HomeUncategorizedಏಕಾಏಕಿ ಲಾಕ್‌ಡೌನ್‌ ಘೋಷಿಸಿದ ಸರ್ಕಾರ; ದುಸ್ತರಗೊಂಡಿದೆ ’ಕಲ್ಲಂಗಡಿ’ ಬೆಳೆದ ರೈತರ ಬದುಕು

ಏಕಾಏಕಿ ಲಾಕ್‌ಡೌನ್‌ ಘೋಷಿಸಿದ ಸರ್ಕಾರ; ದುಸ್ತರಗೊಂಡಿದೆ ’ಕಲ್ಲಂಗಡಿ’ ಬೆಳೆದ ರೈತರ ಬದುಕು

- Advertisement -
- Advertisement -

ಬೇಸಿಗೆ ಬಂತೆಂದರೆ ಕರಬೂಜ, ಕಲ್ಲಂಗಡಿ ಎಲ್ಲೆಲ್ಲೂ ಕಂಡುಬರುವುದು ಸಾಮಾನ್ಯ. ರಸ್ತೆಗಳ ಬದಿಯಲ್ಲಿ ರಾಶಿ ರಾಶಿ ಹಾಕಿಕೊಂಡಿರುತ್ತಿದ್ದ ಕಲ್ಲಂಗಡಿ, ಕರಬೂಜ ಹಣ್ಣುಗಳು ಈ ಬಾರಿ ಕಣ್ಮರೆಯಾಗಿವೆ. ಬೇಸಿಗೆ ಬಿರುಬಿಸಿಲಿನ ಧಗೆಯಿಂದ ನಿವಾರಿಸಿಕೊಳ್ಳಲು ಜನರು ಈ ಹಣ್ಣು ತಿಂದು, ಜ್ಯೂಸ್ ಕುಡಿದು ದೇಹ ತಂಪು ಮಾಡಿಕೊಳ್ಳುತ್ತಿದ್ದರು. ಕೊರೊನ ವೈರಸ್ ವ್ಯಾಪಿಸಿದ ಹಿನ್ನೆಲೆಯಲ್ಲಿ ದೇಶ ಲಾಕ್‌ಡೌನ್ ಮಾಡಿದ ಮೇಲೆ ಕಲ್ಲಂಗಡಿ ಮತ್ತು ಕರಬೂಜ ಬೆಳೆಗಾರರು ಮತ್ತು ಮಾರಾಟಗಾರರು ಹಾಕಿದ ಬಂಡವಾಳವೂ ಬರದೆ ತೀವ್ರ ನಷ್ಟ ಅನುಭವಿಸುವಂತಾಗಿದೆ.

ಮಾರುಕಟ್ಟೆಗಳು, ಪ್ರಮುಖ ರಸ್ತೆಗಳು, ಆಸ್ಪತ್ರೆಗಳು, ಕಾಲೇಜು ಮೈದಾನದ ಬಳಿ – ಹೀಗೆ ಕಲ್ಲಂಗಡಿ ಮತ್ತು ಕರಬೂಜದ ಹಣ್ಣುಗಳನ್ನು ಇಟ್ಟುಕೊಂಡು ಸಣ್ಣತುಂಡುಗಳಾಗಿ ಕೊಯ್ದು ಮಾರಾಟ ಮಾಡುತ್ತಿದ್ದರು. ಪ್ರತಿ ತುಂಡಿಗೆ 10 ರೂಪಾಯಿ ಬೆಲೆ ನಿಗದಿಪಡಿಸುತ್ತಿದ್ದರು. ಬಿಸಿಲಿನಿಂದ ಬಳಲಿ ಬಂದವರು ಕಲ್ಲಂಗಡಿ ಹಣ್ಣು ತಿಂದು ನಿರಾಳವಾಗಿ ಮನೆಗೆ ತೆರಳುತ್ತಿದ್ದರು. ಜೊತೆಗೆ ಅಂಗಡಿಗಳಲ್ಲಿ ಈ ಹಣ್ಣುಗಳ ಜ್ಯೂಸ್  ಕುಡಿದು ಬಳಲಿಕೆಯಿಂದ ಸ್ವಲ್ಪ ಮಟ್ಟಿಗೆ ಚೇತರಿಸಿಕೊಳ್ಳುತ್ತಿದ್ದರು. ಕೊರೊನ ವೈರಸ್ ವ್ಯಾಪಕವಾಗಿ ಹರಡುವ ಮೊದಲು ಮಾರಾಟಗಾರರು ಕಲ್ಲಂಗಡಿ ಹಣ್ಣುಗಳನ್ನು ಮಾರಾಟ ಮಾಡಿದರು. ಕೆಜಿ ಗೆ 20 ರಿಂದ 25 ರೂಪಾಯಿಯಂತೆ ಒಂದು ಕಲ್ಲಂಗಡಿ ಹಣ್ಣಿಗೆ 200 ರೂಪಾಯಿ ದೊರೆಯುತ್ತಿತ್ತು. ಭಾರತವೇ ಲಾಕ್‌ಡೌನ್ ಆದ ಮೇಲೆ ಇವರ ಬದುಕು ದುಸ್ಥರವಾಗಿದೆ.

ನಾನುಗೌರಿ.ಕಾಮ್ ಜೊತೆ ದೂರವಾಣಿಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ ಪಟೇಲ್ “ಕಲ್ಲಂಗಡಿ ಅಷ್ಟೇ ಅಲ್ಲ, ಅಲ್ಪಾವಧಿ ಬೆಳೆಗಳಿಗೆ ಮಾರುಕಟ್ಟೆಯೇ ಇಲ್ಲ. ಈ ಹಿನ್ನೆಲೆಯಲ್ಲಿ ರೈತರು ಆತ್ಮಹತ್ಯೆಯ ಹಾದಿ ಹಿಡಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರು ಬಹುಸಂಖ್ಯಾತರು ಅವರ ಬಗ್ಗೆ ಆಡಳಿತ ಪಕ್ಷಗಳು ಯೋಚನೆ ಮಾಡುತ್ತಿಲ್ಲ. ಅಲ್ಪಾವಧಿ ಬೆಳೆಗಳಿಗೆ ವ್ಯವಸ್ಥಿತ ಮಾರುಕಟ್ಟೆ ಸಿಗದೆ ನಷ್ಟವಾಗಿದೆ  ದೇಶದ ಯಾವುದೇ ಭಾಗದಲ್ಲಿಯೂ ಶೀತಲ ಕೇಂದ್ರಗಳಿಲ್ಲ. ಹಣ್ಣು ತರಕಾರಿಗಳನ್ನು ಕೋಲ್ಡ್ ಸ್ಟೋರೇಜ್ ನಲ್ಲಿಟ್ಟು ಬೆಲೆ ಬಂದಾಗ ಮಾರಾಟ ಮಾಡಿದರೆ ರೈತರಿಗೆ ಲಾಭವಾಗುತ್ತದೆ. ಆದರೆ ಆ ಪರಿಸ್ಥಿತಿ ದೇಶದಲ್ಲಿ ಎಲ್ಲಿಯೂ ಇಲ್ಲ. ಮುಂದಾಲೋಚನೆಯಿಲ್ಲದ ರಾಜಕಾರಣಿಗಳಿಂದ ಎಲ್ಲಾ ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಕೇಳಿದರೆ ಕೊರೊನ ಕಡೆ ಕೈ ತೋರಿಸುತ್ತಾರೆ” ಎಂದು ಹೇಳಿದರು.

ಕಲ್ಲಂಗಡಿ-ಕರಬೂಜ ಬೆಳೆದ ರೈತರು ತಮ್ಮ ಬೆಳೆಗೆ ಸರಿಯಾದ ಮಾರಕಟ್ಟೆ ಲಭಿಸದೆ ಲಕ್ಷಾಂತರ ರೂ ನಷ್ಟ  ಅನುಭವಿಸಿದ್ದಾರೆ. ಕೊಳ್ಳುವವರೂ ಇಲ್ಲದೆ, ಮಾರಾಟವೂ ಆಗದೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಾರಿಗೆ ಉತ್ತಮ ಕಲ್ಲಂಗಡಿ ಬೆಳೆ ಬಂದಿತ್ತು. ಆದರೆ ಮಾರಾಟವಾಗದೆ, ಹಾಕಿದ ಬಂಡವಾಳ ಮತ್ತು ಮಾಡಿದ ಸಾಲವನ್ನು ತೀರಿಸುವುದು ಕಷ್ಟವಾಗಿದೆ. ಕಲ್ಲಂಗಡಿ ಮತ್ತು ಕರಬೂಜ ಬೆಳೆಯಲು ಸಾವಿರಾರು ರೂ. ಸಾಲ ಮಾಡಿದ್ದೆವು. ಕೊರೊನ ರೋಗದಿಂದ ಇಡೀ ಬೆಳೆಯೇ ನಾಶವಾಯಿತು . ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ಬೆಳೆಗಾರರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಸಿ. ಅಜ್ಜಪ್ಪ “ಏಕಾಏಕಿ ಲಾಕ್‌ಡೌನ್ ಮಾಡಿದ್ದರಿಂದ ಕೃಷಿಕರಿಗೆ, ರೈತರಿಗೆ ಭಾರೀ ಅನ್ಯಾಯವಾಗಿದೆ. ಲಾಕ್‌ಡೌನ್ ಮಾಡುವ ಮೊದಲು ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು. ಅದನ್ನು ಮಾಡಿಲ್ಲ. ಹೀಗಾಗಿ ರೈತರು ಬೆಳೆದ ಟೊಮೋಟ, ಕಲ್ಲಂಗಡಿ ಹಣ್ಣನ್ನು ಸರ್ಕಾರವೇ ನೇರ ಖರೀದಿ ಮಾಡಬೇಕು. ರೈತರ ನೆರವಿಗೆ ಬರಬೇಕು. ಕೇಂದ್ರ ಸರ್ಕಾರದ ಕ್ರಮದಿಂದ ಬೆಳೆದ ಹಣ್ಣುಗಳು ತಿನ್ನಲೂ ಆಗದೆ ಮಣ್ಣು ಪಾಲಾಗುತ್ತಿವೆ. ಇದರಿಂದ ಸರ್ಕಾರ ಖರೀದಿ ಮಾಡಿ ಜನರಿಗೆ ವಿತರಿಸುವ ಕೆಲಸ ಮಾಡಬೇಕು” ಎಂದು ಆಗ್ರಹಿಸಿದರು.

ಲಾಕ್‌ಡೌನ್ ಪರಿಣಾಮ ಹಣ್ಣಿಗೆ ವೈಜ್ಞಾನಿಕ ಬೆಲೆ ಮತ್ತು ಮಾರುಕಟ್ಟೆ ಸಿಗದೆ ಕಲಬುರಗಿಯಲ್ಲಿ ರೈತರೊಬ್ಬರು ಮೃತಪಟ್ಟಿದ್ದಾರೆ. ವರ್ಷಕ್ಕೊಮ್ಮೆ ಬರುವ ಈ ಬೆಳೆಯಿಂದ ಒಟ್ಟಿಗೆ ಒಂದಿಷ್ಟು ಹಣವನ್ನು ರೈತರು ಮತ್ತು ಮಾರಾಟಗಾರರು ಪಡೆದು ಅದರಲ್ಲೇ ಜೀವನ ಸಾಗಿಸುತ್ತಿದ್ದರು. ಈಗ ಬೆಳೆ ಬೆಳೆದರೂ ಅದು ಹಣವಾಗಿ ಪರಿವರ್ತನೆಯಾಗುವ ಹೊತ್ತಿಗೆ ಕೊರೊನ ಬಂದು ರೈತರ ಬದುಕನ್ನೇ ನಾಶ ಮಾಡಿದೆ. ಕಲ್ಲಂಗಡಿಯೂ ಇಲ್ಲ, ಕರಬೂಜವೂ ಇಲ್ಲ, ಎಳೆನೀರು ಸಿಗುತ್ತಿಲ್ಲ. ಬೇಸಿಗೆಯ ಬೆಳೆಯಿಂದ ಸಂಪೂರ್ಣ ಕೈಸುಟ್ಟುಕೊಂಡಿರುವ ರೈತರ ನೆರವಿಗೆ ಸರ್ಕಾರ ಧಾವಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...