Homeಕರ್ನಾಟಕಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ರಾಜ್ಯ ಸರ್ಕಾರ ತಂದಿರುವ ಭೂಸುಧಾರಣಾ ಕಾಯಿದೆ ತಿದ್ದುಪಡಿ `ಡ್ಯಾಮೇಜಿಂಗ್’ ತಿದ್ದುಪಡಿ ಎಂದೇ ಹೇಳಬಹುದು. ಹೊಸ ಕಾನೂನುಗಳನ್ನು ಜಾರಿಗೆ ತರಲು ಚರ್ಚೆ ಆಗಬೇಕು, ಜನರ ಅಭಿಪ್ರಾಯಗಳನ್ನು ಕೇಳಬೇಕು ಆದರೆ ಇವತ್ತು ಅಂತಹ ಯಾವುದೇ ಚರ್ಚೆಗಳನ್ನು ಮಾಡದೇ ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಳ್ಳುತ್ತಿದೆ.

- Advertisement -
- Advertisement -

’ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ’ ಆಯೋಜಿಸಿರುವ ರಾಜ್ಯವ್ಯಾಪಿ ಜನಜಾಗೃತಿ ಕಾರ್ಯಕ್ರಮದ ಜಾಥಾವನ್ನು ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿರುವ ದೇವರಾಜ್ ಅರಸು ಅವರ ಸಮಾಧಿಯ ಬಳಿ ಉಧ್ಘಾಟನೆ ಮಾಡಿದರು.

ರಾಜ್ಯದ ಬಿಜೆಪಿ ಸರ್ಕಾರ ಭೂಸುಧಾರಣಾ ಕಾಯಿದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊಡಿಸಿರುವುದನ್ನು ವಿರೋಧಿಸಿ ’ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ’ ನೇತೃತ್ವದಲ್ಲಿ ರೈತರು, ದಲಿತರು, ಕೃಷಿ ಕಾರ್ಮಿಕರು ರಾಜ್ಯದಾದ್ಯಂತ ಈ ಹೋರಾಟವನ್ನು ನಡೆಸಲಿದ್ದಾರೆ.

ಜಾಥಾವನ್ನು ಉದ್ಘಾಟನೆ ಮಾಡಿದ ಸಸಿಕಾಂತ್ ಸೆಂಥಿಲ್, ದಿವಂಗತ ದೇವರಾಜ್ ಅರಸ್ ಅವರು ಕರ್ನಾಟಕದಲ್ಲಿ ಭೂಸುಧಾರಣಾ ಕಾಯಿದೆಯನ್ನು ಜಾರಿಗೊಳಿಸಿದ ಶ್ರೇಷ್ಟ ರಾಜಕಾರಣಿ. ಬಡವರಿಗಾಗಿ, ರೈತರಿಗಾಗಿ ಜಾರಿಗೆ ತಂದ ಈ ಕಾನೂನು ಇಂದಿಗೂ ರೈತರಿಗೆ ಗೌರವ ಮತ್ತು ಸ್ವಾಭಿಮಾನದ ಬದುಕು ಕಟ್ಟಿಕೊಟ್ಟಿದೆ. ಇಂತಹ ಕಾನೂನನ್ನು ರಾಜ್ಯದ ಬಿಜೆಪಿ ಸರ್ಕಾರ ಬುಡಮೇಲು ಮಾಡುತ್ತಿರುವುದು ದುರದೃಷ್ಟಕರ ಎಂದು ಅಸಮಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ : ದೇಶವ್ಯಾಪಿ ಅಸಹಕಾರ ಚಳವಳಿಯ ಅಗತ್ಯವಿದೆ

ಅರಸು ಅವರು ಉಳುವವನೇ ಭೂಮಿಯ ಒಡೆಯ ಎಂದು ಹೇಳುವ ಮೂಲಕ ಕೃಷಿ ಭೂಮಿಯಲ್ಲಿ ದುಡಿಯುವ ಕೃಷಿ ಕಾರ್ಮಿಕರಿಗೆ ಭೂಮಿಯನ್ನು ನೀಡುವ ಭೂಸುಧಾರಣಾ ಕಾಯ್ದೆಯನ್ನು ಜಾರಿಗೆ ತಂದಿದ್ದರು. ಇಂದರಿಂದಾಗಿ ರೈತರು ತಮ್ಮ ಬದುಕು ಕಟ್ಟಿಕೊಂಡರು. ಇಂತಹ ಕಾನೂನು ದೇಶದಲ್ಲಿ ಇನ್ನೆಲ್ಲೂ ಕಾಣಲು ಸಾಧ್ಯವಿಲ್ಲ. ಇದೊಂದು ಕ್ರಾಂತಿಕಾರಕ ಕಾನೂನು ಎಂದು ಸೆಂಥಿಲ್‌ ಹೇಳಿದರು.

"ಬಡಜನರ ಭೂಮಿ ವಸತಿ ಹೋರಾಟಕ್ಕೆ ಮರು ಚಾಲನೆ" ರಾಜ್ಯವ್ಯಾಪಿ ಜನಜಾಗೃತಿ ಜಾಥಾ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಆರಂಭಗೊಂಡಿದೆ. ಹಿರಿಯ‌ ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್.ಎಸ್.ದೊರೆಸ್ವಾಮಿ ಅವರು ಚಾಲನಾ ಸಂದೇಶ ನೀಡಲಿದ್ದಾರೆ ಮತ್ತು ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂದಿಲ್ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ಹಲವರು ಹೋರಾಟಗಾರರು ಉಪಸ್ಥಿತರಿರಲಿದ್ದಾರೆ.

Posted by ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ on Monday, September 14, 2020

ಈ ಕಾನೂನು ಇಪ್ಪತ್ತೊಂದನೇ ಶತಮಾನದಲ್ಲೂ ಕೂಡ ರೈತರಿಗೆ ಗೌರವ ತರುವ ಕಾನೂನಾಗಿದ್ದು, ಬಡವರಿಗೆ ಬದುಕು ಕೊಡುತ್ತದೆ. ಆದರೆ, ಕರ್ನಾಟಕದಲ್ಲಿ ಕೊರೊನಾ ಕಾಲವನ್ನು ಬಳಸಿಕೊಂಡು ಸಂಪೂರ್ಣವಾಗಿ ಕಾನೂನನ್ನು ಬದಲಾಯಿಸುತ್ತಾರೆಂದು ಕನಸಿನಲ್ಲಿಯೂ ಯೋಚಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಬಗ್ಗೆ ನನಗೆ ಯಾವುದೇ ಅಭಿಪ್ರಾಯವಿಲ್ಲ. ಕೇಂದ್ರ ಸರ್ಕಾರ ದೇಶವನ್ನು ಕರೆದೊಯ್ಯುತ್ತಿರುವ ದಾರಿ, ಬಡಜನರನ್ನು ನಡೆಸಿಕೊಳ್ಳುವ ರೀತಿ ಎಲ್ಲವೂ ತಿಳಿದಿದೆ. ಅದನ್ನು ವಿರೋಧಿಸಿಯೇ ನಾನು ರಾಜಿನಾಮೆ ನೀಡಿದೆ. ಆದರೆ, ಕರ್ನಾಟಕ ಸರ್ಕಾರ ಈ ರೀತಿ ಮಾಡುತ್ತದೆ ಎಂದು ಊಹಿಸಿರಲಿಲ್ಲ ಎಂದರು.

ಇದನ್ನೂ ಓದಿ: ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಕೃಷಿ ನಾಶ: ಮಾಜಿ ಪ್ರಧಾನಿ ದೇವೇಗೌಡ ಆತಂಕ

ರೈತರ ಹಾಗೂ ಬಡಜನರ ವಿರೋಧಿಯಾಗಿ ಕಾನೂನುಗಳನ್ನು ತಿದ್ದುಪಡಿ ಮಾಡುತ್ತಿದ್ದಾರೆ. ಕೆಲವು ಕಾನೂನುಗಳನ್ನು ತೆಗೆದು ಹಾಕಿದ್ದಾರೆ. ಇದನ್ನು ಜನರು ಒಪ್ಪಲು ಸಾಧ್ಯವಿಲ್ಲ. ಕೊರೊನಾ ಸಮಯವನ್ನು ದುರುಪಯೋಗಪಡಿಸಿಕೊಂಡು ನಮ್ಮ ಕೈ ಬಾಯಿ ಮುಚ್ಚಿ ಇಂತಹ ಕೆಲಸಗಳಿಗೆ ಕೈ ಹಾಕಿದ್ದಾರೆ ಎಂದು ಹೇಳಿದರು.

ಫೋಟೋ ಕೃಪೆ: ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ/Facebook

ಇದು `ಡ್ಯಾಮೇಜಿಂಗ್’ ತಿದ್ದುಪಡಿ ಎಂದೇ ಹೇಳಬಹುದು. ಹೊಸ ಕಾನೂನುಗಳನ್ನು ಜಾರಿಗೆ ತರಲು ಚರ್ಚೆ ಆಗಬೇಕು, ಜನರ ಅಭಿಪ್ರಾಯಗಳನ್ನು ಕೇಳಬೇಕು ಆದರೆ ಇವತ್ತು ಅಂತಹ ಯಾವುದೇ ಚರ್ಚೆಗಳನ್ನು ಮಾಡದೇ ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಳ್ಳುತ್ತಿದೆ. ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ‘ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಟೆಕ್ಕಿಗಳಿಗೆ ಲಾಭ: ಸಚಿವ ಮಾಧುಸ್ವಾಮಿ

ಎಸೆಸ್ಶಿಯಲ್ ಕಮೊಡಿಟೀಸ್ ಆಕ್ಟ್, ಎಪಿಎಂಸಿ ಆಕ್ಟ್, ಕಾಂಟ್ರಾಕ್ಟ್‌ ಫಾರ್ಮಿಂಗ್-ಮೂರು ಕಾನೂನುಗಳನ್ನು ಕೇಂದ್ರ ಸರ್ಕಾರ ಬದಲಾವಣೆ ಮಾಡಿದೆ. ಲ್ಯಾಂಡ್ ಸೀಲಿಂಗ್ ತೆಗೆಯಲಾಗಿದೆ. ಉದ್ಯಮಿಗಳಿಗೆ ಅನುಕೂಲವಾಗುವಂತೆ ಬದಲಾವಣೆಗಳನ್ನು ತಂದುಬಿಟ್ಟಿದ್ದಾರೆ. ಸರ್ಕಾರ ಬಡವರಿಗಾಗಿ ಮಾಡಿರುವ ಕಾನೂನುಗಳು ಇವು ಎಂದು ಹೇಳುತ್ತವೆ. ಆದರೆ, ರೈತರು ಇವತ್ತು 5 ಎಕರೆ ಭೂಮಿಯನ್ನು ಇಟ್ಟುಕೊಳ್ಳಲು ಸಾಧ್ಯವಿಲ್ಲ. ಇನ್ನು ಎಂಟು-ಹತ್ತು ವರ್ಷಗಳಲ್ಲಿ ಒಂದು ಎಕರೆ, ಎರಡು ಎಕರೆ ರೈತರ ಭೂಮಿ ಇರುತ್ತದೆ ಎನ್ನುವುದು ನನಗೆ ಅನುಮಾನ. ಎಲ್ಲಾ ರೈತರು ಕೂಡ ತಮ್ಮ ಹೊಲದಲ್ಲೇ ಕೂಲಿ ಕಾರ್ಮಿಕರಾಗುವ ಪರಿಸ್ಥಿತಿ ಬಂದಿದೆ. ಈಗಾಗಲೇ ಹಲವೆಡೆ ಇಂತಹ ಸ್ಥಿತಿ ಬಂದೊದಗಿದೆ. ನಮ್ಮ ರೈತರ ಬಳಿ ಭೂಮಿ ಇಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಫೋಟೋ ಕೃಪೆ: ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ/Facebook

ಶೇ.90 ರಷ್ಟು ಜನರಿಗೆ ವಾಸಿಸಲು ಮನೆ ಇಲ್ಲದ ಪರಿಸ್ಥಿತಿ ಇದೆ. ಆದರೂ ಸರ್ಕಾರಗಳು ಮಾತ್ರ ಕಾರ್ಪೋರೇಟ್‌ಗಳಿಗೆ ಭೂಮಿ ಕೊಡಲು ಮುಂದಾಗಿವೆ. ಕಳೆದ ಐದು ವರ್ಷಗಳಿಂದ ಜನರ ವಿರೋಧಿಯಾಗಿರುವ ಕಾನೂನು-ಕಾಯ್ದೆಗಳನ್ನೇ ತರಲಾಗುತ್ತಿದೆ. ಜನಪರ ಕಾಯ್ದೆಗಳನ್ನು ತಿದ್ದುಪಡಿ ಮಾಡಿ ಬಂಡವಾಳಿಗರಿಗೆ ಅನುಕೂಲವಾಗುವಂತೆ ಬದಲಾಯಿಸಲಾಗುತ್ತಿದೆ. ಸ್ವಾತಂತ್ಯ್ರಾ ನಂತರದಲ್ಲಿ ಯಾವ ಸರ್ಕಾರವೂ ಈ ರೀತಿ ಆಡಳಿತ ಕೊಟ್ಟಿರಲಿಲ್ಲ ಎಂದು ಆರೋಪಿಸಿದರು.

ಇದನ್ನೂ ಓದಿ: ಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಮಹಿಳಾ ರೈತರ ಹಕ್ಕುಗಳ ವೇದಿಕೆಯ ಖಂಡನೆ

ಮುಂದಿನ ಐದು ವರ್ಷದಲ್ಲಿ ಅವರು ನಮ್ಮ ಎಲ್ಲಾ ಬಡ ಜನರ ಭೂಮಿಯನ್ನು ಕಿತ್ತುಕೊಳ್ಳುತ್ತಾರೆ. ಆದ್ದರಿಂದ ಜನರು ಪ್ರಶ್ನೆ ಎತ್ತಬೇಕಿದೆ. ತಮ್ಮ ಹಕ್ಕುಗಳನ್ನು ಕೇಳಬೇಕಿದೆ. ಪ್ರಜಾಪ್ರಭುತ್ವ ಎಂದರೆ ಸೀಟಿನಲ್ಲಿ ಕೂರಿಸುವುದಲ್ಲ. ಯಾವ ಸರ್ಕಾರ ಬಂದರೂ ಜನ ವಿರೋದಿ ಕೆಲಸಗಳನ್ನು ನಾವು ಪ್ರಶ್ನೆ ಮಾಡಬೇಕು ಅದೇ ಪ್ರಜಾಪ್ರಭುತ್ವ. ನಾವು ಪ್ರಶ್ನೆ ಮಾಡದೆ ಕುಳಿತರೆ ಪ್ರಜಾಪ್ರಭುತ್ವ ಉಳಿಯುವುದಿಲ್ಲ ಎಂದು ಹೇಳಿದರು.

ಕೊರೊನಾವನ್ನು ತೋರಿಸಿ ಬಡವರ ಬದುಕು ಕಸಿದುಕೊಳ್ಳಲಾಗುತ್ತಿದ್ದು, ಅದನ್ನು ವಿರೋಧಿಸಬೇಕು. ಈ ಕಾಯ್ದೆ-ಕಾನೂನುಗಳ ಕುರಿತು ಯಾವ ಮಾಧ್ಯಮಗಳೂ ಚರ್ಚೆ ನಡೆಸಿಲ್ಲ, ನಡೆಸುವುದೂ ಇಲ್ಲ. ಆದ್ದರಿಂದ ಈ ಹೋರಾಟದಲ್ಲಿ ಭಾಗಿಯಾಗಿರುವ ಜನರೇ ಇದರ ರಾಯಭಾರಿಗಳಾಗಬೇಕು. ಈ ಕಾನೂನುಗಳ ವಿರುದ್ಧ ಚರ್ಚೆ ಹುಟ್ಟು ಹಾಕಬೇಕು. ನಮ್ಮ ಪ್ರಶ್ನೆಗಳು ವಿಧಾನಸೌಧದಲ್ಲಿ ಚರ್ಚೆಯಾಗುವಂತೆ ಮಾಡಬೇಕು ಎಂದು ಹೇಳಿದರು.

ಫೋಟೋ ಕೃಪೆ: ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ/Facebook

ಜಾಥಾದ ಉದ್ಘಾಟನೆಯಲ್ಲಿ ಭೂಮಿ ವಸತಿ ಹೋರಾಟ ಸಮಿತಿಯ ನೂರ್ ಶ್ರೀಧರ್, ಕುಮಾರ್ ಸಮತಳ, ವರದರಾಜ್, ಸವಿತ ಕೊಡಗು, ಮನೋಜ್, ರಾಜಶೇಖರ್ ಅಂಗಡಿ ಸೇರಿದಂತೆ ಹಲವಾರು ರೈತರು, ದಲಿತ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ: ಭೂ ಸುಧಾರಣಾ ಕಾನೂನಿನ ತಿದ್ದುಪಡಿ ಮತ್ತು ಅದರ ಪರಿಣಾಮಗಳು – ಡಾ.ಎ.ಆರ್ ವಾಸವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...