Homeಮುಖಪುಟಯುಪಿ ದಾಳಿಯಲ್ಲಿ ಕೊಲ್ಲಲ್ಪಟ್ಟ ಅಧಿಕಾರಿ ಬರೆದ ಪತ್ರ ವೈರಲ್; ನಮಗೆ ಸಿಕ್ಕಿಲ್ಲವೆಂದ ಪೊಲೀಸರು

ಯುಪಿ ದಾಳಿಯಲ್ಲಿ ಕೊಲ್ಲಲ್ಪಟ್ಟ ಅಧಿಕಾರಿ ಬರೆದ ಪತ್ರ ವೈರಲ್; ನಮಗೆ ಸಿಕ್ಕಿಲ್ಲವೆಂದ ಪೊಲೀಸರು

ಉನ್ನತ ಅಧಿಕಾರಿಯೊಬ್ಬರು ಪತ್ರದ ಬಗ್ಗೆ ಸಮಗ್ರ ವಿವರಣೆ ಕೇಳಿದ್ದು, ಅದನ್ನು ಪರಿಶೀಲಿಸಿದಲ್ಲಿ, ಪೊಲೀಸರು ಅಪರಾಧಿಗಳಿಗೆ ಸಹಾಯ ಮಾಡುತ್ತಿರುವುದಕ್ಕೆ ಪ್ರಖರ ಪುರಾವೆಗಳು ಸಿಗಬಹುದು ಎನ್ನಲಾಗಿದೆ

- Advertisement -
- Advertisement -

ಕುಖ್ಯಾತ ದರೋಡೆಕೋರ ವಿಕಾಸ್ ದುಬೆ ಮೇಲೆ ಶುಕ್ರವಾರ ವಿಫಲ ದಾಳಿ ನಡೆಸಿದ ಅಧಿಕಾರಿ ”ಪೊಲೀಸರ ಎಡೆಯಲ್ಲಿ ದುಬೆಯ ಮಾಹಿತಿದಾರ” ಇರುವ ಬಗ್ಗೆ ಬರೆದಿರುವ ಪತ್ರದ ಬಗ್ಗೆ ಉತ್ತರ ಪ್ರದೇಶ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಉನ್ನತ ಅಧಿಕಾರಿಯೊಬ್ಬರು ಪತ್ರದ ಬಗ್ಗೆ ಸಮಗ್ರ ವಿವರಣೆ ಕೇಳಿದ್ದು, ಅದನ್ನು ಪರಿಶೀಲಿಸಿದಲ್ಲಿ, ಪೊಲೀಸರು ಅಪರಾಧಿಗಳಿಗೆ ಸಹಾಯ ಮಾಡುತ್ತಿರುವುದಕ್ಕೆ ಪ್ರಖರ ಪುರಾವೆಗಳು ಸಿಗಬಹುದು ಎನ್ನಲಾಗಿದೆ.

ಪೊಲೀಸರ ಹತ್ಯಾಕಾಂಡದ ನಂತರ ವಿಕಾಸ್ ದುಬೆ ಕಾಣೆಯಾಗಿದ್ದಾನೆ.

ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಡಿರುವ ಈ ಪತ್ರದ ವಿವಾದ ಹಾಗೂ ಆಕ್ರೋಶದ ಮಧ್ಯೆ,  ಕಾನ್ಪುರದ ಪೊಲೀಸ್ ಮುಖ್ಯಸ್ಥ ಸೋಮವಾರ ರಾತ್ರಿ ಇದು ಪೊಲೀಸ್ ದಾಖಲೆಗಳಲ್ಲಿ ಕಂಡುಬಂದಿಲ್ಲ ಆದರೆ ಅದಕ್ಕಾಗಿ ಶೋಧ ನಡೆಯುತ್ತಿದೆ ಎಂದು ಹೇಳಿದ್ದಾರೆ.

ವಿಕಾಸ್ ದುಬೆ ಮತ್ತು ಅವರ ಜನರು ಹೊಂಚುಹಾಕಿ ಗುಂಡಿಕ್ಕಿ ಕೊಂದಿದ್ದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ದೇವೇಂದ್ರ ಕುಮಾರ್ ಮಿಶ್ರಾ ಅವರು ಮೂರು ತಿಂಗಳ ಹಿಂದೆ ಆಗಿನ ಕಾನ್ಪುರದ ಪೊಲೀಸ್ ಮುಖ್ಯಸ್ಥ ಅನಂತ್ ಡಿಯೋ ತಿವಾರಿ ಅವರಿಗೆ ‘ಈ ಪತ್ರವನ್ನು ಬರೆದಿದ್ದಾರೆ’ ಎಂದು ಹೇಳಲಾಗಿದೆ.

ದರೋಡೆಕೋರರಿಗೆ ಪೊಲೀಸರು ಸಹಾಯ ಮಾಡುವ ಬಗ್ಗೆ ಮತ್ತು ವಿಶೇಷವಾಗಿ ಈಗಾಗಲೇ ಅಮಾನತುಗೊಂಡಿರುವ ಚೌಬೆಪುರ ಪೊಲೀಸ್ ಠಾಣೆಯ ಉಸ್ತುವಾರಿ ಪೊಲೀಸ್ ಅಧಿಕಾರಿ ವಿನಯ್ ತಿವಾರಿ ಬಗ್ಗೆ ಅಧಿಕಾರಿ ಅದರಲ್ಲಿ  ದೂರು ನೀಡಿದ್ದರು ಎಂದು ಹೇಳಲಾಗುತ್ತಿದೆ.

ವಿನಯ್ ತಿವಾರಿ ಅವರು ಅಪರಾಧಿಗೆ ಸಹಾಯ ಮಾಡಿ, ಪೊಲೀಸರ ತನಿಖೆಯಿಂದ ಅವರನ್ನು ರಕ್ಷಿಸಿದ್ದಾರೆ ಎಂದು ಮಿಶ್ರಾ ಆರೋಪಿಸಿದ್ದಾರೆ. ಆ ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪತ್ರದಲ್ಲಿ ಕೋರಲಾಗಿದೆ.

“ಅಂತಹ ಪತ್ರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ ಎಂದು ನನಗೆ ತಿಳಿದಿದೆ. ಡಿಎಸ್ಪಿ ಕಚೇರಿ ಮತ್ತು ಕಾನ್ಪುರ ಎಸ್ಎಸ್ಪಿ (ಹಿರಿಯ ಪೊಲೀಸ್ ವರಿಷ್ಠಾಧಿಕಾರಿ) ರವಾನೆ ಮತ್ತು ಸ್ವೀಕರಿಸುವ ವಿಭಾಗಗಳಲ್ಲಿ ಪ್ರಾಥಮಿಕ ಶೋಧವನ್ನು ನಡೆಸಲಾಯಿತು. ಇಲ್ಲಿಯವರೆಗೆ ಈ ಪತ್ರದ ಯಾವುದೇ ದಾಖಲೆಗಳು ಸಿಗಲಿಲ್ಲ. ಆದರೆ ನಾವು ಅದರೊಂದಿಗೆ ಇನ್ನೂ ಹೆಚ್ಚಿನ ವಿವರಗಳನ್ನು ಹುಡುಕುತ್ತಿದ್ದೇವೆ. ಹೆಚ್ಚಿನ ವಿವರಗಳನ್ನು ಸಿಕ್ಕರೆ ಅದನ್ನು ಹಂಚಿಕೊಳ್ಳಲು ನಾವು ಹಿಂಜರಿಯುವುದಿಲ್ಲ” ಎಂದು ಕಾನ್ಪುರದ ಪೊಲೀಸ್ ಮುಖ್ಯಸ್ಥ ದಿನೇಶ್ ಕುಮಾರ್ ಪಿ ಹೇಳಿದ್ದಾರೆ.

ಕೊಲೆ ಪ್ರಕರಣದಲ್ಲಿ ವಿಕಾಸ್ ದುಬೆಯನ್ನು ಬಂಧಿಸುವ ಉದ್ದೇಶದಿಂದ ಮೂರು ಪೊಲೀಸ್ ಠಾಣೆಗಳಿಂದ 50 ಪೊಲೀಸರ ತಂಡವನ್ನು ಮಿಶ್ರಾ ಮುನ್ನಡೆಸಿದರು. ದುಬೆ ವಿರುದ್ಧ ಕೊಲೆ, ಅಪಹರಣ, ಸುಲಿಗೆ ಮತ್ತು ಗಲಭೆ ಸೇರಿದಂತೆ 60 ಪ್ರಕರಣಗಳು ದಾಖಲಾಗಿದೆ.

ಪೊಲೀಸರು ನಡೆಸುವ ದಾಳಿಯ ಬಗ್ಗೆ ದುಬೆಗೆ ಮಾಹಿತಿ ನೀಡಲಾಗಿತ್ತು. ಹಾಗಾಗಿ ಪೊಲೀಸರ ಮೇಲೆ ಹಲ್ಲೆ ನಡೆಸಲು ಸಶಸ್ತ್ರ ಗ್ಯಾಂಗ್‌ನೊಂದಿಗೆ ಅವರು ಸಿದ್ಧರಾಗಿದ್ದರು. ಈ ಅಪರಾಧಿಯೊಂದಿಗಿನ ಸಂಪರ್ಕದ ಅನುಮಾನದ ಮೇಲೆ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಪೊಲೀಸರ ಮಾರಣಹೋಮ ನಡೆದು ನಾಲ್ಕು ದಿನಗಳು ಕಳೆದರೂ ವಿಕಾಸ್ ದುಬೆಯನ್ನು ಉತ್ತರ ಪ್ರದೇಶದ ಪೊಲೀಸರು ಇನ್ನೂ ಬಂಧಿಸಿಲ್ಲ. ಸೋಮವಾರ ಅವರ ಮಾಹಿತಿ ನೀಡಿದವರ ಬಹುಮಾನವನ್ನು 2.5 ಲಕ್ಷ ರೂ.ಗೆ ಏರಿಸಲಾಯಿತು. ಇಲ್ಲಿಯವರೆಗೆ ದುಬೆ ಇಲ್ಲಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ನಿನ್ನೆ ಸಂಜೆ ಕಾನ್ಪುರ ಪೊಲೀಸ್ ಪತ್ರಿಕಾ ಪ್ರಕಟಣೆಯಲ್ಲಿ ಇನ್ನೂ ಮೂರು ಬಂಧನಗಳಾಗಿರುವುದು ದೃಢಪಟ್ಟಿದೆ. ಅವರಲ್ಲಿ ಒಬ್ಬರು ದುಬೆಯ ನೆರೆಹೊರೆಯವರಾಗಿದ್ದು, ಇನ್ನೊಬ್ಬರು ದುಬೆಯ ಸಹಾಯಕ ಮತ್ತು ಮೂರನೇ ವ್ಯಕ್ತಿ ಮಹಿಳೆ ಎಂದು ತಿಳಿದುಬಂದಿದೆ.

ಅಮಾನತುಗೊಂಡ ಪೊಲೀಸರು ಅದೇ ಪೊಲೀಸ್ ಠಾಣೆ ಚೌಬೆಪುರದವರಾಗಿದ್ದು, ದುಬೆಯ ಜೊತೆಗೆ ನಿಯಮಿತ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪವಿದೆ. ಕಳೆದ ನಾಲ್ಕು ದಿನಗಳಲ್ಲಿ 100 ಕ್ಕೂ ಹೆಚ್ಚು ಪೊಲೀಸರ ಕರೆ ದಾಖಲೆಗಳನ್ನು ಸ್ಕ್ಯಾನ್ ಮಾಡಲಾಗಿದೆ.


ಇದನ್ನೂ ಓದಿ: ವಿಕಾಸ್ ದುಬೆಗೆ ‘ದಾಳಿಯ ಮಾಹಿತಿ ಸೋರಿಕೆ’: 3 ಕಾನ್ಪುರ ಪೊಲೀಸರ ಮೇಲೆ ಶಂಕೆ – ಅಮಾನತು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...