HomeUncategorizedಏಕಾಏಕಿ ಲಾಕ್‌ಡೌನ್‌ ಘೋಷಿಸಿದ ಸರ್ಕಾರ; ದುಸ್ತರಗೊಂಡಿದೆ ’ಕಲ್ಲಂಗಡಿ’ ಬೆಳೆದ ರೈತರ ಬದುಕು

ಏಕಾಏಕಿ ಲಾಕ್‌ಡೌನ್‌ ಘೋಷಿಸಿದ ಸರ್ಕಾರ; ದುಸ್ತರಗೊಂಡಿದೆ ’ಕಲ್ಲಂಗಡಿ’ ಬೆಳೆದ ರೈತರ ಬದುಕು

- Advertisement -
- Advertisement -

ಬೇಸಿಗೆ ಬಂತೆಂದರೆ ಕರಬೂಜ, ಕಲ್ಲಂಗಡಿ ಎಲ್ಲೆಲ್ಲೂ ಕಂಡುಬರುವುದು ಸಾಮಾನ್ಯ. ರಸ್ತೆಗಳ ಬದಿಯಲ್ಲಿ ರಾಶಿ ರಾಶಿ ಹಾಕಿಕೊಂಡಿರುತ್ತಿದ್ದ ಕಲ್ಲಂಗಡಿ, ಕರಬೂಜ ಹಣ್ಣುಗಳು ಈ ಬಾರಿ ಕಣ್ಮರೆಯಾಗಿವೆ. ಬೇಸಿಗೆ ಬಿರುಬಿಸಿಲಿನ ಧಗೆಯಿಂದ ನಿವಾರಿಸಿಕೊಳ್ಳಲು ಜನರು ಈ ಹಣ್ಣು ತಿಂದು, ಜ್ಯೂಸ್ ಕುಡಿದು ದೇಹ ತಂಪು ಮಾಡಿಕೊಳ್ಳುತ್ತಿದ್ದರು. ಕೊರೊನ ವೈರಸ್ ವ್ಯಾಪಿಸಿದ ಹಿನ್ನೆಲೆಯಲ್ಲಿ ದೇಶ ಲಾಕ್‌ಡೌನ್ ಮಾಡಿದ ಮೇಲೆ ಕಲ್ಲಂಗಡಿ ಮತ್ತು ಕರಬೂಜ ಬೆಳೆಗಾರರು ಮತ್ತು ಮಾರಾಟಗಾರರು ಹಾಕಿದ ಬಂಡವಾಳವೂ ಬರದೆ ತೀವ್ರ ನಷ್ಟ ಅನುಭವಿಸುವಂತಾಗಿದೆ.

ಮಾರುಕಟ್ಟೆಗಳು, ಪ್ರಮುಖ ರಸ್ತೆಗಳು, ಆಸ್ಪತ್ರೆಗಳು, ಕಾಲೇಜು ಮೈದಾನದ ಬಳಿ – ಹೀಗೆ ಕಲ್ಲಂಗಡಿ ಮತ್ತು ಕರಬೂಜದ ಹಣ್ಣುಗಳನ್ನು ಇಟ್ಟುಕೊಂಡು ಸಣ್ಣತುಂಡುಗಳಾಗಿ ಕೊಯ್ದು ಮಾರಾಟ ಮಾಡುತ್ತಿದ್ದರು. ಪ್ರತಿ ತುಂಡಿಗೆ 10 ರೂಪಾಯಿ ಬೆಲೆ ನಿಗದಿಪಡಿಸುತ್ತಿದ್ದರು. ಬಿಸಿಲಿನಿಂದ ಬಳಲಿ ಬಂದವರು ಕಲ್ಲಂಗಡಿ ಹಣ್ಣು ತಿಂದು ನಿರಾಳವಾಗಿ ಮನೆಗೆ ತೆರಳುತ್ತಿದ್ದರು. ಜೊತೆಗೆ ಅಂಗಡಿಗಳಲ್ಲಿ ಈ ಹಣ್ಣುಗಳ ಜ್ಯೂಸ್  ಕುಡಿದು ಬಳಲಿಕೆಯಿಂದ ಸ್ವಲ್ಪ ಮಟ್ಟಿಗೆ ಚೇತರಿಸಿಕೊಳ್ಳುತ್ತಿದ್ದರು. ಕೊರೊನ ವೈರಸ್ ವ್ಯಾಪಕವಾಗಿ ಹರಡುವ ಮೊದಲು ಮಾರಾಟಗಾರರು ಕಲ್ಲಂಗಡಿ ಹಣ್ಣುಗಳನ್ನು ಮಾರಾಟ ಮಾಡಿದರು. ಕೆಜಿ ಗೆ 20 ರಿಂದ 25 ರೂಪಾಯಿಯಂತೆ ಒಂದು ಕಲ್ಲಂಗಡಿ ಹಣ್ಣಿಗೆ 200 ರೂಪಾಯಿ ದೊರೆಯುತ್ತಿತ್ತು. ಭಾರತವೇ ಲಾಕ್‌ಡೌನ್ ಆದ ಮೇಲೆ ಇವರ ಬದುಕು ದುಸ್ಥರವಾಗಿದೆ.

ನಾನುಗೌರಿ.ಕಾಮ್ ಜೊತೆ ದೂರವಾಣಿಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ ಪಟೇಲ್ “ಕಲ್ಲಂಗಡಿ ಅಷ್ಟೇ ಅಲ್ಲ, ಅಲ್ಪಾವಧಿ ಬೆಳೆಗಳಿಗೆ ಮಾರುಕಟ್ಟೆಯೇ ಇಲ್ಲ. ಈ ಹಿನ್ನೆಲೆಯಲ್ಲಿ ರೈತರು ಆತ್ಮಹತ್ಯೆಯ ಹಾದಿ ಹಿಡಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರು ಬಹುಸಂಖ್ಯಾತರು ಅವರ ಬಗ್ಗೆ ಆಡಳಿತ ಪಕ್ಷಗಳು ಯೋಚನೆ ಮಾಡುತ್ತಿಲ್ಲ. ಅಲ್ಪಾವಧಿ ಬೆಳೆಗಳಿಗೆ ವ್ಯವಸ್ಥಿತ ಮಾರುಕಟ್ಟೆ ಸಿಗದೆ ನಷ್ಟವಾಗಿದೆ  ದೇಶದ ಯಾವುದೇ ಭಾಗದಲ್ಲಿಯೂ ಶೀತಲ ಕೇಂದ್ರಗಳಿಲ್ಲ. ಹಣ್ಣು ತರಕಾರಿಗಳನ್ನು ಕೋಲ್ಡ್ ಸ್ಟೋರೇಜ್ ನಲ್ಲಿಟ್ಟು ಬೆಲೆ ಬಂದಾಗ ಮಾರಾಟ ಮಾಡಿದರೆ ರೈತರಿಗೆ ಲಾಭವಾಗುತ್ತದೆ. ಆದರೆ ಆ ಪರಿಸ್ಥಿತಿ ದೇಶದಲ್ಲಿ ಎಲ್ಲಿಯೂ ಇಲ್ಲ. ಮುಂದಾಲೋಚನೆಯಿಲ್ಲದ ರಾಜಕಾರಣಿಗಳಿಂದ ಎಲ್ಲಾ ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಕೇಳಿದರೆ ಕೊರೊನ ಕಡೆ ಕೈ ತೋರಿಸುತ್ತಾರೆ” ಎಂದು ಹೇಳಿದರು.

ಕಲ್ಲಂಗಡಿ-ಕರಬೂಜ ಬೆಳೆದ ರೈತರು ತಮ್ಮ ಬೆಳೆಗೆ ಸರಿಯಾದ ಮಾರಕಟ್ಟೆ ಲಭಿಸದೆ ಲಕ್ಷಾಂತರ ರೂ ನಷ್ಟ  ಅನುಭವಿಸಿದ್ದಾರೆ. ಕೊಳ್ಳುವವರೂ ಇಲ್ಲದೆ, ಮಾರಾಟವೂ ಆಗದೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಾರಿಗೆ ಉತ್ತಮ ಕಲ್ಲಂಗಡಿ ಬೆಳೆ ಬಂದಿತ್ತು. ಆದರೆ ಮಾರಾಟವಾಗದೆ, ಹಾಕಿದ ಬಂಡವಾಳ ಮತ್ತು ಮಾಡಿದ ಸಾಲವನ್ನು ತೀರಿಸುವುದು ಕಷ್ಟವಾಗಿದೆ. ಕಲ್ಲಂಗಡಿ ಮತ್ತು ಕರಬೂಜ ಬೆಳೆಯಲು ಸಾವಿರಾರು ರೂ. ಸಾಲ ಮಾಡಿದ್ದೆವು. ಕೊರೊನ ರೋಗದಿಂದ ಇಡೀ ಬೆಳೆಯೇ ನಾಶವಾಯಿತು . ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ಬೆಳೆಗಾರರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಸಿ. ಅಜ್ಜಪ್ಪ “ಏಕಾಏಕಿ ಲಾಕ್‌ಡೌನ್ ಮಾಡಿದ್ದರಿಂದ ಕೃಷಿಕರಿಗೆ, ರೈತರಿಗೆ ಭಾರೀ ಅನ್ಯಾಯವಾಗಿದೆ. ಲಾಕ್‌ಡೌನ್ ಮಾಡುವ ಮೊದಲು ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು. ಅದನ್ನು ಮಾಡಿಲ್ಲ. ಹೀಗಾಗಿ ರೈತರು ಬೆಳೆದ ಟೊಮೋಟ, ಕಲ್ಲಂಗಡಿ ಹಣ್ಣನ್ನು ಸರ್ಕಾರವೇ ನೇರ ಖರೀದಿ ಮಾಡಬೇಕು. ರೈತರ ನೆರವಿಗೆ ಬರಬೇಕು. ಕೇಂದ್ರ ಸರ್ಕಾರದ ಕ್ರಮದಿಂದ ಬೆಳೆದ ಹಣ್ಣುಗಳು ತಿನ್ನಲೂ ಆಗದೆ ಮಣ್ಣು ಪಾಲಾಗುತ್ತಿವೆ. ಇದರಿಂದ ಸರ್ಕಾರ ಖರೀದಿ ಮಾಡಿ ಜನರಿಗೆ ವಿತರಿಸುವ ಕೆಲಸ ಮಾಡಬೇಕು” ಎಂದು ಆಗ್ರಹಿಸಿದರು.

ಲಾಕ್‌ಡೌನ್ ಪರಿಣಾಮ ಹಣ್ಣಿಗೆ ವೈಜ್ಞಾನಿಕ ಬೆಲೆ ಮತ್ತು ಮಾರುಕಟ್ಟೆ ಸಿಗದೆ ಕಲಬುರಗಿಯಲ್ಲಿ ರೈತರೊಬ್ಬರು ಮೃತಪಟ್ಟಿದ್ದಾರೆ. ವರ್ಷಕ್ಕೊಮ್ಮೆ ಬರುವ ಈ ಬೆಳೆಯಿಂದ ಒಟ್ಟಿಗೆ ಒಂದಿಷ್ಟು ಹಣವನ್ನು ರೈತರು ಮತ್ತು ಮಾರಾಟಗಾರರು ಪಡೆದು ಅದರಲ್ಲೇ ಜೀವನ ಸಾಗಿಸುತ್ತಿದ್ದರು. ಈಗ ಬೆಳೆ ಬೆಳೆದರೂ ಅದು ಹಣವಾಗಿ ಪರಿವರ್ತನೆಯಾಗುವ ಹೊತ್ತಿಗೆ ಕೊರೊನ ಬಂದು ರೈತರ ಬದುಕನ್ನೇ ನಾಶ ಮಾಡಿದೆ. ಕಲ್ಲಂಗಡಿಯೂ ಇಲ್ಲ, ಕರಬೂಜವೂ ಇಲ್ಲ, ಎಳೆನೀರು ಸಿಗುತ್ತಿಲ್ಲ. ಬೇಸಿಗೆಯ ಬೆಳೆಯಿಂದ ಸಂಪೂರ್ಣ ಕೈಸುಟ್ಟುಕೊಂಡಿರುವ ರೈತರ ನೆರವಿಗೆ ಸರ್ಕಾರ ಧಾವಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನರೇಗಾ ಹೆಸರು ಬದಲಾವಣೆಯು ರಾಜ್ಯಗಳ ಸ್ವಾಯತ್ತತೆ, ಅಂಚಿನ ಸಮುದಾಯಗಳ ಹಕ್ಕಿನ ಮೇಲೆ ನೇರ ದಾಳಿ: ರಾಹುಲ್

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಹೆಸರು ಬದಲಾವಣೆಯು ರಾಜ್ಯಗಳ ಹಕ್ಕುಗಳನ್ನು ದುರ್ಬಲಗೊಳಿಸುತ್ತಿದೆ. ಅಂಚಿನ ಸಮುದಾಯಗಳ ಹಕ್ಕಿನ ಮೇಲೆ ನೇರವಾಗಿ ದಾಳಿ ಮಾಡಲಾಗುತ್ತಿದೆ ಎಂದು ಲೋಕಸಭೆ ವಿರೋಧ ಪಕ್ಷದ...

‘2025ರಲ್ಲಿ ಗಾಜಾ ಪತ್ರಕರ್ತರಿಗೆ ವಿಶ್ವದ ಅತ್ಯಂತ ಅಪಾಯಕಾರಿ ಸ್ಥಳವಾಯಿತು’: ಪ್ಯಾಲೆಸ್ಟೀನಿಯನ್ ಪತ್ರಕರ್ತರ ಒಕ್ಕೂಟ

ಪ್ಯಾಲೆಸ್ಟೀನಿಯನ್ ಪತ್ರಕರ್ತರ ವಿರುದ್ಧ ಇಸ್ರೇಲ್‌ನ ವ್ಯವಸ್ಥಿತ ಹಿಂಸಾಚಾರ ಅಭಿಯಾನವು ಅಕ್ಟೋಬರ್ 2023 ರಿಂದ ನಡೆಯುತ್ತಿದೆ, ಇದು 2025 ರಲ್ಲಿ ಅತ್ಯಂತ ಮಾರಕ ಸ್ಥಿತಿಗೆ ತಲುಪಿತು. ಡಜನ್‌ಗಟ್ಟಲೆ ಮಾಧ್ಯಮ ಕಾರ್ಯಕರ್ತರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ದಾಳಿ...

ಗಡಿ ಘರ್ಷಣೆ ಕೊನೆಗೊಳಿಸಿದ ಥೈಲ್ಯಾಂಡ್ ಮತ್ತು ಕಾಂಬೋಡಿಯಾ: ತಕ್ಷಣದ ಕದನ ವಿರಾಮಕ್ಕೆ ಎರಡು ದೇಶಗಳ ಒಪ್ಪಿಗೆ

ಥೈಲ್ಯಾಂಡ್ ಮತ್ತು ಕಾಂಬೋಡಿಯಾಗಳು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ, ಇದು ಇತ್ತೀಚಿನ ಗಡಿ ಘರ್ಷಣೆಗಳ ನಂತರದ ಉದ್ವಿಗ್ನತೆಯನ್ನು ಕಡಿಮೆ ಮಾಡುವತ್ತ ಒಂದು ಪ್ರಮುಖ ಹೆಜ್ಜೆಯಾಗಿದೆ.  ಶನಿವಾರ ಎರಡೂ ದೇಶಗಳ ರಕ್ಷಣಾ ಸಚಿವರು ಸಹಿ ಮಾಡಿದ...

‘ಬಡವರ ಹೊಟ್ಟೆಗೆ ಒದ್ದ ನಂತರ, ಮೋದಿ ಸರ್ಕಾರ ಅವರ ಬೆನ್ನಿಗೆ ಚೂರಿ ಹಾಕಿದೆ’: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಯುಪಿಎಯ ದೂರದೃಷ್ಟಿಯ ಕಾರ್ಯಕ್ರಮವಾದ ಎಂಜಿಎನ್‌ಆರ್‌ಇಜಿಎಯನ್ನು ರದ್ದುಗೊಳಿಸುವ ಮೂಲಕ ಅವರು "ಬಡವರ ಹೊಟ್ಟೆಗೆ...

ಕರ್ನಾಟಕದ ವಿಚಾರದಲ್ಲಿ ಪಿಣರಾಯಿ ವಿಜಯನ್ ಹಸ್ತಕ್ಷೇಪ ಮಾಡಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್

"ಕೋಗಿಲು ಬಡಾವಣೆಯಲ್ಲಿ ಅಕ್ರಮ ಒತ್ತುವರಿ ಪ್ರದೇಶ ನೆಲಸಮಗೊಳಿಸಿರುವ ಪ್ರಕರಣದಲ್ಲಿ ಸತ್ಯಾಸತ್ಯತೆ ಅರಿಯದೇ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಕರ್ನಾಟಕ ವಿಚಾರದಲ್ಲಿ ಹಸ್ತಕ್ಷೇಪ ಮಾಡಬಾರದು" ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು...

ಮಧ್ಯಪ್ರದೇಶ| ಬಿಜೆಪಿ ನಾಯಕಿ ಮಗನ ಮೇಲೆ ಅತ್ಯಾಚಾರ ಆರೋಪ; ವಿಷ ಸೇವಿಸಿದ ಸಂತ್ರಸ್ತೆ ಸ್ಥಿತಿ ಗಂಭೀರ

ಮಧ್ಯಪ್ರದೇಶದ ಶಿವಪುರಿ ನಗರ ಸಭೆಯ ಅಧ್ಯಕ್ಷೆ ಮತ್ತು ಬಿಜೆಪಿ ನಾಯಕಿ ಗಾಯತ್ರಿ ಶರ್ಮಾ ಅವರ ಪುತ್ರ ರಜತ್ ಶರ್ಮಾ ವಿರುದ್ಧ ಏಪ್ರಿಲ್ 30 ರಂದು ಎಫ್‌ಐಆರ್ ದಾಖಲಿಸಿದ್ದ ಮಹಿಳೆಯ ಆರೋಗ್ಯ ಹದಗೆಟ್ಟ ನಂತರ...

ದೆಹಲಿಯಲ್ಲಿ ಹೊಸ ವರ್ಷಕ್ಕೂ ಮುನ್ನ ಬೃಹತ್ ಕಾರ್ಯಾಚರಣೆ: 285 ಜನರ ಬಂಧನ, ಶಸ್ತ್ರಾಸ್ತ್ರಗಳು ಮತ್ತು ಮಾದಕ ವಸ್ತುಗಳ ವಶ

ದೆಹಲಿ ಹೊಸ ವರ್ಷಾಚರಣೆಗೆ ಸಜ್ಜಾಗುತ್ತಿದ್ದಂತೆ, ಹಬ್ಬದ ದಟ್ಟಣೆಯಲ್ಲಿ ಅಪರಾಧಗಳನ್ನು ತಡೆಗಟ್ಟುವ ಪ್ರಯತ್ನದಲ್ಲಿ, ಪೊಲೀಸರು ರಾಷ್ಟ್ರ ರಾಜಧಾನಿಯಾದ್ಯಂತ ರಾತ್ರಿಯಿಡೀ ವಿಸ್ತೃತ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ನೂರಾರು ಆರೋಪಿಗಳನ್ನು ಬಂಧಿಸಿದ್ದು, ಅಕ್ರಮ ಶಸ್ತ್ರಾಸ್ತ್ರಗಳು, ಮಾದಕ...

ಅತ್ಯಾಚಾರಿ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತು; ದೆಹಲಿ ಹೈಕೋರ್ಟ್ ಮುಂದೆ ಸಂತ್ರಸ್ತೆ ತಾಯಿ ಪ್ರತಿಭಟನೆ

ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ನ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ದೆಹಲಿ ಹೈಕೋರ್ಟ್ ಹೊರಗೆ ಶುಕ್ರವಾರ (ಡಿ.26) ಪ್ರತಿಭಟನೆ ನಡೆಸಲಾಯಿತು. ಸೆಂಗಾರ್‌ಗೆ ನಿಡುರವ ಜಾಮೀನು ತಿರಸ್ಕರಿಸಬೇಕೆಂದು...

‘ಉತ್ತರ ಪ್ರದೇಶದ ಗಾಳಿ ಕರ್ನಾಟಕಕ್ಕೂ ಬೀಸಿದೆ, ಬುಲ್ಡೋಜರ್ ನೀತಿ ಇಲ್ಲೂ ಜಾರಿ ಮಾಡುವ ಕೆಲಸ ನಡೆಯುತ್ತಿದೆ: ಪಿಣರಾಯಿ ವಿಜಯನ್ ಟೀಕೆ

ಬೆಂಗಳೂರು: ಕರ್ನಾಟಕ ಸರ್ಕಾರಕ್ಕೂ ಉತ್ತರ ಪ್ರದೇಶ ಸರ್ಕಾರದ ಗಾಳಿ ಬಿಸಿದೆ. ಅಲ್ಲಿನ ಬುಲ್ಡೋಜರ್ ನೀತಿಯನ್ನು ಇಲ್ಲೂ ತರುವ ಕೆಲಸ ನಡೆಯುತ್ತಿದೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕರ್ನಾಟಕದ ಕಾಂಗ್ರೆಸ್​​​ ಸರ್ಕಾರದ ವಿರುದ್ಧ...

ಡೆಹ್ರಾಡೂನ್‌ನಲ್ಲಿ ಜನಾಂಗೀಯ ದಾಳಿ; ಚಾಕು ಇರಿತಕ್ಕೆ ಒಳಗಾಗಿದ್ದ ತ್ರಿಪುರ ವಿದ್ಯಾರ್ಥಿ ಸಾವು

ಜನಾಂಗೀಯ ನಿಂದನೆಯಿಂದ ಪ್ರಾರಂಭವಾಯಿತು ಎನ್ನಲಾದ ಜಗಳವು ಹಿಂಸಾತ್ಮಕ ಪ್ರತಿಭಟನೆಗೆ ತಿರುಗಿದ್ದು, ಚಾಕು ಇರಿತದ ನಂತರ ತ್ರಿಪುರದ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಉತ್ತರಾಖಂಡ್ ಆಸ್ಪತ್ರೆಯಲ್ಲಿ ಎರಡು ವಾರಗಳಿಗೂ ಹೆಚ್ಚು ಕಾಲ ಚಿಕಿತ್ಸೆ ಪಡೆಯುತ್ತಿದ್ದ...