Homeಕರ್ನಾಟಕಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ರಾಜ್ಯ ಸರ್ಕಾರ ತಂದಿರುವ ಭೂಸುಧಾರಣಾ ಕಾಯಿದೆ ತಿದ್ದುಪಡಿ `ಡ್ಯಾಮೇಜಿಂಗ್’ ತಿದ್ದುಪಡಿ ಎಂದೇ ಹೇಳಬಹುದು. ಹೊಸ ಕಾನೂನುಗಳನ್ನು ಜಾರಿಗೆ ತರಲು ಚರ್ಚೆ ಆಗಬೇಕು, ಜನರ ಅಭಿಪ್ರಾಯಗಳನ್ನು ಕೇಳಬೇಕು ಆದರೆ ಇವತ್ತು ಅಂತಹ ಯಾವುದೇ ಚರ್ಚೆಗಳನ್ನು ಮಾಡದೇ ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಳ್ಳುತ್ತಿದೆ.

- Advertisement -
- Advertisement -

’ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ’ ಆಯೋಜಿಸಿರುವ ರಾಜ್ಯವ್ಯಾಪಿ ಜನಜಾಗೃತಿ ಕಾರ್ಯಕ್ರಮದ ಜಾಥಾವನ್ನು ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿರುವ ದೇವರಾಜ್ ಅರಸು ಅವರ ಸಮಾಧಿಯ ಬಳಿ ಉಧ್ಘಾಟನೆ ಮಾಡಿದರು.

ರಾಜ್ಯದ ಬಿಜೆಪಿ ಸರ್ಕಾರ ಭೂಸುಧಾರಣಾ ಕಾಯಿದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊಡಿಸಿರುವುದನ್ನು ವಿರೋಧಿಸಿ ’ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ’ ನೇತೃತ್ವದಲ್ಲಿ ರೈತರು, ದಲಿತರು, ಕೃಷಿ ಕಾರ್ಮಿಕರು ರಾಜ್ಯದಾದ್ಯಂತ ಈ ಹೋರಾಟವನ್ನು ನಡೆಸಲಿದ್ದಾರೆ.

ಜಾಥಾವನ್ನು ಉದ್ಘಾಟನೆ ಮಾಡಿದ ಸಸಿಕಾಂತ್ ಸೆಂಥಿಲ್, ದಿವಂಗತ ದೇವರಾಜ್ ಅರಸ್ ಅವರು ಕರ್ನಾಟಕದಲ್ಲಿ ಭೂಸುಧಾರಣಾ ಕಾಯಿದೆಯನ್ನು ಜಾರಿಗೊಳಿಸಿದ ಶ್ರೇಷ್ಟ ರಾಜಕಾರಣಿ. ಬಡವರಿಗಾಗಿ, ರೈತರಿಗಾಗಿ ಜಾರಿಗೆ ತಂದ ಈ ಕಾನೂನು ಇಂದಿಗೂ ರೈತರಿಗೆ ಗೌರವ ಮತ್ತು ಸ್ವಾಭಿಮಾನದ ಬದುಕು ಕಟ್ಟಿಕೊಟ್ಟಿದೆ. ಇಂತಹ ಕಾನೂನನ್ನು ರಾಜ್ಯದ ಬಿಜೆಪಿ ಸರ್ಕಾರ ಬುಡಮೇಲು ಮಾಡುತ್ತಿರುವುದು ದುರದೃಷ್ಟಕರ ಎಂದು ಅಸಮಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ : ದೇಶವ್ಯಾಪಿ ಅಸಹಕಾರ ಚಳವಳಿಯ ಅಗತ್ಯವಿದೆ

ಅರಸು ಅವರು ಉಳುವವನೇ ಭೂಮಿಯ ಒಡೆಯ ಎಂದು ಹೇಳುವ ಮೂಲಕ ಕೃಷಿ ಭೂಮಿಯಲ್ಲಿ ದುಡಿಯುವ ಕೃಷಿ ಕಾರ್ಮಿಕರಿಗೆ ಭೂಮಿಯನ್ನು ನೀಡುವ ಭೂಸುಧಾರಣಾ ಕಾಯ್ದೆಯನ್ನು ಜಾರಿಗೆ ತಂದಿದ್ದರು. ಇಂದರಿಂದಾಗಿ ರೈತರು ತಮ್ಮ ಬದುಕು ಕಟ್ಟಿಕೊಂಡರು. ಇಂತಹ ಕಾನೂನು ದೇಶದಲ್ಲಿ ಇನ್ನೆಲ್ಲೂ ಕಾಣಲು ಸಾಧ್ಯವಿಲ್ಲ. ಇದೊಂದು ಕ್ರಾಂತಿಕಾರಕ ಕಾನೂನು ಎಂದು ಸೆಂಥಿಲ್‌ ಹೇಳಿದರು.

"ಬಡಜನರ ಭೂಮಿ ವಸತಿ ಹೋರಾಟಕ್ಕೆ ಮರು ಚಾಲನೆ" ರಾಜ್ಯವ್ಯಾಪಿ ಜನಜಾಗೃತಿ ಜಾಥಾ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಆರಂಭಗೊಂಡಿದೆ. ಹಿರಿಯ‌ ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್.ಎಸ್.ದೊರೆಸ್ವಾಮಿ ಅವರು ಚಾಲನಾ ಸಂದೇಶ ನೀಡಲಿದ್ದಾರೆ ಮತ್ತು ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂದಿಲ್ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ಹಲವರು ಹೋರಾಟಗಾರರು ಉಪಸ್ಥಿತರಿರಲಿದ್ದಾರೆ.

Posted by ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ on Monday, September 14, 2020

ಈ ಕಾನೂನು ಇಪ್ಪತ್ತೊಂದನೇ ಶತಮಾನದಲ್ಲೂ ಕೂಡ ರೈತರಿಗೆ ಗೌರವ ತರುವ ಕಾನೂನಾಗಿದ್ದು, ಬಡವರಿಗೆ ಬದುಕು ಕೊಡುತ್ತದೆ. ಆದರೆ, ಕರ್ನಾಟಕದಲ್ಲಿ ಕೊರೊನಾ ಕಾಲವನ್ನು ಬಳಸಿಕೊಂಡು ಸಂಪೂರ್ಣವಾಗಿ ಕಾನೂನನ್ನು ಬದಲಾಯಿಸುತ್ತಾರೆಂದು ಕನಸಿನಲ್ಲಿಯೂ ಯೋಚಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಬಗ್ಗೆ ನನಗೆ ಯಾವುದೇ ಅಭಿಪ್ರಾಯವಿಲ್ಲ. ಕೇಂದ್ರ ಸರ್ಕಾರ ದೇಶವನ್ನು ಕರೆದೊಯ್ಯುತ್ತಿರುವ ದಾರಿ, ಬಡಜನರನ್ನು ನಡೆಸಿಕೊಳ್ಳುವ ರೀತಿ ಎಲ್ಲವೂ ತಿಳಿದಿದೆ. ಅದನ್ನು ವಿರೋಧಿಸಿಯೇ ನಾನು ರಾಜಿನಾಮೆ ನೀಡಿದೆ. ಆದರೆ, ಕರ್ನಾಟಕ ಸರ್ಕಾರ ಈ ರೀತಿ ಮಾಡುತ್ತದೆ ಎಂದು ಊಹಿಸಿರಲಿಲ್ಲ ಎಂದರು.

ಇದನ್ನೂ ಓದಿ: ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಕೃಷಿ ನಾಶ: ಮಾಜಿ ಪ್ರಧಾನಿ ದೇವೇಗೌಡ ಆತಂಕ

ರೈತರ ಹಾಗೂ ಬಡಜನರ ವಿರೋಧಿಯಾಗಿ ಕಾನೂನುಗಳನ್ನು ತಿದ್ದುಪಡಿ ಮಾಡುತ್ತಿದ್ದಾರೆ. ಕೆಲವು ಕಾನೂನುಗಳನ್ನು ತೆಗೆದು ಹಾಕಿದ್ದಾರೆ. ಇದನ್ನು ಜನರು ಒಪ್ಪಲು ಸಾಧ್ಯವಿಲ್ಲ. ಕೊರೊನಾ ಸಮಯವನ್ನು ದುರುಪಯೋಗಪಡಿಸಿಕೊಂಡು ನಮ್ಮ ಕೈ ಬಾಯಿ ಮುಚ್ಚಿ ಇಂತಹ ಕೆಲಸಗಳಿಗೆ ಕೈ ಹಾಕಿದ್ದಾರೆ ಎಂದು ಹೇಳಿದರು.

ಫೋಟೋ ಕೃಪೆ: ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ/Facebook

ಇದು `ಡ್ಯಾಮೇಜಿಂಗ್’ ತಿದ್ದುಪಡಿ ಎಂದೇ ಹೇಳಬಹುದು. ಹೊಸ ಕಾನೂನುಗಳನ್ನು ಜಾರಿಗೆ ತರಲು ಚರ್ಚೆ ಆಗಬೇಕು, ಜನರ ಅಭಿಪ್ರಾಯಗಳನ್ನು ಕೇಳಬೇಕು ಆದರೆ ಇವತ್ತು ಅಂತಹ ಯಾವುದೇ ಚರ್ಚೆಗಳನ್ನು ಮಾಡದೇ ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಳ್ಳುತ್ತಿದೆ. ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ‘ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಟೆಕ್ಕಿಗಳಿಗೆ ಲಾಭ: ಸಚಿವ ಮಾಧುಸ್ವಾಮಿ

ಎಸೆಸ್ಶಿಯಲ್ ಕಮೊಡಿಟೀಸ್ ಆಕ್ಟ್, ಎಪಿಎಂಸಿ ಆಕ್ಟ್, ಕಾಂಟ್ರಾಕ್ಟ್‌ ಫಾರ್ಮಿಂಗ್-ಮೂರು ಕಾನೂನುಗಳನ್ನು ಕೇಂದ್ರ ಸರ್ಕಾರ ಬದಲಾವಣೆ ಮಾಡಿದೆ. ಲ್ಯಾಂಡ್ ಸೀಲಿಂಗ್ ತೆಗೆಯಲಾಗಿದೆ. ಉದ್ಯಮಿಗಳಿಗೆ ಅನುಕೂಲವಾಗುವಂತೆ ಬದಲಾವಣೆಗಳನ್ನು ತಂದುಬಿಟ್ಟಿದ್ದಾರೆ. ಸರ್ಕಾರ ಬಡವರಿಗಾಗಿ ಮಾಡಿರುವ ಕಾನೂನುಗಳು ಇವು ಎಂದು ಹೇಳುತ್ತವೆ. ಆದರೆ, ರೈತರು ಇವತ್ತು 5 ಎಕರೆ ಭೂಮಿಯನ್ನು ಇಟ್ಟುಕೊಳ್ಳಲು ಸಾಧ್ಯವಿಲ್ಲ. ಇನ್ನು ಎಂಟು-ಹತ್ತು ವರ್ಷಗಳಲ್ಲಿ ಒಂದು ಎಕರೆ, ಎರಡು ಎಕರೆ ರೈತರ ಭೂಮಿ ಇರುತ್ತದೆ ಎನ್ನುವುದು ನನಗೆ ಅನುಮಾನ. ಎಲ್ಲಾ ರೈತರು ಕೂಡ ತಮ್ಮ ಹೊಲದಲ್ಲೇ ಕೂಲಿ ಕಾರ್ಮಿಕರಾಗುವ ಪರಿಸ್ಥಿತಿ ಬಂದಿದೆ. ಈಗಾಗಲೇ ಹಲವೆಡೆ ಇಂತಹ ಸ್ಥಿತಿ ಬಂದೊದಗಿದೆ. ನಮ್ಮ ರೈತರ ಬಳಿ ಭೂಮಿ ಇಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಫೋಟೋ ಕೃಪೆ: ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ/Facebook

ಶೇ.90 ರಷ್ಟು ಜನರಿಗೆ ವಾಸಿಸಲು ಮನೆ ಇಲ್ಲದ ಪರಿಸ್ಥಿತಿ ಇದೆ. ಆದರೂ ಸರ್ಕಾರಗಳು ಮಾತ್ರ ಕಾರ್ಪೋರೇಟ್‌ಗಳಿಗೆ ಭೂಮಿ ಕೊಡಲು ಮುಂದಾಗಿವೆ. ಕಳೆದ ಐದು ವರ್ಷಗಳಿಂದ ಜನರ ವಿರೋಧಿಯಾಗಿರುವ ಕಾನೂನು-ಕಾಯ್ದೆಗಳನ್ನೇ ತರಲಾಗುತ್ತಿದೆ. ಜನಪರ ಕಾಯ್ದೆಗಳನ್ನು ತಿದ್ದುಪಡಿ ಮಾಡಿ ಬಂಡವಾಳಿಗರಿಗೆ ಅನುಕೂಲವಾಗುವಂತೆ ಬದಲಾಯಿಸಲಾಗುತ್ತಿದೆ. ಸ್ವಾತಂತ್ಯ್ರಾ ನಂತರದಲ್ಲಿ ಯಾವ ಸರ್ಕಾರವೂ ಈ ರೀತಿ ಆಡಳಿತ ಕೊಟ್ಟಿರಲಿಲ್ಲ ಎಂದು ಆರೋಪಿಸಿದರು.

ಇದನ್ನೂ ಓದಿ: ಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಮಹಿಳಾ ರೈತರ ಹಕ್ಕುಗಳ ವೇದಿಕೆಯ ಖಂಡನೆ

ಮುಂದಿನ ಐದು ವರ್ಷದಲ್ಲಿ ಅವರು ನಮ್ಮ ಎಲ್ಲಾ ಬಡ ಜನರ ಭೂಮಿಯನ್ನು ಕಿತ್ತುಕೊಳ್ಳುತ್ತಾರೆ. ಆದ್ದರಿಂದ ಜನರು ಪ್ರಶ್ನೆ ಎತ್ತಬೇಕಿದೆ. ತಮ್ಮ ಹಕ್ಕುಗಳನ್ನು ಕೇಳಬೇಕಿದೆ. ಪ್ರಜಾಪ್ರಭುತ್ವ ಎಂದರೆ ಸೀಟಿನಲ್ಲಿ ಕೂರಿಸುವುದಲ್ಲ. ಯಾವ ಸರ್ಕಾರ ಬಂದರೂ ಜನ ವಿರೋದಿ ಕೆಲಸಗಳನ್ನು ನಾವು ಪ್ರಶ್ನೆ ಮಾಡಬೇಕು ಅದೇ ಪ್ರಜಾಪ್ರಭುತ್ವ. ನಾವು ಪ್ರಶ್ನೆ ಮಾಡದೆ ಕುಳಿತರೆ ಪ್ರಜಾಪ್ರಭುತ್ವ ಉಳಿಯುವುದಿಲ್ಲ ಎಂದು ಹೇಳಿದರು.

ಕೊರೊನಾವನ್ನು ತೋರಿಸಿ ಬಡವರ ಬದುಕು ಕಸಿದುಕೊಳ್ಳಲಾಗುತ್ತಿದ್ದು, ಅದನ್ನು ವಿರೋಧಿಸಬೇಕು. ಈ ಕಾಯ್ದೆ-ಕಾನೂನುಗಳ ಕುರಿತು ಯಾವ ಮಾಧ್ಯಮಗಳೂ ಚರ್ಚೆ ನಡೆಸಿಲ್ಲ, ನಡೆಸುವುದೂ ಇಲ್ಲ. ಆದ್ದರಿಂದ ಈ ಹೋರಾಟದಲ್ಲಿ ಭಾಗಿಯಾಗಿರುವ ಜನರೇ ಇದರ ರಾಯಭಾರಿಗಳಾಗಬೇಕು. ಈ ಕಾನೂನುಗಳ ವಿರುದ್ಧ ಚರ್ಚೆ ಹುಟ್ಟು ಹಾಕಬೇಕು. ನಮ್ಮ ಪ್ರಶ್ನೆಗಳು ವಿಧಾನಸೌಧದಲ್ಲಿ ಚರ್ಚೆಯಾಗುವಂತೆ ಮಾಡಬೇಕು ಎಂದು ಹೇಳಿದರು.

ಫೋಟೋ ಕೃಪೆ: ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ/Facebook

ಜಾಥಾದ ಉದ್ಘಾಟನೆಯಲ್ಲಿ ಭೂಮಿ ವಸತಿ ಹೋರಾಟ ಸಮಿತಿಯ ನೂರ್ ಶ್ರೀಧರ್, ಕುಮಾರ್ ಸಮತಳ, ವರದರಾಜ್, ಸವಿತ ಕೊಡಗು, ಮನೋಜ್, ರಾಜಶೇಖರ್ ಅಂಗಡಿ ಸೇರಿದಂತೆ ಹಲವಾರು ರೈತರು, ದಲಿತ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ: ಭೂ ಸುಧಾರಣಾ ಕಾನೂನಿನ ತಿದ್ದುಪಡಿ ಮತ್ತು ಅದರ ಪರಿಣಾಮಗಳು – ಡಾ.ಎ.ಆರ್ ವಾಸವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...