Homeಮುಖಪುಟಭಾರತದ ಪ್ರಧಾನಿಯೋರ್ವರು ಕೊನೆಯ ಪತ್ರಿಕಾಗೋಷ್ಟಿ ನಡೆಸಿ ಇಂದಿಗೆ 10 ವರ್ಷ!

ಭಾರತದ ಪ್ರಧಾನಿಯೋರ್ವರು ಕೊನೆಯ ಪತ್ರಿಕಾಗೋಷ್ಟಿ ನಡೆಸಿ ಇಂದಿಗೆ 10 ವರ್ಷ!

- Advertisement -
- Advertisement -

ಭಾರತದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ನರೇಂದ್ರ ಮೋದಿ ಭಾರತದಲ್ಲಿ ಒಂದೇ ಒಂದು ಪತ್ರಿಕಾಗೋಷ್ಟಿಯನ್ನು ನಡೆಸಿಲ್ಲ, ಪತ್ರಕರ್ತರನ್ನು ಎದುರಿಸಿ ಅವರ ಪ್ರಶ್ನೆಗಳಿಗೆ ಉತ್ತರಿಸಿಲ್ಲ. ಭಾರತದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ವ್ಯಕ್ತಿಯೋರ್ವರು ‘ಕೊನೆಯ ಪತ್ರಿಕಾಗೋಷ್ಠಿ’ಯನ್ನು ನಡೆಸಿ ಇಂದಿಗೆ ಸರಿಸುಮಾರು 10 ವರ್ಷಗಳು ಕಳೆದಿದೆ ಎಂದು ಪತ್ರಕರ್ತ ಪಂಕಜ್ ಪಚೌರಿ ಹೇಳಿಕೊಂಡಿದ್ದಾರೆ.

2014ರ ಜ.3ರಂದು ಅಂದಿನ ಭಾರತದ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಪತ್ರಿಕಾಗೋಷ್ಟಿಯನ್ನು ನಡೆಸಿದ್ದರು. ಪತ್ರಿಕಾಗೋಷ್ಠಿಯ ವೀಡಿಯೋವನ್ನು ಪಂಕಜ್ ಪಚೌರಿ ಹಂಚಿಕೊಂಡಿದ್ದು, ಈ ಪತ್ರಿಕಾಗೋಷ್ಠಿಯಲ್ಲಿ 62 ಪೂರ್ವ ನಿರ್ಧರಿತವಲ್ಲದ ಪ್ರಶ್ನೆಗಳನ್ನು 100ಕ್ಕೂ ಅಧಿಕ ಪತ್ರಕರ್ತರ ಸಮ್ಮುಖದಲ್ಲಿ ಉತ್ತರಿಸಲಾಗಿತ್ತು ಎಂದು ಪಂಕಜ್ ಪಚೌರಿ ತಮ್ಮ ಪೋಸ್ಟ್ ನಲ್ಲಿ ಹೇಳಿದ್ದಾರೆ.

ಪಂಕಜ್ ಪಚೌರಿ ಅವರು ಮನಮೋಹನ್‌ ಸಿಂಗ್‌ ಅವರ ಸರಕಾರದಲ್ಲಿ ಪ್ರಧಾನಿಯ ಮಾಹಿತಿ ಮತ್ತು ಸಂವಹನ ಸಲಹೆಗಾರರಾಗಿದ್ದರು. ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದಾಗ ‘ಪ್ರಧಾನಿ’ ಮೌನವಾಗಿದ್ದಾರೆಂದು ಬಿಜೆಪಿ ಟೀಕಿಸುತ್ತಿತ್ತು.

ಮನಮೋಹನ್‌ ಸಿಂಗ್‌ ನಡೆಸಿದ ಪತ್ರಿಕಾಗೋಷ್ಟಿ ಭಾರತದ ಪ್ರಧಾನಿಯವರ ಕೊನೆಯ ಪತ್ರಿಕಾಗೋಷ್ಠಿ ಎಂದು ಹೇಳಬಹುದು. ಏಕೆಂದರೆ ನರೇಂದ್ರ ಮೋದಿ ಪ್ರಧಾನಿಯಾಗಿ 2014ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಅವರು ಪತ್ರಿಕಾಗೋಷ್ಠಿಯನ್ನು ನಡೆಸಲು ನಿರಾಕರಿಸಿದ್ದಾರೆ. ಅವರು 2023ರ ಯುಎಸ್ ಪ್ರವಾಸದ ಸಮಯದಲ್ಲಿ ಶ್ವೇತಭವನದಲ್ಲಿ ಪತ್ರಕರ್ತರ ಎರಡು ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. 2014ರಲ್ಲಿ ಅಧಿಕಾರಕ್ಕೆ ಬಂದ ಮೋದಿ ಆ ಬಳಿಕ ಭಾರತದಲ್ಲಿ ಒಂದೇ ಒಂದು ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡಿಲ್ಲ.

ಮೋದಿ ಸಾರ್ವಜನಿಕ ಸಮಾರಂಭಗಳಲ್ಲಿ ಭಾಷಣಗಳನ್ನು ಮಾಡುತ್ತಾರೆ ಮತ್ತು ರಾಷ್ಟ್ರಕ್ಕೆ ಸಂದೇಶಗಳನ್ನು ಕಳುಹಿಸಲು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ ಆಯೋಜಿಸುತ್ತಾರೆ. ಆದರೆ ಸ್ಕ್ರಿಪ್ಟ್‌ ಇಲ್ಲದ ಯಾವುದೇ ಪತ್ರಿಕಾಗೋಷ್ಟಿಯಲ್ಲಿ ಭಾಗವಹಿಸಿರುವುದು ಅಪರೂಪವಾಗಿತ್ತು. ಇದನ್ನು ನ್ಯೂಯಾರ್ಕ್‌ ಟೈಮ್ಸ್‌ ಕೂಡ ಉಲ್ಲೇಖಿಸಿತ್ತು.

ಮನಮೋಹನ್‌ ಸಿಂಗ್‌ ಅವರು ಪ್ರಧಾನಿಯಾಗಿ ನಡೆಸಿದ ಕೊನೆಯ ಪತ್ರಿಕಾಗೋಷ್ಠಿಯಲ್ಲಿ ಮುಕ್ತವಾಗಿ ತಮ್ಮ ಸರ್ಕಾರದ ಸಾಧನೆ ಮತ್ತು ವೈಫಲ್ಯಗಳ ಬಗ್ಗೆ ಮಾತನಾಡಿದ್ದರು. ಕಾಂಗ್ರೆಸ್‌ ಪಕ್ಷದ ವೈಫಲ್ಯ, ಉತ್ಪಾದನಾ ರಂಗದಲ್ಲಿ ಉದ್ಯೋಗಾವಕಾಶಗಳು ಕಡಿಮೆಯಾಗಿರುವುದರ ಬಗ್ಗೆ ಮಾತನಾಡಿದ್ದರು.

ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ಬಳಿಕ ಒಂದೇ ಒಂದು ಪತ್ರಿಕಾಗೋಷ್ಟಿ ನಡೆಸಿಲ್ಲ ಎಂದು ಈ ಮೊದಲು ಪ್ರತಿಪಕ್ಷಗಳು ನಿರಂತರವಾಗಿ ಆರೋಪಿಸಿದ್ದವು. ನಿರುದ್ಯೋಗ, ಹಣದುಬ್ಬರ, ಪುಲ್ವಮಾ ಘಟನೆ ಸೇರಿ ಹಲವು ವಿಚಾರಗಳ ಬಗ್ಗೆ ಪ್ರಧಾನಿ ಮಾತನಾಡುವಂತೆ ಪ್ರತಿಪಕ್ಷಗಳು ಆಗ್ರಹಿಸಿದ್ದವು.

ಪಚೌರಿ ಅವರ ಪೋಸ್ಟ್‌ನ್ನು  ಶೇರ್‌ ಮಾಡಿದ ಕಾಂಗ್ರೆಸ್‌ ಸಂಸದ ಮನೀಶ್‌ ತಿವಾರಿ, ತಮ್ಮ 10 ವರ್ಷದ ಸೇವಾವಧಿಯಲ್ಲಿ ಮನಮೋಹನ್‌ ಸಿಂಗ್‌ 117 ಪತ್ರಿಕಾಗೋಷ್ಠಿ ನಡೆಸಿದ್ದಾರೆಂದು ಹೇಳಿದ್ದಾರೆ.

ಇದನ್ನು ಓದಿ: CAA ಬಿಜೆಪಿಯ ಚುನಾವಣಾ ಅಸ್ತ್ರ: ಅಧಿಸೂಚನೆಗೆ ಪ್ರತಿಪಕ್ಷಗಳ ವಿರೋಧ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...