Homeಕರ್ನಾಟಕಬಿಜೆಪಿಯ ಕೊನೆಯ ದಿನಗಳು ಆರಂಭ, ಬೊಮ್ಮಾಯಿ ಧಮ್ ಇಳಿಯುತ್ತದೆ: ಡಿ.ಕೆ. ಶಿವಕುಮಾರ್‌

ಬಿಜೆಪಿಯ ಕೊನೆಯ ದಿನಗಳು ಆರಂಭ, ಬೊಮ್ಮಾಯಿ ಧಮ್ ಇಳಿಯುತ್ತದೆ: ಡಿ.ಕೆ. ಶಿವಕುಮಾರ್‌

- Advertisement -
- Advertisement -

ಮುಖ್ಯಮಂತ್ರಿ ಬೊಮ್ಮಾಯಿ ಅವರು ಧಮ್‌ ವಿಚಾರ ಮಾತನಾಡಿದ್ದಾರೆ. ನಾನು ಅವರಿಗೆ ಅದೇ ಧಮ್‌ ನಿಂದ ಹೇಳುತ್ತಿದ್ದೇನೆ; ಬಿಜೆಪಿಯ ಕೊನೆಯ ದಿನಗಳು ಆರಂಭವಾಗಿವೆ. ಅವರ ಧಮ್ ಇಳಿಯುತ್ತದೆ, ನಮ್ಮ ಧಮ್‌ ಏರುತ್ತದೆ ಎಂದು ರಾಜ್ಯ ಕಾಂಗ್ರೆಸ್‌‌ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಭಾನುವಾರ ಹೇಳಿದ್ದಾರೆ. ಅವರು ಬಳ್ಳಾರಿಯಲ್ಲಿ ನಡೆದ ʼಭಾರತ ಜೋಡೋ ಯಾತ್ರೆʼ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡುತ್ತಿದ್ದರು.

“ಬಿಜೆಪಿಯವರು ಈ ದೇಶವನ್ನು ಕತ್ತರಿಸುವ ಕತ್ತರಿಯಾದರೆ, ಕಾಂಗ್ರೆಸ್ ಪಕ್ಷ ಈ ದೇಶವನ್ನು ಒಗ್ಗೂಡಿಸುವ ಸೂಜಿಯಂತೆ ಕೆಲಸ ಮಾಡಲಿದೆ. ಇದೇ ನಮಗೂ ಅವರಿಗೂ ಇರುವ ವ್ಯತ್ಯಾಸ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿ ಕ್ಷೇತ್ರದಲ್ಲಿ 25000 ಜನರನ್ನು ಸೇರಿಸಿ

“ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 3510 ಕಿ.ಮೀ. ಪಾದಯಾತ್ರೆ ಮಾಡುತ್ತಿರುವುದನ್ನು ಕಂಡು ಬಿಜೆಪಿ ಅವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಅವರು ರಾಜ್ಯದಲ್ಲಿ ಬೇರೆ ಮಾರ್ಗವಾಗಿ ಪಾದಯಾತ್ರೆ ಮಾಡಬಹುದಿತ್ತು. ಆದರೆ ನನ್ನ ತಾಯಿಗೆ ರಾಜಕೀಯವಾಗಿ ಜೀವ ಕೊಟ್ಟ ಬಳ್ಳಾರಿ ಕ್ಷೇತ್ರದಲ್ಲಿ ನಾನು ಪಾದಯಾತ್ರೆ ಮಾಡಬೇಕು ಎಂದು ಅವರು ತೀರ್ಮಾನಿಸಿದ್ದಾರೆ” ಎಂದು ಹೇಳಿದ್ದಾರೆ.

“ಬಳ್ಳಾರಿಯ ಪಾಲಿಕೆ ಸದಸ್ಯರು ಭಾರತ ಜೋಡೋ ಯಾತ್ರೆ ಕುರಿತು ಭಿತ್ತಿಪತ್ರಗಳನ್ನು ಮನೆ, ಮನೆಗೆ ತಲುಪಿಸಬೇಕು. ಪ್ರತಿ ಹಳ್ಳಿಯಲ್ಲಿ ಎಲ್ಲರೂ ಪ್ರವಾಸ ಮಾಡಿ ಈ ಕಾರ್ಯಕ್ರಮದ ಬಗ್ಗೆ ಪ್ರಚಾರ ಮಾಡಬೇಕು. ಈ ವಿಚಾರವಾಗಿ ಪಂಚಾಯತಿ ಮಟ್ಟದಲ್ಲಿ ಪೂರ್ವತಯಾರಿ ಸಭೆಗಳನ್ನು ನಡೆಸಬೇಕು. ಚುನಾವಣೆಯಲ್ಲಿ ಗೆದ್ದಿರುವವರು ಹಾಗೂ ಸೋತಿರುವವರು ನಾಯಕರಾಗಿ ಬೆಳೆದಿದ್ದೀರಿ. ಪ್ರತಿ ಕ್ಷೇತ್ರದಿಂದ 25 ಸಾವಿರ ಜನರನ್ನು ಪಾದಯಾತ್ರೆಗೆ ಕರೆತನ್ನಿ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ ವಿದೇಶಿ ಟಿ-ಶರ್ಟ್ ಧರಿಸಿದ್ದಾರೆ: ಅಮಿತ್‌ ಶಾ

“ರಾಜ್ಯದ ರೈತರು ಹಾಗೂ ಕಾರ್ಮಿಕರ ಬದುಕನ್ನು ಹಸನು ಮಾಡಬೇಕಾಗಿದೆ. ರೈತರ ಬೆಳೆಗೆ ಬೆಂಬಲ ಬೆಲೆ ಸಿಗಬೇಕಿದೆ. ಹಾಲು ಉತ್ಪಾದಿಸುವ ರೈತರಿಗೂ ಸರಿಯಾದ ಬೆಲೆ ಸಿಗುತ್ತಿಲ್ಲ. ರೈತರು ಬಳಸುವ ರಸಗೊಬ್ಬರ, ಕೀಟನಾಶಕ, ಯಂತ್ರೋಪಕರಣಗಳ ಬೆಲೆ ಹೆಚ್ಚಾಗಿದೆ. ರಾಹುಲ್ ಗಾಂಧಿಯವರು ತಮಗೆ ಸಿಕ್ಕಿದ್ದ ಅಧಿಕಾರದ ಅವಕಾಶಗಳನ್ನು ತ್ಯಾಗ ಮಾಡಿ ಜನರಿಗಾಗಿ ಹೋರಾಟ ಮಾಡಲು ತೀರ್ಮಾನಿಸಿದ್ದಾರೆ” ಎಂದು ತಿಳಿಸಿದ್ದಾರೆ.

“ಯಾತ್ರೆಗೆ ಹಣ ಕೊಟ್ಟು ಜನ ಕರೆದುಕೊಂಡು ಬರೋದು ಬೇಡ. ಪ್ರೀತಿ, ವಿಶ್ವಾಸ, ಅಭಿಮಾನದಿಂದ ದೇಶವನ್ನು ಒಗ್ಗೂಡಿಸಲು ಆಸಕ್ತಿ ಇರುವವರು ಈ ಯಾತ್ರೆಗೆ ಆಗಮಿಸಲಿ. ಬಿಜೆಪಿಯವರು ನಾವು ಹಿಂದುಗಳು, ನಾವು ಮುಂದು ಎಂದು ಹೇಳುತ್ತಾರೆ. ಆದರೆ ನಾವು ಹಿಂದು, ಕ್ರೈಸ್ತರು, ಸಿಖ್ಖರು, ಪರಿಶಿಷ್ಟರು, ಬ್ರಾಹ್ಮಣರು, ವೀರಶೈವ ಲಿಂಗಾಯತರು, ಒಕ್ಕಲಿಗರು ಎಲ್ಲರೂ ಒಂದು ಎಂದು ಹೇಳುತ್ತೇವೆ” ಎಂದು ಅವರು ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....