Homeಕರ್ನಾಟಕಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ರಾಜ್ಯ ಸರ್ಕಾರ ತಂದಿರುವ ಭೂಸುಧಾರಣಾ ಕಾಯಿದೆ ತಿದ್ದುಪಡಿ `ಡ್ಯಾಮೇಜಿಂಗ್’ ತಿದ್ದುಪಡಿ ಎಂದೇ ಹೇಳಬಹುದು. ಹೊಸ ಕಾನೂನುಗಳನ್ನು ಜಾರಿಗೆ ತರಲು ಚರ್ಚೆ ಆಗಬೇಕು, ಜನರ ಅಭಿಪ್ರಾಯಗಳನ್ನು ಕೇಳಬೇಕು ಆದರೆ ಇವತ್ತು ಅಂತಹ ಯಾವುದೇ ಚರ್ಚೆಗಳನ್ನು ಮಾಡದೇ ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಳ್ಳುತ್ತಿದೆ.

- Advertisement -
- Advertisement -

’ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ’ ಆಯೋಜಿಸಿರುವ ರಾಜ್ಯವ್ಯಾಪಿ ಜನಜಾಗೃತಿ ಕಾರ್ಯಕ್ರಮದ ಜಾಥಾವನ್ನು ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿರುವ ದೇವರಾಜ್ ಅರಸು ಅವರ ಸಮಾಧಿಯ ಬಳಿ ಉಧ್ಘಾಟನೆ ಮಾಡಿದರು.

ರಾಜ್ಯದ ಬಿಜೆಪಿ ಸರ್ಕಾರ ಭೂಸುಧಾರಣಾ ಕಾಯಿದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊಡಿಸಿರುವುದನ್ನು ವಿರೋಧಿಸಿ ’ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ’ ನೇತೃತ್ವದಲ್ಲಿ ರೈತರು, ದಲಿತರು, ಕೃಷಿ ಕಾರ್ಮಿಕರು ರಾಜ್ಯದಾದ್ಯಂತ ಈ ಹೋರಾಟವನ್ನು ನಡೆಸಲಿದ್ದಾರೆ.

ಜಾಥಾವನ್ನು ಉದ್ಘಾಟನೆ ಮಾಡಿದ ಸಸಿಕಾಂತ್ ಸೆಂಥಿಲ್, ದಿವಂಗತ ದೇವರಾಜ್ ಅರಸ್ ಅವರು ಕರ್ನಾಟಕದಲ್ಲಿ ಭೂಸುಧಾರಣಾ ಕಾಯಿದೆಯನ್ನು ಜಾರಿಗೊಳಿಸಿದ ಶ್ರೇಷ್ಟ ರಾಜಕಾರಣಿ. ಬಡವರಿಗಾಗಿ, ರೈತರಿಗಾಗಿ ಜಾರಿಗೆ ತಂದ ಈ ಕಾನೂನು ಇಂದಿಗೂ ರೈತರಿಗೆ ಗೌರವ ಮತ್ತು ಸ್ವಾಭಿಮಾನದ ಬದುಕು ಕಟ್ಟಿಕೊಟ್ಟಿದೆ. ಇಂತಹ ಕಾನೂನನ್ನು ರಾಜ್ಯದ ಬಿಜೆಪಿ ಸರ್ಕಾರ ಬುಡಮೇಲು ಮಾಡುತ್ತಿರುವುದು ದುರದೃಷ್ಟಕರ ಎಂದು ಅಸಮಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ : ದೇಶವ್ಯಾಪಿ ಅಸಹಕಾರ ಚಳವಳಿಯ ಅಗತ್ಯವಿದೆ

ಅರಸು ಅವರು ಉಳುವವನೇ ಭೂಮಿಯ ಒಡೆಯ ಎಂದು ಹೇಳುವ ಮೂಲಕ ಕೃಷಿ ಭೂಮಿಯಲ್ಲಿ ದುಡಿಯುವ ಕೃಷಿ ಕಾರ್ಮಿಕರಿಗೆ ಭೂಮಿಯನ್ನು ನೀಡುವ ಭೂಸುಧಾರಣಾ ಕಾಯ್ದೆಯನ್ನು ಜಾರಿಗೆ ತಂದಿದ್ದರು. ಇಂದರಿಂದಾಗಿ ರೈತರು ತಮ್ಮ ಬದುಕು ಕಟ್ಟಿಕೊಂಡರು. ಇಂತಹ ಕಾನೂನು ದೇಶದಲ್ಲಿ ಇನ್ನೆಲ್ಲೂ ಕಾಣಲು ಸಾಧ್ಯವಿಲ್ಲ. ಇದೊಂದು ಕ್ರಾಂತಿಕಾರಕ ಕಾನೂನು ಎಂದು ಸೆಂಥಿಲ್‌ ಹೇಳಿದರು.

"ಬಡಜನರ ಭೂಮಿ ವಸತಿ ಹೋರಾಟಕ್ಕೆ ಮರು ಚಾಲನೆ" ರಾಜ್ಯವ್ಯಾಪಿ ಜನಜಾಗೃತಿ ಜಾಥಾ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಆರಂಭಗೊಂಡಿದೆ. ಹಿರಿಯ‌ ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್.ಎಸ್.ದೊರೆಸ್ವಾಮಿ ಅವರು ಚಾಲನಾ ಸಂದೇಶ ನೀಡಲಿದ್ದಾರೆ ಮತ್ತು ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂದಿಲ್ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ಹಲವರು ಹೋರಾಟಗಾರರು ಉಪಸ್ಥಿತರಿರಲಿದ್ದಾರೆ.

Posted by ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ on Monday, September 14, 2020

ಈ ಕಾನೂನು ಇಪ್ಪತ್ತೊಂದನೇ ಶತಮಾನದಲ್ಲೂ ಕೂಡ ರೈತರಿಗೆ ಗೌರವ ತರುವ ಕಾನೂನಾಗಿದ್ದು, ಬಡವರಿಗೆ ಬದುಕು ಕೊಡುತ್ತದೆ. ಆದರೆ, ಕರ್ನಾಟಕದಲ್ಲಿ ಕೊರೊನಾ ಕಾಲವನ್ನು ಬಳಸಿಕೊಂಡು ಸಂಪೂರ್ಣವಾಗಿ ಕಾನೂನನ್ನು ಬದಲಾಯಿಸುತ್ತಾರೆಂದು ಕನಸಿನಲ್ಲಿಯೂ ಯೋಚಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಬಗ್ಗೆ ನನಗೆ ಯಾವುದೇ ಅಭಿಪ್ರಾಯವಿಲ್ಲ. ಕೇಂದ್ರ ಸರ್ಕಾರ ದೇಶವನ್ನು ಕರೆದೊಯ್ಯುತ್ತಿರುವ ದಾರಿ, ಬಡಜನರನ್ನು ನಡೆಸಿಕೊಳ್ಳುವ ರೀತಿ ಎಲ್ಲವೂ ತಿಳಿದಿದೆ. ಅದನ್ನು ವಿರೋಧಿಸಿಯೇ ನಾನು ರಾಜಿನಾಮೆ ನೀಡಿದೆ. ಆದರೆ, ಕರ್ನಾಟಕ ಸರ್ಕಾರ ಈ ರೀತಿ ಮಾಡುತ್ತದೆ ಎಂದು ಊಹಿಸಿರಲಿಲ್ಲ ಎಂದರು.

ಇದನ್ನೂ ಓದಿ: ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಕೃಷಿ ನಾಶ: ಮಾಜಿ ಪ್ರಧಾನಿ ದೇವೇಗೌಡ ಆತಂಕ

ರೈತರ ಹಾಗೂ ಬಡಜನರ ವಿರೋಧಿಯಾಗಿ ಕಾನೂನುಗಳನ್ನು ತಿದ್ದುಪಡಿ ಮಾಡುತ್ತಿದ್ದಾರೆ. ಕೆಲವು ಕಾನೂನುಗಳನ್ನು ತೆಗೆದು ಹಾಕಿದ್ದಾರೆ. ಇದನ್ನು ಜನರು ಒಪ್ಪಲು ಸಾಧ್ಯವಿಲ್ಲ. ಕೊರೊನಾ ಸಮಯವನ್ನು ದುರುಪಯೋಗಪಡಿಸಿಕೊಂಡು ನಮ್ಮ ಕೈ ಬಾಯಿ ಮುಚ್ಚಿ ಇಂತಹ ಕೆಲಸಗಳಿಗೆ ಕೈ ಹಾಕಿದ್ದಾರೆ ಎಂದು ಹೇಳಿದರು.

ಫೋಟೋ ಕೃಪೆ: ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ/Facebook

ಇದು `ಡ್ಯಾಮೇಜಿಂಗ್’ ತಿದ್ದುಪಡಿ ಎಂದೇ ಹೇಳಬಹುದು. ಹೊಸ ಕಾನೂನುಗಳನ್ನು ಜಾರಿಗೆ ತರಲು ಚರ್ಚೆ ಆಗಬೇಕು, ಜನರ ಅಭಿಪ್ರಾಯಗಳನ್ನು ಕೇಳಬೇಕು ಆದರೆ ಇವತ್ತು ಅಂತಹ ಯಾವುದೇ ಚರ್ಚೆಗಳನ್ನು ಮಾಡದೇ ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಳ್ಳುತ್ತಿದೆ. ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ‘ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಟೆಕ್ಕಿಗಳಿಗೆ ಲಾಭ: ಸಚಿವ ಮಾಧುಸ್ವಾಮಿ

ಎಸೆಸ್ಶಿಯಲ್ ಕಮೊಡಿಟೀಸ್ ಆಕ್ಟ್, ಎಪಿಎಂಸಿ ಆಕ್ಟ್, ಕಾಂಟ್ರಾಕ್ಟ್‌ ಫಾರ್ಮಿಂಗ್-ಮೂರು ಕಾನೂನುಗಳನ್ನು ಕೇಂದ್ರ ಸರ್ಕಾರ ಬದಲಾವಣೆ ಮಾಡಿದೆ. ಲ್ಯಾಂಡ್ ಸೀಲಿಂಗ್ ತೆಗೆಯಲಾಗಿದೆ. ಉದ್ಯಮಿಗಳಿಗೆ ಅನುಕೂಲವಾಗುವಂತೆ ಬದಲಾವಣೆಗಳನ್ನು ತಂದುಬಿಟ್ಟಿದ್ದಾರೆ. ಸರ್ಕಾರ ಬಡವರಿಗಾಗಿ ಮಾಡಿರುವ ಕಾನೂನುಗಳು ಇವು ಎಂದು ಹೇಳುತ್ತವೆ. ಆದರೆ, ರೈತರು ಇವತ್ತು 5 ಎಕರೆ ಭೂಮಿಯನ್ನು ಇಟ್ಟುಕೊಳ್ಳಲು ಸಾಧ್ಯವಿಲ್ಲ. ಇನ್ನು ಎಂಟು-ಹತ್ತು ವರ್ಷಗಳಲ್ಲಿ ಒಂದು ಎಕರೆ, ಎರಡು ಎಕರೆ ರೈತರ ಭೂಮಿ ಇರುತ್ತದೆ ಎನ್ನುವುದು ನನಗೆ ಅನುಮಾನ. ಎಲ್ಲಾ ರೈತರು ಕೂಡ ತಮ್ಮ ಹೊಲದಲ್ಲೇ ಕೂಲಿ ಕಾರ್ಮಿಕರಾಗುವ ಪರಿಸ್ಥಿತಿ ಬಂದಿದೆ. ಈಗಾಗಲೇ ಹಲವೆಡೆ ಇಂತಹ ಸ್ಥಿತಿ ಬಂದೊದಗಿದೆ. ನಮ್ಮ ರೈತರ ಬಳಿ ಭೂಮಿ ಇಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಫೋಟೋ ಕೃಪೆ: ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ/Facebook

ಶೇ.90 ರಷ್ಟು ಜನರಿಗೆ ವಾಸಿಸಲು ಮನೆ ಇಲ್ಲದ ಪರಿಸ್ಥಿತಿ ಇದೆ. ಆದರೂ ಸರ್ಕಾರಗಳು ಮಾತ್ರ ಕಾರ್ಪೋರೇಟ್‌ಗಳಿಗೆ ಭೂಮಿ ಕೊಡಲು ಮುಂದಾಗಿವೆ. ಕಳೆದ ಐದು ವರ್ಷಗಳಿಂದ ಜನರ ವಿರೋಧಿಯಾಗಿರುವ ಕಾನೂನು-ಕಾಯ್ದೆಗಳನ್ನೇ ತರಲಾಗುತ್ತಿದೆ. ಜನಪರ ಕಾಯ್ದೆಗಳನ್ನು ತಿದ್ದುಪಡಿ ಮಾಡಿ ಬಂಡವಾಳಿಗರಿಗೆ ಅನುಕೂಲವಾಗುವಂತೆ ಬದಲಾಯಿಸಲಾಗುತ್ತಿದೆ. ಸ್ವಾತಂತ್ಯ್ರಾ ನಂತರದಲ್ಲಿ ಯಾವ ಸರ್ಕಾರವೂ ಈ ರೀತಿ ಆಡಳಿತ ಕೊಟ್ಟಿರಲಿಲ್ಲ ಎಂದು ಆರೋಪಿಸಿದರು.

ಇದನ್ನೂ ಓದಿ: ಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಮಹಿಳಾ ರೈತರ ಹಕ್ಕುಗಳ ವೇದಿಕೆಯ ಖಂಡನೆ

ಮುಂದಿನ ಐದು ವರ್ಷದಲ್ಲಿ ಅವರು ನಮ್ಮ ಎಲ್ಲಾ ಬಡ ಜನರ ಭೂಮಿಯನ್ನು ಕಿತ್ತುಕೊಳ್ಳುತ್ತಾರೆ. ಆದ್ದರಿಂದ ಜನರು ಪ್ರಶ್ನೆ ಎತ್ತಬೇಕಿದೆ. ತಮ್ಮ ಹಕ್ಕುಗಳನ್ನು ಕೇಳಬೇಕಿದೆ. ಪ್ರಜಾಪ್ರಭುತ್ವ ಎಂದರೆ ಸೀಟಿನಲ್ಲಿ ಕೂರಿಸುವುದಲ್ಲ. ಯಾವ ಸರ್ಕಾರ ಬಂದರೂ ಜನ ವಿರೋದಿ ಕೆಲಸಗಳನ್ನು ನಾವು ಪ್ರಶ್ನೆ ಮಾಡಬೇಕು ಅದೇ ಪ್ರಜಾಪ್ರಭುತ್ವ. ನಾವು ಪ್ರಶ್ನೆ ಮಾಡದೆ ಕುಳಿತರೆ ಪ್ರಜಾಪ್ರಭುತ್ವ ಉಳಿಯುವುದಿಲ್ಲ ಎಂದು ಹೇಳಿದರು.

ಕೊರೊನಾವನ್ನು ತೋರಿಸಿ ಬಡವರ ಬದುಕು ಕಸಿದುಕೊಳ್ಳಲಾಗುತ್ತಿದ್ದು, ಅದನ್ನು ವಿರೋಧಿಸಬೇಕು. ಈ ಕಾಯ್ದೆ-ಕಾನೂನುಗಳ ಕುರಿತು ಯಾವ ಮಾಧ್ಯಮಗಳೂ ಚರ್ಚೆ ನಡೆಸಿಲ್ಲ, ನಡೆಸುವುದೂ ಇಲ್ಲ. ಆದ್ದರಿಂದ ಈ ಹೋರಾಟದಲ್ಲಿ ಭಾಗಿಯಾಗಿರುವ ಜನರೇ ಇದರ ರಾಯಭಾರಿಗಳಾಗಬೇಕು. ಈ ಕಾನೂನುಗಳ ವಿರುದ್ಧ ಚರ್ಚೆ ಹುಟ್ಟು ಹಾಕಬೇಕು. ನಮ್ಮ ಪ್ರಶ್ನೆಗಳು ವಿಧಾನಸೌಧದಲ್ಲಿ ಚರ್ಚೆಯಾಗುವಂತೆ ಮಾಡಬೇಕು ಎಂದು ಹೇಳಿದರು.

ಫೋಟೋ ಕೃಪೆ: ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ/Facebook

ಜಾಥಾದ ಉದ್ಘಾಟನೆಯಲ್ಲಿ ಭೂಮಿ ವಸತಿ ಹೋರಾಟ ಸಮಿತಿಯ ನೂರ್ ಶ್ರೀಧರ್, ಕುಮಾರ್ ಸಮತಳ, ವರದರಾಜ್, ಸವಿತ ಕೊಡಗು, ಮನೋಜ್, ರಾಜಶೇಖರ್ ಅಂಗಡಿ ಸೇರಿದಂತೆ ಹಲವಾರು ರೈತರು, ದಲಿತ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ: ಭೂ ಸುಧಾರಣಾ ಕಾನೂನಿನ ತಿದ್ದುಪಡಿ ಮತ್ತು ಅದರ ಪರಿಣಾಮಗಳು – ಡಾ.ಎ.ಆರ್ ವಾಸವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....