Homeಮುಖಪುಟಯುಪಿ ದಾಳಿಯಲ್ಲಿ ಕೊಲ್ಲಲ್ಪಟ್ಟ ಅಧಿಕಾರಿ ಬರೆದ ಪತ್ರ ವೈರಲ್; ನಮಗೆ ಸಿಕ್ಕಿಲ್ಲವೆಂದ ಪೊಲೀಸರು

ಯುಪಿ ದಾಳಿಯಲ್ಲಿ ಕೊಲ್ಲಲ್ಪಟ್ಟ ಅಧಿಕಾರಿ ಬರೆದ ಪತ್ರ ವೈರಲ್; ನಮಗೆ ಸಿಕ್ಕಿಲ್ಲವೆಂದ ಪೊಲೀಸರು

ಉನ್ನತ ಅಧಿಕಾರಿಯೊಬ್ಬರು ಪತ್ರದ ಬಗ್ಗೆ ಸಮಗ್ರ ವಿವರಣೆ ಕೇಳಿದ್ದು, ಅದನ್ನು ಪರಿಶೀಲಿಸಿದಲ್ಲಿ, ಪೊಲೀಸರು ಅಪರಾಧಿಗಳಿಗೆ ಸಹಾಯ ಮಾಡುತ್ತಿರುವುದಕ್ಕೆ ಪ್ರಖರ ಪುರಾವೆಗಳು ಸಿಗಬಹುದು ಎನ್ನಲಾಗಿದೆ

- Advertisement -
- Advertisement -

ಕುಖ್ಯಾತ ದರೋಡೆಕೋರ ವಿಕಾಸ್ ದುಬೆ ಮೇಲೆ ಶುಕ್ರವಾರ ವಿಫಲ ದಾಳಿ ನಡೆಸಿದ ಅಧಿಕಾರಿ ”ಪೊಲೀಸರ ಎಡೆಯಲ್ಲಿ ದುಬೆಯ ಮಾಹಿತಿದಾರ” ಇರುವ ಬಗ್ಗೆ ಬರೆದಿರುವ ಪತ್ರದ ಬಗ್ಗೆ ಉತ್ತರ ಪ್ರದೇಶ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಉನ್ನತ ಅಧಿಕಾರಿಯೊಬ್ಬರು ಪತ್ರದ ಬಗ್ಗೆ ಸಮಗ್ರ ವಿವರಣೆ ಕೇಳಿದ್ದು, ಅದನ್ನು ಪರಿಶೀಲಿಸಿದಲ್ಲಿ, ಪೊಲೀಸರು ಅಪರಾಧಿಗಳಿಗೆ ಸಹಾಯ ಮಾಡುತ್ತಿರುವುದಕ್ಕೆ ಪ್ರಖರ ಪುರಾವೆಗಳು ಸಿಗಬಹುದು ಎನ್ನಲಾಗಿದೆ.

ಪೊಲೀಸರ ಹತ್ಯಾಕಾಂಡದ ನಂತರ ವಿಕಾಸ್ ದುಬೆ ಕಾಣೆಯಾಗಿದ್ದಾನೆ.

ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಡಿರುವ ಈ ಪತ್ರದ ವಿವಾದ ಹಾಗೂ ಆಕ್ರೋಶದ ಮಧ್ಯೆ,  ಕಾನ್ಪುರದ ಪೊಲೀಸ್ ಮುಖ್ಯಸ್ಥ ಸೋಮವಾರ ರಾತ್ರಿ ಇದು ಪೊಲೀಸ್ ದಾಖಲೆಗಳಲ್ಲಿ ಕಂಡುಬಂದಿಲ್ಲ ಆದರೆ ಅದಕ್ಕಾಗಿ ಶೋಧ ನಡೆಯುತ್ತಿದೆ ಎಂದು ಹೇಳಿದ್ದಾರೆ.

ವಿಕಾಸ್ ದುಬೆ ಮತ್ತು ಅವರ ಜನರು ಹೊಂಚುಹಾಕಿ ಗುಂಡಿಕ್ಕಿ ಕೊಂದಿದ್ದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ದೇವೇಂದ್ರ ಕುಮಾರ್ ಮಿಶ್ರಾ ಅವರು ಮೂರು ತಿಂಗಳ ಹಿಂದೆ ಆಗಿನ ಕಾನ್ಪುರದ ಪೊಲೀಸ್ ಮುಖ್ಯಸ್ಥ ಅನಂತ್ ಡಿಯೋ ತಿವಾರಿ ಅವರಿಗೆ ‘ಈ ಪತ್ರವನ್ನು ಬರೆದಿದ್ದಾರೆ’ ಎಂದು ಹೇಳಲಾಗಿದೆ.

ದರೋಡೆಕೋರರಿಗೆ ಪೊಲೀಸರು ಸಹಾಯ ಮಾಡುವ ಬಗ್ಗೆ ಮತ್ತು ವಿಶೇಷವಾಗಿ ಈಗಾಗಲೇ ಅಮಾನತುಗೊಂಡಿರುವ ಚೌಬೆಪುರ ಪೊಲೀಸ್ ಠಾಣೆಯ ಉಸ್ತುವಾರಿ ಪೊಲೀಸ್ ಅಧಿಕಾರಿ ವಿನಯ್ ತಿವಾರಿ ಬಗ್ಗೆ ಅಧಿಕಾರಿ ಅದರಲ್ಲಿ  ದೂರು ನೀಡಿದ್ದರು ಎಂದು ಹೇಳಲಾಗುತ್ತಿದೆ.

ವಿನಯ್ ತಿವಾರಿ ಅವರು ಅಪರಾಧಿಗೆ ಸಹಾಯ ಮಾಡಿ, ಪೊಲೀಸರ ತನಿಖೆಯಿಂದ ಅವರನ್ನು ರಕ್ಷಿಸಿದ್ದಾರೆ ಎಂದು ಮಿಶ್ರಾ ಆರೋಪಿಸಿದ್ದಾರೆ. ಆ ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪತ್ರದಲ್ಲಿ ಕೋರಲಾಗಿದೆ.

“ಅಂತಹ ಪತ್ರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ ಎಂದು ನನಗೆ ತಿಳಿದಿದೆ. ಡಿಎಸ್ಪಿ ಕಚೇರಿ ಮತ್ತು ಕಾನ್ಪುರ ಎಸ್ಎಸ್ಪಿ (ಹಿರಿಯ ಪೊಲೀಸ್ ವರಿಷ್ಠಾಧಿಕಾರಿ) ರವಾನೆ ಮತ್ತು ಸ್ವೀಕರಿಸುವ ವಿಭಾಗಗಳಲ್ಲಿ ಪ್ರಾಥಮಿಕ ಶೋಧವನ್ನು ನಡೆಸಲಾಯಿತು. ಇಲ್ಲಿಯವರೆಗೆ ಈ ಪತ್ರದ ಯಾವುದೇ ದಾಖಲೆಗಳು ಸಿಗಲಿಲ್ಲ. ಆದರೆ ನಾವು ಅದರೊಂದಿಗೆ ಇನ್ನೂ ಹೆಚ್ಚಿನ ವಿವರಗಳನ್ನು ಹುಡುಕುತ್ತಿದ್ದೇವೆ. ಹೆಚ್ಚಿನ ವಿವರಗಳನ್ನು ಸಿಕ್ಕರೆ ಅದನ್ನು ಹಂಚಿಕೊಳ್ಳಲು ನಾವು ಹಿಂಜರಿಯುವುದಿಲ್ಲ” ಎಂದು ಕಾನ್ಪುರದ ಪೊಲೀಸ್ ಮುಖ್ಯಸ್ಥ ದಿನೇಶ್ ಕುಮಾರ್ ಪಿ ಹೇಳಿದ್ದಾರೆ.

ಕೊಲೆ ಪ್ರಕರಣದಲ್ಲಿ ವಿಕಾಸ್ ದುಬೆಯನ್ನು ಬಂಧಿಸುವ ಉದ್ದೇಶದಿಂದ ಮೂರು ಪೊಲೀಸ್ ಠಾಣೆಗಳಿಂದ 50 ಪೊಲೀಸರ ತಂಡವನ್ನು ಮಿಶ್ರಾ ಮುನ್ನಡೆಸಿದರು. ದುಬೆ ವಿರುದ್ಧ ಕೊಲೆ, ಅಪಹರಣ, ಸುಲಿಗೆ ಮತ್ತು ಗಲಭೆ ಸೇರಿದಂತೆ 60 ಪ್ರಕರಣಗಳು ದಾಖಲಾಗಿದೆ.

ಪೊಲೀಸರು ನಡೆಸುವ ದಾಳಿಯ ಬಗ್ಗೆ ದುಬೆಗೆ ಮಾಹಿತಿ ನೀಡಲಾಗಿತ್ತು. ಹಾಗಾಗಿ ಪೊಲೀಸರ ಮೇಲೆ ಹಲ್ಲೆ ನಡೆಸಲು ಸಶಸ್ತ್ರ ಗ್ಯಾಂಗ್‌ನೊಂದಿಗೆ ಅವರು ಸಿದ್ಧರಾಗಿದ್ದರು. ಈ ಅಪರಾಧಿಯೊಂದಿಗಿನ ಸಂಪರ್ಕದ ಅನುಮಾನದ ಮೇಲೆ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಪೊಲೀಸರ ಮಾರಣಹೋಮ ನಡೆದು ನಾಲ್ಕು ದಿನಗಳು ಕಳೆದರೂ ವಿಕಾಸ್ ದುಬೆಯನ್ನು ಉತ್ತರ ಪ್ರದೇಶದ ಪೊಲೀಸರು ಇನ್ನೂ ಬಂಧಿಸಿಲ್ಲ. ಸೋಮವಾರ ಅವರ ಮಾಹಿತಿ ನೀಡಿದವರ ಬಹುಮಾನವನ್ನು 2.5 ಲಕ್ಷ ರೂ.ಗೆ ಏರಿಸಲಾಯಿತು. ಇಲ್ಲಿಯವರೆಗೆ ದುಬೆ ಇಲ್ಲಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ನಿನ್ನೆ ಸಂಜೆ ಕಾನ್ಪುರ ಪೊಲೀಸ್ ಪತ್ರಿಕಾ ಪ್ರಕಟಣೆಯಲ್ಲಿ ಇನ್ನೂ ಮೂರು ಬಂಧನಗಳಾಗಿರುವುದು ದೃಢಪಟ್ಟಿದೆ. ಅವರಲ್ಲಿ ಒಬ್ಬರು ದುಬೆಯ ನೆರೆಹೊರೆಯವರಾಗಿದ್ದು, ಇನ್ನೊಬ್ಬರು ದುಬೆಯ ಸಹಾಯಕ ಮತ್ತು ಮೂರನೇ ವ್ಯಕ್ತಿ ಮಹಿಳೆ ಎಂದು ತಿಳಿದುಬಂದಿದೆ.

ಅಮಾನತುಗೊಂಡ ಪೊಲೀಸರು ಅದೇ ಪೊಲೀಸ್ ಠಾಣೆ ಚೌಬೆಪುರದವರಾಗಿದ್ದು, ದುಬೆಯ ಜೊತೆಗೆ ನಿಯಮಿತ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪವಿದೆ. ಕಳೆದ ನಾಲ್ಕು ದಿನಗಳಲ್ಲಿ 100 ಕ್ಕೂ ಹೆಚ್ಚು ಪೊಲೀಸರ ಕರೆ ದಾಖಲೆಗಳನ್ನು ಸ್ಕ್ಯಾನ್ ಮಾಡಲಾಗಿದೆ.


ಇದನ್ನೂ ಓದಿ: ವಿಕಾಸ್ ದುಬೆಗೆ ‘ದಾಳಿಯ ಮಾಹಿತಿ ಸೋರಿಕೆ’: 3 ಕಾನ್ಪುರ ಪೊಲೀಸರ ಮೇಲೆ ಶಂಕೆ – ಅಮಾನತು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....