Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ‘ಹಿಂದುತ್ವದ ಟೆರರಿಸ್ಟ್‌‌ಗಳು ಮುಸ್ಲಿಂ ವ್ಯಕ್ತಿಯನ್ನು ಕೊಲ್ಲುತ್ತಿದ್ದಾರೆ’ ಎಂದು ಸುಳ್ಳು ಹರಡಲಾಗುತ್ತಿದೆ!

ಫ್ಯಾಕ್ಟ್‌ಚೆಕ್‌: ‘ಹಿಂದುತ್ವದ ಟೆರರಿಸ್ಟ್‌‌ಗಳು ಮುಸ್ಲಿಂ ವ್ಯಕ್ತಿಯನ್ನು ಕೊಲ್ಲುತ್ತಿದ್ದಾರೆ’ ಎಂದು ಸುಳ್ಳು ಹರಡಲಾಗುತ್ತಿದೆ!

- Advertisement -
- Advertisement -

‘‘ರಾಮನ ಹೆಸರಿನಲ್ಲಿ ಹಿಂದುತ್ವದ ಭಯೋತ್ಪಾದಕರು ಅಮಾಯಕ ಮುಸ್ಲಿಮರನ್ನು ಕೊಲ್ಲುತ್ತಿದ್ದಾರೆ’’ ಎಂಬ ಶೀರ್ಷಿಕೆಯಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮುಖ್ಯವಾಗಿ ಈ ವಿಡಿಯೊ ವಾಟ್ಸಪ್‌ನಲ್ಲಿ ಹರಿದಾಡುತ್ತಿದೆ. 11 ಸೆಕೆಂಡಿನ ವಿಡಿಯೊ ಭಯಾನಕವಾಗಿದ್ದು, ನೀಲಿ ಪ್ಯಾಂಟಿಗೆ ಬೆಲ್ಟ್‌ ಧರಿಸಿರುವ, ಅರೆ ಬೆತ್ತಲೆ ವ್ಯಕ್ತಿಯನ್ನು ಕೈ ಕಟ್ಟಿ ಹಾಕಿ, ಬಾಯಿಗೆ ಬಟ್ಟೆಯನ್ನು ತುರುಕಲಾಗಿದೆ. ಜೊತೆಗೆ ವಿಡಿಯೊದಲ್ಲಿರುವ ವ್ಯಕ್ತಿಗೆ ‘ಜೈ ಶ್ರೀರಾಮ್ ಹೇಳು’ ಎಂದು ಒತ್ತಾಯಿಸುತ್ತಾ ಹರಿತವಾದ ಕತ್ತಿಯಿಂದ ಕುತ್ತಿಗೆಯನ್ನು ಕೊಯ್ಯಲಾಗುತ್ತದೆ. ರಕ್ತಸಿಕ್ತವಾದ ವಿಡಿಯೊ ನೋಡಲಾರದಷ್ಟು ಭಯಾನಕವಾಗಿದೆ.

ಮುಖ್ಯವಾಗಿ ಈ ವಿಡಿಯೊ ವಾಟ್ಸಪ್‌ ಗ್ರೂಪ್‌ಗಳಲ್ಲಿ ಹರಿದಾಡುತ್ತಿದೆ. ಇದರ ಜೊತೆಗೆ ಫೇಸ್‌ಬುಕ್‌ನಲ್ಲಿ ಕೂಡಾ ಹರಿದಾಡುತ್ತಿದೆ. ಅದನ್ನು ಇಲ್ಲಿ ನೋಡಬಹುದು.(ಎಚ್ಚರಿಕೆ: ವಿಡಿಯೊ ನೋಡಬಾರದಷ್ಟು ಭಯಾನಕವಾಗಿದೆ). ವೈರಲ್‌ ಸಂದೇಶವೂ, “ರಾಮನ ಹೆಸರಲ್ಲಿ ಹಿಂದುತ್ವದ ಟೆರರಿಸ್ಟ್ ಗಳು ಅಮಾಯಕ ಮುಸಲ್ಮಾನರನ್ನು ಕೊಲ್ಲುತ್ತಿರೋದು ನೋಡಿ. Hinduthva people killing Muslims in name of lord rama in India” ಎಂದು ಪ್ರತಿಪಾದಿಸಿ ವೈರಲ್‌ ಆಗಿದೆ.

ಪ್ಯಾಕ್ಟ್‌‌ಚೆಕ್‌

ಹರಿದಾಡುತ್ತಿರುವ ವಿಡಿಯೊ ಭಯಾನಕವಾಗಿದ್ದು, ಅರೆ ಬೆತ್ತಲೆಯಾಗಿರುವ, ಬಾಯಿಗೆ ಬಟ್ಟೆ ತುರುಕಲ್ಪಟ್ಟ, ನೀಲಿ ಬಣ್ಣದ ಪ್ಯಾಂಟ್‌ಗೆ ಬೆಲ್ಟ್‌ ಧರಿಸಿರುವ ಯುವಕನ್ನು ಕುತ್ತಿಗೆಯನ್ನು ಕೊಯ್ಯಲಾಗುತ್ತದೆ. ದೃಶ್ಯವಂತೂ ಅಮಾನವೀಯವಾಗಿದ್ದು, ನೋಡಲು ಸಾಧ್ಯವಿಲ್ಲದಂತಿದೆ. ಈ ಚಿತ್ರವನ್ನೂ ನಾವು ರಿವರ್ಸ್ ಸರ್ಚ್ ಮಾಡಿದ್ದೇವೆ. ಈ ವೇಳೆ ನಮಗೆ ಆಸ್ಟ್ರೇಲಿಯಾದ ಸುದ್ದಿ ವೆಬ್‌‌ ಪೋರ್ಟಲ್‌ ಆಗಿರುವ news.com.auನಲ್ಲಿ 2018ರ ಫೆಬ್ರವರಿ ತಿಂಗಳ 6 ರಂದು ಮಾಡಿರುವ ಸುದ್ದಿ ದೊರೆತಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌‌: ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿನಿಯರ ಪದವಿ ರದ್ದು ಮಾಡಲಾಗಿದೆಯೇ?

ವರದಿ ಪ್ರಕಾರ, “ಈ ಘಟನೆಯು ದಕ್ಷಿಣ ಅಮೆರಿಕಾದ ದೇಶವಾದ ವೆನೆಜುವೆಲಾದಲ್ಲಿ ನಡೆದಿದೆ. ವಿಡಿಯೋದಲ್ಲಿ, ಹದಿಹರೆಯದ ಬಾಲಕನನ್ನು ಮಾದಕ ದ್ರವ್ಯ ಮಾಫಿಯಾವು ಕತ್ತು ಕೊಯ್ದು ಕೊಂದಿದೆ. ಬಾಲಕನು ಮಾದಕ ದ್ರವ್ಯ ಮಾಫಿಯಾದ ವಿರೋಧಿ ಗುಂಪಿನವನಾಗಿದ್ದರಿಂದ, ಆತನನ್ನು ಅಪಹರಿಸಿ ಅಜ್ಞಾತ ಸ್ಥಳದಲ್ಲಿ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಈ ವಿಡಿಯೊವನ್ನು ಆರೋಪಿ ಗುಂಪೇ ಚಿತ್ರೀಕರಿಸಿ, ದೃಶ್ಯಗಳನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡಿದೆ”.

ಈ ಘಟನೆಯನ್ನು ‘ಮೈಲ್‌ ಆನ್‌ಲೈನ್‌’ ಸುದ್ದಿ ಪೋರ್ಟಲ್‌ ಕೂಡಾ ವರದಿ ಮಾಡಿದೆ. ಈ ಪತ್ರಿಕೆಯ ವರದಿಯ ಪ್ರಕಾರ, ಬಾಲಕನು 13 ವರ್ಷದವನಾಗಿದ್ದು, ಆತನ ಕತ್ತನ್ನು ಕೊಯ್ಯುವ ಮೊದಲು ಕಿವಿಯನ್ನು ಕೂಡಾ ಕತ್ತರಿಸಲಾಗಿತ್ತು.

ಅಲ್ಲದೆ ಈ ಭಯಾನಕ ವಿಡಿಯೊಗೆ ವಾಯ್ಸ್‌ ಓವರ್‌ ಮೂಲಕ ‘ಜೈ ಶ್ರೀರಾಮ್ ಹೇಳು’ ಎಂದು ಎಡಿಟ್‌ ಮಾಡಿ ಹಾಕಲಾಗಿದೆ. ವಿಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದರೆ, ಜೈ ಶ್ರೀರಾಮ್ ಎಂದು ಹೇಳುತ್ತಾ ಹೊಡೆಯುವ ಶಬ್ದವನ್ನು ಕೇಳಬಹುದು. ಈ ವಾಯ್ಸ್‌ ಪ್ರಸ್ತುತ ವೈರಲ್‌ ವಿಡಿಯೊಗೆ ಹೊಂದಿಕೆ ಆಗುವುದಿಲ್ಲ.

ಇದೇ ರೀತಿಯ ವಿಡಿಯೊಗೆ ಮತ್ತೊಂದು ವಿಡಿಯೊವನ್ನು ಸೇರಿಸಿ, ‘ಕೇರಳದ ಮುಸ್ಲಿಮರು ಆರೆಸ್ಸೆಸ್‌ ಕಾರ್ಯಕರ್ತನ ಕತ್ತನ್ನು ಕೊಯ್ಯುತ್ತಿರುವ ದೃಶ್ಯ’ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಲಾಗಿದೆ. ಅದರ ಫ್ಯಾಕ್ಟ್‌ಚೆಕ್‌ ಸುದ್ದಿಯನ್ನು ಇಲ್ಲಿ ಓದಬಹುದು.

ಒಟ್ಟಿನಲ್ಲಿ ವೈರಲ್‌ ಆಗಿರುವ ವಿಡಿಯೊ ಭಾರತದ ದೇಶದ್ದೇ ಅಲ್ಲ. ಇದು 2018 ರ ಫೆಬ್ರವರಿ ತಿಂಗಳಲ್ಲಿ ದಕ್ಷಿಣ ಅಮೆರಿಕಾದ ವೆನೆಜುವಾಲದಲ್ಲಿ ನಡೆದಿದೆ. ಈ ವಿಡಿಯೊಗೂ, ಭಾರತಕ್ಕೂ, ಆರೆಸ್ಸೆಸ್‌ಗೂ ಯಾವುದೇ ಸಂಬಂಧವಿಲ್ಲ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...