀವನ ಮತ್ತು ವೈಯಕ್ತಿಕ ಸುರಕ್ಷತೆಗೆ ಅಪಾಯ ತರುವ ಕ್ರಿಯೆ) ಆಪಾದನೆಗಳನ್ನು ಹೊರಿಸಲಾಗಿದೆ. ಈ ಪ್ರಕರಣದ ತನಿಖೆಗೆ ಇಬ್ಬರು ಉಪ ಅಧೀಕ್ಷಕರ ನೇತೃತ್ವದಲ್ಲಿ ತಂಡ ರಚಿಸಲಾಗಿದೆ.

ಇದನ್ನೂ ಓದಿರಿ: ಲಖಿಂಪುರ್‌‌ ಘಟನೆಯಲ್ಲಿ ಪತ್ರಕರ್ತನ ಹತ್ಯೆ: ನ್ಯಾಯಾಂಗ ತನಿಖೆಗೆ ಎಡಿಟರ್ಸ್‌ ಗಿಲ್ಡ್‌ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...