Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ‘ಹಿಂದುತ್ವದ ಟೆರರಿಸ್ಟ್‌‌ಗಳು ಮುಸ್ಲಿಂ ವ್ಯಕ್ತಿಯನ್ನು ಕೊಲ್ಲುತ್ತಿದ್ದಾರೆ’ ಎಂದು ಸುಳ್ಳು ಹರಡಲಾಗುತ್ತಿದೆ!

ಫ್ಯಾಕ್ಟ್‌ಚೆಕ್‌: ‘ಹಿಂದುತ್ವದ ಟೆರರಿಸ್ಟ್‌‌ಗಳು ಮುಸ್ಲಿಂ ವ್ಯಕ್ತಿಯನ್ನು ಕೊಲ್ಲುತ್ತಿದ್ದಾರೆ’ ಎಂದು ಸುಳ್ಳು ಹರಡಲಾಗುತ್ತಿದೆ!

- Advertisement -
- Advertisement -

‘‘ರಾಮನ ಹೆಸರಿನಲ್ಲಿ ಹಿಂದುತ್ವದ ಭಯೋತ್ಪಾದಕರು ಅಮಾಯಕ ಮುಸ್ಲಿಮರನ್ನು ಕೊಲ್ಲುತ್ತಿದ್ದಾರೆ’’ ಎಂಬ ಶೀರ್ಷಿಕೆಯಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮುಖ್ಯವಾಗಿ ಈ ವಿಡಿಯೊ ವಾಟ್ಸಪ್‌ನಲ್ಲಿ ಹರಿದಾಡುತ್ತಿದೆ. 11 ಸೆಕೆಂಡಿನ ವಿಡಿಯೊ ಭಯಾನಕವಾಗಿದ್ದು, ನೀಲಿ ಪ್ಯಾಂಟಿಗೆ ಬೆಲ್ಟ್‌ ಧರಿಸಿರುವ, ಅರೆ ಬೆತ್ತಲೆ ವ್ಯಕ್ತಿಯನ್ನು ಕೈ ಕಟ್ಟಿ ಹಾಕಿ, ಬಾಯಿಗೆ ಬಟ್ಟೆಯನ್ನು ತುರುಕಲಾಗಿದೆ. ಜೊತೆಗೆ ವಿಡಿಯೊದಲ್ಲಿರುವ ವ್ಯಕ್ತಿಗೆ ‘ಜೈ ಶ್ರೀರಾಮ್ ಹೇಳು’ ಎಂದು ಒತ್ತಾಯಿಸುತ್ತಾ ಹರಿತವಾದ ಕತ್ತಿಯಿಂದ ಕುತ್ತಿಗೆಯನ್ನು ಕೊಯ್ಯಲಾಗುತ್ತದೆ. ರಕ್ತಸಿಕ್ತವಾದ ವಿಡಿಯೊ ನೋಡಲಾರದಷ್ಟು ಭಯಾನಕವಾಗಿದೆ.

ಮುಖ್ಯವಾಗಿ ಈ ವಿಡಿಯೊ ವಾಟ್ಸಪ್‌ ಗ್ರೂಪ್‌ಗಳಲ್ಲಿ ಹರಿದಾಡುತ್ತಿದೆ. ಇದರ ಜೊತೆಗೆ ಫೇಸ್‌ಬುಕ್‌ನಲ್ಲಿ ಕೂಡಾ ಹರಿದಾಡುತ್ತಿದೆ. ಅದನ್ನು ಇಲ್ಲಿ ನೋಡಬಹುದು.(ಎಚ್ಚರಿಕೆ: ವಿಡಿಯೊ ನೋಡಬಾರದಷ್ಟು ಭಯಾನಕವಾಗಿದೆ). ವೈರಲ್‌ ಸಂದೇಶವೂ, “ರಾಮನ ಹೆಸರಲ್ಲಿ ಹಿಂದುತ್ವದ ಟೆರರಿಸ್ಟ್ ಗಳು ಅಮಾಯಕ ಮುಸಲ್ಮಾನರನ್ನು ಕೊಲ್ಲುತ್ತಿರೋದು ನೋಡಿ. Hinduthva people killing Muslims in name of lord rama in India” ಎಂದು ಪ್ರತಿಪಾದಿಸಿ ವೈರಲ್‌ ಆಗಿದೆ.

ಪ್ಯಾಕ್ಟ್‌‌ಚೆಕ್‌

ಹರಿದಾಡುತ್ತಿರುವ ವಿಡಿಯೊ ಭಯಾನಕವಾಗಿದ್ದು, ಅರೆ ಬೆತ್ತಲೆಯಾಗಿರುವ, ಬಾಯಿಗೆ ಬಟ್ಟೆ ತುರುಕಲ್ಪಟ್ಟ, ನೀಲಿ ಬಣ್ಣದ ಪ್ಯಾಂಟ್‌ಗೆ ಬೆಲ್ಟ್‌ ಧರಿಸಿರುವ ಯುವಕನ್ನು ಕುತ್ತಿಗೆಯನ್ನು ಕೊಯ್ಯಲಾಗುತ್ತದೆ. ದೃಶ್ಯವಂತೂ ಅಮಾನವೀಯವಾಗಿದ್ದು, ನೋಡಲು ಸಾಧ್ಯವಿಲ್ಲದಂತಿದೆ. ಈ ಚಿತ್ರವನ್ನೂ ನಾವು ರಿವರ್ಸ್ ಸರ್ಚ್ ಮಾಡಿದ್ದೇವೆ. ಈ ವೇಳೆ ನಮಗೆ ಆಸ್ಟ್ರೇಲಿಯಾದ ಸುದ್ದಿ ವೆಬ್‌‌ ಪೋರ್ಟಲ್‌ ಆಗಿರುವ news.com.auನಲ್ಲಿ 2018ರ ಫೆಬ್ರವರಿ ತಿಂಗಳ 6 ರಂದು ಮಾಡಿರುವ ಸುದ್ದಿ ದೊರೆತಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌‌: ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿನಿಯರ ಪದವಿ ರದ್ದು ಮಾಡಲಾಗಿದೆಯೇ?

ವರದಿ ಪ್ರಕಾರ, “ಈ ಘಟನೆಯು ದಕ್ಷಿಣ ಅಮೆರಿಕಾದ ದೇಶವಾದ ವೆನೆಜುವೆಲಾದಲ್ಲಿ ನಡೆದಿದೆ. ವಿಡಿಯೋದಲ್ಲಿ, ಹದಿಹರೆಯದ ಬಾಲಕನನ್ನು ಮಾದಕ ದ್ರವ್ಯ ಮಾಫಿಯಾವು ಕತ್ತು ಕೊಯ್ದು ಕೊಂದಿದೆ. ಬಾಲಕನು ಮಾದಕ ದ್ರವ್ಯ ಮಾಫಿಯಾದ ವಿರೋಧಿ ಗುಂಪಿನವನಾಗಿದ್ದರಿಂದ, ಆತನನ್ನು ಅಪಹರಿಸಿ ಅಜ್ಞಾತ ಸ್ಥಳದಲ್ಲಿ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಈ ವಿಡಿಯೊವನ್ನು ಆರೋಪಿ ಗುಂಪೇ ಚಿತ್ರೀಕರಿಸಿ, ದೃಶ್ಯಗಳನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡಿದೆ”.

ಈ ಘಟನೆಯನ್ನು ‘ಮೈಲ್‌ ಆನ್‌ಲೈನ್‌’ ಸುದ್ದಿ ಪೋರ್ಟಲ್‌ ಕೂಡಾ ವರದಿ ಮಾಡಿದೆ. ಈ ಪತ್ರಿಕೆಯ ವರದಿಯ ಪ್ರಕಾರ, ಬಾಲಕನು 13 ವರ್ಷದವನಾಗಿದ್ದು, ಆತನ ಕತ್ತನ್ನು ಕೊಯ್ಯುವ ಮೊದಲು ಕಿವಿಯನ್ನು ಕೂಡಾ ಕತ್ತರಿಸಲಾಗಿತ್ತು.

ಅಲ್ಲದೆ ಈ ಭಯಾನಕ ವಿಡಿಯೊಗೆ ವಾಯ್ಸ್‌ ಓವರ್‌ ಮೂಲಕ ‘ಜೈ ಶ್ರೀರಾಮ್ ಹೇಳು’ ಎಂದು ಎಡಿಟ್‌ ಮಾಡಿ ಹಾಕಲಾಗಿದೆ. ವಿಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದರೆ, ಜೈ ಶ್ರೀರಾಮ್ ಎಂದು ಹೇಳುತ್ತಾ ಹೊಡೆಯುವ ಶಬ್ದವನ್ನು ಕೇಳಬಹುದು. ಈ ವಾಯ್ಸ್‌ ಪ್ರಸ್ತುತ ವೈರಲ್‌ ವಿಡಿಯೊಗೆ ಹೊಂದಿಕೆ ಆಗುವುದಿಲ್ಲ.

ಇದೇ ರೀತಿಯ ವಿಡಿಯೊಗೆ ಮತ್ತೊಂದು ವಿಡಿಯೊವನ್ನು ಸೇರಿಸಿ, ‘ಕೇರಳದ ಮುಸ್ಲಿಮರು ಆರೆಸ್ಸೆಸ್‌ ಕಾರ್ಯಕರ್ತನ ಕತ್ತನ್ನು ಕೊಯ್ಯುತ್ತಿರುವ ದೃಶ್ಯ’ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಲಾಗಿದೆ. ಅದರ ಫ್ಯಾಕ್ಟ್‌ಚೆಕ್‌ ಸುದ್ದಿಯನ್ನು ಇಲ್ಲಿ ಓದಬಹುದು.

ಒಟ್ಟಿನಲ್ಲಿ ವೈರಲ್‌ ಆಗಿರುವ ವಿಡಿಯೊ ಭಾರತದ ದೇಶದ್ದೇ ಅಲ್ಲ. ಇದು 2018 ರ ಫೆಬ್ರವರಿ ತಿಂಗಳಲ್ಲಿ ದಕ್ಷಿಣ ಅಮೆರಿಕಾದ ವೆನೆಜುವಾಲದಲ್ಲಿ ನಡೆದಿದೆ. ಈ ವಿಡಿಯೊಗೂ, ಭಾರತಕ್ಕೂ, ಆರೆಸ್ಸೆಸ್‌ಗೂ ಯಾವುದೇ ಸಂಬಂಧವಿಲ್ಲ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...