Homeಮುಖಪುಟಯುಪಿ ದಾಳಿಯಲ್ಲಿ ಕೊಲ್ಲಲ್ಪಟ್ಟ ಅಧಿಕಾರಿ ಬರೆದ ಪತ್ರ ವೈರಲ್; ನಮಗೆ ಸಿಕ್ಕಿಲ್ಲವೆಂದ ಪೊಲೀಸರು

ಯುಪಿ ದಾಳಿಯಲ್ಲಿ ಕೊಲ್ಲಲ್ಪಟ್ಟ ಅಧಿಕಾರಿ ಬರೆದ ಪತ್ರ ವೈರಲ್; ನಮಗೆ ಸಿಕ್ಕಿಲ್ಲವೆಂದ ಪೊಲೀಸರು

ಉನ್ನತ ಅಧಿಕಾರಿಯೊಬ್ಬರು ಪತ್ರದ ಬಗ್ಗೆ ಸಮಗ್ರ ವಿವರಣೆ ಕೇಳಿದ್ದು, ಅದನ್ನು ಪರಿಶೀಲಿಸಿದಲ್ಲಿ, ಪೊಲೀಸರು ಅಪರಾಧಿಗಳಿಗೆ ಸಹಾಯ ಮಾಡುತ್ತಿರುವುದಕ್ಕೆ ಪ್ರಖರ ಪುರಾವೆಗಳು ಸಿಗಬಹುದು ಎನ್ನಲಾಗಿದೆ

- Advertisement -
- Advertisement -

ಕುಖ್ಯಾತ ದರೋಡೆಕೋರ ವಿಕಾಸ್ ದುಬೆ ಮೇಲೆ ಶುಕ್ರವಾರ ವಿಫಲ ದಾಳಿ ನಡೆಸಿದ ಅಧಿಕಾರಿ ”ಪೊಲೀಸರ ಎಡೆಯಲ್ಲಿ ದುಬೆಯ ಮಾಹಿತಿದಾರ” ಇರುವ ಬಗ್ಗೆ ಬರೆದಿರುವ ಪತ್ರದ ಬಗ್ಗೆ ಉತ್ತರ ಪ್ರದೇಶ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಉನ್ನತ ಅಧಿಕಾರಿಯೊಬ್ಬರು ಪತ್ರದ ಬಗ್ಗೆ ಸಮಗ್ರ ವಿವರಣೆ ಕೇಳಿದ್ದು, ಅದನ್ನು ಪರಿಶೀಲಿಸಿದಲ್ಲಿ, ಪೊಲೀಸರು ಅಪರಾಧಿಗಳಿಗೆ ಸಹಾಯ ಮಾಡುತ್ತಿರುವುದಕ್ಕೆ ಪ್ರಖರ ಪುರಾವೆಗಳು ಸಿಗಬಹುದು ಎನ್ನಲಾಗಿದೆ.

ಪೊಲೀಸರ ಹತ್ಯಾಕಾಂಡದ ನಂತರ ವಿಕಾಸ್ ದುಬೆ ಕಾಣೆಯಾಗಿದ್ದಾನೆ.

ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಡಿರುವ ಈ ಪತ್ರದ ವಿವಾದ ಹಾಗೂ ಆಕ್ರೋಶದ ಮಧ್ಯೆ,  ಕಾನ್ಪುರದ ಪೊಲೀಸ್ ಮುಖ್ಯಸ್ಥ ಸೋಮವಾರ ರಾತ್ರಿ ಇದು ಪೊಲೀಸ್ ದಾಖಲೆಗಳಲ್ಲಿ ಕಂಡುಬಂದಿಲ್ಲ ಆದರೆ ಅದಕ್ಕಾಗಿ ಶೋಧ ನಡೆಯುತ್ತಿದೆ ಎಂದು ಹೇಳಿದ್ದಾರೆ.

ವಿಕಾಸ್ ದುಬೆ ಮತ್ತು ಅವರ ಜನರು ಹೊಂಚುಹಾಕಿ ಗುಂಡಿಕ್ಕಿ ಕೊಂದಿದ್ದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ದೇವೇಂದ್ರ ಕುಮಾರ್ ಮಿಶ್ರಾ ಅವರು ಮೂರು ತಿಂಗಳ ಹಿಂದೆ ಆಗಿನ ಕಾನ್ಪುರದ ಪೊಲೀಸ್ ಮುಖ್ಯಸ್ಥ ಅನಂತ್ ಡಿಯೋ ತಿವಾರಿ ಅವರಿಗೆ ‘ಈ ಪತ್ರವನ್ನು ಬರೆದಿದ್ದಾರೆ’ ಎಂದು ಹೇಳಲಾಗಿದೆ.

ದರೋಡೆಕೋರರಿಗೆ ಪೊಲೀಸರು ಸಹಾಯ ಮಾಡುವ ಬಗ್ಗೆ ಮತ್ತು ವಿಶೇಷವಾಗಿ ಈಗಾಗಲೇ ಅಮಾನತುಗೊಂಡಿರುವ ಚೌಬೆಪುರ ಪೊಲೀಸ್ ಠಾಣೆಯ ಉಸ್ತುವಾರಿ ಪೊಲೀಸ್ ಅಧಿಕಾರಿ ವಿನಯ್ ತಿವಾರಿ ಬಗ್ಗೆ ಅಧಿಕಾರಿ ಅದರಲ್ಲಿ  ದೂರು ನೀಡಿದ್ದರು ಎಂದು ಹೇಳಲಾಗುತ್ತಿದೆ.

ವಿನಯ್ ತಿವಾರಿ ಅವರು ಅಪರಾಧಿಗೆ ಸಹಾಯ ಮಾಡಿ, ಪೊಲೀಸರ ತನಿಖೆಯಿಂದ ಅವರನ್ನು ರಕ್ಷಿಸಿದ್ದಾರೆ ಎಂದು ಮಿಶ್ರಾ ಆರೋಪಿಸಿದ್ದಾರೆ. ಆ ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪತ್ರದಲ್ಲಿ ಕೋರಲಾಗಿದೆ.

“ಅಂತಹ ಪತ್ರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ ಎಂದು ನನಗೆ ತಿಳಿದಿದೆ. ಡಿಎಸ್ಪಿ ಕಚೇರಿ ಮತ್ತು ಕಾನ್ಪುರ ಎಸ್ಎಸ್ಪಿ (ಹಿರಿಯ ಪೊಲೀಸ್ ವರಿಷ್ಠಾಧಿಕಾರಿ) ರವಾನೆ ಮತ್ತು ಸ್ವೀಕರಿಸುವ ವಿಭಾಗಗಳಲ್ಲಿ ಪ್ರಾಥಮಿಕ ಶೋಧವನ್ನು ನಡೆಸಲಾಯಿತು. ಇಲ್ಲಿಯವರೆಗೆ ಈ ಪತ್ರದ ಯಾವುದೇ ದಾಖಲೆಗಳು ಸಿಗಲಿಲ್ಲ. ಆದರೆ ನಾವು ಅದರೊಂದಿಗೆ ಇನ್ನೂ ಹೆಚ್ಚಿನ ವಿವರಗಳನ್ನು ಹುಡುಕುತ್ತಿದ್ದೇವೆ. ಹೆಚ್ಚಿನ ವಿವರಗಳನ್ನು ಸಿಕ್ಕರೆ ಅದನ್ನು ಹಂಚಿಕೊಳ್ಳಲು ನಾವು ಹಿಂಜರಿಯುವುದಿಲ್ಲ” ಎಂದು ಕಾನ್ಪುರದ ಪೊಲೀಸ್ ಮುಖ್ಯಸ್ಥ ದಿನೇಶ್ ಕುಮಾರ್ ಪಿ ಹೇಳಿದ್ದಾರೆ.

ಕೊಲೆ ಪ್ರಕರಣದಲ್ಲಿ ವಿಕಾಸ್ ದುಬೆಯನ್ನು ಬಂಧಿಸುವ ಉದ್ದೇಶದಿಂದ ಮೂರು ಪೊಲೀಸ್ ಠಾಣೆಗಳಿಂದ 50 ಪೊಲೀಸರ ತಂಡವನ್ನು ಮಿಶ್ರಾ ಮುನ್ನಡೆಸಿದರು. ದುಬೆ ವಿರುದ್ಧ ಕೊಲೆ, ಅಪಹರಣ, ಸುಲಿಗೆ ಮತ್ತು ಗಲಭೆ ಸೇರಿದಂತೆ 60 ಪ್ರಕರಣಗಳು ದಾಖಲಾಗಿದೆ.

ಪೊಲೀಸರು ನಡೆಸುವ ದಾಳಿಯ ಬಗ್ಗೆ ದುಬೆಗೆ ಮಾಹಿತಿ ನೀಡಲಾಗಿತ್ತು. ಹಾಗಾಗಿ ಪೊಲೀಸರ ಮೇಲೆ ಹಲ್ಲೆ ನಡೆಸಲು ಸಶಸ್ತ್ರ ಗ್ಯಾಂಗ್‌ನೊಂದಿಗೆ ಅವರು ಸಿದ್ಧರಾಗಿದ್ದರು. ಈ ಅಪರಾಧಿಯೊಂದಿಗಿನ ಸಂಪರ್ಕದ ಅನುಮಾನದ ಮೇಲೆ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಪೊಲೀಸರ ಮಾರಣಹೋಮ ನಡೆದು ನಾಲ್ಕು ದಿನಗಳು ಕಳೆದರೂ ವಿಕಾಸ್ ದುಬೆಯನ್ನು ಉತ್ತರ ಪ್ರದೇಶದ ಪೊಲೀಸರು ಇನ್ನೂ ಬಂಧಿಸಿಲ್ಲ. ಸೋಮವಾರ ಅವರ ಮಾಹಿತಿ ನೀಡಿದವರ ಬಹುಮಾನವನ್ನು 2.5 ಲಕ್ಷ ರೂ.ಗೆ ಏರಿಸಲಾಯಿತು. ಇಲ್ಲಿಯವರೆಗೆ ದುಬೆ ಇಲ್ಲಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ನಿನ್ನೆ ಸಂಜೆ ಕಾನ್ಪುರ ಪೊಲೀಸ್ ಪತ್ರಿಕಾ ಪ್ರಕಟಣೆಯಲ್ಲಿ ಇನ್ನೂ ಮೂರು ಬಂಧನಗಳಾಗಿರುವುದು ದೃಢಪಟ್ಟಿದೆ. ಅವರಲ್ಲಿ ಒಬ್ಬರು ದುಬೆಯ ನೆರೆಹೊರೆಯವರಾಗಿದ್ದು, ಇನ್ನೊಬ್ಬರು ದುಬೆಯ ಸಹಾಯಕ ಮತ್ತು ಮೂರನೇ ವ್ಯಕ್ತಿ ಮಹಿಳೆ ಎಂದು ತಿಳಿದುಬಂದಿದೆ.

ಅಮಾನತುಗೊಂಡ ಪೊಲೀಸರು ಅದೇ ಪೊಲೀಸ್ ಠಾಣೆ ಚೌಬೆಪುರದವರಾಗಿದ್ದು, ದುಬೆಯ ಜೊತೆಗೆ ನಿಯಮಿತ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪವಿದೆ. ಕಳೆದ ನಾಲ್ಕು ದಿನಗಳಲ್ಲಿ 100 ಕ್ಕೂ ಹೆಚ್ಚು ಪೊಲೀಸರ ಕರೆ ದಾಖಲೆಗಳನ್ನು ಸ್ಕ್ಯಾನ್ ಮಾಡಲಾಗಿದೆ.


ಇದನ್ನೂ ಓದಿ: ವಿಕಾಸ್ ದುಬೆಗೆ ‘ದಾಳಿಯ ಮಾಹಿತಿ ಸೋರಿಕೆ’: 3 ಕಾನ್ಪುರ ಪೊಲೀಸರ ಮೇಲೆ ಶಂಕೆ – ಅಮಾನತು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...