HomeUncategorizedಏಕಾಏಕಿ ಲಾಕ್‌ಡೌನ್‌ ಘೋಷಿಸಿದ ಸರ್ಕಾರ; ದುಸ್ತರಗೊಂಡಿದೆ ’ಕಲ್ಲಂಗಡಿ’ ಬೆಳೆದ ರೈತರ ಬದುಕು

ಏಕಾಏಕಿ ಲಾಕ್‌ಡೌನ್‌ ಘೋಷಿಸಿದ ಸರ್ಕಾರ; ದುಸ್ತರಗೊಂಡಿದೆ ’ಕಲ್ಲಂಗಡಿ’ ಬೆಳೆದ ರೈತರ ಬದುಕು

- Advertisement -
- Advertisement -

ಬೇಸಿಗೆ ಬಂತೆಂದರೆ ಕರಬೂಜ, ಕಲ್ಲಂಗಡಿ ಎಲ್ಲೆಲ್ಲೂ ಕಂಡುಬರುವುದು ಸಾಮಾನ್ಯ. ರಸ್ತೆಗಳ ಬದಿಯಲ್ಲಿ ರಾಶಿ ರಾಶಿ ಹಾಕಿಕೊಂಡಿರುತ್ತಿದ್ದ ಕಲ್ಲಂಗಡಿ, ಕರಬೂಜ ಹಣ್ಣುಗಳು ಈ ಬಾರಿ ಕಣ್ಮರೆಯಾಗಿವೆ. ಬೇಸಿಗೆ ಬಿರುಬಿಸಿಲಿನ ಧಗೆಯಿಂದ ನಿವಾರಿಸಿಕೊಳ್ಳಲು ಜನರು ಈ ಹಣ್ಣು ತಿಂದು, ಜ್ಯೂಸ್ ಕುಡಿದು ದೇಹ ತಂಪು ಮಾಡಿಕೊಳ್ಳುತ್ತಿದ್ದರು. ಕೊರೊನ ವೈರಸ್ ವ್ಯಾಪಿಸಿದ ಹಿನ್ನೆಲೆಯಲ್ಲಿ ದೇಶ ಲಾಕ್‌ಡೌನ್ ಮಾಡಿದ ಮೇಲೆ ಕಲ್ಲಂಗಡಿ ಮತ್ತು ಕರಬೂಜ ಬೆಳೆಗಾರರು ಮತ್ತು ಮಾರಾಟಗಾರರು ಹಾಕಿದ ಬಂಡವಾಳವೂ ಬರದೆ ತೀವ್ರ ನಷ್ಟ ಅನುಭವಿಸುವಂತಾಗಿದೆ.

ಮಾರುಕಟ್ಟೆಗಳು, ಪ್ರಮುಖ ರಸ್ತೆಗಳು, ಆಸ್ಪತ್ರೆಗಳು, ಕಾಲೇಜು ಮೈದಾನದ ಬಳಿ – ಹೀಗೆ ಕಲ್ಲಂಗಡಿ ಮತ್ತು ಕರಬೂಜದ ಹಣ್ಣುಗಳನ್ನು ಇಟ್ಟುಕೊಂಡು ಸಣ್ಣತುಂಡುಗಳಾಗಿ ಕೊಯ್ದು ಮಾರಾಟ ಮಾಡುತ್ತಿದ್ದರು. ಪ್ರತಿ ತುಂಡಿಗೆ 10 ರೂಪಾಯಿ ಬೆಲೆ ನಿಗದಿಪಡಿಸುತ್ತಿದ್ದರು. ಬಿಸಿಲಿನಿಂದ ಬಳಲಿ ಬಂದವರು ಕಲ್ಲಂಗಡಿ ಹಣ್ಣು ತಿಂದು ನಿರಾಳವಾಗಿ ಮನೆಗೆ ತೆರಳುತ್ತಿದ್ದರು. ಜೊತೆಗೆ ಅಂಗಡಿಗಳಲ್ಲಿ ಈ ಹಣ್ಣುಗಳ ಜ್ಯೂಸ್  ಕುಡಿದು ಬಳಲಿಕೆಯಿಂದ ಸ್ವಲ್ಪ ಮಟ್ಟಿಗೆ ಚೇತರಿಸಿಕೊಳ್ಳುತ್ತಿದ್ದರು. ಕೊರೊನ ವೈರಸ್ ವ್ಯಾಪಕವಾಗಿ ಹರಡುವ ಮೊದಲು ಮಾರಾಟಗಾರರು ಕಲ್ಲಂಗಡಿ ಹಣ್ಣುಗಳನ್ನು ಮಾರಾಟ ಮಾಡಿದರು. ಕೆಜಿ ಗೆ 20 ರಿಂದ 25 ರೂಪಾಯಿಯಂತೆ ಒಂದು ಕಲ್ಲಂಗಡಿ ಹಣ್ಣಿಗೆ 200 ರೂಪಾಯಿ ದೊರೆಯುತ್ತಿತ್ತು. ಭಾರತವೇ ಲಾಕ್‌ಡೌನ್ ಆದ ಮೇಲೆ ಇವರ ಬದುಕು ದುಸ್ಥರವಾಗಿದೆ.

ನಾನುಗೌರಿ.ಕಾಮ್ ಜೊತೆ ದೂರವಾಣಿಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ ಪಟೇಲ್ “ಕಲ್ಲಂಗಡಿ ಅಷ್ಟೇ ಅಲ್ಲ, ಅಲ್ಪಾವಧಿ ಬೆಳೆಗಳಿಗೆ ಮಾರುಕಟ್ಟೆಯೇ ಇಲ್ಲ. ಈ ಹಿನ್ನೆಲೆಯಲ್ಲಿ ರೈತರು ಆತ್ಮಹತ್ಯೆಯ ಹಾದಿ ಹಿಡಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರು ಬಹುಸಂಖ್ಯಾತರು ಅವರ ಬಗ್ಗೆ ಆಡಳಿತ ಪಕ್ಷಗಳು ಯೋಚನೆ ಮಾಡುತ್ತಿಲ್ಲ. ಅಲ್ಪಾವಧಿ ಬೆಳೆಗಳಿಗೆ ವ್ಯವಸ್ಥಿತ ಮಾರುಕಟ್ಟೆ ಸಿಗದೆ ನಷ್ಟವಾಗಿದೆ  ದೇಶದ ಯಾವುದೇ ಭಾಗದಲ್ಲಿಯೂ ಶೀತಲ ಕೇಂದ್ರಗಳಿಲ್ಲ. ಹಣ್ಣು ತರಕಾರಿಗಳನ್ನು ಕೋಲ್ಡ್ ಸ್ಟೋರೇಜ್ ನಲ್ಲಿಟ್ಟು ಬೆಲೆ ಬಂದಾಗ ಮಾರಾಟ ಮಾಡಿದರೆ ರೈತರಿಗೆ ಲಾಭವಾಗುತ್ತದೆ. ಆದರೆ ಆ ಪರಿಸ್ಥಿತಿ ದೇಶದಲ್ಲಿ ಎಲ್ಲಿಯೂ ಇಲ್ಲ. ಮುಂದಾಲೋಚನೆಯಿಲ್ಲದ ರಾಜಕಾರಣಿಗಳಿಂದ ಎಲ್ಲಾ ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಕೇಳಿದರೆ ಕೊರೊನ ಕಡೆ ಕೈ ತೋರಿಸುತ್ತಾರೆ” ಎಂದು ಹೇಳಿದರು.

ಕಲ್ಲಂಗಡಿ-ಕರಬೂಜ ಬೆಳೆದ ರೈತರು ತಮ್ಮ ಬೆಳೆಗೆ ಸರಿಯಾದ ಮಾರಕಟ್ಟೆ ಲಭಿಸದೆ ಲಕ್ಷಾಂತರ ರೂ ನಷ್ಟ  ಅನುಭವಿಸಿದ್ದಾರೆ. ಕೊಳ್ಳುವವರೂ ಇಲ್ಲದೆ, ಮಾರಾಟವೂ ಆಗದೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಾರಿಗೆ ಉತ್ತಮ ಕಲ್ಲಂಗಡಿ ಬೆಳೆ ಬಂದಿತ್ತು. ಆದರೆ ಮಾರಾಟವಾಗದೆ, ಹಾಕಿದ ಬಂಡವಾಳ ಮತ್ತು ಮಾಡಿದ ಸಾಲವನ್ನು ತೀರಿಸುವುದು ಕಷ್ಟವಾಗಿದೆ. ಕಲ್ಲಂಗಡಿ ಮತ್ತು ಕರಬೂಜ ಬೆಳೆಯಲು ಸಾವಿರಾರು ರೂ. ಸಾಲ ಮಾಡಿದ್ದೆವು. ಕೊರೊನ ರೋಗದಿಂದ ಇಡೀ ಬೆಳೆಯೇ ನಾಶವಾಯಿತು . ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ಬೆಳೆಗಾರರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಸಿ. ಅಜ್ಜಪ್ಪ “ಏಕಾಏಕಿ ಲಾಕ್‌ಡೌನ್ ಮಾಡಿದ್ದರಿಂದ ಕೃಷಿಕರಿಗೆ, ರೈತರಿಗೆ ಭಾರೀ ಅನ್ಯಾಯವಾಗಿದೆ. ಲಾಕ್‌ಡೌನ್ ಮಾಡುವ ಮೊದಲು ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು. ಅದನ್ನು ಮಾಡಿಲ್ಲ. ಹೀಗಾಗಿ ರೈತರು ಬೆಳೆದ ಟೊಮೋಟ, ಕಲ್ಲಂಗಡಿ ಹಣ್ಣನ್ನು ಸರ್ಕಾರವೇ ನೇರ ಖರೀದಿ ಮಾಡಬೇಕು. ರೈತರ ನೆರವಿಗೆ ಬರಬೇಕು. ಕೇಂದ್ರ ಸರ್ಕಾರದ ಕ್ರಮದಿಂದ ಬೆಳೆದ ಹಣ್ಣುಗಳು ತಿನ್ನಲೂ ಆಗದೆ ಮಣ್ಣು ಪಾಲಾಗುತ್ತಿವೆ. ಇದರಿಂದ ಸರ್ಕಾರ ಖರೀದಿ ಮಾಡಿ ಜನರಿಗೆ ವಿತರಿಸುವ ಕೆಲಸ ಮಾಡಬೇಕು” ಎಂದು ಆಗ್ರಹಿಸಿದರು.

ಲಾಕ್‌ಡೌನ್ ಪರಿಣಾಮ ಹಣ್ಣಿಗೆ ವೈಜ್ಞಾನಿಕ ಬೆಲೆ ಮತ್ತು ಮಾರುಕಟ್ಟೆ ಸಿಗದೆ ಕಲಬುರಗಿಯಲ್ಲಿ ರೈತರೊಬ್ಬರು ಮೃತಪಟ್ಟಿದ್ದಾರೆ. ವರ್ಷಕ್ಕೊಮ್ಮೆ ಬರುವ ಈ ಬೆಳೆಯಿಂದ ಒಟ್ಟಿಗೆ ಒಂದಿಷ್ಟು ಹಣವನ್ನು ರೈತರು ಮತ್ತು ಮಾರಾಟಗಾರರು ಪಡೆದು ಅದರಲ್ಲೇ ಜೀವನ ಸಾಗಿಸುತ್ತಿದ್ದರು. ಈಗ ಬೆಳೆ ಬೆಳೆದರೂ ಅದು ಹಣವಾಗಿ ಪರಿವರ್ತನೆಯಾಗುವ ಹೊತ್ತಿಗೆ ಕೊರೊನ ಬಂದು ರೈತರ ಬದುಕನ್ನೇ ನಾಶ ಮಾಡಿದೆ. ಕಲ್ಲಂಗಡಿಯೂ ಇಲ್ಲ, ಕರಬೂಜವೂ ಇಲ್ಲ, ಎಳೆನೀರು ಸಿಗುತ್ತಿಲ್ಲ. ಬೇಸಿಗೆಯ ಬೆಳೆಯಿಂದ ಸಂಪೂರ್ಣ ಕೈಸುಟ್ಟುಕೊಂಡಿರುವ ರೈತರ ನೆರವಿಗೆ ಸರ್ಕಾರ ಧಾವಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...