Homeಮುಖಪುಟಯುಪಿ ದಾಳಿಯಲ್ಲಿ ಕೊಲ್ಲಲ್ಪಟ್ಟ ಅಧಿಕಾರಿ ಬರೆದ ಪತ್ರ ವೈರಲ್; ನಮಗೆ ಸಿಕ್ಕಿಲ್ಲವೆಂದ ಪೊಲೀಸರು

ಯುಪಿ ದಾಳಿಯಲ್ಲಿ ಕೊಲ್ಲಲ್ಪಟ್ಟ ಅಧಿಕಾರಿ ಬರೆದ ಪತ್ರ ವೈರಲ್; ನಮಗೆ ಸಿಕ್ಕಿಲ್ಲವೆಂದ ಪೊಲೀಸರು

ಉನ್ನತ ಅಧಿಕಾರಿಯೊಬ್ಬರು ಪತ್ರದ ಬಗ್ಗೆ ಸಮಗ್ರ ವಿವರಣೆ ಕೇಳಿದ್ದು, ಅದನ್ನು ಪರಿಶೀಲಿಸಿದಲ್ಲಿ, ಪೊಲೀಸರು ಅಪರಾಧಿಗಳಿಗೆ ಸಹಾಯ ಮಾಡುತ್ತಿರುವುದಕ್ಕೆ ಪ್ರಖರ ಪುರಾವೆಗಳು ಸಿಗಬಹುದು ಎನ್ನಲಾಗಿದೆ

- Advertisement -
- Advertisement -

ಕುಖ್ಯಾತ ದರೋಡೆಕೋರ ವಿಕಾಸ್ ದುಬೆ ಮೇಲೆ ಶುಕ್ರವಾರ ವಿಫಲ ದಾಳಿ ನಡೆಸಿದ ಅಧಿಕಾರಿ ”ಪೊಲೀಸರ ಎಡೆಯಲ್ಲಿ ದುಬೆಯ ಮಾಹಿತಿದಾರ” ಇರುವ ಬಗ್ಗೆ ಬರೆದಿರುವ ಪತ್ರದ ಬಗ್ಗೆ ಉತ್ತರ ಪ್ರದೇಶ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಉನ್ನತ ಅಧಿಕಾರಿಯೊಬ್ಬರು ಪತ್ರದ ಬಗ್ಗೆ ಸಮಗ್ರ ವಿವರಣೆ ಕೇಳಿದ್ದು, ಅದನ್ನು ಪರಿಶೀಲಿಸಿದಲ್ಲಿ, ಪೊಲೀಸರು ಅಪರಾಧಿಗಳಿಗೆ ಸಹಾಯ ಮಾಡುತ್ತಿರುವುದಕ್ಕೆ ಪ್ರಖರ ಪುರಾವೆಗಳು ಸಿಗಬಹುದು ಎನ್ನಲಾಗಿದೆ.

ಪೊಲೀಸರ ಹತ್ಯಾಕಾಂಡದ ನಂತರ ವಿಕಾಸ್ ದುಬೆ ಕಾಣೆಯಾಗಿದ್ದಾನೆ.

ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಡಿರುವ ಈ ಪತ್ರದ ವಿವಾದ ಹಾಗೂ ಆಕ್ರೋಶದ ಮಧ್ಯೆ,  ಕಾನ್ಪುರದ ಪೊಲೀಸ್ ಮುಖ್ಯಸ್ಥ ಸೋಮವಾರ ರಾತ್ರಿ ಇದು ಪೊಲೀಸ್ ದಾಖಲೆಗಳಲ್ಲಿ ಕಂಡುಬಂದಿಲ್ಲ ಆದರೆ ಅದಕ್ಕಾಗಿ ಶೋಧ ನಡೆಯುತ್ತಿದೆ ಎಂದು ಹೇಳಿದ್ದಾರೆ.

ವಿಕಾಸ್ ದುಬೆ ಮತ್ತು ಅವರ ಜನರು ಹೊಂಚುಹಾಕಿ ಗುಂಡಿಕ್ಕಿ ಕೊಂದಿದ್ದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ದೇವೇಂದ್ರ ಕುಮಾರ್ ಮಿಶ್ರಾ ಅವರು ಮೂರು ತಿಂಗಳ ಹಿಂದೆ ಆಗಿನ ಕಾನ್ಪುರದ ಪೊಲೀಸ್ ಮುಖ್ಯಸ್ಥ ಅನಂತ್ ಡಿಯೋ ತಿವಾರಿ ಅವರಿಗೆ ‘ಈ ಪತ್ರವನ್ನು ಬರೆದಿದ್ದಾರೆ’ ಎಂದು ಹೇಳಲಾಗಿದೆ.

ದರೋಡೆಕೋರರಿಗೆ ಪೊಲೀಸರು ಸಹಾಯ ಮಾಡುವ ಬಗ್ಗೆ ಮತ್ತು ವಿಶೇಷವಾಗಿ ಈಗಾಗಲೇ ಅಮಾನತುಗೊಂಡಿರುವ ಚೌಬೆಪುರ ಪೊಲೀಸ್ ಠಾಣೆಯ ಉಸ್ತುವಾರಿ ಪೊಲೀಸ್ ಅಧಿಕಾರಿ ವಿನಯ್ ತಿವಾರಿ ಬಗ್ಗೆ ಅಧಿಕಾರಿ ಅದರಲ್ಲಿ  ದೂರು ನೀಡಿದ್ದರು ಎಂದು ಹೇಳಲಾಗುತ್ತಿದೆ.

ವಿನಯ್ ತಿವಾರಿ ಅವರು ಅಪರಾಧಿಗೆ ಸಹಾಯ ಮಾಡಿ, ಪೊಲೀಸರ ತನಿಖೆಯಿಂದ ಅವರನ್ನು ರಕ್ಷಿಸಿದ್ದಾರೆ ಎಂದು ಮಿಶ್ರಾ ಆರೋಪಿಸಿದ್ದಾರೆ. ಆ ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪತ್ರದಲ್ಲಿ ಕೋರಲಾಗಿದೆ.

“ಅಂತಹ ಪತ್ರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ ಎಂದು ನನಗೆ ತಿಳಿದಿದೆ. ಡಿಎಸ್ಪಿ ಕಚೇರಿ ಮತ್ತು ಕಾನ್ಪುರ ಎಸ್ಎಸ್ಪಿ (ಹಿರಿಯ ಪೊಲೀಸ್ ವರಿಷ್ಠಾಧಿಕಾರಿ) ರವಾನೆ ಮತ್ತು ಸ್ವೀಕರಿಸುವ ವಿಭಾಗಗಳಲ್ಲಿ ಪ್ರಾಥಮಿಕ ಶೋಧವನ್ನು ನಡೆಸಲಾಯಿತು. ಇಲ್ಲಿಯವರೆಗೆ ಈ ಪತ್ರದ ಯಾವುದೇ ದಾಖಲೆಗಳು ಸಿಗಲಿಲ್ಲ. ಆದರೆ ನಾವು ಅದರೊಂದಿಗೆ ಇನ್ನೂ ಹೆಚ್ಚಿನ ವಿವರಗಳನ್ನು ಹುಡುಕುತ್ತಿದ್ದೇವೆ. ಹೆಚ್ಚಿನ ವಿವರಗಳನ್ನು ಸಿಕ್ಕರೆ ಅದನ್ನು ಹಂಚಿಕೊಳ್ಳಲು ನಾವು ಹಿಂಜರಿಯುವುದಿಲ್ಲ” ಎಂದು ಕಾನ್ಪುರದ ಪೊಲೀಸ್ ಮುಖ್ಯಸ್ಥ ದಿನೇಶ್ ಕುಮಾರ್ ಪಿ ಹೇಳಿದ್ದಾರೆ.

ಕೊಲೆ ಪ್ರಕರಣದಲ್ಲಿ ವಿಕಾಸ್ ದುಬೆಯನ್ನು ಬಂಧಿಸುವ ಉದ್ದೇಶದಿಂದ ಮೂರು ಪೊಲೀಸ್ ಠಾಣೆಗಳಿಂದ 50 ಪೊಲೀಸರ ತಂಡವನ್ನು ಮಿಶ್ರಾ ಮುನ್ನಡೆಸಿದರು. ದುಬೆ ವಿರುದ್ಧ ಕೊಲೆ, ಅಪಹರಣ, ಸುಲಿಗೆ ಮತ್ತು ಗಲಭೆ ಸೇರಿದಂತೆ 60 ಪ್ರಕರಣಗಳು ದಾಖಲಾಗಿದೆ.

ಪೊಲೀಸರು ನಡೆಸುವ ದಾಳಿಯ ಬಗ್ಗೆ ದುಬೆಗೆ ಮಾಹಿತಿ ನೀಡಲಾಗಿತ್ತು. ಹಾಗಾಗಿ ಪೊಲೀಸರ ಮೇಲೆ ಹಲ್ಲೆ ನಡೆಸಲು ಸಶಸ್ತ್ರ ಗ್ಯಾಂಗ್‌ನೊಂದಿಗೆ ಅವರು ಸಿದ್ಧರಾಗಿದ್ದರು. ಈ ಅಪರಾಧಿಯೊಂದಿಗಿನ ಸಂಪರ್ಕದ ಅನುಮಾನದ ಮೇಲೆ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಪೊಲೀಸರ ಮಾರಣಹೋಮ ನಡೆದು ನಾಲ್ಕು ದಿನಗಳು ಕಳೆದರೂ ವಿಕಾಸ್ ದುಬೆಯನ್ನು ಉತ್ತರ ಪ್ರದೇಶದ ಪೊಲೀಸರು ಇನ್ನೂ ಬಂಧಿಸಿಲ್ಲ. ಸೋಮವಾರ ಅವರ ಮಾಹಿತಿ ನೀಡಿದವರ ಬಹುಮಾನವನ್ನು 2.5 ಲಕ್ಷ ರೂ.ಗೆ ಏರಿಸಲಾಯಿತು. ಇಲ್ಲಿಯವರೆಗೆ ದುಬೆ ಇಲ್ಲಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ನಿನ್ನೆ ಸಂಜೆ ಕಾನ್ಪುರ ಪೊಲೀಸ್ ಪತ್ರಿಕಾ ಪ್ರಕಟಣೆಯಲ್ಲಿ ಇನ್ನೂ ಮೂರು ಬಂಧನಗಳಾಗಿರುವುದು ದೃಢಪಟ್ಟಿದೆ. ಅವರಲ್ಲಿ ಒಬ್ಬರು ದುಬೆಯ ನೆರೆಹೊರೆಯವರಾಗಿದ್ದು, ಇನ್ನೊಬ್ಬರು ದುಬೆಯ ಸಹಾಯಕ ಮತ್ತು ಮೂರನೇ ವ್ಯಕ್ತಿ ಮಹಿಳೆ ಎಂದು ತಿಳಿದುಬಂದಿದೆ.

ಅಮಾನತುಗೊಂಡ ಪೊಲೀಸರು ಅದೇ ಪೊಲೀಸ್ ಠಾಣೆ ಚೌಬೆಪುರದವರಾಗಿದ್ದು, ದುಬೆಯ ಜೊತೆಗೆ ನಿಯಮಿತ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪವಿದೆ. ಕಳೆದ ನಾಲ್ಕು ದಿನಗಳಲ್ಲಿ 100 ಕ್ಕೂ ಹೆಚ್ಚು ಪೊಲೀಸರ ಕರೆ ದಾಖಲೆಗಳನ್ನು ಸ್ಕ್ಯಾನ್ ಮಾಡಲಾಗಿದೆ.


ಇದನ್ನೂ ಓದಿ: ವಿಕಾಸ್ ದುಬೆಗೆ ‘ದಾಳಿಯ ಮಾಹಿತಿ ಸೋರಿಕೆ’: 3 ಕಾನ್ಪುರ ಪೊಲೀಸರ ಮೇಲೆ ಶಂಕೆ – ಅಮಾನತು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...