Homeಕರ್ನಾಟಕವಿಜಯ ಕರ್ನಾಟಕದ ವಿರುದ್ದ ಕಾನೂನು ಹೋರಾಟ: ಮುಸ್ಲಿಂ ಜಮಾಅತ್

ವಿಜಯ ಕರ್ನಾಟಕದ ವಿರುದ್ದ ಕಾನೂನು ಹೋರಾಟ: ಮುಸ್ಲಿಂ ಜಮಾಅತ್

- Advertisement -
- Advertisement -

“ವಿಜಯ ಕರ್ನಾಟಕ” ಕನ್ನಡ ದಿನಪತ್ರಿಕೆಯು ಕರೊನಾವನ್ನು ಕೋಮುವಾದಕ್ಕೆ ಬಳಸುತ್ತಿದೆ ಎಂದು ಆರೋಪಿಸಿ ಪತ್ರಿಕೆಯ ವಿರುದ್ದ ಕರ್ನಾಟಕ ಮುಸ್ಲಿಂ ಜಮಾಅತ್ ಕಾನೂನು ಹೋರಾಟಕ್ಕೆ ಸಜ್ಜಾಗಿದೆ. ದಿನ ಪತ್ರಿಕೆಯು ತನ್ನ ಮುಖಪುಟದಲ್ಲಿ ಒಂದು ಸಮುದಾಯವನ್ನು ಉದ್ದೇಶಿಸಿ “ಸತ್ತವರೆಲ್ಲ ಒಂದೇ ಸಮುದಾಯದವರು” ಎಂಬ ತಲೆ ಬರಹದ ವರದಿಯನ್ನು ಮಾಡಿತ್ತು.

ಇದನ್ನು ವಿರೋಧಿಸಿ ಕರ್ನಾಟಕ ಮುಸ್ಲಿಂ ಜಮಾಅತ್‌ನ ಪ್ರಧಾನ ಕಾರ್‍ಯದರ್ಶಿ ಎನ್.ಕೆ.ಎಂ. ಶಾಫಿ ಸಅದಿ “ಧರ್ಮ, ವರ್ಗ, ವರ್ಣ ಎಂಬ ವ್ಯತ್ಯಾಸ ಇಲ್ಲದೆ ಎಲ್ಲರಲ್ಲೂಕೊರೊನ ರೋಗ ಕಂಡು ಬಂದಿದೆ. ಆದರೆ ಕನ್ನಡ ಪತ್ರಿಕೋದ್ಯಮದ ಕೆಲವರ ಕೋಮು ಮನಸ್ಥಿತಿ ಈ ಕೊರೊನವನ್ನೂ ಕೋಮುವಾದೀಕರಣ ಮಾಡಲು ಹೊರಟಿದೆ, ’ಸತ್ತವರೆಲ್ಲಾ ಒಂದೇ ಸಮುದಾಯದವರು’ ಎಂಬ ಮುಖಪುಟ ವರದಿಯನ್ನು ಪ್ರಕಟಿಸಿರುವ ಕನ್ನಡದ ಪ್ರಮುಖ ಪತ್ರಿಕೆಯೊಂದು ಈ ವೈರಸ್ ಕರ್ನಾಟಕದಲ್ಲಿ ಯಾವ ಧರ್ಮದವರಲ್ಲಿ ಹೆಚ್ಚು ಬಂದಿದೆ, ಯಾವ ಧರ್ಮದವರು ಹೆಚ್ಚು ಸತ್ತಿದ್ದಾರೆ, ಯಾವ ಧರ್ಮದವರಿಗೆ ಪೋಲೀಸರು ಹೆಚ್ಚು ಹೊಡೆದಿದ್ದಾರೆ ಎನ್ನುವ ಸುದ್ದಿಯೊಂದಿಗೆ ವಿಕೃತ ಮನೋಭಾವವನ್ನು ಪ್ರದರ್ಶಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಅಲ್ಲದೆ, ’ಕೊರೋನಾ ಹರಡಿ’ ಎಂದು ಟ್ವಿಟರ್ ನಲ್ಲಿ ಕರೆ ನೀಡಿದ್ದ ಕಿಡಿಗೇಡಿಯೊಬ್ಬನ ನೀಚ ಕೃತ್ಯವನ್ನೂ ಈ ವರದಿಯೊಂದಿಗೆ ಜೋಡಿಸಿ ಇತರ ಸಮುದಾಯಗಳ ಮಧ್ಯೆ ಮುಸ್ಲಿಂ ಸಮುದಾಯವನ್ನು ತಪ್ಪಿತಸ್ಥ ವಿಭಾಗವನ್ನಾಗಿ ಚಿತ್ರೀಕರಿಸುವ ಪ್ರಯತ್ನವೂ ನಡೆದಿದೆ” ಎಂದು ಅವರು ಆರೋಪಿಸಿದ್ದಾರೆ.

“ಮನುಷ್ಯ ವರ್ಗದ ಭಾವುಕ ಕ್ಷಣಗಳನ್ನು, ಸೂಕ್ಷ್ಮ ಸಂವೇದನೆಗಳನ್ನು ಕೋಮು ವೈಷಮ್ಯಕ್ಕೆ ತಿರುಗಿಸುವ ಈ ಹೀನ ಕೃತ್ಯ ಖಂಡನೀಯ. ಇದು ಅಮಾನವೀಯ ಮತ್ತು ಪತ್ರಿಕಾ ಧರ್ಮಕ್ಕೆ ವಿರುದ್ಧ” ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ಅಭಿಪ್ರಾಯಪಟ್ಟಿದೆ.

“ಕೊರೊನ ವಿರುದ್ದ ಹೋರಾಟದಲ್ಲಿ ಇಡೀ ಮುಸ್ಲಿಂ ಸಮುದಾಯ ಭಾಗಿಯಾಗಿದ್ದು, ಚರಿತ್ರೆಯಲ್ಲೇ ಮೊದಲ ಬಾರಿ ಮುಸ್ಲಿಮರು ಮಸೀದಿಗಳಲ್ಲಿ ನಮಾಝ್ ನಿಲ್ಲಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಮುಸ್ಲಿಮರು ನಮಾಝ್ ಮಾಡಲು ಮಸೀದಿಗೆ ಹೋಗಬೇಕಾಗಿಲ್ಲ ಎಂಬ ಫತ್ವಾವನ್ನು ಅತ್ಯಂತ ಯಶಸ್ವಿಯಾಗಿ ಸಮುದಾಯದ ಮಧ್ಯೆ ಬಿತ್ತರಿಸಲು ಮುಸ್ಲಿಂ ಪಂಡಿತರಿಗೆ ಸಾಧ್ಯವಾಗಿದೆ. ರಾಜ್ಯದ ಮುಖ್ಯಮಂತ್ರಿಗಳೂ ಕೂಡ ಮುಸ್ಲಿಮರ ಈ ಹೋರಾಟವನ್ನು ಶ್ಲಾಘಿಸಿದ್ದಾರೆ”ಎಂದು ಹೇಳಿದ್ದಾರೆ.

ಇಂದು ತುರ್ತಾಗಿ ವೀಡಿಯೋ ಕಾನ್ನರೆನ್ಸ್ ಮೂಲಕ ಸಭೆ ನಡೆಸಿದ ಮುಸ್ಲಿಂ ಜಮಾಅತ್ ರಾಜ್ಯ ಸಕಟರಿಯೇಟ್ ಈ ವರದಿ ಮತ್ತು ಪತ್ರಿಕೆಯ ವಿರುದ್ಧ ಮುಖ್ಯಮಂತ್ರಿಗಳಿಗೆ, ಪತ್ರಿಕಾ ಸಂಪಾದಕರಿಗೆ ಮತ್ತು ಪೆಸ್ ಕೌನ್ಸಿಲ್‌ಗೆ ದೂರು ನೀಡಲು ನಿರ್ಧರಿಸಿದೆ ಅಲ್ಲದೆ ಅಗತ್ಯ ಬಿದ್ದಲಿ ಕಾನೂನು ಹೋರಾಟಕ್ಕೂ ಸಂಘಟನೆ ಸಿದ್ದವಾಗಿದೆ ಎಂದು ಮುಸ್ಲಿಂ ಜಮಾಅತ್ ಹೇಳಿದೆ.

ಜನರು ಸಾಮರಸ್ಯವನ್ನು ಕದಡದೆ, ಕೋಮುವಾದಿಗಳ ಪ್ರಯತ್ನವನ್ನು ಸಫಲಗೊಳಿಸಲು ಬಿಡಬಾರದು ಎಂದು ಜಮಾಅತ್ ಜನತೆಯೊಂದಿಗೆ ವಿನಂತಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...