Homeಕರ್ನಾಟಕಕಾನೂನು ಎಲ್ಲರಿಗೂ ಒಂದೇ..! "ಸಾಹುಕಾರ್" ಹೊರತುಪಡಿಸಿ..! - ಅನನ್ಯ ಬೆಂಗಳೂರು

ಕಾನೂನು ಎಲ್ಲರಿಗೂ ಒಂದೇ..! “ಸಾಹುಕಾರ್” ಹೊರತುಪಡಿಸಿ..! – ಅನನ್ಯ ಬೆಂಗಳೂರು

- Advertisement -
- Advertisement -

ಕರ್ನಾಟಕ ಸ್ವಯಂಘೋಷಿತ ಸಾಹುಕಾರ್ ರಮೇಶ್ ಜಾರಕಿಹೋಳಿ ಸಿಡಿ ಪ್ರಕರಣ ಇಡೀ ರಾಜ್ಯದ ಕಾನೂನನ್ನೇ ಅಣಕಿಸುತ್ತಿದೆ. ಕಾನ್‌ಸ್ಟೇಬಲ್ ಎದುರು ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದ ರಮೇಶ್ ಜಾರಕಿಹೋಳಿ ರಾಜ್ಯದ ಪೊಲೀಸ್ ವ್ಯವಸ್ಥೆಯನ್ನು ಮನೆ ಆಳಿನಂತೆ ಬಳಕೆ ಮಾಡಿಕೊಳ್ಳುತ್ತಿರೋದು ಸ್ಪಷ್ಟವಾಗಿ ಕಣ್ಣಿಗೆ ರಾಚುತ್ತಿದೆ.

ರಮೇಶ್ ಜಾರಕಿಹೋಳಿ ಲೈಂಗಿಕ ಹಗರಣದ ಸಿಡಿಯ ಬಗ್ಗೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿಯವರು ಪೊಲೀಸ್ ಕಮಿಷನರ್ ಗೆ ಮಾಹಿತಿ ನೀಡುತ್ತಾರೆ. ಮಾಹಿತಿಯನ್ನು ಪಡೆದುಕೊಳ್ಳಲು ನಿರಾಕರಿಸುವ ಪೊಲೀಸ್ ಆಯುಕ್ತರು ದಿನೇಶ್ ಕಲ್ಲಹಳ್ಳಿಯವರನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಅರ್ಜಿ ನೀಡುವಂತೆ ಸೂಚಿಸುತ್ತಾರೆ. “ಸಚಿವರೊಬ್ಬರು ಈ ಸಿಡಿಯ ದೃಶ್ಯಾವಳಿಗಳಲ್ಲಿ ಇದ್ದು, ಯುವತಿಯನ್ನು ಬಳಸಿಕೊಳ್ಳಲಾಗಿದೆ. ಈ ಸಿಡಿಯನ್ನು ಮಾಹಿತಿ ಮೂಲಗಳು ನನಗೆ ತಲುಪಿಸಿದ್ದು, ಅದನ್ನು ಬಹಿರಂಗಗೊಳಿಸದೆ ಒರ್ವ ಜವಾಬ್ದಾರಿಯುತ ನಾಗರಿಕನಾಗಿ ಪೊಲೀಸರಿಗೆ ಹಸ್ತಾಂತರಿಸುತ್ತೇನೆ. ಈ ಸಿಡಿಯ ದೃಶ್ಯಾವಳಿಯಲ್ಲಿರುವ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಆಗಿದೆಯೇ ಎಂದು ತನಿಖೆ ಮಾಡಿ” ಎಂದು ಮಾಹಿತಿ ಅರ್ಜಿಯಲ್ಲಿ ದಿನೇಶ್ ಕಲ್ಲಹಳ್ಳಿ ಕೇಳಿಕೊಂಡಿದ್ದರು.

ಅರ್ಜಿ ಪಡೆದುಕೊಂಡ ಕಬ್ಬನ್ ಪಾರ್ಕ್ ಪೊಲೀಸರು ಆ ದೃಶ್ಯಾವಳಿಯಲ್ಲಿ ಇದ್ದರೆನ್ನಲಾದ ಸಚಿವರನ್ನು ಕರೆಸಿ ವಿಚಾರಣೆ ನಡೆಸುವುದಿಲ್ಲ. ದೃಶ್ಯಾವಳಿಯಲ್ಲಿರುವ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಆಗಿದೆಯೇ ಎಂಬ ವಿಚಾರಣೆಯನ್ನೂ ನಡೆಸುವುದಿಲ್ಲ. ಬದಲಾಗಿ ಮಾಹಿತಿದಾರ ದಿನೇಶ್ ಕಲ್ಲಹಳ್ಳಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗುತ್ತದೆ. ಮಾಹಿತಿಯ ಬೆನ್ನು ಹತ್ತಬೇಕಾದ ಪೊಲೀಸರು ಮಾಹಿತಿದಾರನ ಬೆನ್ನು ಬೀಳುತ್ತಾರೆ. ಮಾಹಿತಿಯ ಮೇರೆಗೆ ಎಫ್ಐಆರ್ ದಾಖಲಿಸಿಕೊಳ್ಳುವ ಎಲ್ಲಾ ಅವಕಾಶಗಳಿದ್ದರೂ ಎಫ್ಐಆರ್ ಮಾಡದೇ ಮಾಹಿತಿದಾರನಿಗೇ ಕಿರುಕುಳ ಕೊಡಲಾಗುತ್ತದೆ. ಕೊನೆಗೆ ಮಾಹಿತಿದಾರ ಮಾಹಿತಿ ಅರ್ಜಿಯನ್ನೇ ವಾಪಸ್ ಪಡೆಯುತ್ತಾರೆ.

ಇದನ್ನೂ ಓದಿ: ಕಾಂಗ್ರೆಸ್ ನಾಯಕರ-ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸು ಆರೋಪ: ಬಿಜೆಪಿ ವಿರುದ್ಧ ಶಿವಮೊಗ್ಗ ಚಲೋ

ದಿನೇಶ್ ಕಲ್ಲಹಳ್ಳಿ ಮಾಹಿತಿ ಅರ್ಜಿಯನ್ನು ವಾಪಸ್ ಪಡೆಯುತ್ತಿದ್ದಂತೆ ರಮೇಶ್ ಜಾರಕಿಹೋಳಿ ಗೃಹ ಸಚಿವರಿಗೆ ಎರಡ್ಮೂರು ವಾಕ್ಯದ ಪತ್ರ ಬರೆಯುತ್ತಾರೆ. ನನ್ನ ತೇಜೋವಧೆಯಾಗಿದ್ದು ತನಿಖೆ ನಡೆಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸುತ್ತಾರೆ. ಈ ಪತ್ರದ ಆಧಾರದ ಮೇಲೆ ವಿಶೇಷ ತನಿಖಾ ತಂಡ(SIT) ರಚನೆ ಮಾಡಲಾಗುತ್ತದೆ. ಯಾವ ಎಫ್ಐಆರ್ ಇಲ್ಲದೆ ಸರ್ಕಾರ ಎಸ್ಐಟಿ ರಚನೆ ಮಾಡಿರುವುದು ಬಹುಶಃ ದೇಶದ ಇತಿಹಾಸದಲ್ಲಿ ಇದೇ ಮೊದಲಿರಬೇಕು.

ಎಸ್ಐಟಿಯೇನೋ ರಚನೆಯಾಯಿತು. ಗೃಹ ಸಚಿವರಿಗೆ ಪತ್ರ ಬರೆದ ಮಾಜಿ ಸಚಿವ ರಮೇಶ್ ಜಾರಕಿಹೋಳಿಯನ್ನು ಎಸ್ಐಟಿ ತಂಡ ಮೊದಲು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಳ್ಳಬೇಕಿತ್ತು. ಗೃಹಸಚಿವರಿಗೆ ಪತ್ರ ಬರೆಯಲು ಕಾರಣವಾದ ಘಟನೆಯನ್ನು ಸಂಪೂರ್ಣ ದಾಖಲು ಮಾಡಿಕೊಳ್ಳಬೇಕಿತ್ತು. ಆ ಬಳಿಕ ದೃಶ್ಯಾವಳಿಯಲ್ಲಿ ಇದ್ದಳೆನ್ನಲಾದ ಯುವತಿಯ ಬಳಿಗೆ ಪೊಲೀಸರನ್ನು ಕಳುಹಿಸಿ ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಬೇಕಿತ್ತು. ಯುವತಿ ಸಂತ್ರಸ್ತಳೇ? ಆಕೆಗೆ ಮಹಿಳಾ ಸಾಂತ್ವನ ಕೇಂದ್ರದ ರಕ್ಷಣೆ ಬೇಕೇ? ಆಕೆ ಇನ್ನೂ ಮಂತ್ರಿಯ ಕಪಿಮುಷ್ಟಿಯಲ್ಲಿ ಇದ್ದಾಳೆಯೇ? ರಕ್ಷಣೆಗೆ ಒಳಗಾಗಬೇಕಾದವಳೇ? ಅಥವಾ ಆಕೆಯೇ ಆರೋಪಿಯೇ? ಎಂಬುದನ್ನು ಮೊದಲು ಖಾತ್ರಿಪಡಿಸಿ ಬಳಿಕ ತನಿಖೆಯ ಕೋನವನ್ನು ನಿರ್ಧರಿಸಬೇಕಿತ್ತು. ಆದರೆ ಇವ್ಯಾವುದನ್ನೂ ಮಾಡದ ಎಸ್ಐಟಿ ನೇರವಾಗಿ ಈ ದೃಶ್ಯಾವಳಿಗಳನ್ನು ಒಟ್ಟು ಸೇರಿಸಿದ್ದು ಯಾರು? ಅದು ಬಹಿರಂಗಗೊಳ್ಳುವಂತೆ ಮಾಡಿದ್ದು ಯಾರು ಎಂಬ ಬಗ್ಗೆ ಆಸಕ್ತಿ ವಹಿಸಿ ಹಲವು ಪತ್ರಕರ್ತರನ್ನು ವಿಚಾರಣೆಗೆ ಒಳಪಡಿಸಿತು.

ಹಲವರನ್ನು ವಿಚಾರಣೆಗೆ ಒಳಪಡಿಸಿದ ಬಳಿಕ ಈಗ ರಮೇಶ್ ಜಾರಕಿಹೋಳಿಯಿಂದ ದೂರು ಪಡೆದುಕೊಂಡು ಎಫ್ಐಆರ್ ದಾಖಲಿಸಲಾಗಿದೆ. ಅಂದು ದಿನೇಶ್ ಕಲ್ಲಹಳ್ಳಿ ಮಾಹಿತಿ ನೀಡಿದಾಗ ದೂರು ದಾಖಲಿಸದ ಪೊಲೀಸರು ಈಗ ರಮೇಶ್ ಜಾರಕಿಹೋಳಿ ದೂರು ನೀಡಿದ ತಕ್ಷಣ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಇಡೀ ತನಿಖೆಯಲ್ಲಿ ಮಹಿಳಾ ದೌರ್ಜನ್ಯ ತಡೆ ಕಾನೂನನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ. ಯಾರು ಸಂತ್ರಸ್ತರೋ ಅವರನ್ನು ಆರೋಪಿಗಳನ್ನಾಗಿಯೂ, ಯಾರು ಆರೋಪಿಗಳೋ ಅವರನ್ನು ಸಂತ್ರಸ್ತರಾಗಿಯೂ ಬಿಂಬಿಸುವಲ್ಲಿ ಪೊಲೀಸರು ನಿರತರಾಗಿದ್ದಾರೆ. “ಕಾನೂನು ಎಲ್ಲರಿಗೂ ಒಂದೇ, ಆದರೆ ಸಾಹುಕಾರ್ ಹೊರತುಪಡಿಸಿ” ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ.


ಇದನ್ನೂ ಓದಿ: ಎಐಎಡಿಎಂಕೆ ಈಗ ಜಯಲಲಿತ ಅವರ ಪಕ್ಷವಲ್ಲ; ಮೋದಿಯ ಗುಲಾಮಿ ಪಕ್ಷ – ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...