Homeಮುಖಪುಟಯುಪಿ ದಾಳಿಯಲ್ಲಿ ಕೊಲ್ಲಲ್ಪಟ್ಟ ಅಧಿಕಾರಿ ಬರೆದ ಪತ್ರ ವೈರಲ್; ನಮಗೆ ಸಿಕ್ಕಿಲ್ಲವೆಂದ ಪೊಲೀಸರು

ಯುಪಿ ದಾಳಿಯಲ್ಲಿ ಕೊಲ್ಲಲ್ಪಟ್ಟ ಅಧಿಕಾರಿ ಬರೆದ ಪತ್ರ ವೈರಲ್; ನಮಗೆ ಸಿಕ್ಕಿಲ್ಲವೆಂದ ಪೊಲೀಸರು

ಉನ್ನತ ಅಧಿಕಾರಿಯೊಬ್ಬರು ಪತ್ರದ ಬಗ್ಗೆ ಸಮಗ್ರ ವಿವರಣೆ ಕೇಳಿದ್ದು, ಅದನ್ನು ಪರಿಶೀಲಿಸಿದಲ್ಲಿ, ಪೊಲೀಸರು ಅಪರಾಧಿಗಳಿಗೆ ಸಹಾಯ ಮಾಡುತ್ತಿರುವುದಕ್ಕೆ ಪ್ರಖರ ಪುರಾವೆಗಳು ಸಿಗಬಹುದು ಎನ್ನಲಾಗಿದೆ

- Advertisement -
- Advertisement -

ಕುಖ್ಯಾತ ದರೋಡೆಕೋರ ವಿಕಾಸ್ ದುಬೆ ಮೇಲೆ ಶುಕ್ರವಾರ ವಿಫಲ ದಾಳಿ ನಡೆಸಿದ ಅಧಿಕಾರಿ ”ಪೊಲೀಸರ ಎಡೆಯಲ್ಲಿ ದುಬೆಯ ಮಾಹಿತಿದಾರ” ಇರುವ ಬಗ್ಗೆ ಬರೆದಿರುವ ಪತ್ರದ ಬಗ್ಗೆ ಉತ್ತರ ಪ್ರದೇಶ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಉನ್ನತ ಅಧಿಕಾರಿಯೊಬ್ಬರು ಪತ್ರದ ಬಗ್ಗೆ ಸಮಗ್ರ ವಿವರಣೆ ಕೇಳಿದ್ದು, ಅದನ್ನು ಪರಿಶೀಲಿಸಿದಲ್ಲಿ, ಪೊಲೀಸರು ಅಪರಾಧಿಗಳಿಗೆ ಸಹಾಯ ಮಾಡುತ್ತಿರುವುದಕ್ಕೆ ಪ್ರಖರ ಪುರಾವೆಗಳು ಸಿಗಬಹುದು ಎನ್ನಲಾಗಿದೆ.

ಪೊಲೀಸರ ಹತ್ಯಾಕಾಂಡದ ನಂತರ ವಿಕಾಸ್ ದುಬೆ ಕಾಣೆಯಾಗಿದ್ದಾನೆ.

ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಡಿರುವ ಈ ಪತ್ರದ ವಿವಾದ ಹಾಗೂ ಆಕ್ರೋಶದ ಮಧ್ಯೆ,  ಕಾನ್ಪುರದ ಪೊಲೀಸ್ ಮುಖ್ಯಸ್ಥ ಸೋಮವಾರ ರಾತ್ರಿ ಇದು ಪೊಲೀಸ್ ದಾಖಲೆಗಳಲ್ಲಿ ಕಂಡುಬಂದಿಲ್ಲ ಆದರೆ ಅದಕ್ಕಾಗಿ ಶೋಧ ನಡೆಯುತ್ತಿದೆ ಎಂದು ಹೇಳಿದ್ದಾರೆ.

ವಿಕಾಸ್ ದುಬೆ ಮತ್ತು ಅವರ ಜನರು ಹೊಂಚುಹಾಕಿ ಗುಂಡಿಕ್ಕಿ ಕೊಂದಿದ್ದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ದೇವೇಂದ್ರ ಕುಮಾರ್ ಮಿಶ್ರಾ ಅವರು ಮೂರು ತಿಂಗಳ ಹಿಂದೆ ಆಗಿನ ಕಾನ್ಪುರದ ಪೊಲೀಸ್ ಮುಖ್ಯಸ್ಥ ಅನಂತ್ ಡಿಯೋ ತಿವಾರಿ ಅವರಿಗೆ ‘ಈ ಪತ್ರವನ್ನು ಬರೆದಿದ್ದಾರೆ’ ಎಂದು ಹೇಳಲಾಗಿದೆ.

ದರೋಡೆಕೋರರಿಗೆ ಪೊಲೀಸರು ಸಹಾಯ ಮಾಡುವ ಬಗ್ಗೆ ಮತ್ತು ವಿಶೇಷವಾಗಿ ಈಗಾಗಲೇ ಅಮಾನತುಗೊಂಡಿರುವ ಚೌಬೆಪುರ ಪೊಲೀಸ್ ಠಾಣೆಯ ಉಸ್ತುವಾರಿ ಪೊಲೀಸ್ ಅಧಿಕಾರಿ ವಿನಯ್ ತಿವಾರಿ ಬಗ್ಗೆ ಅಧಿಕಾರಿ ಅದರಲ್ಲಿ  ದೂರು ನೀಡಿದ್ದರು ಎಂದು ಹೇಳಲಾಗುತ್ತಿದೆ.

ವಿನಯ್ ತಿವಾರಿ ಅವರು ಅಪರಾಧಿಗೆ ಸಹಾಯ ಮಾಡಿ, ಪೊಲೀಸರ ತನಿಖೆಯಿಂದ ಅವರನ್ನು ರಕ್ಷಿಸಿದ್ದಾರೆ ಎಂದು ಮಿಶ್ರಾ ಆರೋಪಿಸಿದ್ದಾರೆ. ಆ ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪತ್ರದಲ್ಲಿ ಕೋರಲಾಗಿದೆ.

“ಅಂತಹ ಪತ್ರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ ಎಂದು ನನಗೆ ತಿಳಿದಿದೆ. ಡಿಎಸ್ಪಿ ಕಚೇರಿ ಮತ್ತು ಕಾನ್ಪುರ ಎಸ್ಎಸ್ಪಿ (ಹಿರಿಯ ಪೊಲೀಸ್ ವರಿಷ್ಠಾಧಿಕಾರಿ) ರವಾನೆ ಮತ್ತು ಸ್ವೀಕರಿಸುವ ವಿಭಾಗಗಳಲ್ಲಿ ಪ್ರಾಥಮಿಕ ಶೋಧವನ್ನು ನಡೆಸಲಾಯಿತು. ಇಲ್ಲಿಯವರೆಗೆ ಈ ಪತ್ರದ ಯಾವುದೇ ದಾಖಲೆಗಳು ಸಿಗಲಿಲ್ಲ. ಆದರೆ ನಾವು ಅದರೊಂದಿಗೆ ಇನ್ನೂ ಹೆಚ್ಚಿನ ವಿವರಗಳನ್ನು ಹುಡುಕುತ್ತಿದ್ದೇವೆ. ಹೆಚ್ಚಿನ ವಿವರಗಳನ್ನು ಸಿಕ್ಕರೆ ಅದನ್ನು ಹಂಚಿಕೊಳ್ಳಲು ನಾವು ಹಿಂಜರಿಯುವುದಿಲ್ಲ” ಎಂದು ಕಾನ್ಪುರದ ಪೊಲೀಸ್ ಮುಖ್ಯಸ್ಥ ದಿನೇಶ್ ಕುಮಾರ್ ಪಿ ಹೇಳಿದ್ದಾರೆ.

ಕೊಲೆ ಪ್ರಕರಣದಲ್ಲಿ ವಿಕಾಸ್ ದುಬೆಯನ್ನು ಬಂಧಿಸುವ ಉದ್ದೇಶದಿಂದ ಮೂರು ಪೊಲೀಸ್ ಠಾಣೆಗಳಿಂದ 50 ಪೊಲೀಸರ ತಂಡವನ್ನು ಮಿಶ್ರಾ ಮುನ್ನಡೆಸಿದರು. ದುಬೆ ವಿರುದ್ಧ ಕೊಲೆ, ಅಪಹರಣ, ಸುಲಿಗೆ ಮತ್ತು ಗಲಭೆ ಸೇರಿದಂತೆ 60 ಪ್ರಕರಣಗಳು ದಾಖಲಾಗಿದೆ.

ಪೊಲೀಸರು ನಡೆಸುವ ದಾಳಿಯ ಬಗ್ಗೆ ದುಬೆಗೆ ಮಾಹಿತಿ ನೀಡಲಾಗಿತ್ತು. ಹಾಗಾಗಿ ಪೊಲೀಸರ ಮೇಲೆ ಹಲ್ಲೆ ನಡೆಸಲು ಸಶಸ್ತ್ರ ಗ್ಯಾಂಗ್‌ನೊಂದಿಗೆ ಅವರು ಸಿದ್ಧರಾಗಿದ್ದರು. ಈ ಅಪರಾಧಿಯೊಂದಿಗಿನ ಸಂಪರ್ಕದ ಅನುಮಾನದ ಮೇಲೆ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಪೊಲೀಸರ ಮಾರಣಹೋಮ ನಡೆದು ನಾಲ್ಕು ದಿನಗಳು ಕಳೆದರೂ ವಿಕಾಸ್ ದುಬೆಯನ್ನು ಉತ್ತರ ಪ್ರದೇಶದ ಪೊಲೀಸರು ಇನ್ನೂ ಬಂಧಿಸಿಲ್ಲ. ಸೋಮವಾರ ಅವರ ಮಾಹಿತಿ ನೀಡಿದವರ ಬಹುಮಾನವನ್ನು 2.5 ಲಕ್ಷ ರೂ.ಗೆ ಏರಿಸಲಾಯಿತು. ಇಲ್ಲಿಯವರೆಗೆ ದುಬೆ ಇಲ್ಲಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ನಿನ್ನೆ ಸಂಜೆ ಕಾನ್ಪುರ ಪೊಲೀಸ್ ಪತ್ರಿಕಾ ಪ್ರಕಟಣೆಯಲ್ಲಿ ಇನ್ನೂ ಮೂರು ಬಂಧನಗಳಾಗಿರುವುದು ದೃಢಪಟ್ಟಿದೆ. ಅವರಲ್ಲಿ ಒಬ್ಬರು ದುಬೆಯ ನೆರೆಹೊರೆಯವರಾಗಿದ್ದು, ಇನ್ನೊಬ್ಬರು ದುಬೆಯ ಸಹಾಯಕ ಮತ್ತು ಮೂರನೇ ವ್ಯಕ್ತಿ ಮಹಿಳೆ ಎಂದು ತಿಳಿದುಬಂದಿದೆ.

ಅಮಾನತುಗೊಂಡ ಪೊಲೀಸರು ಅದೇ ಪೊಲೀಸ್ ಠಾಣೆ ಚೌಬೆಪುರದವರಾಗಿದ್ದು, ದುಬೆಯ ಜೊತೆಗೆ ನಿಯಮಿತ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪವಿದೆ. ಕಳೆದ ನಾಲ್ಕು ದಿನಗಳಲ್ಲಿ 100 ಕ್ಕೂ ಹೆಚ್ಚು ಪೊಲೀಸರ ಕರೆ ದಾಖಲೆಗಳನ್ನು ಸ್ಕ್ಯಾನ್ ಮಾಡಲಾಗಿದೆ.


ಇದನ್ನೂ ಓದಿ: ವಿಕಾಸ್ ದುಬೆಗೆ ‘ದಾಳಿಯ ಮಾಹಿತಿ ಸೋರಿಕೆ’: 3 ಕಾನ್ಪುರ ಪೊಲೀಸರ ಮೇಲೆ ಶಂಕೆ – ಅಮಾನತು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...