Homeಮುಖಪುಟಭಾರತದ ಪ್ರಧಾನಿಯೋರ್ವರು ಕೊನೆಯ ಪತ್ರಿಕಾಗೋಷ್ಟಿ ನಡೆಸಿ ಇಂದಿಗೆ 10 ವರ್ಷ!

ಭಾರತದ ಪ್ರಧಾನಿಯೋರ್ವರು ಕೊನೆಯ ಪತ್ರಿಕಾಗೋಷ್ಟಿ ನಡೆಸಿ ಇಂದಿಗೆ 10 ವರ್ಷ!

- Advertisement -
- Advertisement -

ಭಾರತದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ನರೇಂದ್ರ ಮೋದಿ ಭಾರತದಲ್ಲಿ ಒಂದೇ ಒಂದು ಪತ್ರಿಕಾಗೋಷ್ಟಿಯನ್ನು ನಡೆಸಿಲ್ಲ, ಪತ್ರಕರ್ತರನ್ನು ಎದುರಿಸಿ ಅವರ ಪ್ರಶ್ನೆಗಳಿಗೆ ಉತ್ತರಿಸಿಲ್ಲ. ಭಾರತದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ವ್ಯಕ್ತಿಯೋರ್ವರು ‘ಕೊನೆಯ ಪತ್ರಿಕಾಗೋಷ್ಠಿ’ಯನ್ನು ನಡೆಸಿ ಇಂದಿಗೆ ಸರಿಸುಮಾರು 10 ವರ್ಷಗಳು ಕಳೆದಿದೆ ಎಂದು ಪತ್ರಕರ್ತ ಪಂಕಜ್ ಪಚೌರಿ ಹೇಳಿಕೊಂಡಿದ್ದಾರೆ.

2014ರ ಜ.3ರಂದು ಅಂದಿನ ಭಾರತದ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಪತ್ರಿಕಾಗೋಷ್ಟಿಯನ್ನು ನಡೆಸಿದ್ದರು. ಪತ್ರಿಕಾಗೋಷ್ಠಿಯ ವೀಡಿಯೋವನ್ನು ಪಂಕಜ್ ಪಚೌರಿ ಹಂಚಿಕೊಂಡಿದ್ದು, ಈ ಪತ್ರಿಕಾಗೋಷ್ಠಿಯಲ್ಲಿ 62 ಪೂರ್ವ ನಿರ್ಧರಿತವಲ್ಲದ ಪ್ರಶ್ನೆಗಳನ್ನು 100ಕ್ಕೂ ಅಧಿಕ ಪತ್ರಕರ್ತರ ಸಮ್ಮುಖದಲ್ಲಿ ಉತ್ತರಿಸಲಾಗಿತ್ತು ಎಂದು ಪಂಕಜ್ ಪಚೌರಿ ತಮ್ಮ ಪೋಸ್ಟ್ ನಲ್ಲಿ ಹೇಳಿದ್ದಾರೆ.

ಪಂಕಜ್ ಪಚೌರಿ ಅವರು ಮನಮೋಹನ್‌ ಸಿಂಗ್‌ ಅವರ ಸರಕಾರದಲ್ಲಿ ಪ್ರಧಾನಿಯ ಮಾಹಿತಿ ಮತ್ತು ಸಂವಹನ ಸಲಹೆಗಾರರಾಗಿದ್ದರು. ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದಾಗ ‘ಪ್ರಧಾನಿ’ ಮೌನವಾಗಿದ್ದಾರೆಂದು ಬಿಜೆಪಿ ಟೀಕಿಸುತ್ತಿತ್ತು.

ಮನಮೋಹನ್‌ ಸಿಂಗ್‌ ನಡೆಸಿದ ಪತ್ರಿಕಾಗೋಷ್ಟಿ ಭಾರತದ ಪ್ರಧಾನಿಯವರ ಕೊನೆಯ ಪತ್ರಿಕಾಗೋಷ್ಠಿ ಎಂದು ಹೇಳಬಹುದು. ಏಕೆಂದರೆ ನರೇಂದ್ರ ಮೋದಿ ಪ್ರಧಾನಿಯಾಗಿ 2014ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಅವರು ಪತ್ರಿಕಾಗೋಷ್ಠಿಯನ್ನು ನಡೆಸಲು ನಿರಾಕರಿಸಿದ್ದಾರೆ. ಅವರು 2023ರ ಯುಎಸ್ ಪ್ರವಾಸದ ಸಮಯದಲ್ಲಿ ಶ್ವೇತಭವನದಲ್ಲಿ ಪತ್ರಕರ್ತರ ಎರಡು ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. 2014ರಲ್ಲಿ ಅಧಿಕಾರಕ್ಕೆ ಬಂದ ಮೋದಿ ಆ ಬಳಿಕ ಭಾರತದಲ್ಲಿ ಒಂದೇ ಒಂದು ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡಿಲ್ಲ.

ಮೋದಿ ಸಾರ್ವಜನಿಕ ಸಮಾರಂಭಗಳಲ್ಲಿ ಭಾಷಣಗಳನ್ನು ಮಾಡುತ್ತಾರೆ ಮತ್ತು ರಾಷ್ಟ್ರಕ್ಕೆ ಸಂದೇಶಗಳನ್ನು ಕಳುಹಿಸಲು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ ಆಯೋಜಿಸುತ್ತಾರೆ. ಆದರೆ ಸ್ಕ್ರಿಪ್ಟ್‌ ಇಲ್ಲದ ಯಾವುದೇ ಪತ್ರಿಕಾಗೋಷ್ಟಿಯಲ್ಲಿ ಭಾಗವಹಿಸಿರುವುದು ಅಪರೂಪವಾಗಿತ್ತು. ಇದನ್ನು ನ್ಯೂಯಾರ್ಕ್‌ ಟೈಮ್ಸ್‌ ಕೂಡ ಉಲ್ಲೇಖಿಸಿತ್ತು.

ಮನಮೋಹನ್‌ ಸಿಂಗ್‌ ಅವರು ಪ್ರಧಾನಿಯಾಗಿ ನಡೆಸಿದ ಕೊನೆಯ ಪತ್ರಿಕಾಗೋಷ್ಠಿಯಲ್ಲಿ ಮುಕ್ತವಾಗಿ ತಮ್ಮ ಸರ್ಕಾರದ ಸಾಧನೆ ಮತ್ತು ವೈಫಲ್ಯಗಳ ಬಗ್ಗೆ ಮಾತನಾಡಿದ್ದರು. ಕಾಂಗ್ರೆಸ್‌ ಪಕ್ಷದ ವೈಫಲ್ಯ, ಉತ್ಪಾದನಾ ರಂಗದಲ್ಲಿ ಉದ್ಯೋಗಾವಕಾಶಗಳು ಕಡಿಮೆಯಾಗಿರುವುದರ ಬಗ್ಗೆ ಮಾತನಾಡಿದ್ದರು.

ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ಬಳಿಕ ಒಂದೇ ಒಂದು ಪತ್ರಿಕಾಗೋಷ್ಟಿ ನಡೆಸಿಲ್ಲ ಎಂದು ಈ ಮೊದಲು ಪ್ರತಿಪಕ್ಷಗಳು ನಿರಂತರವಾಗಿ ಆರೋಪಿಸಿದ್ದವು. ನಿರುದ್ಯೋಗ, ಹಣದುಬ್ಬರ, ಪುಲ್ವಮಾ ಘಟನೆ ಸೇರಿ ಹಲವು ವಿಚಾರಗಳ ಬಗ್ಗೆ ಪ್ರಧಾನಿ ಮಾತನಾಡುವಂತೆ ಪ್ರತಿಪಕ್ಷಗಳು ಆಗ್ರಹಿಸಿದ್ದವು.

ಪಚೌರಿ ಅವರ ಪೋಸ್ಟ್‌ನ್ನು  ಶೇರ್‌ ಮಾಡಿದ ಕಾಂಗ್ರೆಸ್‌ ಸಂಸದ ಮನೀಶ್‌ ತಿವಾರಿ, ತಮ್ಮ 10 ವರ್ಷದ ಸೇವಾವಧಿಯಲ್ಲಿ ಮನಮೋಹನ್‌ ಸಿಂಗ್‌ 117 ಪತ್ರಿಕಾಗೋಷ್ಠಿ ನಡೆಸಿದ್ದಾರೆಂದು ಹೇಳಿದ್ದಾರೆ.

ಇದನ್ನು ಓದಿ: CAA ಬಿಜೆಪಿಯ ಚುನಾವಣಾ ಅಸ್ತ್ರ: ಅಧಿಸೂಚನೆಗೆ ಪ್ರತಿಪಕ್ಷಗಳ ವಿರೋಧ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...