Homeಮುಖಪುಟಭೂಮಿ ಸ್ವಾಭಿಮಾನದ ಸಂಕೇತ, ಅದು ಆರ್ಥಿಕ ಭದ್ರತೆ ನೀಡಲಿದೆ - ಕುಮಾರ್ ಸಮತಳ ಸಂದರ್ಶನ

ಭೂಮಿ ಸ್ವಾಭಿಮಾನದ ಸಂಕೇತ, ಅದು ಆರ್ಥಿಕ ಭದ್ರತೆ ನೀಡಲಿದೆ – ಕುಮಾರ್ ಸಮತಳ ಸಂದರ್ಶನ

ಉಳುವವನೇ ಭೂಮಿಯ ಒಡೆಯ ಎನ್ನುವ ಕಾನೂನನ್ನು ಪರಿಣಾಮಕಾರಿಯಗಿ ಜಾರಿಗೊಳಿಸಬೇಕು. ಕೃಷಿಗೆ ಸಮಬಂಧಿಸಿದಂತೆ ಈಗ ಮಾಡಿರುವ ತಿದ್ದುಪಡಿಗಳನ್ನು ಹಿಂಪಡೆಯಬೇಕು ಎನ್ನುವುದು ನಮ್ಮ ಮುಖ್ಯ ಹಕ್ಕೊತ್ತಾಯಗಳು.

- Advertisement -
- Advertisement -

ರಾಜ್ಯದ ಭೂಮಿ, ವಸತಿ ರಹಿತ ಬಡಜನರ ಪರವಾಗಿ ಕಳೆದ ಹಲವು ವರ್ಷಗಳಿಂದ ಹೋರಾಟ ನಡೆಯುತ್ತಿದೆ. ಈ ವಿಧಾನಸಭಾ ಅಧಿವೇಶನದ ಹಿನ್ನೆಲೆಯಲ್ಲಿಯೂ ಸಹ ರಾಜ್ಯಾದ್ಯಂತ ಜಾಥ ನಡೆಸಲಾಗುತ್ತಿದೆ. ಈ ಹೋರಾಟದ ಆಶಯಗಳು ಮತ್ತು ಮುಂದಿನ ನಡೆ ಕುರಿತು ಚರ್ಚಿಸಲು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಮುಖಂಡರಲ್ಲೊಬ್ಬರಾದ ಕುಮಾರ್ ಸಮತಳರವರನ್ನು ನಾನುಗೌರಿ ವತಿಯಿಂದ ಸಂದರ್ಶಿಸಲಾಯಿತು. ಅದರ ಪೂರ್ಣಪಾಠ ಇಲ್ಲಿದೆ.

ನಾನು ಗೌರಿ: ಕಳೆದ ಕೆಲವು ವರ್ಷಗಳಿಂದ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದೀರಿ. ಸರ್ಕಾರಗಳು ಹೇಗೆ ಸ್ಪಂದಿಸಿವೆ?

ಕುಮಾರ್ ಸಮತಳ: ಸರ್ಕಾರಗಳು ಹೋರಾಟಗಳಿಗೆ ಸ್ಪಂದಿಸಿದ್ದಿದ್ದರೆ, ಇಂದು ನಾವು ಹೋರಾಟಗಳನ್ನು ಮಾಡಬೇಕಾದ ಅಗತ್ಯವೇ ಇರಲಿಲ್ಲ. ಇಷ್ಟರಲ್ಲಾಗಲೇ ಬಡವರಿಗೆ ವಸತಿ ಮತ್ತು ಭೂಮಿ ಸಿಗಬೇಕಿತ್ತು. ಯಾವುದೇ ಸರ್ಕಾರಗಳಾದರೂ ಅಧಿಕಾರಕ್ಕೆ ಬರುವ ಮೊದಲು ನೂರಾರು ಆಶ್ವಾಸನೆಗಳನ್ನು ಕೊಡುತ್ತವೆ. ಅಧಿಕಾರಕ್ಕೆ ಬಂದ ನಂತರ ಆಶ್ವಾಸನೆಗಳನ್ನು ಮರೆಯುತ್ತವೆ. ಇದರ ಕುರಿತು ನಡೆಯುವ ಹೋರಾಟಗಳನ್ನು ನಿರ್ಲಕ್ಷಿಸುತ್ತಿವೆ.

ಇದನ್ನೂ ಓದಿ: ಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ನಾನು ಗೌರಿ: ಉಳುವವನೇ ಭೂಮಿಯ ಒಡೆಯ ಕಾನೂನು ಬಂದರೂ ಕೂಡ ಬಡಜನರಿಗೆ ಭೂಮಿ ಸಿಗಲಿಲ್ಲವೇಕೆ?

ಕುಮಾರ್ ಸಮತಳ: ಇಲ್ಲ. ಒಂದು ಮಟ್ಟಕ್ಕೆ ಕೆಲವರಿಗೆ ಭೂಮಿ ಸಿಕ್ಕಿದೆ. ಅದು ಪರಿಣಾಮಕಾರಿಯಾಗಿ ಎಲ್ಲರಿಗೂ ಸಿಗಲಿಲ್ಲ ಅಷ್ಟೆ. ಆದರೆ ಇಂತಹ ಕಾನೂನುಗಳಿರುವುದರಿಂದಲೇ ಜನರು ಆಶಾಭಾವದಿಂದ ತಮಗೂ ಒಂದು ಅವಕಾಶವಿದೆ ಎಂದುಕೊಳ್ಳುತ್ತಿದ್ದರು. ಈ ಕಾನೂನು ಜನರಿಗೆ ಧ್ವನಿಯಾಗಿತ್ತು. ಏನೂ ಇಲ್ಲದವರೂ ಕೂಡ ಭೂಮಿ ಹೊಂದಬಹುದು ಎಂಬ ನಂಬಿಕೆಯನ್ನು ಹುಟ್ಟುಹಾಕಿತು. ಆದರೆ ಈ ಕಾನೂನನ್ನು ಇಂದಿನ ಸರ್ಕಾರಗಳು ತಿದ್ದುಪಡಿ ಮಾಡುವ ಮೂಲಕ ದುರ್ಬಲಗೊಳಿಸುತ್ತಿವೆ. ಅದಕ್ಕೆ ನಮ್ಮ ವಿರೋಧವಿದೆ.

ನಾನು ಗೌರಿ: ಅಲ್ಪಸ್ವಲ್ಪ ಭೂಮಿ ಇರುವವರೂ ಸಹ ಬೆಲೆ ಸಿಗದೇ, ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಹೀಗಿರುವಾಗ, ತುಂಡು ಭೂಮಿ ಕೊಡಿಸುವುದರಿಂದ ಏನು ಲಾಭ?

ಕುಮಾರ್ ಸಮತಳ: ಭೂಮಿ ಎನ್ನುವುದು ಸ್ವಾಭಿಮಾನದ ಸಂಕೇತ. ಇದು ಬಡವರಿಗೆ ಆರ್ಥಿಕ ಭದ್ರತೆಯನ್ನು ಕೊಡುತ್ತದೆ. ಆದರೂ ನೀವು ಹೇಳುತ್ತಿರುವುದು ನಿಜ. ಆದರೆ ವಾಸ್ತವದಲ್ಲಿ ತುಂಡು ಭೂಮಿ ಇರುವವರು ಇಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿಲ್ಲ. ದೊಡ್ಡ ಸಾಲದ ಸುಳಿಗೆ ಸಿಲುಕುತ್ತಿಲ್ಲ. ಬದಲಾಗಿ ಕನಿಷ್ಟ 5 ಎಕೆರೆಗಿಂತ ಹೆಚ್ಚು ಭೂಮಿಯನ್ನು ಹೊಂದಿರುವವರು, ಮಧ್ಯಮ ರೈತರು ಈ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅದಾಗ್ಯೂ ಅವರಿಗೆ ನ್ಯಾಯಯುತ ಬೆಲೆ ಮತ್ತು ಪರಿಹಾರಗಳನ್ನು ಕೊಡಬೇಕಾಗಿರುವುದೂ ಕೂಡ ಸರ್ಕಾರದ ಕರ್ತವ್ಯವಾಗಿದೆ.

ನಾನು ಗೌರಿ: ನಿಮ್ಮ ಹೋರಾಟದ ಪ್ರಮುಖ ಹಕ್ಕೊತ್ತಾಯಗಳೇನು?

ಕುಮಾರ್ ಸಮತಳ: ಪ್ರಮುಖವಾಗಿ, ಉಳುವವನೇ ಭೂಮಿಯ ಒಡೆಯ ಎನ್ನುವ ಕಾನೂನನ್ನು ಪರಿಣಾಮಕಾರಿಯಗಿ ಜಾರಿಗೊಳಿಸಬೇಕು. ಕೃಷಿಗೆ ಸಮಬಂಧಿಸಿದಂತೆ ಈಗ ಮಾಡಿರುವ ತಿದ್ದುಪಡಿಗಳನ್ನು ಹಿಂಪಡೆಯಬೇಕು ಎನ್ನುವುದು ನಮ್ಮ ಮುಖ್ಯ ಹಕ್ಕೊತ್ತಾಯಗಳು.

ಭೂಮಿ ಮತ್ತು ವಸತಿ ಹಕ್ಕು ಹೋರಾಟ

ನಾನು ಗೌರಿ: ರಾಜ್ಯದಲ್ಲಿ ಭೂಮಿ/ಸ್ವಂತ ನಿವೇಶನ ಇಲ್ಲದವರ ಸಂಖ್ಯೆ ಎಷ್ಟಿದೆ. ಭೂಮಿ/ನಿವೇಶನ ಇಲ್ಲದಿರುವುದಕ್ಕೆ ಭೂಮಿಯ ಅಲಭ್ಯತೆ ಕಾರಣವೋ? ಅಥವಾ ಇದ್ದರೂ ಸರ್ಕಾರದ ಇಚ್ಚಾಶಕ್ತಿಯ ಕೊರತೆ ಕಾರಣವೋ?

ಕುಮಾರ್ ಸಮತಳ: ರಾಜ್ಯದಲ್ಲಿ ಭೂಮಿಗೆ ಕೊರತೆಯಿಲ್ಲ. ಈಗಗಲೇ ಭೂಮಿಗಾಗಿ ಅರ್ಜಿಹಾಕಿ ಕಾಯುತ್ತಿರುವವರ ಸಂಖ್ಯೆ ಮಾತ್ರ 50 ಲಕ್ಷದಷ್ಟಿದೆ. ಆದರೂ ಸರ್ಕಾರ ಅರ್ಜಿಗಳನ್ನು ಇತ್ಯರ್ಥಪಡಿಸುವ ಕ್ರಮಗಳನ್ನು ಕೈಗೊಂಡಿಲ್ಲ. ಖಂಡಿತವಾಗಿಯೂ ಸರ್ಕಾರ ಇಚ್ಚಾಶಕ್ತಿಯ ಕೊರತೆಯೇ ಬಡಜನರಿಗೆ ಇನ್ನೂ ಭೂಮಿ ಸಿಗದಿರುವುದಕ್ಕೆ ಕಾರಣ.

ಇದನ್ನೂ ಓದಿ: ಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಮಹಿಳಾ ರೈತರ ಹಕ್ಕುಗಳ ವೇದಿಕೆಯ ಖಂಡನೆ

ನಾನು ಗೌರಿ: ದೇಶದ/ರಾಜ್ಯದ ಪ್ರತಿ ಕುಟುಂಬಕ್ಕೂ ಭೂಮಿ, ವಸತಿ ನೀಡಲು ಸಾಧ್ಯವೇ?

ಕುಮಾರ್ ಸಮತಳ: ಖಂಡಿತ ಸಾಧ್ಯ. ಈಗ ಇರುವ ಭೂಮಿಯನ್ನು ಎಲ್ಲರಿಗೂ ಹಂಚಲು ಸಾಧ್ಯವಿದೆ. ಒಂದು ಕುಟುಂಬ ಬದುಕಲು ಬೇಕಾದಷ್ಟು ಭೂಮಿ ಕೊಡಲು ಸಾಧ್ಯತೆಯಿದೆ. ಆದರೆ ಸರ್ಕಾರ ಮನಸ್ಸು ಮಾಡಿದರೆ ಮಾತ್ರ ಇದು ಸಾಧ್ಯ. 5 ಎಕರೆ ಭೂಮಿಯಿರುವವರೂ ಬದುಕಿದ್ದಾರೆ, 5 ಕುಂಟೆ ಭೂಮಿಯಿರುವವರೂ ಬದುಕಿದ್ದಾರೆ. ಅದೇ 5 ಎಕರೆ ಜಾಗಕ್ಕೂ ಮನೆ ಮಾತ್ರ ಕಟ್ಟಿಕೊಂಡು ಬದುಕುತ್ತಿರುವವರೂ ನಮ್ಮ ನಡುವೆ ಇದ್ದಾರಲ್ಲವೇ?

ನಾನು ಗೌರಿ: ಎಲ್ಲಾ ಸರ್ಕಾರಗಳು ಹಲವು ಯೋಜನೆಗಳ ಅಡಿಯಲ್ಲಿ ಕೋಟ್ಯಂತರ ಕುಟುಂಬಗಳಿಗೆ ವಸತಿ ನೀಡಿದ್ದೇವೆ ಎಂದು ಜಾಹಿರಾತು ಹಾಕಿಕೊಂಡಿದ್ದಾರಲ್ಲ?

ಕುಮಾರ್ ಸಮತಳ: ಅವುಗಳೆಲ್ಲಾ ಗಿಮಿಕ್. ಈಗ ವಸತಿ ಸಚಿವ ವಿ.ಸೋಮಣ್ಣ ಪ್ರತಿ ಪಂಚಾಯಿತಿಗೂ 20 ಮನೆಗಳನ್ನು ನೀಡಿದ್ದೇವೆ ಎಂದು ಹೇಳುತ್ತಾರೆ. ಆದರೆ ವಾಸ್ತವದಲ್ಲಿ ಕೇವಲ ಇಪ್ಪತ್ತು ಮನೆಗಳು ಸಾಕಾಗುತ್ತವೆಯೇ? ಈಗ ಲಕ್ಷ ಮನೆಗಳನ್ನು ಕೊಡುತ್ತೇವೆ ಎಂದು ಹೇಳುತ್ತಾರೆ. ಆದರೆ ಒಂದರ ಮೇಲೊಂದರಂತೆ ಬೆಂಕಿಪಟ್ಟಣಗಳಂತೆ ಮನೆ ಕಟ್ಟಿಕೊಟ್ಟಿರುತ್ತಾರೆ. ಇಲ್ಲಿ ನಿವೇಶನ ಕೊಟ್ಟಂತಾಯಿತೇ? ನಿವೇಶನ ಕೊಡುವುದಕ್ಕೆ ಸಾಧ್ಯತೆಯಿದೆ. ಆದರೂ ಕೊಡುವುದಿಲ್ಲ ಅಷ್ಟೆ.

ನಾನು ಗೌರಿ: ಸರ್ಕಾರ ಸುಗ್ರೀವಾಜ್ಞೆಯ ಮೂಲಕ ಭೂಸುಧಾರಣೆಗಳ ಕಾಯ್ದೆಯಲ್ಲಿ ತಂದಿರುವ ಬದಲಾವಣೆಗಳು ಭೂಮಿ ಮತ್ತು ವಸತಿರಹಿತರನ್ನು ಹೇಗೆ ಬಾದಿಸುತ್ತದೆ?

ಕುಮಾರ್ ಸಮತಳ: ಈಗ ನೋಡಿ, ನಾವು ಕಾನೂನು ಪ್ರಕಾರ ಬಡವರಿಗೆ ಭೂಮಿ ಕೊಡಿ ಎಂದು ಹೋರಾಟ ಮಾಡುತ್ತೇವೆ. ಆದರೆ ಈ ಕಾಯ್ದೆ ಅಥವಾ ಕಾನೂನು ಇದ್ದರೆ ತಾನೆ ಭೂಮಿ ಕೊಡುವ ಪ್ರಮೇಯ ಬರುತ್ತದೆ. ಹಾಗಾಗಿ ಆ ಕಾಯ್ದೆಗಳನ್ನೇ ರದ್ದುಪಡಿಸಿದರೆ? ಈಗ ಸರ್ಕಾರ ಮಾಡುತ್ತಿರುವುದು ಇಂತಹ ಕೆಲಸಗಳನ್ನೇ. ಜೊತೆಗೆ ಈಗ ತಿದ್ದುಪಡಿ ಮಾಡಿರುವ ವಿಷಯ, ಕೃಷಿಯೇತರರು ಭೂಮಿ ಕೊಳ್ಳಬಹುದು ಎಂದು ಹೇಳುತ್ತಾರೆ. ಅಂದರೆ ನೇರವಾಗಿ ಬಂಡವಾಳಶಾಹಿಗಳಿಗೆ ಭೂಮಿ ಕೊಳ್ಳಲು ಅವಕಾಶ ಮಾಡಿಕೊಡುತ್ತಿದೆ. ಇನ್ನೊಂದು ವಿಷಯ, ಭೂಮಿ ಹೊಂದುವ ಮಿತಿಯನ್ನು ಹೆಚ್ಚಿಸಿರುವುದು. ಅಂದರೆ ಒಂದು ಕುಟುಂಬ ಮೊದಲು 54 ಎಕರೆಗಳವರೆಗೆ ಭೂಮಿ ಹೊಂದಬಹುದಿತ್ತು. ಆದರೆ ಈ ತಿದ್ದುಪಡಿಯ ಮೂಲಕ ಸುಮಾರು 200 ಎಕರೆಗಳವರೆಗೆ ಭೂಮಿ ಹೊಂದಬಹುದು ಎಂದು ಹೇಳುತ್ತದೆ. ಇದರ ಮೂಲಕ ಜಮೀನ್ದಾರಿ ಪದ್ದತಿಯನ್ನು ಮತ್ತೊಮ್ಮೆ ಜಾರಿಗೆ ತರಲು ಹೊರಟಿದೆ.

ಇದನ್ನೂ ಓದಿ: ‘ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಟೆಕ್ಕಿಗಳಿಗೆ ಲಾಭ: ಸಚಿವ ಮಾಧುಸ್ವಾಮಿ

ನಾನು ಗೌರಿ: ಮಹಿಳೆಯರಿಗೆ ಭೂ ಒಡೆತನದ ಬಗ್ಗೆ ನಿಮ್ಮ ಅಭಿಪ್ರಾಯವೇನು?

ಕುಮಾರ್ ಸಮತಳ: ಖಂಡಿತವಾಗಿಯೂ ಭೂಮಿಯ ಒಡೆತನ ಮಹಿಳೆಯರಿಗೂ ಕೊಡಬೇಕು. ಭೂಮಿಯ ಪಹಣಿಯನ್ನು ಜಂಟಿಯಾಗಿ ಮಾಡಿಸಿ, ಪ್ರತಿ ಮನೆಯಲ್ಲಿಯೂ ಮಹಿಳೆಯ ಹೆಸರಿನಲ್ಲಿಯೂ ಭೂಮಿ ಇರುವಂತೆ ನೊಡಿಕೊಂಡು ಅವರನ್ನೂ ಸಬಲರನ್ನಾಗಿ ಮಾಡಬೇಕು ಎನ್ನುವುದು ನಮ್ಮ ಆಶಯವೂ ಆಗಿದೆ. ಸರ್ಕಾರ ಭೂಮಿಯನ್ನು ಕೊಡುವಾಗ ಅದನ್ನು ಮಹಿಳೆಯರ ಹೆಸರಿನಲ್ಲಿಯೇ ಕೊಡಬೇಕು ಎಂಬುದೇ ನಮ್ಮ ಒತ್ತಾಯವಾಗಿದೆ.

ಭೂಮಿ ಮತ್ತು ವಸತಿ ಹಕ್ಕು ಹೋರಾಟ

ನಾನು ಗೌರಿ: ಕೊರೊನಾ ಸಾಂಕ್ರಾಮಿಕದಿಂದ ಭೂರಹಿತ ಮತ್ತು ವಸತಿರಹಿತ ಜನರ ಮೇಲೆ ಉಂಟಾದ ಪರಿಣಾಮಗಳೇನು?

ಕುಮಾರ್ ಸಮತಳ: ತಮ್ಮ ಹಳ್ಳಿಯಲ್ಲಿ ಯಾರಿಗೆ ಭೂಮಿ ಇರುವುದಿಲ್ಲವೋ ಅಂಥವರು ಕೆಲಸವನ್ನರಸಿ ಅಥವಾ ಬದುಕನ್ನರಸಿ ಪಟ್ಟಣಗಳಿಗೆ ವಲಸೆ ಬರುತ್ತಾರೆ. ಆದರೆ ಈ ಕೊರೊನಾದಂತಹ ರೋಗಗಳಿಂದ ಅವರು ಅಲ್ಲಿಯೂ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. ದುಡಿದು ತಿನ್ನಬೇಕು ಎನ್ನುವವರಿಗೆ ನಿಜವಾಗಿಯೂ ಇದು ಸಂಕಷ್ಟದ ಪರಿಸ್ಥಿತಿ. ಈಗಾಗಲೆ ಸಾಲದಲ್ಲಿ ಬದುಕು ನಡೆಸುತ್ತಿರುವವರು, ಈ ಸಂದರ್ಭದಲ್ಲಿ ಬದುಕುವುದಕ್ಕಾಗಿಯೇ ಸಾಲ ಮಾಡಬೇಕಾದ ಪರಿಸ್ಥಿತಿ ಎದುರಾಗಿ ಅವರ ಋಣಭಾರವನ್ನು ಇನ್ನಷ್ಟು ಹೆಚ್ಚು ಮಾಡಿಕೊಂಡಿದ್ದಾರೆ. ಇದು ವಸತಿ ಮತ್ತು ಭೂರಹಿತರ ಸಮಸ್ಯೆಯಾಗಿದೆ. ಜೊತೆಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳೂ ಸಹ ಸಮರ್ಪಕವಾಗಿ ಸಿಗಲಿಲ್ಲವಾದ್ದರಿಂದ ಇವರ ಬದುಕು ಮೂರಾಬಟ್ಟೆಯಾಗಿದೆ.

ಇದನ್ನೂ ಓದಿ: ಭೂ ಸುಧಾರಣಾ ಕಾನೂನಿನ ತಿದ್ದುಪಡಿ ಮತ್ತು ಅದರ ಪರಿಣಾಮಗಳು – ಡಾ.ಎ.ಆರ್ ವಾಸವಿ

ನಾನು ಗೌರಿ: ಕೊರೊನಾ ಲಾಕ್‌ಡೌನ್ ನಂತರದ ಕಾಲದಲ್ಲಿ ಹೋರಾಟಗಳಿಗೆ ಜನರ ಪ್ರತಿಕ್ರಿಯೆ ಹೇಗಿದೆ. ನಿಮ್ಮ ಜಾಥದ ಅನುಭವಗಳೇನು?

ಕುಮಾರ್ ಸಮತಳ: ನೋಡಿ ಸರ್, ನಾವು ಬದುಕಬೇಕು ಎಂದರೆ ಹೊರಾಟ ಮಾಡಲೇಬೇಕು. ಕೊರೊನಾ ಇದ್ದರೂ ಸರಿ ಮತ್ತೊಂದೇ ಇದ್ದರೂ ಸರಿ. ನನಗೆ ಹೊಟ್ಟೆತುಂಬಬೇಕು ಎಂದರೆ ನಾನು ಹೊರಗೆ ಬರಲೇಬೆಕು. ಹಾಗಾಗಿಯೇ ನಮ್ಮ ಬದುಕಿಗೆ ಕುಂದುಂಟಾಗುವ ಈ ಸಮಯದಲ್ಲಿ ನಾವು ಎಚ್ಚೆತ್ತುಕೊಳ್ಳದಿದ್ದರೆ ಈಗಿರುವ ಸ್ಥಿತಿಗಿಂತಲೂ ಕೆಳಮಟ್ಟಕ್ಕೆ ತಲುಪುವುದು ಶತಸಿದ್ಧ. ನಾವು ನಮ್ಮ ಹೋರಾಟದ ಸಲುವಾಗಿ ಪ್ರತಿ ಹಳ್ಳಿಗೂ ಜಾಥಾ ಹೊರಟಾಗ ಅಲ್ಲೆಲ್ಲಾ ಜನರ ಸ್ಪಂದನೆ ಚೆನ್ನಾಗಿದೆ. ಅವರಿಗೆ ಜಾಗೃತಿ ಮೂಡಿಸುವ ನಮ್ಮ ಕೆಲಸವೂ ಚೆನ್ನಾಗಿ ಆಗುತ್ತಿದೆ. ಜನರಿಗೂ, ಇದು ನಿಜವಾಗಲೂ ನಮ್ಮ ಸಮಸ್ಯೆ ಎನಿಸತೊಡಗಿ, ನಾವೂ ಚಳವಳಿ ಮಾಡಬೇಕು ಎಂಬ ಭಾವನೆ ಬಂದಿದೆ. ಚಳವಳಿ ಮಾಡದಿದ್ದರೆ ನಮಗೆ ನಮ್ಮ ಹಕ್ಕು ಸಿಗಲಾರದು ಎಂದು ಹಲವರಿಗೆ ಮನವರಿಕೆಯಾಗಿದೆ. ನಮ್ಮ ಪರವಾಗಿಯೂ ದನಿಯೆತ್ತುವವರು ಇದ್ದಾರೆ ಎಂಬ ಭಾವನೆ ಜನರಲ್ಲಿ ಮೂಡುತ್ತಿದೆ.


ಇದನ್ನೂ ಓದಿ: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ : ದೇಶವ್ಯಾಪಿ ಅಸಹಕಾರ ಚಳವಳಿಯ ಅಗತ್ಯವಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...