Homeಕರ್ನಾಟಕಕಾನೂನು ಎಲ್ಲರಿಗೂ ಒಂದೇ..! "ಸಾಹುಕಾರ್" ಹೊರತುಪಡಿಸಿ..! - ಅನನ್ಯ ಬೆಂಗಳೂರು

ಕಾನೂನು ಎಲ್ಲರಿಗೂ ಒಂದೇ..! “ಸಾಹುಕಾರ್” ಹೊರತುಪಡಿಸಿ..! – ಅನನ್ಯ ಬೆಂಗಳೂರು

- Advertisement -
- Advertisement -

ಕರ್ನಾಟಕ ಸ್ವಯಂಘೋಷಿತ ಸಾಹುಕಾರ್ ರಮೇಶ್ ಜಾರಕಿಹೋಳಿ ಸಿಡಿ ಪ್ರಕರಣ ಇಡೀ ರಾಜ್ಯದ ಕಾನೂನನ್ನೇ ಅಣಕಿಸುತ್ತಿದೆ. ಕಾನ್‌ಸ್ಟೇಬಲ್ ಎದುರು ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದ ರಮೇಶ್ ಜಾರಕಿಹೋಳಿ ರಾಜ್ಯದ ಪೊಲೀಸ್ ವ್ಯವಸ್ಥೆಯನ್ನು ಮನೆ ಆಳಿನಂತೆ ಬಳಕೆ ಮಾಡಿಕೊಳ್ಳುತ್ತಿರೋದು ಸ್ಪಷ್ಟವಾಗಿ ಕಣ್ಣಿಗೆ ರಾಚುತ್ತಿದೆ.

ರಮೇಶ್ ಜಾರಕಿಹೋಳಿ ಲೈಂಗಿಕ ಹಗರಣದ ಸಿಡಿಯ ಬಗ್ಗೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿಯವರು ಪೊಲೀಸ್ ಕಮಿಷನರ್ ಗೆ ಮಾಹಿತಿ ನೀಡುತ್ತಾರೆ. ಮಾಹಿತಿಯನ್ನು ಪಡೆದುಕೊಳ್ಳಲು ನಿರಾಕರಿಸುವ ಪೊಲೀಸ್ ಆಯುಕ್ತರು ದಿನೇಶ್ ಕಲ್ಲಹಳ್ಳಿಯವರನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಅರ್ಜಿ ನೀಡುವಂತೆ ಸೂಚಿಸುತ್ತಾರೆ. “ಸಚಿವರೊಬ್ಬರು ಈ ಸಿಡಿಯ ದೃಶ್ಯಾವಳಿಗಳಲ್ಲಿ ಇದ್ದು, ಯುವತಿಯನ್ನು ಬಳಸಿಕೊಳ್ಳಲಾಗಿದೆ. ಈ ಸಿಡಿಯನ್ನು ಮಾಹಿತಿ ಮೂಲಗಳು ನನಗೆ ತಲುಪಿಸಿದ್ದು, ಅದನ್ನು ಬಹಿರಂಗಗೊಳಿಸದೆ ಒರ್ವ ಜವಾಬ್ದಾರಿಯುತ ನಾಗರಿಕನಾಗಿ ಪೊಲೀಸರಿಗೆ ಹಸ್ತಾಂತರಿಸುತ್ತೇನೆ. ಈ ಸಿಡಿಯ ದೃಶ್ಯಾವಳಿಯಲ್ಲಿರುವ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಆಗಿದೆಯೇ ಎಂದು ತನಿಖೆ ಮಾಡಿ” ಎಂದು ಮಾಹಿತಿ ಅರ್ಜಿಯಲ್ಲಿ ದಿನೇಶ್ ಕಲ್ಲಹಳ್ಳಿ ಕೇಳಿಕೊಂಡಿದ್ದರು.

ಅರ್ಜಿ ಪಡೆದುಕೊಂಡ ಕಬ್ಬನ್ ಪಾರ್ಕ್ ಪೊಲೀಸರು ಆ ದೃಶ್ಯಾವಳಿಯಲ್ಲಿ ಇದ್ದರೆನ್ನಲಾದ ಸಚಿವರನ್ನು ಕರೆಸಿ ವಿಚಾರಣೆ ನಡೆಸುವುದಿಲ್ಲ. ದೃಶ್ಯಾವಳಿಯಲ್ಲಿರುವ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಆಗಿದೆಯೇ ಎಂಬ ವಿಚಾರಣೆಯನ್ನೂ ನಡೆಸುವುದಿಲ್ಲ. ಬದಲಾಗಿ ಮಾಹಿತಿದಾರ ದಿನೇಶ್ ಕಲ್ಲಹಳ್ಳಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗುತ್ತದೆ. ಮಾಹಿತಿಯ ಬೆನ್ನು ಹತ್ತಬೇಕಾದ ಪೊಲೀಸರು ಮಾಹಿತಿದಾರನ ಬೆನ್ನು ಬೀಳುತ್ತಾರೆ. ಮಾಹಿತಿಯ ಮೇರೆಗೆ ಎಫ್ಐಆರ್ ದಾಖಲಿಸಿಕೊಳ್ಳುವ ಎಲ್ಲಾ ಅವಕಾಶಗಳಿದ್ದರೂ ಎಫ್ಐಆರ್ ಮಾಡದೇ ಮಾಹಿತಿದಾರನಿಗೇ ಕಿರುಕುಳ ಕೊಡಲಾಗುತ್ತದೆ. ಕೊನೆಗೆ ಮಾಹಿತಿದಾರ ಮಾಹಿತಿ ಅರ್ಜಿಯನ್ನೇ ವಾಪಸ್ ಪಡೆಯುತ್ತಾರೆ.

ಇದನ್ನೂ ಓದಿ: ಕಾಂಗ್ರೆಸ್ ನಾಯಕರ-ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸು ಆರೋಪ: ಬಿಜೆಪಿ ವಿರುದ್ಧ ಶಿವಮೊಗ್ಗ ಚಲೋ

ದಿನೇಶ್ ಕಲ್ಲಹಳ್ಳಿ ಮಾಹಿತಿ ಅರ್ಜಿಯನ್ನು ವಾಪಸ್ ಪಡೆಯುತ್ತಿದ್ದಂತೆ ರಮೇಶ್ ಜಾರಕಿಹೋಳಿ ಗೃಹ ಸಚಿವರಿಗೆ ಎರಡ್ಮೂರು ವಾಕ್ಯದ ಪತ್ರ ಬರೆಯುತ್ತಾರೆ. ನನ್ನ ತೇಜೋವಧೆಯಾಗಿದ್ದು ತನಿಖೆ ನಡೆಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸುತ್ತಾರೆ. ಈ ಪತ್ರದ ಆಧಾರದ ಮೇಲೆ ವಿಶೇಷ ತನಿಖಾ ತಂಡ(SIT) ರಚನೆ ಮಾಡಲಾಗುತ್ತದೆ. ಯಾವ ಎಫ್ಐಆರ್ ಇಲ್ಲದೆ ಸರ್ಕಾರ ಎಸ್ಐಟಿ ರಚನೆ ಮಾಡಿರುವುದು ಬಹುಶಃ ದೇಶದ ಇತಿಹಾಸದಲ್ಲಿ ಇದೇ ಮೊದಲಿರಬೇಕು.

ಎಸ್ಐಟಿಯೇನೋ ರಚನೆಯಾಯಿತು. ಗೃಹ ಸಚಿವರಿಗೆ ಪತ್ರ ಬರೆದ ಮಾಜಿ ಸಚಿವ ರಮೇಶ್ ಜಾರಕಿಹೋಳಿಯನ್ನು ಎಸ್ಐಟಿ ತಂಡ ಮೊದಲು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಳ್ಳಬೇಕಿತ್ತು. ಗೃಹಸಚಿವರಿಗೆ ಪತ್ರ ಬರೆಯಲು ಕಾರಣವಾದ ಘಟನೆಯನ್ನು ಸಂಪೂರ್ಣ ದಾಖಲು ಮಾಡಿಕೊಳ್ಳಬೇಕಿತ್ತು. ಆ ಬಳಿಕ ದೃಶ್ಯಾವಳಿಯಲ್ಲಿ ಇದ್ದಳೆನ್ನಲಾದ ಯುವತಿಯ ಬಳಿಗೆ ಪೊಲೀಸರನ್ನು ಕಳುಹಿಸಿ ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಬೇಕಿತ್ತು. ಯುವತಿ ಸಂತ್ರಸ್ತಳೇ? ಆಕೆಗೆ ಮಹಿಳಾ ಸಾಂತ್ವನ ಕೇಂದ್ರದ ರಕ್ಷಣೆ ಬೇಕೇ? ಆಕೆ ಇನ್ನೂ ಮಂತ್ರಿಯ ಕಪಿಮುಷ್ಟಿಯಲ್ಲಿ ಇದ್ದಾಳೆಯೇ? ರಕ್ಷಣೆಗೆ ಒಳಗಾಗಬೇಕಾದವಳೇ? ಅಥವಾ ಆಕೆಯೇ ಆರೋಪಿಯೇ? ಎಂಬುದನ್ನು ಮೊದಲು ಖಾತ್ರಿಪಡಿಸಿ ಬಳಿಕ ತನಿಖೆಯ ಕೋನವನ್ನು ನಿರ್ಧರಿಸಬೇಕಿತ್ತು. ಆದರೆ ಇವ್ಯಾವುದನ್ನೂ ಮಾಡದ ಎಸ್ಐಟಿ ನೇರವಾಗಿ ಈ ದೃಶ್ಯಾವಳಿಗಳನ್ನು ಒಟ್ಟು ಸೇರಿಸಿದ್ದು ಯಾರು? ಅದು ಬಹಿರಂಗಗೊಳ್ಳುವಂತೆ ಮಾಡಿದ್ದು ಯಾರು ಎಂಬ ಬಗ್ಗೆ ಆಸಕ್ತಿ ವಹಿಸಿ ಹಲವು ಪತ್ರಕರ್ತರನ್ನು ವಿಚಾರಣೆಗೆ ಒಳಪಡಿಸಿತು.

ಹಲವರನ್ನು ವಿಚಾರಣೆಗೆ ಒಳಪಡಿಸಿದ ಬಳಿಕ ಈಗ ರಮೇಶ್ ಜಾರಕಿಹೋಳಿಯಿಂದ ದೂರು ಪಡೆದುಕೊಂಡು ಎಫ್ಐಆರ್ ದಾಖಲಿಸಲಾಗಿದೆ. ಅಂದು ದಿನೇಶ್ ಕಲ್ಲಹಳ್ಳಿ ಮಾಹಿತಿ ನೀಡಿದಾಗ ದೂರು ದಾಖಲಿಸದ ಪೊಲೀಸರು ಈಗ ರಮೇಶ್ ಜಾರಕಿಹೋಳಿ ದೂರು ನೀಡಿದ ತಕ್ಷಣ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಇಡೀ ತನಿಖೆಯಲ್ಲಿ ಮಹಿಳಾ ದೌರ್ಜನ್ಯ ತಡೆ ಕಾನೂನನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ. ಯಾರು ಸಂತ್ರಸ್ತರೋ ಅವರನ್ನು ಆರೋಪಿಗಳನ್ನಾಗಿಯೂ, ಯಾರು ಆರೋಪಿಗಳೋ ಅವರನ್ನು ಸಂತ್ರಸ್ತರಾಗಿಯೂ ಬಿಂಬಿಸುವಲ್ಲಿ ಪೊಲೀಸರು ನಿರತರಾಗಿದ್ದಾರೆ. “ಕಾನೂನು ಎಲ್ಲರಿಗೂ ಒಂದೇ, ಆದರೆ ಸಾಹುಕಾರ್ ಹೊರತುಪಡಿಸಿ” ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ.


ಇದನ್ನೂ ಓದಿ: ಎಐಎಡಿಎಂಕೆ ಈಗ ಜಯಲಲಿತ ಅವರ ಪಕ್ಷವಲ್ಲ; ಮೋದಿಯ ಗುಲಾಮಿ ಪಕ್ಷ – ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...