Homeಕರ್ನಾಟಕಬಿಜೆಪಿಯ ಕೊನೆಯ ದಿನಗಳು ಆರಂಭ, ಬೊಮ್ಮಾಯಿ ಧಮ್ ಇಳಿಯುತ್ತದೆ: ಡಿ.ಕೆ. ಶಿವಕುಮಾರ್‌

ಬಿಜೆಪಿಯ ಕೊನೆಯ ದಿನಗಳು ಆರಂಭ, ಬೊಮ್ಮಾಯಿ ಧಮ್ ಇಳಿಯುತ್ತದೆ: ಡಿ.ಕೆ. ಶಿವಕುಮಾರ್‌

- Advertisement -
- Advertisement -

ಮುಖ್ಯಮಂತ್ರಿ ಬೊಮ್ಮಾಯಿ ಅವರು ಧಮ್‌ ವಿಚಾರ ಮಾತನಾಡಿದ್ದಾರೆ. ನಾನು ಅವರಿಗೆ ಅದೇ ಧಮ್‌ ನಿಂದ ಹೇಳುತ್ತಿದ್ದೇನೆ; ಬಿಜೆಪಿಯ ಕೊನೆಯ ದಿನಗಳು ಆರಂಭವಾಗಿವೆ. ಅವರ ಧಮ್ ಇಳಿಯುತ್ತದೆ, ನಮ್ಮ ಧಮ್‌ ಏರುತ್ತದೆ ಎಂದು ರಾಜ್ಯ ಕಾಂಗ್ರೆಸ್‌‌ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಭಾನುವಾರ ಹೇಳಿದ್ದಾರೆ. ಅವರು ಬಳ್ಳಾರಿಯಲ್ಲಿ ನಡೆದ ʼಭಾರತ ಜೋಡೋ ಯಾತ್ರೆʼ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡುತ್ತಿದ್ದರು.

“ಬಿಜೆಪಿಯವರು ಈ ದೇಶವನ್ನು ಕತ್ತರಿಸುವ ಕತ್ತರಿಯಾದರೆ, ಕಾಂಗ್ರೆಸ್ ಪಕ್ಷ ಈ ದೇಶವನ್ನು ಒಗ್ಗೂಡಿಸುವ ಸೂಜಿಯಂತೆ ಕೆಲಸ ಮಾಡಲಿದೆ. ಇದೇ ನಮಗೂ ಅವರಿಗೂ ಇರುವ ವ್ಯತ್ಯಾಸ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿ ಕ್ಷೇತ್ರದಲ್ಲಿ 25000 ಜನರನ್ನು ಸೇರಿಸಿ

“ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 3510 ಕಿ.ಮೀ. ಪಾದಯಾತ್ರೆ ಮಾಡುತ್ತಿರುವುದನ್ನು ಕಂಡು ಬಿಜೆಪಿ ಅವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಅವರು ರಾಜ್ಯದಲ್ಲಿ ಬೇರೆ ಮಾರ್ಗವಾಗಿ ಪಾದಯಾತ್ರೆ ಮಾಡಬಹುದಿತ್ತು. ಆದರೆ ನನ್ನ ತಾಯಿಗೆ ರಾಜಕೀಯವಾಗಿ ಜೀವ ಕೊಟ್ಟ ಬಳ್ಳಾರಿ ಕ್ಷೇತ್ರದಲ್ಲಿ ನಾನು ಪಾದಯಾತ್ರೆ ಮಾಡಬೇಕು ಎಂದು ಅವರು ತೀರ್ಮಾನಿಸಿದ್ದಾರೆ” ಎಂದು ಹೇಳಿದ್ದಾರೆ.

“ಬಳ್ಳಾರಿಯ ಪಾಲಿಕೆ ಸದಸ್ಯರು ಭಾರತ ಜೋಡೋ ಯಾತ್ರೆ ಕುರಿತು ಭಿತ್ತಿಪತ್ರಗಳನ್ನು ಮನೆ, ಮನೆಗೆ ತಲುಪಿಸಬೇಕು. ಪ್ರತಿ ಹಳ್ಳಿಯಲ್ಲಿ ಎಲ್ಲರೂ ಪ್ರವಾಸ ಮಾಡಿ ಈ ಕಾರ್ಯಕ್ರಮದ ಬಗ್ಗೆ ಪ್ರಚಾರ ಮಾಡಬೇಕು. ಈ ವಿಚಾರವಾಗಿ ಪಂಚಾಯತಿ ಮಟ್ಟದಲ್ಲಿ ಪೂರ್ವತಯಾರಿ ಸಭೆಗಳನ್ನು ನಡೆಸಬೇಕು. ಚುನಾವಣೆಯಲ್ಲಿ ಗೆದ್ದಿರುವವರು ಹಾಗೂ ಸೋತಿರುವವರು ನಾಯಕರಾಗಿ ಬೆಳೆದಿದ್ದೀರಿ. ಪ್ರತಿ ಕ್ಷೇತ್ರದಿಂದ 25 ಸಾವಿರ ಜನರನ್ನು ಪಾದಯಾತ್ರೆಗೆ ಕರೆತನ್ನಿ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ ವಿದೇಶಿ ಟಿ-ಶರ್ಟ್ ಧರಿಸಿದ್ದಾರೆ: ಅಮಿತ್‌ ಶಾ

“ರಾಜ್ಯದ ರೈತರು ಹಾಗೂ ಕಾರ್ಮಿಕರ ಬದುಕನ್ನು ಹಸನು ಮಾಡಬೇಕಾಗಿದೆ. ರೈತರ ಬೆಳೆಗೆ ಬೆಂಬಲ ಬೆಲೆ ಸಿಗಬೇಕಿದೆ. ಹಾಲು ಉತ್ಪಾದಿಸುವ ರೈತರಿಗೂ ಸರಿಯಾದ ಬೆಲೆ ಸಿಗುತ್ತಿಲ್ಲ. ರೈತರು ಬಳಸುವ ರಸಗೊಬ್ಬರ, ಕೀಟನಾಶಕ, ಯಂತ್ರೋಪಕರಣಗಳ ಬೆಲೆ ಹೆಚ್ಚಾಗಿದೆ. ರಾಹುಲ್ ಗಾಂಧಿಯವರು ತಮಗೆ ಸಿಕ್ಕಿದ್ದ ಅಧಿಕಾರದ ಅವಕಾಶಗಳನ್ನು ತ್ಯಾಗ ಮಾಡಿ ಜನರಿಗಾಗಿ ಹೋರಾಟ ಮಾಡಲು ತೀರ್ಮಾನಿಸಿದ್ದಾರೆ” ಎಂದು ತಿಳಿಸಿದ್ದಾರೆ.

“ಯಾತ್ರೆಗೆ ಹಣ ಕೊಟ್ಟು ಜನ ಕರೆದುಕೊಂಡು ಬರೋದು ಬೇಡ. ಪ್ರೀತಿ, ವಿಶ್ವಾಸ, ಅಭಿಮಾನದಿಂದ ದೇಶವನ್ನು ಒಗ್ಗೂಡಿಸಲು ಆಸಕ್ತಿ ಇರುವವರು ಈ ಯಾತ್ರೆಗೆ ಆಗಮಿಸಲಿ. ಬಿಜೆಪಿಯವರು ನಾವು ಹಿಂದುಗಳು, ನಾವು ಮುಂದು ಎಂದು ಹೇಳುತ್ತಾರೆ. ಆದರೆ ನಾವು ಹಿಂದು, ಕ್ರೈಸ್ತರು, ಸಿಖ್ಖರು, ಪರಿಶಿಷ್ಟರು, ಬ್ರಾಹ್ಮಣರು, ವೀರಶೈವ ಲಿಂಗಾಯತರು, ಒಕ್ಕಲಿಗರು ಎಲ್ಲರೂ ಒಂದು ಎಂದು ಹೇಳುತ್ತೇವೆ” ಎಂದು ಅವರು ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...