Homeಕರ್ನಾಟಕಕಾನೂನು ಎಲ್ಲರಿಗೂ ಒಂದೇ..! "ಸಾಹುಕಾರ್" ಹೊರತುಪಡಿಸಿ..! - ಅನನ್ಯ ಬೆಂಗಳೂರು

ಕಾನೂನು ಎಲ್ಲರಿಗೂ ಒಂದೇ..! “ಸಾಹುಕಾರ್” ಹೊರತುಪಡಿಸಿ..! – ಅನನ್ಯ ಬೆಂಗಳೂರು

- Advertisement -
- Advertisement -

ಕರ್ನಾಟಕ ಸ್ವಯಂಘೋಷಿತ ಸಾಹುಕಾರ್ ರಮೇಶ್ ಜಾರಕಿಹೋಳಿ ಸಿಡಿ ಪ್ರಕರಣ ಇಡೀ ರಾಜ್ಯದ ಕಾನೂನನ್ನೇ ಅಣಕಿಸುತ್ತಿದೆ. ಕಾನ್‌ಸ್ಟೇಬಲ್ ಎದುರು ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದ ರಮೇಶ್ ಜಾರಕಿಹೋಳಿ ರಾಜ್ಯದ ಪೊಲೀಸ್ ವ್ಯವಸ್ಥೆಯನ್ನು ಮನೆ ಆಳಿನಂತೆ ಬಳಕೆ ಮಾಡಿಕೊಳ್ಳುತ್ತಿರೋದು ಸ್ಪಷ್ಟವಾಗಿ ಕಣ್ಣಿಗೆ ರಾಚುತ್ತಿದೆ.

ರಮೇಶ್ ಜಾರಕಿಹೋಳಿ ಲೈಂಗಿಕ ಹಗರಣದ ಸಿಡಿಯ ಬಗ್ಗೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿಯವರು ಪೊಲೀಸ್ ಕಮಿಷನರ್ ಗೆ ಮಾಹಿತಿ ನೀಡುತ್ತಾರೆ. ಮಾಹಿತಿಯನ್ನು ಪಡೆದುಕೊಳ್ಳಲು ನಿರಾಕರಿಸುವ ಪೊಲೀಸ್ ಆಯುಕ್ತರು ದಿನೇಶ್ ಕಲ್ಲಹಳ್ಳಿಯವರನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಅರ್ಜಿ ನೀಡುವಂತೆ ಸೂಚಿಸುತ್ತಾರೆ. “ಸಚಿವರೊಬ್ಬರು ಈ ಸಿಡಿಯ ದೃಶ್ಯಾವಳಿಗಳಲ್ಲಿ ಇದ್ದು, ಯುವತಿಯನ್ನು ಬಳಸಿಕೊಳ್ಳಲಾಗಿದೆ. ಈ ಸಿಡಿಯನ್ನು ಮಾಹಿತಿ ಮೂಲಗಳು ನನಗೆ ತಲುಪಿಸಿದ್ದು, ಅದನ್ನು ಬಹಿರಂಗಗೊಳಿಸದೆ ಒರ್ವ ಜವಾಬ್ದಾರಿಯುತ ನಾಗರಿಕನಾಗಿ ಪೊಲೀಸರಿಗೆ ಹಸ್ತಾಂತರಿಸುತ್ತೇನೆ. ಈ ಸಿಡಿಯ ದೃಶ್ಯಾವಳಿಯಲ್ಲಿರುವ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಆಗಿದೆಯೇ ಎಂದು ತನಿಖೆ ಮಾಡಿ” ಎಂದು ಮಾಹಿತಿ ಅರ್ಜಿಯಲ್ಲಿ ದಿನೇಶ್ ಕಲ್ಲಹಳ್ಳಿ ಕೇಳಿಕೊಂಡಿದ್ದರು.

ಅರ್ಜಿ ಪಡೆದುಕೊಂಡ ಕಬ್ಬನ್ ಪಾರ್ಕ್ ಪೊಲೀಸರು ಆ ದೃಶ್ಯಾವಳಿಯಲ್ಲಿ ಇದ್ದರೆನ್ನಲಾದ ಸಚಿವರನ್ನು ಕರೆಸಿ ವಿಚಾರಣೆ ನಡೆಸುವುದಿಲ್ಲ. ದೃಶ್ಯಾವಳಿಯಲ್ಲಿರುವ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಆಗಿದೆಯೇ ಎಂಬ ವಿಚಾರಣೆಯನ್ನೂ ನಡೆಸುವುದಿಲ್ಲ. ಬದಲಾಗಿ ಮಾಹಿತಿದಾರ ದಿನೇಶ್ ಕಲ್ಲಹಳ್ಳಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗುತ್ತದೆ. ಮಾಹಿತಿಯ ಬೆನ್ನು ಹತ್ತಬೇಕಾದ ಪೊಲೀಸರು ಮಾಹಿತಿದಾರನ ಬೆನ್ನು ಬೀಳುತ್ತಾರೆ. ಮಾಹಿತಿಯ ಮೇರೆಗೆ ಎಫ್ಐಆರ್ ದಾಖಲಿಸಿಕೊಳ್ಳುವ ಎಲ್ಲಾ ಅವಕಾಶಗಳಿದ್ದರೂ ಎಫ್ಐಆರ್ ಮಾಡದೇ ಮಾಹಿತಿದಾರನಿಗೇ ಕಿರುಕುಳ ಕೊಡಲಾಗುತ್ತದೆ. ಕೊನೆಗೆ ಮಾಹಿತಿದಾರ ಮಾಹಿತಿ ಅರ್ಜಿಯನ್ನೇ ವಾಪಸ್ ಪಡೆಯುತ್ತಾರೆ.

ಇದನ್ನೂ ಓದಿ: ಕಾಂಗ್ರೆಸ್ ನಾಯಕರ-ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸು ಆರೋಪ: ಬಿಜೆಪಿ ವಿರುದ್ಧ ಶಿವಮೊಗ್ಗ ಚಲೋ

ದಿನೇಶ್ ಕಲ್ಲಹಳ್ಳಿ ಮಾಹಿತಿ ಅರ್ಜಿಯನ್ನು ವಾಪಸ್ ಪಡೆಯುತ್ತಿದ್ದಂತೆ ರಮೇಶ್ ಜಾರಕಿಹೋಳಿ ಗೃಹ ಸಚಿವರಿಗೆ ಎರಡ್ಮೂರು ವಾಕ್ಯದ ಪತ್ರ ಬರೆಯುತ್ತಾರೆ. ನನ್ನ ತೇಜೋವಧೆಯಾಗಿದ್ದು ತನಿಖೆ ನಡೆಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸುತ್ತಾರೆ. ಈ ಪತ್ರದ ಆಧಾರದ ಮೇಲೆ ವಿಶೇಷ ತನಿಖಾ ತಂಡ(SIT) ರಚನೆ ಮಾಡಲಾಗುತ್ತದೆ. ಯಾವ ಎಫ್ಐಆರ್ ಇಲ್ಲದೆ ಸರ್ಕಾರ ಎಸ್ಐಟಿ ರಚನೆ ಮಾಡಿರುವುದು ಬಹುಶಃ ದೇಶದ ಇತಿಹಾಸದಲ್ಲಿ ಇದೇ ಮೊದಲಿರಬೇಕು.

ಎಸ್ಐಟಿಯೇನೋ ರಚನೆಯಾಯಿತು. ಗೃಹ ಸಚಿವರಿಗೆ ಪತ್ರ ಬರೆದ ಮಾಜಿ ಸಚಿವ ರಮೇಶ್ ಜಾರಕಿಹೋಳಿಯನ್ನು ಎಸ್ಐಟಿ ತಂಡ ಮೊದಲು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಳ್ಳಬೇಕಿತ್ತು. ಗೃಹಸಚಿವರಿಗೆ ಪತ್ರ ಬರೆಯಲು ಕಾರಣವಾದ ಘಟನೆಯನ್ನು ಸಂಪೂರ್ಣ ದಾಖಲು ಮಾಡಿಕೊಳ್ಳಬೇಕಿತ್ತು. ಆ ಬಳಿಕ ದೃಶ್ಯಾವಳಿಯಲ್ಲಿ ಇದ್ದಳೆನ್ನಲಾದ ಯುವತಿಯ ಬಳಿಗೆ ಪೊಲೀಸರನ್ನು ಕಳುಹಿಸಿ ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಬೇಕಿತ್ತು. ಯುವತಿ ಸಂತ್ರಸ್ತಳೇ? ಆಕೆಗೆ ಮಹಿಳಾ ಸಾಂತ್ವನ ಕೇಂದ್ರದ ರಕ್ಷಣೆ ಬೇಕೇ? ಆಕೆ ಇನ್ನೂ ಮಂತ್ರಿಯ ಕಪಿಮುಷ್ಟಿಯಲ್ಲಿ ಇದ್ದಾಳೆಯೇ? ರಕ್ಷಣೆಗೆ ಒಳಗಾಗಬೇಕಾದವಳೇ? ಅಥವಾ ಆಕೆಯೇ ಆರೋಪಿಯೇ? ಎಂಬುದನ್ನು ಮೊದಲು ಖಾತ್ರಿಪಡಿಸಿ ಬಳಿಕ ತನಿಖೆಯ ಕೋನವನ್ನು ನಿರ್ಧರಿಸಬೇಕಿತ್ತು. ಆದರೆ ಇವ್ಯಾವುದನ್ನೂ ಮಾಡದ ಎಸ್ಐಟಿ ನೇರವಾಗಿ ಈ ದೃಶ್ಯಾವಳಿಗಳನ್ನು ಒಟ್ಟು ಸೇರಿಸಿದ್ದು ಯಾರು? ಅದು ಬಹಿರಂಗಗೊಳ್ಳುವಂತೆ ಮಾಡಿದ್ದು ಯಾರು ಎಂಬ ಬಗ್ಗೆ ಆಸಕ್ತಿ ವಹಿಸಿ ಹಲವು ಪತ್ರಕರ್ತರನ್ನು ವಿಚಾರಣೆಗೆ ಒಳಪಡಿಸಿತು.

ಹಲವರನ್ನು ವಿಚಾರಣೆಗೆ ಒಳಪಡಿಸಿದ ಬಳಿಕ ಈಗ ರಮೇಶ್ ಜಾರಕಿಹೋಳಿಯಿಂದ ದೂರು ಪಡೆದುಕೊಂಡು ಎಫ್ಐಆರ್ ದಾಖಲಿಸಲಾಗಿದೆ. ಅಂದು ದಿನೇಶ್ ಕಲ್ಲಹಳ್ಳಿ ಮಾಹಿತಿ ನೀಡಿದಾಗ ದೂರು ದಾಖಲಿಸದ ಪೊಲೀಸರು ಈಗ ರಮೇಶ್ ಜಾರಕಿಹೋಳಿ ದೂರು ನೀಡಿದ ತಕ್ಷಣ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಇಡೀ ತನಿಖೆಯಲ್ಲಿ ಮಹಿಳಾ ದೌರ್ಜನ್ಯ ತಡೆ ಕಾನೂನನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ. ಯಾರು ಸಂತ್ರಸ್ತರೋ ಅವರನ್ನು ಆರೋಪಿಗಳನ್ನಾಗಿಯೂ, ಯಾರು ಆರೋಪಿಗಳೋ ಅವರನ್ನು ಸಂತ್ರಸ್ತರಾಗಿಯೂ ಬಿಂಬಿಸುವಲ್ಲಿ ಪೊಲೀಸರು ನಿರತರಾಗಿದ್ದಾರೆ. “ಕಾನೂನು ಎಲ್ಲರಿಗೂ ಒಂದೇ, ಆದರೆ ಸಾಹುಕಾರ್ ಹೊರತುಪಡಿಸಿ” ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ.


ಇದನ್ನೂ ಓದಿ: ಎಐಎಡಿಎಂಕೆ ಈಗ ಜಯಲಲಿತ ಅವರ ಪಕ್ಷವಲ್ಲ; ಮೋದಿಯ ಗುಲಾಮಿ ಪಕ್ಷ – ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...