Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ‘ಹಿಂದುತ್ವದ ಟೆರರಿಸ್ಟ್‌‌ಗಳು ಮುಸ್ಲಿಂ ವ್ಯಕ್ತಿಯನ್ನು ಕೊಲ್ಲುತ್ತಿದ್ದಾರೆ’ ಎಂದು ಸುಳ್ಳು ಹರಡಲಾಗುತ್ತಿದೆ!

ಫ್ಯಾಕ್ಟ್‌ಚೆಕ್‌: ‘ಹಿಂದುತ್ವದ ಟೆರರಿಸ್ಟ್‌‌ಗಳು ಮುಸ್ಲಿಂ ವ್ಯಕ್ತಿಯನ್ನು ಕೊಲ್ಲುತ್ತಿದ್ದಾರೆ’ ಎಂದು ಸುಳ್ಳು ಹರಡಲಾಗುತ್ತಿದೆ!

- Advertisement -
- Advertisement -

‘‘ರಾಮನ ಹೆಸರಿನಲ್ಲಿ ಹಿಂದುತ್ವದ ಭಯೋತ್ಪಾದಕರು ಅಮಾಯಕ ಮುಸ್ಲಿಮರನ್ನು ಕೊಲ್ಲುತ್ತಿದ್ದಾರೆ’’ ಎಂಬ ಶೀರ್ಷಿಕೆಯಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮುಖ್ಯವಾಗಿ ಈ ವಿಡಿಯೊ ವಾಟ್ಸಪ್‌ನಲ್ಲಿ ಹರಿದಾಡುತ್ತಿದೆ. 11 ಸೆಕೆಂಡಿನ ವಿಡಿಯೊ ಭಯಾನಕವಾಗಿದ್ದು, ನೀಲಿ ಪ್ಯಾಂಟಿಗೆ ಬೆಲ್ಟ್‌ ಧರಿಸಿರುವ, ಅರೆ ಬೆತ್ತಲೆ ವ್ಯಕ್ತಿಯನ್ನು ಕೈ ಕಟ್ಟಿ ಹಾಕಿ, ಬಾಯಿಗೆ ಬಟ್ಟೆಯನ್ನು ತುರುಕಲಾಗಿದೆ. ಜೊತೆಗೆ ವಿಡಿಯೊದಲ್ಲಿರುವ ವ್ಯಕ್ತಿಗೆ ‘ಜೈ ಶ್ರೀರಾಮ್ ಹೇಳು’ ಎಂದು ಒತ್ತಾಯಿಸುತ್ತಾ ಹರಿತವಾದ ಕತ್ತಿಯಿಂದ ಕುತ್ತಿಗೆಯನ್ನು ಕೊಯ್ಯಲಾಗುತ್ತದೆ. ರಕ್ತಸಿಕ್ತವಾದ ವಿಡಿಯೊ ನೋಡಲಾರದಷ್ಟು ಭಯಾನಕವಾಗಿದೆ.

ಮುಖ್ಯವಾಗಿ ಈ ವಿಡಿಯೊ ವಾಟ್ಸಪ್‌ ಗ್ರೂಪ್‌ಗಳಲ್ಲಿ ಹರಿದಾಡುತ್ತಿದೆ. ಇದರ ಜೊತೆಗೆ ಫೇಸ್‌ಬುಕ್‌ನಲ್ಲಿ ಕೂಡಾ ಹರಿದಾಡುತ್ತಿದೆ. ಅದನ್ನು ಇಲ್ಲಿ ನೋಡಬಹುದು.(ಎಚ್ಚರಿಕೆ: ವಿಡಿಯೊ ನೋಡಬಾರದಷ್ಟು ಭಯಾನಕವಾಗಿದೆ). ವೈರಲ್‌ ಸಂದೇಶವೂ, “ರಾಮನ ಹೆಸರಲ್ಲಿ ಹಿಂದುತ್ವದ ಟೆರರಿಸ್ಟ್ ಗಳು ಅಮಾಯಕ ಮುಸಲ್ಮಾನರನ್ನು ಕೊಲ್ಲುತ್ತಿರೋದು ನೋಡಿ. Hinduthva people killing Muslims in name of lord rama in India” ಎಂದು ಪ್ರತಿಪಾದಿಸಿ ವೈರಲ್‌ ಆಗಿದೆ.

ಪ್ಯಾಕ್ಟ್‌‌ಚೆಕ್‌

ಹರಿದಾಡುತ್ತಿರುವ ವಿಡಿಯೊ ಭಯಾನಕವಾಗಿದ್ದು, ಅರೆ ಬೆತ್ತಲೆಯಾಗಿರುವ, ಬಾಯಿಗೆ ಬಟ್ಟೆ ತುರುಕಲ್ಪಟ್ಟ, ನೀಲಿ ಬಣ್ಣದ ಪ್ಯಾಂಟ್‌ಗೆ ಬೆಲ್ಟ್‌ ಧರಿಸಿರುವ ಯುವಕನ್ನು ಕುತ್ತಿಗೆಯನ್ನು ಕೊಯ್ಯಲಾಗುತ್ತದೆ. ದೃಶ್ಯವಂತೂ ಅಮಾನವೀಯವಾಗಿದ್ದು, ನೋಡಲು ಸಾಧ್ಯವಿಲ್ಲದಂತಿದೆ. ಈ ಚಿತ್ರವನ್ನೂ ನಾವು ರಿವರ್ಸ್ ಸರ್ಚ್ ಮಾಡಿದ್ದೇವೆ. ಈ ವೇಳೆ ನಮಗೆ ಆಸ್ಟ್ರೇಲಿಯಾದ ಸುದ್ದಿ ವೆಬ್‌‌ ಪೋರ್ಟಲ್‌ ಆಗಿರುವ news.com.auನಲ್ಲಿ 2018ರ ಫೆಬ್ರವರಿ ತಿಂಗಳ 6 ರಂದು ಮಾಡಿರುವ ಸುದ್ದಿ ದೊರೆತಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌‌: ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿನಿಯರ ಪದವಿ ರದ್ದು ಮಾಡಲಾಗಿದೆಯೇ?

ವರದಿ ಪ್ರಕಾರ, “ಈ ಘಟನೆಯು ದಕ್ಷಿಣ ಅಮೆರಿಕಾದ ದೇಶವಾದ ವೆನೆಜುವೆಲಾದಲ್ಲಿ ನಡೆದಿದೆ. ವಿಡಿಯೋದಲ್ಲಿ, ಹದಿಹರೆಯದ ಬಾಲಕನನ್ನು ಮಾದಕ ದ್ರವ್ಯ ಮಾಫಿಯಾವು ಕತ್ತು ಕೊಯ್ದು ಕೊಂದಿದೆ. ಬಾಲಕನು ಮಾದಕ ದ್ರವ್ಯ ಮಾಫಿಯಾದ ವಿರೋಧಿ ಗುಂಪಿನವನಾಗಿದ್ದರಿಂದ, ಆತನನ್ನು ಅಪಹರಿಸಿ ಅಜ್ಞಾತ ಸ್ಥಳದಲ್ಲಿ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಈ ವಿಡಿಯೊವನ್ನು ಆರೋಪಿ ಗುಂಪೇ ಚಿತ್ರೀಕರಿಸಿ, ದೃಶ್ಯಗಳನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡಿದೆ”.

ಈ ಘಟನೆಯನ್ನು ‘ಮೈಲ್‌ ಆನ್‌ಲೈನ್‌’ ಸುದ್ದಿ ಪೋರ್ಟಲ್‌ ಕೂಡಾ ವರದಿ ಮಾಡಿದೆ. ಈ ಪತ್ರಿಕೆಯ ವರದಿಯ ಪ್ರಕಾರ, ಬಾಲಕನು 13 ವರ್ಷದವನಾಗಿದ್ದು, ಆತನ ಕತ್ತನ್ನು ಕೊಯ್ಯುವ ಮೊದಲು ಕಿವಿಯನ್ನು ಕೂಡಾ ಕತ್ತರಿಸಲಾಗಿತ್ತು.

ಅಲ್ಲದೆ ಈ ಭಯಾನಕ ವಿಡಿಯೊಗೆ ವಾಯ್ಸ್‌ ಓವರ್‌ ಮೂಲಕ ‘ಜೈ ಶ್ರೀರಾಮ್ ಹೇಳು’ ಎಂದು ಎಡಿಟ್‌ ಮಾಡಿ ಹಾಕಲಾಗಿದೆ. ವಿಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದರೆ, ಜೈ ಶ್ರೀರಾಮ್ ಎಂದು ಹೇಳುತ್ತಾ ಹೊಡೆಯುವ ಶಬ್ದವನ್ನು ಕೇಳಬಹುದು. ಈ ವಾಯ್ಸ್‌ ಪ್ರಸ್ತುತ ವೈರಲ್‌ ವಿಡಿಯೊಗೆ ಹೊಂದಿಕೆ ಆಗುವುದಿಲ್ಲ.

ಇದೇ ರೀತಿಯ ವಿಡಿಯೊಗೆ ಮತ್ತೊಂದು ವಿಡಿಯೊವನ್ನು ಸೇರಿಸಿ, ‘ಕೇರಳದ ಮುಸ್ಲಿಮರು ಆರೆಸ್ಸೆಸ್‌ ಕಾರ್ಯಕರ್ತನ ಕತ್ತನ್ನು ಕೊಯ್ಯುತ್ತಿರುವ ದೃಶ್ಯ’ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಲಾಗಿದೆ. ಅದರ ಫ್ಯಾಕ್ಟ್‌ಚೆಕ್‌ ಸುದ್ದಿಯನ್ನು ಇಲ್ಲಿ ಓದಬಹುದು.

ಒಟ್ಟಿನಲ್ಲಿ ವೈರಲ್‌ ಆಗಿರುವ ವಿಡಿಯೊ ಭಾರತದ ದೇಶದ್ದೇ ಅಲ್ಲ. ಇದು 2018 ರ ಫೆಬ್ರವರಿ ತಿಂಗಳಲ್ಲಿ ದಕ್ಷಿಣ ಅಮೆರಿಕಾದ ವೆನೆಜುವಾಲದಲ್ಲಿ ನಡೆದಿದೆ. ಈ ವಿಡಿಯೊಗೂ, ಭಾರತಕ್ಕೂ, ಆರೆಸ್ಸೆಸ್‌ಗೂ ಯಾವುದೇ ಸಂಬಂಧವಿಲ್ಲ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...