Homeಮುಖಪುಟಮೂರು ನಿಮಿಷಗಳ Zoom ಸಬೆಯಲ್ಲಿ 900 ಉದ್ಯೋಗಿಗಳ ವಜಾ!

ಮೂರು ನಿಮಿಷಗಳ Zoom ಸಬೆಯಲ್ಲಿ 900 ಉದ್ಯೋಗಿಗಳ ವಜಾ!

- Advertisement -
- Advertisement -

ಕಂಪೆನಿಯೊಂದರ ಮೂರು ನಿಮಿಷದ ಝೂಮ್‌ ಸಭೆಯಲ್ಲಿ ಸುಮಾರು 900 ಉದ್ಯೋಗಿಗಳನ್ನು ಒಂದೇ ಬಾರಿಗೆ ವಜಾ ಗೊಳಿಸಿರುವ ವಿಲಕ್ಷಣ ಘಟನೆ ನಡೆದಿದೆ. ಅಮೆರಿಕ ಮೂಲದ ಸಂಸ್ಥೆಯಾದ Better.com ನ ಸಿಇಒ ವಿಶಾಲ್ ಗಾರ್ಗ್ ಅವರು ಈ ನಿರ್ಧಾರವನ್ನು ಝೂಮ್ ಸಭೆಯಲ್ಲಿ ಪ್ರಕಟಿಸಿದ್ದಾರೆ. ಮುಂಬರುವ ಕ್ರಿಸ್‌ಮಸ್‌ ಹಬ್ಬದ ಸೀಸನ್‌ಗೆ ಮುಂಚಿತವಾಗಿ ಘಟನೆ ನಡೆದಿದ್ದು ಕಂಪನಿಯ ಸಿಬ್ಬಂದಿಗೆ ತೀವ್ರ ಆಘಾತವನ್ನುಂಟುಮಾಡಿದೆ.

“ನಾನು ಉತ್ತಮ ಸುದ್ದಿಯೊಂದಿಗೆ ನಿಮ್ಮ ಬಳಿಗೆ ಬರುತ್ತೇನೆ. ಮಾರುಕಟ್ಟೆ ಬದಲಾಗಿದೆ ಮತ್ತು ಬದುಕಬೇಕಾದರೆ ನಾವು ಅದರೊಂದಿಗೆ ಚಲಿಸಬೇಕಾಗಿದೆ. ಹೀಗಾದರೆ ಆಶಾದಾಯಕವಾಗಿ, ನಾವು ಅಭಿವೃದ್ಧಿ ಹೊಂದಬಹುದು ಮತ್ತು ನಮ್ಮ ಧ್ಯೇಯವನ್ನು ತಲುಪಿಸಬಹುದು” ಎಂದು ಹೇಳುತ್ತಾ ತಮ್ಮ ಕಠೋರವಾದ ಪ್ರಕಟಣೆಯನ್ನು ಹೇಳಿದ್ದಾರೆ.

ಇದನ್ನೂ ಓದಿ:ಸಹೋದ್ಯೋಗಿಗೆ ಲೈಂಗಿಕ ದೌರ್ಜನ್ಯ: ಯುಪಿ ಸರ್ಕಾರಿ ಉದ್ಯೋಗಿ ಬಂಧನ

“ನೀವು ಈ ಝೂಮ್‌ ಸಭೆಯಲ್ಲಿದ್ದರೆ, ವಜಾಗೊಳ್ಳುತ್ತಿರುವ ದುರದೃಷ್ಟಕರ ಗುಂಪಿನ ಭಾಗವಾಗಿದ್ದೀರಿ ಎಂದರ್ಥ…ನಿಮ್ಮ ಉದ್ಯೋಗವನ್ನು ತಕ್ಷಣವೇ ಕೊನೆಗೊಳಿಸಲಾಗುತ್ತದೆ” ಎಂದು ಅವರು ಸಭೆಯಲ್ಲಿ ಹೇಳಿದ್ದಾರೆ. ವಜಾಗೊಂಡಿರುವ ಉದ್ಯೋಗಿಗಳು ದಿನಕ್ಕೆ ಎರಡು ಗಂಟೆ ಮಾತ್ರ ಕೆಲಸ ಮಾಡುವುದರಿಂದ ಹೆಚ್ಚು ಕೆಲಸ ಮಾಡುವ ಉದ್ಯೋಗಿಗಳು ಮತ್ತು ಕಂಪನಿಯ ಗ್ರಾಹಕರಿಂದ ಅವರು ‘ಕದಿಯುತ್ತಿದ್ದಾರೆ’ ಎಂದು ವಿಶಾಲ್‌ ಗಾರ್ಗ್ ಆರೋಪಿಸಿದ್ದಾರೆ.

ರಜಾ ಅವಧಿಗೆ ಮುನ್ನವೇ ನೌಕರರನ್ನು ವಜಾಗೊಳಿಸಿರುವುದು ಬೇಸರ ತಂದಿದೆಯಾದರೂ ಅವರಿಗೆ ಸೂಕ್ತ ಸೌಲಭ್ಯ ಮತ್ತು ಪ್ಯಾಕೇಜ್ ನೀಡಲಾಗುವುದು ಎಂದು ಕಂಪನಿಯ CFO ಕೆವಿನ್ ರಯಾನ್ CNN ಬ್ಯುಸಿನೆಸ್‌ಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕೆಲಸ ಕಳೆದು ಕೊಂಡಿರುವವರಲ್ಲಿ ಅಮರಿಕಾ ಹಾಗೂ ಭಾರತದ ಉದ್ಯೋಗಿಗಳು ಸೇರಿದ್ದಾರೆ ಎಂದು ವರದಿಗಳು ಹೇಳಿವೆ.

“ಮೋಸ ಹೋದ ಅನುಭವವಾಗುತ್ತಿದೆ” ಎಂದು ಸಭೆಯಲ್ಲಿ ವಜಾಗೊಂಡ ಕಂಪನಿಯ ಮಾಜಿ ಉದ್ಯೋಗಿಯೊಬ್ಬರು ತಿಳಿಸಿದ್ದಾರೆಂದು TNIE ವರದಿ ಮಾಡಿದೆ. “ಆಂತರಿಕವಾಗಿ ತಂಡದ ಒಡನಾಟ ತುಂಬಾ ಚೆನ್ನಾಗಿತ್ತು ಆದರೆ ಆಡಳಿತವು ನಮ್ಮನ್ನು ಕೈಬಿಟ್ಟಿದೆ” ಎಂದು ಹೆಸರು ಹೇಳಲು ಇಚ್ಛಿಸದ ಮಾಜಿ ಉದ್ಯೋಗಿಯೊಬ್ಬರು ಹೇಳಿದ್ದಾರೆ. “ವಿಶಾಲ್‌ ಗಾರ್ಗ್‌ ತುಂಬಾ ಕೆಟ್ಟ ಕಾರ್ಯನಿರ್ವಾಹಕನಾಗಿದ್ದು, ಒಮ್ಮೆ ತನ್ನ ಉದ್ಯೋಗಿಗಳನ್ನು ‘ಕಿವುಡ ಡಾಲ್ಫಿನ್‌ಗಳ ಗುಂಪು’ ಎಂದು ಕರೆದಿದ್ದರು” ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ:ಖಾಸಗಿ ಉದ್ಯೋಗಗಳನ್ನಾದರೂ ಸೃಷ್ಟಿಸಬೇಕಲ್ಲವೇ: ಡಿ.ಕೆ.ಶಿವಕುಮಾರ್‌ ‘ಒಂದು ಪ್ರಶ್ನೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...