Homeಕರ್ನಾಟಕಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ರಾಜ್ಯ ಸರ್ಕಾರ ತಂದಿರುವ ಭೂಸುಧಾರಣಾ ಕಾಯಿದೆ ತಿದ್ದುಪಡಿ `ಡ್ಯಾಮೇಜಿಂಗ್’ ತಿದ್ದುಪಡಿ ಎಂದೇ ಹೇಳಬಹುದು. ಹೊಸ ಕಾನೂನುಗಳನ್ನು ಜಾರಿಗೆ ತರಲು ಚರ್ಚೆ ಆಗಬೇಕು, ಜನರ ಅಭಿಪ್ರಾಯಗಳನ್ನು ಕೇಳಬೇಕು ಆದರೆ ಇವತ್ತು ಅಂತಹ ಯಾವುದೇ ಚರ್ಚೆಗಳನ್ನು ಮಾಡದೇ ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಳ್ಳುತ್ತಿದೆ.

- Advertisement -
- Advertisement -

’ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ’ ಆಯೋಜಿಸಿರುವ ರಾಜ್ಯವ್ಯಾಪಿ ಜನಜಾಗೃತಿ ಕಾರ್ಯಕ್ರಮದ ಜಾಥಾವನ್ನು ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿರುವ ದೇವರಾಜ್ ಅರಸು ಅವರ ಸಮಾಧಿಯ ಬಳಿ ಉಧ್ಘಾಟನೆ ಮಾಡಿದರು.

ರಾಜ್ಯದ ಬಿಜೆಪಿ ಸರ್ಕಾರ ಭೂಸುಧಾರಣಾ ಕಾಯಿದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊಡಿಸಿರುವುದನ್ನು ವಿರೋಧಿಸಿ ’ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ’ ನೇತೃತ್ವದಲ್ಲಿ ರೈತರು, ದಲಿತರು, ಕೃಷಿ ಕಾರ್ಮಿಕರು ರಾಜ್ಯದಾದ್ಯಂತ ಈ ಹೋರಾಟವನ್ನು ನಡೆಸಲಿದ್ದಾರೆ.

ಜಾಥಾವನ್ನು ಉದ್ಘಾಟನೆ ಮಾಡಿದ ಸಸಿಕಾಂತ್ ಸೆಂಥಿಲ್, ದಿವಂಗತ ದೇವರಾಜ್ ಅರಸ್ ಅವರು ಕರ್ನಾಟಕದಲ್ಲಿ ಭೂಸುಧಾರಣಾ ಕಾಯಿದೆಯನ್ನು ಜಾರಿಗೊಳಿಸಿದ ಶ್ರೇಷ್ಟ ರಾಜಕಾರಣಿ. ಬಡವರಿಗಾಗಿ, ರೈತರಿಗಾಗಿ ಜಾರಿಗೆ ತಂದ ಈ ಕಾನೂನು ಇಂದಿಗೂ ರೈತರಿಗೆ ಗೌರವ ಮತ್ತು ಸ್ವಾಭಿಮಾನದ ಬದುಕು ಕಟ್ಟಿಕೊಟ್ಟಿದೆ. ಇಂತಹ ಕಾನೂನನ್ನು ರಾಜ್ಯದ ಬಿಜೆಪಿ ಸರ್ಕಾರ ಬುಡಮೇಲು ಮಾಡುತ್ತಿರುವುದು ದುರದೃಷ್ಟಕರ ಎಂದು ಅಸಮಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ : ದೇಶವ್ಯಾಪಿ ಅಸಹಕಾರ ಚಳವಳಿಯ ಅಗತ್ಯವಿದೆ

ಅರಸು ಅವರು ಉಳುವವನೇ ಭೂಮಿಯ ಒಡೆಯ ಎಂದು ಹೇಳುವ ಮೂಲಕ ಕೃಷಿ ಭೂಮಿಯಲ್ಲಿ ದುಡಿಯುವ ಕೃಷಿ ಕಾರ್ಮಿಕರಿಗೆ ಭೂಮಿಯನ್ನು ನೀಡುವ ಭೂಸುಧಾರಣಾ ಕಾಯ್ದೆಯನ್ನು ಜಾರಿಗೆ ತಂದಿದ್ದರು. ಇಂದರಿಂದಾಗಿ ರೈತರು ತಮ್ಮ ಬದುಕು ಕಟ್ಟಿಕೊಂಡರು. ಇಂತಹ ಕಾನೂನು ದೇಶದಲ್ಲಿ ಇನ್ನೆಲ್ಲೂ ಕಾಣಲು ಸಾಧ್ಯವಿಲ್ಲ. ಇದೊಂದು ಕ್ರಾಂತಿಕಾರಕ ಕಾನೂನು ಎಂದು ಸೆಂಥಿಲ್‌ ಹೇಳಿದರು.

"ಬಡಜನರ ಭೂಮಿ ವಸತಿ ಹೋರಾಟಕ್ಕೆ ಮರು ಚಾಲನೆ" ರಾಜ್ಯವ್ಯಾಪಿ ಜನಜಾಗೃತಿ ಜಾಥಾ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಆರಂಭಗೊಂಡಿದೆ. ಹಿರಿಯ‌ ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್.ಎಸ್.ದೊರೆಸ್ವಾಮಿ ಅವರು ಚಾಲನಾ ಸಂದೇಶ ನೀಡಲಿದ್ದಾರೆ ಮತ್ತು ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂದಿಲ್ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ಹಲವರು ಹೋರಾಟಗಾರರು ಉಪಸ್ಥಿತರಿರಲಿದ್ದಾರೆ.

Posted by ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ on Monday, September 14, 2020

ಈ ಕಾನೂನು ಇಪ್ಪತ್ತೊಂದನೇ ಶತಮಾನದಲ್ಲೂ ಕೂಡ ರೈತರಿಗೆ ಗೌರವ ತರುವ ಕಾನೂನಾಗಿದ್ದು, ಬಡವರಿಗೆ ಬದುಕು ಕೊಡುತ್ತದೆ. ಆದರೆ, ಕರ್ನಾಟಕದಲ್ಲಿ ಕೊರೊನಾ ಕಾಲವನ್ನು ಬಳಸಿಕೊಂಡು ಸಂಪೂರ್ಣವಾಗಿ ಕಾನೂನನ್ನು ಬದಲಾಯಿಸುತ್ತಾರೆಂದು ಕನಸಿನಲ್ಲಿಯೂ ಯೋಚಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಬಗ್ಗೆ ನನಗೆ ಯಾವುದೇ ಅಭಿಪ್ರಾಯವಿಲ್ಲ. ಕೇಂದ್ರ ಸರ್ಕಾರ ದೇಶವನ್ನು ಕರೆದೊಯ್ಯುತ್ತಿರುವ ದಾರಿ, ಬಡಜನರನ್ನು ನಡೆಸಿಕೊಳ್ಳುವ ರೀತಿ ಎಲ್ಲವೂ ತಿಳಿದಿದೆ. ಅದನ್ನು ವಿರೋಧಿಸಿಯೇ ನಾನು ರಾಜಿನಾಮೆ ನೀಡಿದೆ. ಆದರೆ, ಕರ್ನಾಟಕ ಸರ್ಕಾರ ಈ ರೀತಿ ಮಾಡುತ್ತದೆ ಎಂದು ಊಹಿಸಿರಲಿಲ್ಲ ಎಂದರು.

ಇದನ್ನೂ ಓದಿ: ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಕೃಷಿ ನಾಶ: ಮಾಜಿ ಪ್ರಧಾನಿ ದೇವೇಗೌಡ ಆತಂಕ

ರೈತರ ಹಾಗೂ ಬಡಜನರ ವಿರೋಧಿಯಾಗಿ ಕಾನೂನುಗಳನ್ನು ತಿದ್ದುಪಡಿ ಮಾಡುತ್ತಿದ್ದಾರೆ. ಕೆಲವು ಕಾನೂನುಗಳನ್ನು ತೆಗೆದು ಹಾಕಿದ್ದಾರೆ. ಇದನ್ನು ಜನರು ಒಪ್ಪಲು ಸಾಧ್ಯವಿಲ್ಲ. ಕೊರೊನಾ ಸಮಯವನ್ನು ದುರುಪಯೋಗಪಡಿಸಿಕೊಂಡು ನಮ್ಮ ಕೈ ಬಾಯಿ ಮುಚ್ಚಿ ಇಂತಹ ಕೆಲಸಗಳಿಗೆ ಕೈ ಹಾಕಿದ್ದಾರೆ ಎಂದು ಹೇಳಿದರು.

ಫೋಟೋ ಕೃಪೆ: ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ/Facebook

ಇದು `ಡ್ಯಾಮೇಜಿಂಗ್’ ತಿದ್ದುಪಡಿ ಎಂದೇ ಹೇಳಬಹುದು. ಹೊಸ ಕಾನೂನುಗಳನ್ನು ಜಾರಿಗೆ ತರಲು ಚರ್ಚೆ ಆಗಬೇಕು, ಜನರ ಅಭಿಪ್ರಾಯಗಳನ್ನು ಕೇಳಬೇಕು ಆದರೆ ಇವತ್ತು ಅಂತಹ ಯಾವುದೇ ಚರ್ಚೆಗಳನ್ನು ಮಾಡದೇ ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಳ್ಳುತ್ತಿದೆ. ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ‘ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಟೆಕ್ಕಿಗಳಿಗೆ ಲಾಭ: ಸಚಿವ ಮಾಧುಸ್ವಾಮಿ

ಎಸೆಸ್ಶಿಯಲ್ ಕಮೊಡಿಟೀಸ್ ಆಕ್ಟ್, ಎಪಿಎಂಸಿ ಆಕ್ಟ್, ಕಾಂಟ್ರಾಕ್ಟ್‌ ಫಾರ್ಮಿಂಗ್-ಮೂರು ಕಾನೂನುಗಳನ್ನು ಕೇಂದ್ರ ಸರ್ಕಾರ ಬದಲಾವಣೆ ಮಾಡಿದೆ. ಲ್ಯಾಂಡ್ ಸೀಲಿಂಗ್ ತೆಗೆಯಲಾಗಿದೆ. ಉದ್ಯಮಿಗಳಿಗೆ ಅನುಕೂಲವಾಗುವಂತೆ ಬದಲಾವಣೆಗಳನ್ನು ತಂದುಬಿಟ್ಟಿದ್ದಾರೆ. ಸರ್ಕಾರ ಬಡವರಿಗಾಗಿ ಮಾಡಿರುವ ಕಾನೂನುಗಳು ಇವು ಎಂದು ಹೇಳುತ್ತವೆ. ಆದರೆ, ರೈತರು ಇವತ್ತು 5 ಎಕರೆ ಭೂಮಿಯನ್ನು ಇಟ್ಟುಕೊಳ್ಳಲು ಸಾಧ್ಯವಿಲ್ಲ. ಇನ್ನು ಎಂಟು-ಹತ್ತು ವರ್ಷಗಳಲ್ಲಿ ಒಂದು ಎಕರೆ, ಎರಡು ಎಕರೆ ರೈತರ ಭೂಮಿ ಇರುತ್ತದೆ ಎನ್ನುವುದು ನನಗೆ ಅನುಮಾನ. ಎಲ್ಲಾ ರೈತರು ಕೂಡ ತಮ್ಮ ಹೊಲದಲ್ಲೇ ಕೂಲಿ ಕಾರ್ಮಿಕರಾಗುವ ಪರಿಸ್ಥಿತಿ ಬಂದಿದೆ. ಈಗಾಗಲೇ ಹಲವೆಡೆ ಇಂತಹ ಸ್ಥಿತಿ ಬಂದೊದಗಿದೆ. ನಮ್ಮ ರೈತರ ಬಳಿ ಭೂಮಿ ಇಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಫೋಟೋ ಕೃಪೆ: ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ/Facebook

ಶೇ.90 ರಷ್ಟು ಜನರಿಗೆ ವಾಸಿಸಲು ಮನೆ ಇಲ್ಲದ ಪರಿಸ್ಥಿತಿ ಇದೆ. ಆದರೂ ಸರ್ಕಾರಗಳು ಮಾತ್ರ ಕಾರ್ಪೋರೇಟ್‌ಗಳಿಗೆ ಭೂಮಿ ಕೊಡಲು ಮುಂದಾಗಿವೆ. ಕಳೆದ ಐದು ವರ್ಷಗಳಿಂದ ಜನರ ವಿರೋಧಿಯಾಗಿರುವ ಕಾನೂನು-ಕಾಯ್ದೆಗಳನ್ನೇ ತರಲಾಗುತ್ತಿದೆ. ಜನಪರ ಕಾಯ್ದೆಗಳನ್ನು ತಿದ್ದುಪಡಿ ಮಾಡಿ ಬಂಡವಾಳಿಗರಿಗೆ ಅನುಕೂಲವಾಗುವಂತೆ ಬದಲಾಯಿಸಲಾಗುತ್ತಿದೆ. ಸ್ವಾತಂತ್ಯ್ರಾ ನಂತರದಲ್ಲಿ ಯಾವ ಸರ್ಕಾರವೂ ಈ ರೀತಿ ಆಡಳಿತ ಕೊಟ್ಟಿರಲಿಲ್ಲ ಎಂದು ಆರೋಪಿಸಿದರು.

ಇದನ್ನೂ ಓದಿ: ಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಮಹಿಳಾ ರೈತರ ಹಕ್ಕುಗಳ ವೇದಿಕೆಯ ಖಂಡನೆ

ಮುಂದಿನ ಐದು ವರ್ಷದಲ್ಲಿ ಅವರು ನಮ್ಮ ಎಲ್ಲಾ ಬಡ ಜನರ ಭೂಮಿಯನ್ನು ಕಿತ್ತುಕೊಳ್ಳುತ್ತಾರೆ. ಆದ್ದರಿಂದ ಜನರು ಪ್ರಶ್ನೆ ಎತ್ತಬೇಕಿದೆ. ತಮ್ಮ ಹಕ್ಕುಗಳನ್ನು ಕೇಳಬೇಕಿದೆ. ಪ್ರಜಾಪ್ರಭುತ್ವ ಎಂದರೆ ಸೀಟಿನಲ್ಲಿ ಕೂರಿಸುವುದಲ್ಲ. ಯಾವ ಸರ್ಕಾರ ಬಂದರೂ ಜನ ವಿರೋದಿ ಕೆಲಸಗಳನ್ನು ನಾವು ಪ್ರಶ್ನೆ ಮಾಡಬೇಕು ಅದೇ ಪ್ರಜಾಪ್ರಭುತ್ವ. ನಾವು ಪ್ರಶ್ನೆ ಮಾಡದೆ ಕುಳಿತರೆ ಪ್ರಜಾಪ್ರಭುತ್ವ ಉಳಿಯುವುದಿಲ್ಲ ಎಂದು ಹೇಳಿದರು.

ಕೊರೊನಾವನ್ನು ತೋರಿಸಿ ಬಡವರ ಬದುಕು ಕಸಿದುಕೊಳ್ಳಲಾಗುತ್ತಿದ್ದು, ಅದನ್ನು ವಿರೋಧಿಸಬೇಕು. ಈ ಕಾಯ್ದೆ-ಕಾನೂನುಗಳ ಕುರಿತು ಯಾವ ಮಾಧ್ಯಮಗಳೂ ಚರ್ಚೆ ನಡೆಸಿಲ್ಲ, ನಡೆಸುವುದೂ ಇಲ್ಲ. ಆದ್ದರಿಂದ ಈ ಹೋರಾಟದಲ್ಲಿ ಭಾಗಿಯಾಗಿರುವ ಜನರೇ ಇದರ ರಾಯಭಾರಿಗಳಾಗಬೇಕು. ಈ ಕಾನೂನುಗಳ ವಿರುದ್ಧ ಚರ್ಚೆ ಹುಟ್ಟು ಹಾಕಬೇಕು. ನಮ್ಮ ಪ್ರಶ್ನೆಗಳು ವಿಧಾನಸೌಧದಲ್ಲಿ ಚರ್ಚೆಯಾಗುವಂತೆ ಮಾಡಬೇಕು ಎಂದು ಹೇಳಿದರು.

ಫೋಟೋ ಕೃಪೆ: ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ/Facebook

ಜಾಥಾದ ಉದ್ಘಾಟನೆಯಲ್ಲಿ ಭೂಮಿ ವಸತಿ ಹೋರಾಟ ಸಮಿತಿಯ ನೂರ್ ಶ್ರೀಧರ್, ಕುಮಾರ್ ಸಮತಳ, ವರದರಾಜ್, ಸವಿತ ಕೊಡಗು, ಮನೋಜ್, ರಾಜಶೇಖರ್ ಅಂಗಡಿ ಸೇರಿದಂತೆ ಹಲವಾರು ರೈತರು, ದಲಿತ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ: ಭೂ ಸುಧಾರಣಾ ಕಾನೂನಿನ ತಿದ್ದುಪಡಿ ಮತ್ತು ಅದರ ಪರಿಣಾಮಗಳು – ಡಾ.ಎ.ಆರ್ ವಾಸವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...