Homeಕರ್ನಾಟಕಕಾನೂನು ಎಲ್ಲರಿಗೂ ಒಂದೇ..! "ಸಾಹುಕಾರ್" ಹೊರತುಪಡಿಸಿ..! - ಅನನ್ಯ ಬೆಂಗಳೂರು

ಕಾನೂನು ಎಲ್ಲರಿಗೂ ಒಂದೇ..! “ಸಾಹುಕಾರ್” ಹೊರತುಪಡಿಸಿ..! – ಅನನ್ಯ ಬೆಂಗಳೂರು

- Advertisement -
- Advertisement -

ಕರ್ನಾಟಕ ಸ್ವಯಂಘೋಷಿತ ಸಾಹುಕಾರ್ ರಮೇಶ್ ಜಾರಕಿಹೋಳಿ ಸಿಡಿ ಪ್ರಕರಣ ಇಡೀ ರಾಜ್ಯದ ಕಾನೂನನ್ನೇ ಅಣಕಿಸುತ್ತಿದೆ. ಕಾನ್‌ಸ್ಟೇಬಲ್ ಎದುರು ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದ ರಮೇಶ್ ಜಾರಕಿಹೋಳಿ ರಾಜ್ಯದ ಪೊಲೀಸ್ ವ್ಯವಸ್ಥೆಯನ್ನು ಮನೆ ಆಳಿನಂತೆ ಬಳಕೆ ಮಾಡಿಕೊಳ್ಳುತ್ತಿರೋದು ಸ್ಪಷ್ಟವಾಗಿ ಕಣ್ಣಿಗೆ ರಾಚುತ್ತಿದೆ.

ರಮೇಶ್ ಜಾರಕಿಹೋಳಿ ಲೈಂಗಿಕ ಹಗರಣದ ಸಿಡಿಯ ಬಗ್ಗೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿಯವರು ಪೊಲೀಸ್ ಕಮಿಷನರ್ ಗೆ ಮಾಹಿತಿ ನೀಡುತ್ತಾರೆ. ಮಾಹಿತಿಯನ್ನು ಪಡೆದುಕೊಳ್ಳಲು ನಿರಾಕರಿಸುವ ಪೊಲೀಸ್ ಆಯುಕ್ತರು ದಿನೇಶ್ ಕಲ್ಲಹಳ್ಳಿಯವರನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಅರ್ಜಿ ನೀಡುವಂತೆ ಸೂಚಿಸುತ್ತಾರೆ. “ಸಚಿವರೊಬ್ಬರು ಈ ಸಿಡಿಯ ದೃಶ್ಯಾವಳಿಗಳಲ್ಲಿ ಇದ್ದು, ಯುವತಿಯನ್ನು ಬಳಸಿಕೊಳ್ಳಲಾಗಿದೆ. ಈ ಸಿಡಿಯನ್ನು ಮಾಹಿತಿ ಮೂಲಗಳು ನನಗೆ ತಲುಪಿಸಿದ್ದು, ಅದನ್ನು ಬಹಿರಂಗಗೊಳಿಸದೆ ಒರ್ವ ಜವಾಬ್ದಾರಿಯುತ ನಾಗರಿಕನಾಗಿ ಪೊಲೀಸರಿಗೆ ಹಸ್ತಾಂತರಿಸುತ್ತೇನೆ. ಈ ಸಿಡಿಯ ದೃಶ್ಯಾವಳಿಯಲ್ಲಿರುವ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಆಗಿದೆಯೇ ಎಂದು ತನಿಖೆ ಮಾಡಿ” ಎಂದು ಮಾಹಿತಿ ಅರ್ಜಿಯಲ್ಲಿ ದಿನೇಶ್ ಕಲ್ಲಹಳ್ಳಿ ಕೇಳಿಕೊಂಡಿದ್ದರು.

ಅರ್ಜಿ ಪಡೆದುಕೊಂಡ ಕಬ್ಬನ್ ಪಾರ್ಕ್ ಪೊಲೀಸರು ಆ ದೃಶ್ಯಾವಳಿಯಲ್ಲಿ ಇದ್ದರೆನ್ನಲಾದ ಸಚಿವರನ್ನು ಕರೆಸಿ ವಿಚಾರಣೆ ನಡೆಸುವುದಿಲ್ಲ. ದೃಶ್ಯಾವಳಿಯಲ್ಲಿರುವ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಆಗಿದೆಯೇ ಎಂಬ ವಿಚಾರಣೆಯನ್ನೂ ನಡೆಸುವುದಿಲ್ಲ. ಬದಲಾಗಿ ಮಾಹಿತಿದಾರ ದಿನೇಶ್ ಕಲ್ಲಹಳ್ಳಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗುತ್ತದೆ. ಮಾಹಿತಿಯ ಬೆನ್ನು ಹತ್ತಬೇಕಾದ ಪೊಲೀಸರು ಮಾಹಿತಿದಾರನ ಬೆನ್ನು ಬೀಳುತ್ತಾರೆ. ಮಾಹಿತಿಯ ಮೇರೆಗೆ ಎಫ್ಐಆರ್ ದಾಖಲಿಸಿಕೊಳ್ಳುವ ಎಲ್ಲಾ ಅವಕಾಶಗಳಿದ್ದರೂ ಎಫ್ಐಆರ್ ಮಾಡದೇ ಮಾಹಿತಿದಾರನಿಗೇ ಕಿರುಕುಳ ಕೊಡಲಾಗುತ್ತದೆ. ಕೊನೆಗೆ ಮಾಹಿತಿದಾರ ಮಾಹಿತಿ ಅರ್ಜಿಯನ್ನೇ ವಾಪಸ್ ಪಡೆಯುತ್ತಾರೆ.

ಇದನ್ನೂ ಓದಿ: ಕಾಂಗ್ರೆಸ್ ನಾಯಕರ-ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸು ಆರೋಪ: ಬಿಜೆಪಿ ವಿರುದ್ಧ ಶಿವಮೊಗ್ಗ ಚಲೋ

ದಿನೇಶ್ ಕಲ್ಲಹಳ್ಳಿ ಮಾಹಿತಿ ಅರ್ಜಿಯನ್ನು ವಾಪಸ್ ಪಡೆಯುತ್ತಿದ್ದಂತೆ ರಮೇಶ್ ಜಾರಕಿಹೋಳಿ ಗೃಹ ಸಚಿವರಿಗೆ ಎರಡ್ಮೂರು ವಾಕ್ಯದ ಪತ್ರ ಬರೆಯುತ್ತಾರೆ. ನನ್ನ ತೇಜೋವಧೆಯಾಗಿದ್ದು ತನಿಖೆ ನಡೆಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸುತ್ತಾರೆ. ಈ ಪತ್ರದ ಆಧಾರದ ಮೇಲೆ ವಿಶೇಷ ತನಿಖಾ ತಂಡ(SIT) ರಚನೆ ಮಾಡಲಾಗುತ್ತದೆ. ಯಾವ ಎಫ್ಐಆರ್ ಇಲ್ಲದೆ ಸರ್ಕಾರ ಎಸ್ಐಟಿ ರಚನೆ ಮಾಡಿರುವುದು ಬಹುಶಃ ದೇಶದ ಇತಿಹಾಸದಲ್ಲಿ ಇದೇ ಮೊದಲಿರಬೇಕು.

ಎಸ್ಐಟಿಯೇನೋ ರಚನೆಯಾಯಿತು. ಗೃಹ ಸಚಿವರಿಗೆ ಪತ್ರ ಬರೆದ ಮಾಜಿ ಸಚಿವ ರಮೇಶ್ ಜಾರಕಿಹೋಳಿಯನ್ನು ಎಸ್ಐಟಿ ತಂಡ ಮೊದಲು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಳ್ಳಬೇಕಿತ್ತು. ಗೃಹಸಚಿವರಿಗೆ ಪತ್ರ ಬರೆಯಲು ಕಾರಣವಾದ ಘಟನೆಯನ್ನು ಸಂಪೂರ್ಣ ದಾಖಲು ಮಾಡಿಕೊಳ್ಳಬೇಕಿತ್ತು. ಆ ಬಳಿಕ ದೃಶ್ಯಾವಳಿಯಲ್ಲಿ ಇದ್ದಳೆನ್ನಲಾದ ಯುವತಿಯ ಬಳಿಗೆ ಪೊಲೀಸರನ್ನು ಕಳುಹಿಸಿ ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಬೇಕಿತ್ತು. ಯುವತಿ ಸಂತ್ರಸ್ತಳೇ? ಆಕೆಗೆ ಮಹಿಳಾ ಸಾಂತ್ವನ ಕೇಂದ್ರದ ರಕ್ಷಣೆ ಬೇಕೇ? ಆಕೆ ಇನ್ನೂ ಮಂತ್ರಿಯ ಕಪಿಮುಷ್ಟಿಯಲ್ಲಿ ಇದ್ದಾಳೆಯೇ? ರಕ್ಷಣೆಗೆ ಒಳಗಾಗಬೇಕಾದವಳೇ? ಅಥವಾ ಆಕೆಯೇ ಆರೋಪಿಯೇ? ಎಂಬುದನ್ನು ಮೊದಲು ಖಾತ್ರಿಪಡಿಸಿ ಬಳಿಕ ತನಿಖೆಯ ಕೋನವನ್ನು ನಿರ್ಧರಿಸಬೇಕಿತ್ತು. ಆದರೆ ಇವ್ಯಾವುದನ್ನೂ ಮಾಡದ ಎಸ್ಐಟಿ ನೇರವಾಗಿ ಈ ದೃಶ್ಯಾವಳಿಗಳನ್ನು ಒಟ್ಟು ಸೇರಿಸಿದ್ದು ಯಾರು? ಅದು ಬಹಿರಂಗಗೊಳ್ಳುವಂತೆ ಮಾಡಿದ್ದು ಯಾರು ಎಂಬ ಬಗ್ಗೆ ಆಸಕ್ತಿ ವಹಿಸಿ ಹಲವು ಪತ್ರಕರ್ತರನ್ನು ವಿಚಾರಣೆಗೆ ಒಳಪಡಿಸಿತು.

ಹಲವರನ್ನು ವಿಚಾರಣೆಗೆ ಒಳಪಡಿಸಿದ ಬಳಿಕ ಈಗ ರಮೇಶ್ ಜಾರಕಿಹೋಳಿಯಿಂದ ದೂರು ಪಡೆದುಕೊಂಡು ಎಫ್ಐಆರ್ ದಾಖಲಿಸಲಾಗಿದೆ. ಅಂದು ದಿನೇಶ್ ಕಲ್ಲಹಳ್ಳಿ ಮಾಹಿತಿ ನೀಡಿದಾಗ ದೂರು ದಾಖಲಿಸದ ಪೊಲೀಸರು ಈಗ ರಮೇಶ್ ಜಾರಕಿಹೋಳಿ ದೂರು ನೀಡಿದ ತಕ್ಷಣ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಇಡೀ ತನಿಖೆಯಲ್ಲಿ ಮಹಿಳಾ ದೌರ್ಜನ್ಯ ತಡೆ ಕಾನೂನನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ. ಯಾರು ಸಂತ್ರಸ್ತರೋ ಅವರನ್ನು ಆರೋಪಿಗಳನ್ನಾಗಿಯೂ, ಯಾರು ಆರೋಪಿಗಳೋ ಅವರನ್ನು ಸಂತ್ರಸ್ತರಾಗಿಯೂ ಬಿಂಬಿಸುವಲ್ಲಿ ಪೊಲೀಸರು ನಿರತರಾಗಿದ್ದಾರೆ. “ಕಾನೂನು ಎಲ್ಲರಿಗೂ ಒಂದೇ, ಆದರೆ ಸಾಹುಕಾರ್ ಹೊರತುಪಡಿಸಿ” ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ.


ಇದನ್ನೂ ಓದಿ: ಎಐಎಡಿಎಂಕೆ ಈಗ ಜಯಲಲಿತ ಅವರ ಪಕ್ಷವಲ್ಲ; ಮೋದಿಯ ಗುಲಾಮಿ ಪಕ್ಷ – ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...