Homeಕರ್ನಾಟಕಬಿಜೆಪಿಯ ಕೊನೆಯ ದಿನಗಳು ಆರಂಭ, ಬೊಮ್ಮಾಯಿ ಧಮ್ ಇಳಿಯುತ್ತದೆ: ಡಿ.ಕೆ. ಶಿವಕುಮಾರ್‌

ಬಿಜೆಪಿಯ ಕೊನೆಯ ದಿನಗಳು ಆರಂಭ, ಬೊಮ್ಮಾಯಿ ಧಮ್ ಇಳಿಯುತ್ತದೆ: ಡಿ.ಕೆ. ಶಿವಕುಮಾರ್‌

- Advertisement -
- Advertisement -

ಮುಖ್ಯಮಂತ್ರಿ ಬೊಮ್ಮಾಯಿ ಅವರು ಧಮ್‌ ವಿಚಾರ ಮಾತನಾಡಿದ್ದಾರೆ. ನಾನು ಅವರಿಗೆ ಅದೇ ಧಮ್‌ ನಿಂದ ಹೇಳುತ್ತಿದ್ದೇನೆ; ಬಿಜೆಪಿಯ ಕೊನೆಯ ದಿನಗಳು ಆರಂಭವಾಗಿವೆ. ಅವರ ಧಮ್ ಇಳಿಯುತ್ತದೆ, ನಮ್ಮ ಧಮ್‌ ಏರುತ್ತದೆ ಎಂದು ರಾಜ್ಯ ಕಾಂಗ್ರೆಸ್‌‌ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಭಾನುವಾರ ಹೇಳಿದ್ದಾರೆ. ಅವರು ಬಳ್ಳಾರಿಯಲ್ಲಿ ನಡೆದ ʼಭಾರತ ಜೋಡೋ ಯಾತ್ರೆʼ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡುತ್ತಿದ್ದರು.

“ಬಿಜೆಪಿಯವರು ಈ ದೇಶವನ್ನು ಕತ್ತರಿಸುವ ಕತ್ತರಿಯಾದರೆ, ಕಾಂಗ್ರೆಸ್ ಪಕ್ಷ ಈ ದೇಶವನ್ನು ಒಗ್ಗೂಡಿಸುವ ಸೂಜಿಯಂತೆ ಕೆಲಸ ಮಾಡಲಿದೆ. ಇದೇ ನಮಗೂ ಅವರಿಗೂ ಇರುವ ವ್ಯತ್ಯಾಸ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿ ಕ್ಷೇತ್ರದಲ್ಲಿ 25000 ಜನರನ್ನು ಸೇರಿಸಿ

“ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 3510 ಕಿ.ಮೀ. ಪಾದಯಾತ್ರೆ ಮಾಡುತ್ತಿರುವುದನ್ನು ಕಂಡು ಬಿಜೆಪಿ ಅವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಅವರು ರಾಜ್ಯದಲ್ಲಿ ಬೇರೆ ಮಾರ್ಗವಾಗಿ ಪಾದಯಾತ್ರೆ ಮಾಡಬಹುದಿತ್ತು. ಆದರೆ ನನ್ನ ತಾಯಿಗೆ ರಾಜಕೀಯವಾಗಿ ಜೀವ ಕೊಟ್ಟ ಬಳ್ಳಾರಿ ಕ್ಷೇತ್ರದಲ್ಲಿ ನಾನು ಪಾದಯಾತ್ರೆ ಮಾಡಬೇಕು ಎಂದು ಅವರು ತೀರ್ಮಾನಿಸಿದ್ದಾರೆ” ಎಂದು ಹೇಳಿದ್ದಾರೆ.

“ಬಳ್ಳಾರಿಯ ಪಾಲಿಕೆ ಸದಸ್ಯರು ಭಾರತ ಜೋಡೋ ಯಾತ್ರೆ ಕುರಿತು ಭಿತ್ತಿಪತ್ರಗಳನ್ನು ಮನೆ, ಮನೆಗೆ ತಲುಪಿಸಬೇಕು. ಪ್ರತಿ ಹಳ್ಳಿಯಲ್ಲಿ ಎಲ್ಲರೂ ಪ್ರವಾಸ ಮಾಡಿ ಈ ಕಾರ್ಯಕ್ರಮದ ಬಗ್ಗೆ ಪ್ರಚಾರ ಮಾಡಬೇಕು. ಈ ವಿಚಾರವಾಗಿ ಪಂಚಾಯತಿ ಮಟ್ಟದಲ್ಲಿ ಪೂರ್ವತಯಾರಿ ಸಭೆಗಳನ್ನು ನಡೆಸಬೇಕು. ಚುನಾವಣೆಯಲ್ಲಿ ಗೆದ್ದಿರುವವರು ಹಾಗೂ ಸೋತಿರುವವರು ನಾಯಕರಾಗಿ ಬೆಳೆದಿದ್ದೀರಿ. ಪ್ರತಿ ಕ್ಷೇತ್ರದಿಂದ 25 ಸಾವಿರ ಜನರನ್ನು ಪಾದಯಾತ್ರೆಗೆ ಕರೆತನ್ನಿ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ ವಿದೇಶಿ ಟಿ-ಶರ್ಟ್ ಧರಿಸಿದ್ದಾರೆ: ಅಮಿತ್‌ ಶಾ

“ರಾಜ್ಯದ ರೈತರು ಹಾಗೂ ಕಾರ್ಮಿಕರ ಬದುಕನ್ನು ಹಸನು ಮಾಡಬೇಕಾಗಿದೆ. ರೈತರ ಬೆಳೆಗೆ ಬೆಂಬಲ ಬೆಲೆ ಸಿಗಬೇಕಿದೆ. ಹಾಲು ಉತ್ಪಾದಿಸುವ ರೈತರಿಗೂ ಸರಿಯಾದ ಬೆಲೆ ಸಿಗುತ್ತಿಲ್ಲ. ರೈತರು ಬಳಸುವ ರಸಗೊಬ್ಬರ, ಕೀಟನಾಶಕ, ಯಂತ್ರೋಪಕರಣಗಳ ಬೆಲೆ ಹೆಚ್ಚಾಗಿದೆ. ರಾಹುಲ್ ಗಾಂಧಿಯವರು ತಮಗೆ ಸಿಕ್ಕಿದ್ದ ಅಧಿಕಾರದ ಅವಕಾಶಗಳನ್ನು ತ್ಯಾಗ ಮಾಡಿ ಜನರಿಗಾಗಿ ಹೋರಾಟ ಮಾಡಲು ತೀರ್ಮಾನಿಸಿದ್ದಾರೆ” ಎಂದು ತಿಳಿಸಿದ್ದಾರೆ.

“ಯಾತ್ರೆಗೆ ಹಣ ಕೊಟ್ಟು ಜನ ಕರೆದುಕೊಂಡು ಬರೋದು ಬೇಡ. ಪ್ರೀತಿ, ವಿಶ್ವಾಸ, ಅಭಿಮಾನದಿಂದ ದೇಶವನ್ನು ಒಗ್ಗೂಡಿಸಲು ಆಸಕ್ತಿ ಇರುವವರು ಈ ಯಾತ್ರೆಗೆ ಆಗಮಿಸಲಿ. ಬಿಜೆಪಿಯವರು ನಾವು ಹಿಂದುಗಳು, ನಾವು ಮುಂದು ಎಂದು ಹೇಳುತ್ತಾರೆ. ಆದರೆ ನಾವು ಹಿಂದು, ಕ್ರೈಸ್ತರು, ಸಿಖ್ಖರು, ಪರಿಶಿಷ್ಟರು, ಬ್ರಾಹ್ಮಣರು, ವೀರಶೈವ ಲಿಂಗಾಯತರು, ಒಕ್ಕಲಿಗರು ಎಲ್ಲರೂ ಒಂದು ಎಂದು ಹೇಳುತ್ತೇವೆ” ಎಂದು ಅವರು ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...