Homeಕರ್ನಾಟಕವಿಜಯ ಕರ್ನಾಟಕದ ವಿರುದ್ದ ಕಾನೂನು ಹೋರಾಟ: ಮುಸ್ಲಿಂ ಜಮಾಅತ್

ವಿಜಯ ಕರ್ನಾಟಕದ ವಿರುದ್ದ ಕಾನೂನು ಹೋರಾಟ: ಮುಸ್ಲಿಂ ಜಮಾಅತ್

- Advertisement -
- Advertisement -

“ವಿಜಯ ಕರ್ನಾಟಕ” ಕನ್ನಡ ದಿನಪತ್ರಿಕೆಯು ಕರೊನಾವನ್ನು ಕೋಮುವಾದಕ್ಕೆ ಬಳಸುತ್ತಿದೆ ಎಂದು ಆರೋಪಿಸಿ ಪತ್ರಿಕೆಯ ವಿರುದ್ದ ಕರ್ನಾಟಕ ಮುಸ್ಲಿಂ ಜಮಾಅತ್ ಕಾನೂನು ಹೋರಾಟಕ್ಕೆ ಸಜ್ಜಾಗಿದೆ. ದಿನ ಪತ್ರಿಕೆಯು ತನ್ನ ಮುಖಪುಟದಲ್ಲಿ ಒಂದು ಸಮುದಾಯವನ್ನು ಉದ್ದೇಶಿಸಿ “ಸತ್ತವರೆಲ್ಲ ಒಂದೇ ಸಮುದಾಯದವರು” ಎಂಬ ತಲೆ ಬರಹದ ವರದಿಯನ್ನು ಮಾಡಿತ್ತು.

ಇದನ್ನು ವಿರೋಧಿಸಿ ಕರ್ನಾಟಕ ಮುಸ್ಲಿಂ ಜಮಾಅತ್‌ನ ಪ್ರಧಾನ ಕಾರ್‍ಯದರ್ಶಿ ಎನ್.ಕೆ.ಎಂ. ಶಾಫಿ ಸಅದಿ “ಧರ್ಮ, ವರ್ಗ, ವರ್ಣ ಎಂಬ ವ್ಯತ್ಯಾಸ ಇಲ್ಲದೆ ಎಲ್ಲರಲ್ಲೂಕೊರೊನ ರೋಗ ಕಂಡು ಬಂದಿದೆ. ಆದರೆ ಕನ್ನಡ ಪತ್ರಿಕೋದ್ಯಮದ ಕೆಲವರ ಕೋಮು ಮನಸ್ಥಿತಿ ಈ ಕೊರೊನವನ್ನೂ ಕೋಮುವಾದೀಕರಣ ಮಾಡಲು ಹೊರಟಿದೆ, ’ಸತ್ತವರೆಲ್ಲಾ ಒಂದೇ ಸಮುದಾಯದವರು’ ಎಂಬ ಮುಖಪುಟ ವರದಿಯನ್ನು ಪ್ರಕಟಿಸಿರುವ ಕನ್ನಡದ ಪ್ರಮುಖ ಪತ್ರಿಕೆಯೊಂದು ಈ ವೈರಸ್ ಕರ್ನಾಟಕದಲ್ಲಿ ಯಾವ ಧರ್ಮದವರಲ್ಲಿ ಹೆಚ್ಚು ಬಂದಿದೆ, ಯಾವ ಧರ್ಮದವರು ಹೆಚ್ಚು ಸತ್ತಿದ್ದಾರೆ, ಯಾವ ಧರ್ಮದವರಿಗೆ ಪೋಲೀಸರು ಹೆಚ್ಚು ಹೊಡೆದಿದ್ದಾರೆ ಎನ್ನುವ ಸುದ್ದಿಯೊಂದಿಗೆ ವಿಕೃತ ಮನೋಭಾವವನ್ನು ಪ್ರದರ್ಶಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಅಲ್ಲದೆ, ’ಕೊರೋನಾ ಹರಡಿ’ ಎಂದು ಟ್ವಿಟರ್ ನಲ್ಲಿ ಕರೆ ನೀಡಿದ್ದ ಕಿಡಿಗೇಡಿಯೊಬ್ಬನ ನೀಚ ಕೃತ್ಯವನ್ನೂ ಈ ವರದಿಯೊಂದಿಗೆ ಜೋಡಿಸಿ ಇತರ ಸಮುದಾಯಗಳ ಮಧ್ಯೆ ಮುಸ್ಲಿಂ ಸಮುದಾಯವನ್ನು ತಪ್ಪಿತಸ್ಥ ವಿಭಾಗವನ್ನಾಗಿ ಚಿತ್ರೀಕರಿಸುವ ಪ್ರಯತ್ನವೂ ನಡೆದಿದೆ” ಎಂದು ಅವರು ಆರೋಪಿಸಿದ್ದಾರೆ.

“ಮನುಷ್ಯ ವರ್ಗದ ಭಾವುಕ ಕ್ಷಣಗಳನ್ನು, ಸೂಕ್ಷ್ಮ ಸಂವೇದನೆಗಳನ್ನು ಕೋಮು ವೈಷಮ್ಯಕ್ಕೆ ತಿರುಗಿಸುವ ಈ ಹೀನ ಕೃತ್ಯ ಖಂಡನೀಯ. ಇದು ಅಮಾನವೀಯ ಮತ್ತು ಪತ್ರಿಕಾ ಧರ್ಮಕ್ಕೆ ವಿರುದ್ಧ” ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ಅಭಿಪ್ರಾಯಪಟ್ಟಿದೆ.

“ಕೊರೊನ ವಿರುದ್ದ ಹೋರಾಟದಲ್ಲಿ ಇಡೀ ಮುಸ್ಲಿಂ ಸಮುದಾಯ ಭಾಗಿಯಾಗಿದ್ದು, ಚರಿತ್ರೆಯಲ್ಲೇ ಮೊದಲ ಬಾರಿ ಮುಸ್ಲಿಮರು ಮಸೀದಿಗಳಲ್ಲಿ ನಮಾಝ್ ನಿಲ್ಲಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಮುಸ್ಲಿಮರು ನಮಾಝ್ ಮಾಡಲು ಮಸೀದಿಗೆ ಹೋಗಬೇಕಾಗಿಲ್ಲ ಎಂಬ ಫತ್ವಾವನ್ನು ಅತ್ಯಂತ ಯಶಸ್ವಿಯಾಗಿ ಸಮುದಾಯದ ಮಧ್ಯೆ ಬಿತ್ತರಿಸಲು ಮುಸ್ಲಿಂ ಪಂಡಿತರಿಗೆ ಸಾಧ್ಯವಾಗಿದೆ. ರಾಜ್ಯದ ಮುಖ್ಯಮಂತ್ರಿಗಳೂ ಕೂಡ ಮುಸ್ಲಿಮರ ಈ ಹೋರಾಟವನ್ನು ಶ್ಲಾಘಿಸಿದ್ದಾರೆ”ಎಂದು ಹೇಳಿದ್ದಾರೆ.

ಇಂದು ತುರ್ತಾಗಿ ವೀಡಿಯೋ ಕಾನ್ನರೆನ್ಸ್ ಮೂಲಕ ಸಭೆ ನಡೆಸಿದ ಮುಸ್ಲಿಂ ಜಮಾಅತ್ ರಾಜ್ಯ ಸಕಟರಿಯೇಟ್ ಈ ವರದಿ ಮತ್ತು ಪತ್ರಿಕೆಯ ವಿರುದ್ಧ ಮುಖ್ಯಮಂತ್ರಿಗಳಿಗೆ, ಪತ್ರಿಕಾ ಸಂಪಾದಕರಿಗೆ ಮತ್ತು ಪೆಸ್ ಕೌನ್ಸಿಲ್‌ಗೆ ದೂರು ನೀಡಲು ನಿರ್ಧರಿಸಿದೆ ಅಲ್ಲದೆ ಅಗತ್ಯ ಬಿದ್ದಲಿ ಕಾನೂನು ಹೋರಾಟಕ್ಕೂ ಸಂಘಟನೆ ಸಿದ್ದವಾಗಿದೆ ಎಂದು ಮುಸ್ಲಿಂ ಜಮಾಅತ್ ಹೇಳಿದೆ.

ಜನರು ಸಾಮರಸ್ಯವನ್ನು ಕದಡದೆ, ಕೋಮುವಾದಿಗಳ ಪ್ರಯತ್ನವನ್ನು ಸಫಲಗೊಳಿಸಲು ಬಿಡಬಾರದು ಎಂದು ಜಮಾಅತ್ ಜನತೆಯೊಂದಿಗೆ ವಿನಂತಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...