Homeಕರ್ನಾಟಕಕಾನೂನು ಎಲ್ಲರಿಗೂ ಒಂದೇ..! "ಸಾಹುಕಾರ್" ಹೊರತುಪಡಿಸಿ..! - ಅನನ್ಯ ಬೆಂಗಳೂರು

ಕಾನೂನು ಎಲ್ಲರಿಗೂ ಒಂದೇ..! “ಸಾಹುಕಾರ್” ಹೊರತುಪಡಿಸಿ..! – ಅನನ್ಯ ಬೆಂಗಳೂರು

- Advertisement -
- Advertisement -

ಕರ್ನಾಟಕ ಸ್ವಯಂಘೋಷಿತ ಸಾಹುಕಾರ್ ರಮೇಶ್ ಜಾರಕಿಹೋಳಿ ಸಿಡಿ ಪ್ರಕರಣ ಇಡೀ ರಾಜ್ಯದ ಕಾನೂನನ್ನೇ ಅಣಕಿಸುತ್ತಿದೆ. ಕಾನ್‌ಸ್ಟೇಬಲ್ ಎದುರು ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದ ರಮೇಶ್ ಜಾರಕಿಹೋಳಿ ರಾಜ್ಯದ ಪೊಲೀಸ್ ವ್ಯವಸ್ಥೆಯನ್ನು ಮನೆ ಆಳಿನಂತೆ ಬಳಕೆ ಮಾಡಿಕೊಳ್ಳುತ್ತಿರೋದು ಸ್ಪಷ್ಟವಾಗಿ ಕಣ್ಣಿಗೆ ರಾಚುತ್ತಿದೆ.

ರಮೇಶ್ ಜಾರಕಿಹೋಳಿ ಲೈಂಗಿಕ ಹಗರಣದ ಸಿಡಿಯ ಬಗ್ಗೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿಯವರು ಪೊಲೀಸ್ ಕಮಿಷನರ್ ಗೆ ಮಾಹಿತಿ ನೀಡುತ್ತಾರೆ. ಮಾಹಿತಿಯನ್ನು ಪಡೆದುಕೊಳ್ಳಲು ನಿರಾಕರಿಸುವ ಪೊಲೀಸ್ ಆಯುಕ್ತರು ದಿನೇಶ್ ಕಲ್ಲಹಳ್ಳಿಯವರನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಅರ್ಜಿ ನೀಡುವಂತೆ ಸೂಚಿಸುತ್ತಾರೆ. “ಸಚಿವರೊಬ್ಬರು ಈ ಸಿಡಿಯ ದೃಶ್ಯಾವಳಿಗಳಲ್ಲಿ ಇದ್ದು, ಯುವತಿಯನ್ನು ಬಳಸಿಕೊಳ್ಳಲಾಗಿದೆ. ಈ ಸಿಡಿಯನ್ನು ಮಾಹಿತಿ ಮೂಲಗಳು ನನಗೆ ತಲುಪಿಸಿದ್ದು, ಅದನ್ನು ಬಹಿರಂಗಗೊಳಿಸದೆ ಒರ್ವ ಜವಾಬ್ದಾರಿಯುತ ನಾಗರಿಕನಾಗಿ ಪೊಲೀಸರಿಗೆ ಹಸ್ತಾಂತರಿಸುತ್ತೇನೆ. ಈ ಸಿಡಿಯ ದೃಶ್ಯಾವಳಿಯಲ್ಲಿರುವ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಆಗಿದೆಯೇ ಎಂದು ತನಿಖೆ ಮಾಡಿ” ಎಂದು ಮಾಹಿತಿ ಅರ್ಜಿಯಲ್ಲಿ ದಿನೇಶ್ ಕಲ್ಲಹಳ್ಳಿ ಕೇಳಿಕೊಂಡಿದ್ದರು.

ಅರ್ಜಿ ಪಡೆದುಕೊಂಡ ಕಬ್ಬನ್ ಪಾರ್ಕ್ ಪೊಲೀಸರು ಆ ದೃಶ್ಯಾವಳಿಯಲ್ಲಿ ಇದ್ದರೆನ್ನಲಾದ ಸಚಿವರನ್ನು ಕರೆಸಿ ವಿಚಾರಣೆ ನಡೆಸುವುದಿಲ್ಲ. ದೃಶ್ಯಾವಳಿಯಲ್ಲಿರುವ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಆಗಿದೆಯೇ ಎಂಬ ವಿಚಾರಣೆಯನ್ನೂ ನಡೆಸುವುದಿಲ್ಲ. ಬದಲಾಗಿ ಮಾಹಿತಿದಾರ ದಿನೇಶ್ ಕಲ್ಲಹಳ್ಳಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗುತ್ತದೆ. ಮಾಹಿತಿಯ ಬೆನ್ನು ಹತ್ತಬೇಕಾದ ಪೊಲೀಸರು ಮಾಹಿತಿದಾರನ ಬೆನ್ನು ಬೀಳುತ್ತಾರೆ. ಮಾಹಿತಿಯ ಮೇರೆಗೆ ಎಫ್ಐಆರ್ ದಾಖಲಿಸಿಕೊಳ್ಳುವ ಎಲ್ಲಾ ಅವಕಾಶಗಳಿದ್ದರೂ ಎಫ್ಐಆರ್ ಮಾಡದೇ ಮಾಹಿತಿದಾರನಿಗೇ ಕಿರುಕುಳ ಕೊಡಲಾಗುತ್ತದೆ. ಕೊನೆಗೆ ಮಾಹಿತಿದಾರ ಮಾಹಿತಿ ಅರ್ಜಿಯನ್ನೇ ವಾಪಸ್ ಪಡೆಯುತ್ತಾರೆ.

ಇದನ್ನೂ ಓದಿ: ಕಾಂಗ್ರೆಸ್ ನಾಯಕರ-ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸು ಆರೋಪ: ಬಿಜೆಪಿ ವಿರುದ್ಧ ಶಿವಮೊಗ್ಗ ಚಲೋ

ದಿನೇಶ್ ಕಲ್ಲಹಳ್ಳಿ ಮಾಹಿತಿ ಅರ್ಜಿಯನ್ನು ವಾಪಸ್ ಪಡೆಯುತ್ತಿದ್ದಂತೆ ರಮೇಶ್ ಜಾರಕಿಹೋಳಿ ಗೃಹ ಸಚಿವರಿಗೆ ಎರಡ್ಮೂರು ವಾಕ್ಯದ ಪತ್ರ ಬರೆಯುತ್ತಾರೆ. ನನ್ನ ತೇಜೋವಧೆಯಾಗಿದ್ದು ತನಿಖೆ ನಡೆಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸುತ್ತಾರೆ. ಈ ಪತ್ರದ ಆಧಾರದ ಮೇಲೆ ವಿಶೇಷ ತನಿಖಾ ತಂಡ(SIT) ರಚನೆ ಮಾಡಲಾಗುತ್ತದೆ. ಯಾವ ಎಫ್ಐಆರ್ ಇಲ್ಲದೆ ಸರ್ಕಾರ ಎಸ್ಐಟಿ ರಚನೆ ಮಾಡಿರುವುದು ಬಹುಶಃ ದೇಶದ ಇತಿಹಾಸದಲ್ಲಿ ಇದೇ ಮೊದಲಿರಬೇಕು.

ಎಸ್ಐಟಿಯೇನೋ ರಚನೆಯಾಯಿತು. ಗೃಹ ಸಚಿವರಿಗೆ ಪತ್ರ ಬರೆದ ಮಾಜಿ ಸಚಿವ ರಮೇಶ್ ಜಾರಕಿಹೋಳಿಯನ್ನು ಎಸ್ಐಟಿ ತಂಡ ಮೊದಲು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಳ್ಳಬೇಕಿತ್ತು. ಗೃಹಸಚಿವರಿಗೆ ಪತ್ರ ಬರೆಯಲು ಕಾರಣವಾದ ಘಟನೆಯನ್ನು ಸಂಪೂರ್ಣ ದಾಖಲು ಮಾಡಿಕೊಳ್ಳಬೇಕಿತ್ತು. ಆ ಬಳಿಕ ದೃಶ್ಯಾವಳಿಯಲ್ಲಿ ಇದ್ದಳೆನ್ನಲಾದ ಯುವತಿಯ ಬಳಿಗೆ ಪೊಲೀಸರನ್ನು ಕಳುಹಿಸಿ ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಬೇಕಿತ್ತು. ಯುವತಿ ಸಂತ್ರಸ್ತಳೇ? ಆಕೆಗೆ ಮಹಿಳಾ ಸಾಂತ್ವನ ಕೇಂದ್ರದ ರಕ್ಷಣೆ ಬೇಕೇ? ಆಕೆ ಇನ್ನೂ ಮಂತ್ರಿಯ ಕಪಿಮುಷ್ಟಿಯಲ್ಲಿ ಇದ್ದಾಳೆಯೇ? ರಕ್ಷಣೆಗೆ ಒಳಗಾಗಬೇಕಾದವಳೇ? ಅಥವಾ ಆಕೆಯೇ ಆರೋಪಿಯೇ? ಎಂಬುದನ್ನು ಮೊದಲು ಖಾತ್ರಿಪಡಿಸಿ ಬಳಿಕ ತನಿಖೆಯ ಕೋನವನ್ನು ನಿರ್ಧರಿಸಬೇಕಿತ್ತು. ಆದರೆ ಇವ್ಯಾವುದನ್ನೂ ಮಾಡದ ಎಸ್ಐಟಿ ನೇರವಾಗಿ ಈ ದೃಶ್ಯಾವಳಿಗಳನ್ನು ಒಟ್ಟು ಸೇರಿಸಿದ್ದು ಯಾರು? ಅದು ಬಹಿರಂಗಗೊಳ್ಳುವಂತೆ ಮಾಡಿದ್ದು ಯಾರು ಎಂಬ ಬಗ್ಗೆ ಆಸಕ್ತಿ ವಹಿಸಿ ಹಲವು ಪತ್ರಕರ್ತರನ್ನು ವಿಚಾರಣೆಗೆ ಒಳಪಡಿಸಿತು.

ಹಲವರನ್ನು ವಿಚಾರಣೆಗೆ ಒಳಪಡಿಸಿದ ಬಳಿಕ ಈಗ ರಮೇಶ್ ಜಾರಕಿಹೋಳಿಯಿಂದ ದೂರು ಪಡೆದುಕೊಂಡು ಎಫ್ಐಆರ್ ದಾಖಲಿಸಲಾಗಿದೆ. ಅಂದು ದಿನೇಶ್ ಕಲ್ಲಹಳ್ಳಿ ಮಾಹಿತಿ ನೀಡಿದಾಗ ದೂರು ದಾಖಲಿಸದ ಪೊಲೀಸರು ಈಗ ರಮೇಶ್ ಜಾರಕಿಹೋಳಿ ದೂರು ನೀಡಿದ ತಕ್ಷಣ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಇಡೀ ತನಿಖೆಯಲ್ಲಿ ಮಹಿಳಾ ದೌರ್ಜನ್ಯ ತಡೆ ಕಾನೂನನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ. ಯಾರು ಸಂತ್ರಸ್ತರೋ ಅವರನ್ನು ಆರೋಪಿಗಳನ್ನಾಗಿಯೂ, ಯಾರು ಆರೋಪಿಗಳೋ ಅವರನ್ನು ಸಂತ್ರಸ್ತರಾಗಿಯೂ ಬಿಂಬಿಸುವಲ್ಲಿ ಪೊಲೀಸರು ನಿರತರಾಗಿದ್ದಾರೆ. “ಕಾನೂನು ಎಲ್ಲರಿಗೂ ಒಂದೇ, ಆದರೆ ಸಾಹುಕಾರ್ ಹೊರತುಪಡಿಸಿ” ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ.


ಇದನ್ನೂ ಓದಿ: ಎಐಎಡಿಎಂಕೆ ಈಗ ಜಯಲಲಿತ ಅವರ ಪಕ್ಷವಲ್ಲ; ಮೋದಿಯ ಗುಲಾಮಿ ಪಕ್ಷ – ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...