Homeಮುಖಪುಟಮೂರು ನಿಮಿಷಗಳ Zoom ಸಬೆಯಲ್ಲಿ 900 ಉದ್ಯೋಗಿಗಳ ವಜಾ!

ಮೂರು ನಿಮಿಷಗಳ Zoom ಸಬೆಯಲ್ಲಿ 900 ಉದ್ಯೋಗಿಗಳ ವಜಾ!

- Advertisement -
- Advertisement -

ಕಂಪೆನಿಯೊಂದರ ಮೂರು ನಿಮಿಷದ ಝೂಮ್‌ ಸಭೆಯಲ್ಲಿ ಸುಮಾರು 900 ಉದ್ಯೋಗಿಗಳನ್ನು ಒಂದೇ ಬಾರಿಗೆ ವಜಾ ಗೊಳಿಸಿರುವ ವಿಲಕ್ಷಣ ಘಟನೆ ನಡೆದಿದೆ. ಅಮೆರಿಕ ಮೂಲದ ಸಂಸ್ಥೆಯಾದ Better.com ನ ಸಿಇಒ ವಿಶಾಲ್ ಗಾರ್ಗ್ ಅವರು ಈ ನಿರ್ಧಾರವನ್ನು ಝೂಮ್ ಸಭೆಯಲ್ಲಿ ಪ್ರಕಟಿಸಿದ್ದಾರೆ. ಮುಂಬರುವ ಕ್ರಿಸ್‌ಮಸ್‌ ಹಬ್ಬದ ಸೀಸನ್‌ಗೆ ಮುಂಚಿತವಾಗಿ ಘಟನೆ ನಡೆದಿದ್ದು ಕಂಪನಿಯ ಸಿಬ್ಬಂದಿಗೆ ತೀವ್ರ ಆಘಾತವನ್ನುಂಟುಮಾಡಿದೆ.

“ನಾನು ಉತ್ತಮ ಸುದ್ದಿಯೊಂದಿಗೆ ನಿಮ್ಮ ಬಳಿಗೆ ಬರುತ್ತೇನೆ. ಮಾರುಕಟ್ಟೆ ಬದಲಾಗಿದೆ ಮತ್ತು ಬದುಕಬೇಕಾದರೆ ನಾವು ಅದರೊಂದಿಗೆ ಚಲಿಸಬೇಕಾಗಿದೆ. ಹೀಗಾದರೆ ಆಶಾದಾಯಕವಾಗಿ, ನಾವು ಅಭಿವೃದ್ಧಿ ಹೊಂದಬಹುದು ಮತ್ತು ನಮ್ಮ ಧ್ಯೇಯವನ್ನು ತಲುಪಿಸಬಹುದು” ಎಂದು ಹೇಳುತ್ತಾ ತಮ್ಮ ಕಠೋರವಾದ ಪ್ರಕಟಣೆಯನ್ನು ಹೇಳಿದ್ದಾರೆ.

ಇದನ್ನೂ ಓದಿ:ಸಹೋದ್ಯೋಗಿಗೆ ಲೈಂಗಿಕ ದೌರ್ಜನ್ಯ: ಯುಪಿ ಸರ್ಕಾರಿ ಉದ್ಯೋಗಿ ಬಂಧನ

“ನೀವು ಈ ಝೂಮ್‌ ಸಭೆಯಲ್ಲಿದ್ದರೆ, ವಜಾಗೊಳ್ಳುತ್ತಿರುವ ದುರದೃಷ್ಟಕರ ಗುಂಪಿನ ಭಾಗವಾಗಿದ್ದೀರಿ ಎಂದರ್ಥ…ನಿಮ್ಮ ಉದ್ಯೋಗವನ್ನು ತಕ್ಷಣವೇ ಕೊನೆಗೊಳಿಸಲಾಗುತ್ತದೆ” ಎಂದು ಅವರು ಸಭೆಯಲ್ಲಿ ಹೇಳಿದ್ದಾರೆ. ವಜಾಗೊಂಡಿರುವ ಉದ್ಯೋಗಿಗಳು ದಿನಕ್ಕೆ ಎರಡು ಗಂಟೆ ಮಾತ್ರ ಕೆಲಸ ಮಾಡುವುದರಿಂದ ಹೆಚ್ಚು ಕೆಲಸ ಮಾಡುವ ಉದ್ಯೋಗಿಗಳು ಮತ್ತು ಕಂಪನಿಯ ಗ್ರಾಹಕರಿಂದ ಅವರು ‘ಕದಿಯುತ್ತಿದ್ದಾರೆ’ ಎಂದು ವಿಶಾಲ್‌ ಗಾರ್ಗ್ ಆರೋಪಿಸಿದ್ದಾರೆ.

ರಜಾ ಅವಧಿಗೆ ಮುನ್ನವೇ ನೌಕರರನ್ನು ವಜಾಗೊಳಿಸಿರುವುದು ಬೇಸರ ತಂದಿದೆಯಾದರೂ ಅವರಿಗೆ ಸೂಕ್ತ ಸೌಲಭ್ಯ ಮತ್ತು ಪ್ಯಾಕೇಜ್ ನೀಡಲಾಗುವುದು ಎಂದು ಕಂಪನಿಯ CFO ಕೆವಿನ್ ರಯಾನ್ CNN ಬ್ಯುಸಿನೆಸ್‌ಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕೆಲಸ ಕಳೆದು ಕೊಂಡಿರುವವರಲ್ಲಿ ಅಮರಿಕಾ ಹಾಗೂ ಭಾರತದ ಉದ್ಯೋಗಿಗಳು ಸೇರಿದ್ದಾರೆ ಎಂದು ವರದಿಗಳು ಹೇಳಿವೆ.

“ಮೋಸ ಹೋದ ಅನುಭವವಾಗುತ್ತಿದೆ” ಎಂದು ಸಭೆಯಲ್ಲಿ ವಜಾಗೊಂಡ ಕಂಪನಿಯ ಮಾಜಿ ಉದ್ಯೋಗಿಯೊಬ್ಬರು ತಿಳಿಸಿದ್ದಾರೆಂದು TNIE ವರದಿ ಮಾಡಿದೆ. “ಆಂತರಿಕವಾಗಿ ತಂಡದ ಒಡನಾಟ ತುಂಬಾ ಚೆನ್ನಾಗಿತ್ತು ಆದರೆ ಆಡಳಿತವು ನಮ್ಮನ್ನು ಕೈಬಿಟ್ಟಿದೆ” ಎಂದು ಹೆಸರು ಹೇಳಲು ಇಚ್ಛಿಸದ ಮಾಜಿ ಉದ್ಯೋಗಿಯೊಬ್ಬರು ಹೇಳಿದ್ದಾರೆ. “ವಿಶಾಲ್‌ ಗಾರ್ಗ್‌ ತುಂಬಾ ಕೆಟ್ಟ ಕಾರ್ಯನಿರ್ವಾಹಕನಾಗಿದ್ದು, ಒಮ್ಮೆ ತನ್ನ ಉದ್ಯೋಗಿಗಳನ್ನು ‘ಕಿವುಡ ಡಾಲ್ಫಿನ್‌ಗಳ ಗುಂಪು’ ಎಂದು ಕರೆದಿದ್ದರು” ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ:ಖಾಸಗಿ ಉದ್ಯೋಗಗಳನ್ನಾದರೂ ಸೃಷ್ಟಿಸಬೇಕಲ್ಲವೇ: ಡಿ.ಕೆ.ಶಿವಕುಮಾರ್‌ ‘ಒಂದು ಪ್ರಶ್ನೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...