Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ‘ಹಿಂದುತ್ವದ ಟೆರರಿಸ್ಟ್‌‌ಗಳು ಮುಸ್ಲಿಂ ವ್ಯಕ್ತಿಯನ್ನು ಕೊಲ್ಲುತ್ತಿದ್ದಾರೆ’ ಎಂದು ಸುಳ್ಳು ಹರಡಲಾಗುತ್ತಿದೆ!

ಫ್ಯಾಕ್ಟ್‌ಚೆಕ್‌: ‘ಹಿಂದುತ್ವದ ಟೆರರಿಸ್ಟ್‌‌ಗಳು ಮುಸ್ಲಿಂ ವ್ಯಕ್ತಿಯನ್ನು ಕೊಲ್ಲುತ್ತಿದ್ದಾರೆ’ ಎಂದು ಸುಳ್ಳು ಹರಡಲಾಗುತ್ತಿದೆ!

- Advertisement -
- Advertisement -

‘‘ರಾಮನ ಹೆಸರಿನಲ್ಲಿ ಹಿಂದುತ್ವದ ಭಯೋತ್ಪಾದಕರು ಅಮಾಯಕ ಮುಸ್ಲಿಮರನ್ನು ಕೊಲ್ಲುತ್ತಿದ್ದಾರೆ’’ ಎಂಬ ಶೀರ್ಷಿಕೆಯಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮುಖ್ಯವಾಗಿ ಈ ವಿಡಿಯೊ ವಾಟ್ಸಪ್‌ನಲ್ಲಿ ಹರಿದಾಡುತ್ತಿದೆ. 11 ಸೆಕೆಂಡಿನ ವಿಡಿಯೊ ಭಯಾನಕವಾಗಿದ್ದು, ನೀಲಿ ಪ್ಯಾಂಟಿಗೆ ಬೆಲ್ಟ್‌ ಧರಿಸಿರುವ, ಅರೆ ಬೆತ್ತಲೆ ವ್ಯಕ್ತಿಯನ್ನು ಕೈ ಕಟ್ಟಿ ಹಾಕಿ, ಬಾಯಿಗೆ ಬಟ್ಟೆಯನ್ನು ತುರುಕಲಾಗಿದೆ. ಜೊತೆಗೆ ವಿಡಿಯೊದಲ್ಲಿರುವ ವ್ಯಕ್ತಿಗೆ ‘ಜೈ ಶ್ರೀರಾಮ್ ಹೇಳು’ ಎಂದು ಒತ್ತಾಯಿಸುತ್ತಾ ಹರಿತವಾದ ಕತ್ತಿಯಿಂದ ಕುತ್ತಿಗೆಯನ್ನು ಕೊಯ್ಯಲಾಗುತ್ತದೆ. ರಕ್ತಸಿಕ್ತವಾದ ವಿಡಿಯೊ ನೋಡಲಾರದಷ್ಟು ಭಯಾನಕವಾಗಿದೆ.

ಮುಖ್ಯವಾಗಿ ಈ ವಿಡಿಯೊ ವಾಟ್ಸಪ್‌ ಗ್ರೂಪ್‌ಗಳಲ್ಲಿ ಹರಿದಾಡುತ್ತಿದೆ. ಇದರ ಜೊತೆಗೆ ಫೇಸ್‌ಬುಕ್‌ನಲ್ಲಿ ಕೂಡಾ ಹರಿದಾಡುತ್ತಿದೆ. ಅದನ್ನು ಇಲ್ಲಿ ನೋಡಬಹುದು.(ಎಚ್ಚರಿಕೆ: ವಿಡಿಯೊ ನೋಡಬಾರದಷ್ಟು ಭಯಾನಕವಾಗಿದೆ). ವೈರಲ್‌ ಸಂದೇಶವೂ, “ರಾಮನ ಹೆಸರಲ್ಲಿ ಹಿಂದುತ್ವದ ಟೆರರಿಸ್ಟ್ ಗಳು ಅಮಾಯಕ ಮುಸಲ್ಮಾನರನ್ನು ಕೊಲ್ಲುತ್ತಿರೋದು ನೋಡಿ. Hinduthva people killing Muslims in name of lord rama in India” ಎಂದು ಪ್ರತಿಪಾದಿಸಿ ವೈರಲ್‌ ಆಗಿದೆ.

ಪ್ಯಾಕ್ಟ್‌‌ಚೆಕ್‌

ಹರಿದಾಡುತ್ತಿರುವ ವಿಡಿಯೊ ಭಯಾನಕವಾಗಿದ್ದು, ಅರೆ ಬೆತ್ತಲೆಯಾಗಿರುವ, ಬಾಯಿಗೆ ಬಟ್ಟೆ ತುರುಕಲ್ಪಟ್ಟ, ನೀಲಿ ಬಣ್ಣದ ಪ್ಯಾಂಟ್‌ಗೆ ಬೆಲ್ಟ್‌ ಧರಿಸಿರುವ ಯುವಕನ್ನು ಕುತ್ತಿಗೆಯನ್ನು ಕೊಯ್ಯಲಾಗುತ್ತದೆ. ದೃಶ್ಯವಂತೂ ಅಮಾನವೀಯವಾಗಿದ್ದು, ನೋಡಲು ಸಾಧ್ಯವಿಲ್ಲದಂತಿದೆ. ಈ ಚಿತ್ರವನ್ನೂ ನಾವು ರಿವರ್ಸ್ ಸರ್ಚ್ ಮಾಡಿದ್ದೇವೆ. ಈ ವೇಳೆ ನಮಗೆ ಆಸ್ಟ್ರೇಲಿಯಾದ ಸುದ್ದಿ ವೆಬ್‌‌ ಪೋರ್ಟಲ್‌ ಆಗಿರುವ news.com.auನಲ್ಲಿ 2018ರ ಫೆಬ್ರವರಿ ತಿಂಗಳ 6 ರಂದು ಮಾಡಿರುವ ಸುದ್ದಿ ದೊರೆತಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌‌: ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿನಿಯರ ಪದವಿ ರದ್ದು ಮಾಡಲಾಗಿದೆಯೇ?

ವರದಿ ಪ್ರಕಾರ, “ಈ ಘಟನೆಯು ದಕ್ಷಿಣ ಅಮೆರಿಕಾದ ದೇಶವಾದ ವೆನೆಜುವೆಲಾದಲ್ಲಿ ನಡೆದಿದೆ. ವಿಡಿಯೋದಲ್ಲಿ, ಹದಿಹರೆಯದ ಬಾಲಕನನ್ನು ಮಾದಕ ದ್ರವ್ಯ ಮಾಫಿಯಾವು ಕತ್ತು ಕೊಯ್ದು ಕೊಂದಿದೆ. ಬಾಲಕನು ಮಾದಕ ದ್ರವ್ಯ ಮಾಫಿಯಾದ ವಿರೋಧಿ ಗುಂಪಿನವನಾಗಿದ್ದರಿಂದ, ಆತನನ್ನು ಅಪಹರಿಸಿ ಅಜ್ಞಾತ ಸ್ಥಳದಲ್ಲಿ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಈ ವಿಡಿಯೊವನ್ನು ಆರೋಪಿ ಗುಂಪೇ ಚಿತ್ರೀಕರಿಸಿ, ದೃಶ್ಯಗಳನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡಿದೆ”.

ಈ ಘಟನೆಯನ್ನು ‘ಮೈಲ್‌ ಆನ್‌ಲೈನ್‌’ ಸುದ್ದಿ ಪೋರ್ಟಲ್‌ ಕೂಡಾ ವರದಿ ಮಾಡಿದೆ. ಈ ಪತ್ರಿಕೆಯ ವರದಿಯ ಪ್ರಕಾರ, ಬಾಲಕನು 13 ವರ್ಷದವನಾಗಿದ್ದು, ಆತನ ಕತ್ತನ್ನು ಕೊಯ್ಯುವ ಮೊದಲು ಕಿವಿಯನ್ನು ಕೂಡಾ ಕತ್ತರಿಸಲಾಗಿತ್ತು.

ಅಲ್ಲದೆ ಈ ಭಯಾನಕ ವಿಡಿಯೊಗೆ ವಾಯ್ಸ್‌ ಓವರ್‌ ಮೂಲಕ ‘ಜೈ ಶ್ರೀರಾಮ್ ಹೇಳು’ ಎಂದು ಎಡಿಟ್‌ ಮಾಡಿ ಹಾಕಲಾಗಿದೆ. ವಿಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದರೆ, ಜೈ ಶ್ರೀರಾಮ್ ಎಂದು ಹೇಳುತ್ತಾ ಹೊಡೆಯುವ ಶಬ್ದವನ್ನು ಕೇಳಬಹುದು. ಈ ವಾಯ್ಸ್‌ ಪ್ರಸ್ತುತ ವೈರಲ್‌ ವಿಡಿಯೊಗೆ ಹೊಂದಿಕೆ ಆಗುವುದಿಲ್ಲ.

ಇದೇ ರೀತಿಯ ವಿಡಿಯೊಗೆ ಮತ್ತೊಂದು ವಿಡಿಯೊವನ್ನು ಸೇರಿಸಿ, ‘ಕೇರಳದ ಮುಸ್ಲಿಮರು ಆರೆಸ್ಸೆಸ್‌ ಕಾರ್ಯಕರ್ತನ ಕತ್ತನ್ನು ಕೊಯ್ಯುತ್ತಿರುವ ದೃಶ್ಯ’ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಲಾಗಿದೆ. ಅದರ ಫ್ಯಾಕ್ಟ್‌ಚೆಕ್‌ ಸುದ್ದಿಯನ್ನು ಇಲ್ಲಿ ಓದಬಹುದು.

ಒಟ್ಟಿನಲ್ಲಿ ವೈರಲ್‌ ಆಗಿರುವ ವಿಡಿಯೊ ಭಾರತದ ದೇಶದ್ದೇ ಅಲ್ಲ. ಇದು 2018 ರ ಫೆಬ್ರವರಿ ತಿಂಗಳಲ್ಲಿ ದಕ್ಷಿಣ ಅಮೆರಿಕಾದ ವೆನೆಜುವಾಲದಲ್ಲಿ ನಡೆದಿದೆ. ಈ ವಿಡಿಯೊಗೂ, ಭಾರತಕ್ಕೂ, ಆರೆಸ್ಸೆಸ್‌ಗೂ ಯಾವುದೇ ಸಂಬಂಧವಿಲ್ಲ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...