Homeರಾಷ್ಟ್ರೀಯಮಹಾತ್ಮ ಗಾಂಧಿಯ ಹತ್ಯೆಯನ್ನು ಸಮರ್ಥಿಸಿದ ಹಿಂದೂ ಮಹಾ ಸಭಾ ನಾಯಕ

ಮಹಾತ್ಮ ಗಾಂಧಿಯ ಹತ್ಯೆಯನ್ನು ಸಮರ್ಥಿಸಿದ ಹಿಂದೂ ಮಹಾ ಸಭಾ ನಾಯಕ

- Advertisement -
- Advertisement -

ಮಹಾತ್ಮಾ ಗಾಂಧಿಯನ್ನು ಕೊಂದ ಭಯೋತ್ಪಾದಕ ನಾಥುರಾಮ್ ಗೋಡ್ಸೆಯನ್ನು ನಾವು ಗೌರವಿಸುತ್ತೇವೆ ಎಂದು ಅಖಿಲ ಭಾರತೀಯ ಹಿಂದೂ ಮಹಾಸಭಾದ ರಾಷ್ಟ್ರೀಯ ನಾಯಕ ಮುನ್ನಾ ಕುಮಾರ್ ಶರ್ಮಾ ಕೇರಳದ ತ್ರಿಶೂರ್‌ನಲ್ಲಿ ಗುರುವಾರ ಗಾಂಧಿ ಹತ್ಯೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದೀಗ ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು ದೇಶದಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ತ್ರಿಶೂರ್‌ ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುನ್ನಾಕುಮಾರ್ ಶರ್ಮಾ,“ಗೋಡ್ಸೆ ಆರೆಸ್ಸೆಸ್ ಮತ್ತು ಹಿಂದೂ ಮಹಾಸಭಾದ ಎರಡರ ಸದಸ್ಯರಾಗಿದ್ದರು. ಆದರೆ, ಅವರು ನಮ್ಮ ಸಂಘಟನೆ ಸದಸ್ಯರಲ್ಲ ಎಂದು ಆರೆಸ್ಸೆಸ್‌ ಹೇಳುತ್ತಿದೆ. ನಾವು  ಹಾಗೆ ಹೇಳುವುದಿಲ್ಲ. ಅವರು ಹಿಂದೂ ಮಹಾಸಭಾದ ಸದಸ್ಯರಾಗಿದ್ದರು ಎಂದು ಹೇಳುತ್ತೇವೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಗೋಡ್ಸೆಯನ್ನು ನಾವು ಗೌರವಿಸುತ್ತೇವೆ. ಯಾಕೆಂದರೆ ಅವರು ಭಾರತದ ಏಕತೆ ಮತ್ತು ಸಮಗ್ರತೆಗಾಗಿ ಗಾಂಧಿಯನ್ನು ಕೊಂದರು” ಎಂದು ಗಾಂಧಿ ಕೊಲೆಯನ್ನು ಮುನ್ನಾ ಕುಮಾರ್‌ ಶರ್ಮಾ ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ಗೋಡ್ಸೆ ಭಕ್ತರು ಪ್ರಧಾನಿ ಕಾರ್ಯಾಲಯದಲ್ಲಿದ್ದಾರೆ, ಅವರೆ ನನ್ನ ಬಂಧನಕ್ಕೆ ನೇರ ಕಾರಣ: ಜಿಗ್ನೇಶ್ ಮೇವಾನಿ

“ಗೋಡ್ಸೆ ಗಾಂಧಿ ಕೊಲೆಯನ್ನು ದೇಶವನ್ನು ಉಳಿಸಲು ಬೇಕಾಗಿ ಮಾಡಿದರು. ಗಾಂಧಿ ಮತ್ತು ನೆಹರೂ ಭಾರತವನ್ನು ಭಾರತ-ಪಾಕಿಸ್ತಾನ ಎಂಬ ಎರಡು ಭಾಗಗಳಾಗಿ ವಿಭಜಿಸಿದರು. ಒಂದು ವೇಳೆ ಗಾಂಧಿ ಬದುಕಿ ಉಳಿದಿದ್ದರೆ ದೇಶವೂ ಇನ್ನೂ ಎರಡು ಮೂರು ದೇಶಗಳಾಗಿ ವಿಭಜನೆ ಹೊಂದುತ್ತಿತ್ತು. ಈ ಪರಿಸ್ಥಿತಿಯನ್ನು ಉಳಿಸಲು ಬೇಕಾಗಿ ಅವರು ಗಾಂಧಿಯನ್ನು ಕೊಂದರು” ಎಂದು ಅವರು ತಿಳಿಸಿದ್ದಾರೆ.

ನೀವು ಗಾಂಧಿ ಕೊಲೆಯನ್ನು ಸಮರ್ಥಿಸುತ್ತಿದ್ದೀರಾ ಎಂಬ ಪತ್ರಕರ್ತರ ಪ್ರಶ್ನೆಗೆ, ‘ಹೌದು ಸಮರ್ಥಿಸುತ್ತೇವೆ’ ಎಂದು ನೇರವಾಗಿ ಮುನ್ನಾ ಕುಮಾರ್‌ ಉತ್ತರಿಸಿದ್ದಾರೆ.

“ಗೋಡ್ಸೆ ಒಬ್ಬ ನಾಯಕನಾಗಿದ್ದು, ಈ ಎಲ್ಲಾ ಕೆಲಸಗಳನ್ನು ಅವರು ದೇಶವನ್ನು ಉಳಿಸಲು ಬೇಕಾಗಿ ಮಾಡಿದರು. ದೇಶದ ಸಮಗ್ರತೆ ಮತ್ತು ಏಕತೆಗಾಗಿ ಗೋಡ್ಸೆ ತನ್ನ ಜೀವವನ್ನು ತ್ಯಾಗ ಮಾಡಿದರು. ಅವರು ಗಾಂಧಿಯನ್ನು ಕೊಲ್ಲಬೇಕಿತ್ತು ಎಂದು ನಾವು ಹೇಳುತ್ತಿಲ್ಲ. ಅದು ನಮ್ಮ ನಿರ್ಧಾರವೂ ಆಗಿರಲಿಲ್ಲ, ಅದು ಗೋಡ್ಸೆಯ ನಿರ್ಧಾರವಾಗಿತ್ತು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಮತ್ತು ಗೋಡ್ಸೆ ಬಗ್ಗೆ ಟ್ವೀಟ್‌ ಮಾಡಿದ್ದಕ್ಕಾಗಿ ಗುಜರಾತ್‌ ಶಾಸಕ, ಹೋರಾಟಗಾರ ಜಿಗ್ನೇಶ್‌ ಮೇವಾನಿಯ ಬಂಧನ

ಸಾವರ್ಕರ್‌ ಅವರನ್ನು ಟೀಕಿಸುವವರು ದೇಶದ್ರೋಹಿಗಳಾಗಿದ್ದು, ಅಂತವರ ವಿರುದ್ದ ಕ್ರಮ ಕೈಗೊಳ್ಳಬೇಕೆಂದೂ ಅವರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...