HomeUncategorizedಏಕಾಏಕಿ ಲಾಕ್‌ಡೌನ್‌ ಘೋಷಿಸಿದ ಸರ್ಕಾರ; ದುಸ್ತರಗೊಂಡಿದೆ ’ಕಲ್ಲಂಗಡಿ’ ಬೆಳೆದ ರೈತರ ಬದುಕು

ಏಕಾಏಕಿ ಲಾಕ್‌ಡೌನ್‌ ಘೋಷಿಸಿದ ಸರ್ಕಾರ; ದುಸ್ತರಗೊಂಡಿದೆ ’ಕಲ್ಲಂಗಡಿ’ ಬೆಳೆದ ರೈತರ ಬದುಕು

- Advertisement -
- Advertisement -

ಬೇಸಿಗೆ ಬಂತೆಂದರೆ ಕರಬೂಜ, ಕಲ್ಲಂಗಡಿ ಎಲ್ಲೆಲ್ಲೂ ಕಂಡುಬರುವುದು ಸಾಮಾನ್ಯ. ರಸ್ತೆಗಳ ಬದಿಯಲ್ಲಿ ರಾಶಿ ರಾಶಿ ಹಾಕಿಕೊಂಡಿರುತ್ತಿದ್ದ ಕಲ್ಲಂಗಡಿ, ಕರಬೂಜ ಹಣ್ಣುಗಳು ಈ ಬಾರಿ ಕಣ್ಮರೆಯಾಗಿವೆ. ಬೇಸಿಗೆ ಬಿರುಬಿಸಿಲಿನ ಧಗೆಯಿಂದ ನಿವಾರಿಸಿಕೊಳ್ಳಲು ಜನರು ಈ ಹಣ್ಣು ತಿಂದು, ಜ್ಯೂಸ್ ಕುಡಿದು ದೇಹ ತಂಪು ಮಾಡಿಕೊಳ್ಳುತ್ತಿದ್ದರು. ಕೊರೊನ ವೈರಸ್ ವ್ಯಾಪಿಸಿದ ಹಿನ್ನೆಲೆಯಲ್ಲಿ ದೇಶ ಲಾಕ್‌ಡೌನ್ ಮಾಡಿದ ಮೇಲೆ ಕಲ್ಲಂಗಡಿ ಮತ್ತು ಕರಬೂಜ ಬೆಳೆಗಾರರು ಮತ್ತು ಮಾರಾಟಗಾರರು ಹಾಕಿದ ಬಂಡವಾಳವೂ ಬರದೆ ತೀವ್ರ ನಷ್ಟ ಅನುಭವಿಸುವಂತಾಗಿದೆ.

ಮಾರುಕಟ್ಟೆಗಳು, ಪ್ರಮುಖ ರಸ್ತೆಗಳು, ಆಸ್ಪತ್ರೆಗಳು, ಕಾಲೇಜು ಮೈದಾನದ ಬಳಿ – ಹೀಗೆ ಕಲ್ಲಂಗಡಿ ಮತ್ತು ಕರಬೂಜದ ಹಣ್ಣುಗಳನ್ನು ಇಟ್ಟುಕೊಂಡು ಸಣ್ಣತುಂಡುಗಳಾಗಿ ಕೊಯ್ದು ಮಾರಾಟ ಮಾಡುತ್ತಿದ್ದರು. ಪ್ರತಿ ತುಂಡಿಗೆ 10 ರೂಪಾಯಿ ಬೆಲೆ ನಿಗದಿಪಡಿಸುತ್ತಿದ್ದರು. ಬಿಸಿಲಿನಿಂದ ಬಳಲಿ ಬಂದವರು ಕಲ್ಲಂಗಡಿ ಹಣ್ಣು ತಿಂದು ನಿರಾಳವಾಗಿ ಮನೆಗೆ ತೆರಳುತ್ತಿದ್ದರು. ಜೊತೆಗೆ ಅಂಗಡಿಗಳಲ್ಲಿ ಈ ಹಣ್ಣುಗಳ ಜ್ಯೂಸ್  ಕುಡಿದು ಬಳಲಿಕೆಯಿಂದ ಸ್ವಲ್ಪ ಮಟ್ಟಿಗೆ ಚೇತರಿಸಿಕೊಳ್ಳುತ್ತಿದ್ದರು. ಕೊರೊನ ವೈರಸ್ ವ್ಯಾಪಕವಾಗಿ ಹರಡುವ ಮೊದಲು ಮಾರಾಟಗಾರರು ಕಲ್ಲಂಗಡಿ ಹಣ್ಣುಗಳನ್ನು ಮಾರಾಟ ಮಾಡಿದರು. ಕೆಜಿ ಗೆ 20 ರಿಂದ 25 ರೂಪಾಯಿಯಂತೆ ಒಂದು ಕಲ್ಲಂಗಡಿ ಹಣ್ಣಿಗೆ 200 ರೂಪಾಯಿ ದೊರೆಯುತ್ತಿತ್ತು. ಭಾರತವೇ ಲಾಕ್‌ಡೌನ್ ಆದ ಮೇಲೆ ಇವರ ಬದುಕು ದುಸ್ಥರವಾಗಿದೆ.

ನಾನುಗೌರಿ.ಕಾಮ್ ಜೊತೆ ದೂರವಾಣಿಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ ಪಟೇಲ್ “ಕಲ್ಲಂಗಡಿ ಅಷ್ಟೇ ಅಲ್ಲ, ಅಲ್ಪಾವಧಿ ಬೆಳೆಗಳಿಗೆ ಮಾರುಕಟ್ಟೆಯೇ ಇಲ್ಲ. ಈ ಹಿನ್ನೆಲೆಯಲ್ಲಿ ರೈತರು ಆತ್ಮಹತ್ಯೆಯ ಹಾದಿ ಹಿಡಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರು ಬಹುಸಂಖ್ಯಾತರು ಅವರ ಬಗ್ಗೆ ಆಡಳಿತ ಪಕ್ಷಗಳು ಯೋಚನೆ ಮಾಡುತ್ತಿಲ್ಲ. ಅಲ್ಪಾವಧಿ ಬೆಳೆಗಳಿಗೆ ವ್ಯವಸ್ಥಿತ ಮಾರುಕಟ್ಟೆ ಸಿಗದೆ ನಷ್ಟವಾಗಿದೆ  ದೇಶದ ಯಾವುದೇ ಭಾಗದಲ್ಲಿಯೂ ಶೀತಲ ಕೇಂದ್ರಗಳಿಲ್ಲ. ಹಣ್ಣು ತರಕಾರಿಗಳನ್ನು ಕೋಲ್ಡ್ ಸ್ಟೋರೇಜ್ ನಲ್ಲಿಟ್ಟು ಬೆಲೆ ಬಂದಾಗ ಮಾರಾಟ ಮಾಡಿದರೆ ರೈತರಿಗೆ ಲಾಭವಾಗುತ್ತದೆ. ಆದರೆ ಆ ಪರಿಸ್ಥಿತಿ ದೇಶದಲ್ಲಿ ಎಲ್ಲಿಯೂ ಇಲ್ಲ. ಮುಂದಾಲೋಚನೆಯಿಲ್ಲದ ರಾಜಕಾರಣಿಗಳಿಂದ ಎಲ್ಲಾ ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಕೇಳಿದರೆ ಕೊರೊನ ಕಡೆ ಕೈ ತೋರಿಸುತ್ತಾರೆ” ಎಂದು ಹೇಳಿದರು.

ಕಲ್ಲಂಗಡಿ-ಕರಬೂಜ ಬೆಳೆದ ರೈತರು ತಮ್ಮ ಬೆಳೆಗೆ ಸರಿಯಾದ ಮಾರಕಟ್ಟೆ ಲಭಿಸದೆ ಲಕ್ಷಾಂತರ ರೂ ನಷ್ಟ  ಅನುಭವಿಸಿದ್ದಾರೆ. ಕೊಳ್ಳುವವರೂ ಇಲ್ಲದೆ, ಮಾರಾಟವೂ ಆಗದೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಾರಿಗೆ ಉತ್ತಮ ಕಲ್ಲಂಗಡಿ ಬೆಳೆ ಬಂದಿತ್ತು. ಆದರೆ ಮಾರಾಟವಾಗದೆ, ಹಾಕಿದ ಬಂಡವಾಳ ಮತ್ತು ಮಾಡಿದ ಸಾಲವನ್ನು ತೀರಿಸುವುದು ಕಷ್ಟವಾಗಿದೆ. ಕಲ್ಲಂಗಡಿ ಮತ್ತು ಕರಬೂಜ ಬೆಳೆಯಲು ಸಾವಿರಾರು ರೂ. ಸಾಲ ಮಾಡಿದ್ದೆವು. ಕೊರೊನ ರೋಗದಿಂದ ಇಡೀ ಬೆಳೆಯೇ ನಾಶವಾಯಿತು . ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ಬೆಳೆಗಾರರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಸಿ. ಅಜ್ಜಪ್ಪ “ಏಕಾಏಕಿ ಲಾಕ್‌ಡೌನ್ ಮಾಡಿದ್ದರಿಂದ ಕೃಷಿಕರಿಗೆ, ರೈತರಿಗೆ ಭಾರೀ ಅನ್ಯಾಯವಾಗಿದೆ. ಲಾಕ್‌ಡೌನ್ ಮಾಡುವ ಮೊದಲು ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು. ಅದನ್ನು ಮಾಡಿಲ್ಲ. ಹೀಗಾಗಿ ರೈತರು ಬೆಳೆದ ಟೊಮೋಟ, ಕಲ್ಲಂಗಡಿ ಹಣ್ಣನ್ನು ಸರ್ಕಾರವೇ ನೇರ ಖರೀದಿ ಮಾಡಬೇಕು. ರೈತರ ನೆರವಿಗೆ ಬರಬೇಕು. ಕೇಂದ್ರ ಸರ್ಕಾರದ ಕ್ರಮದಿಂದ ಬೆಳೆದ ಹಣ್ಣುಗಳು ತಿನ್ನಲೂ ಆಗದೆ ಮಣ್ಣು ಪಾಲಾಗುತ್ತಿವೆ. ಇದರಿಂದ ಸರ್ಕಾರ ಖರೀದಿ ಮಾಡಿ ಜನರಿಗೆ ವಿತರಿಸುವ ಕೆಲಸ ಮಾಡಬೇಕು” ಎಂದು ಆಗ್ರಹಿಸಿದರು.

ಲಾಕ್‌ಡೌನ್ ಪರಿಣಾಮ ಹಣ್ಣಿಗೆ ವೈಜ್ಞಾನಿಕ ಬೆಲೆ ಮತ್ತು ಮಾರುಕಟ್ಟೆ ಸಿಗದೆ ಕಲಬುರಗಿಯಲ್ಲಿ ರೈತರೊಬ್ಬರು ಮೃತಪಟ್ಟಿದ್ದಾರೆ. ವರ್ಷಕ್ಕೊಮ್ಮೆ ಬರುವ ಈ ಬೆಳೆಯಿಂದ ಒಟ್ಟಿಗೆ ಒಂದಿಷ್ಟು ಹಣವನ್ನು ರೈತರು ಮತ್ತು ಮಾರಾಟಗಾರರು ಪಡೆದು ಅದರಲ್ಲೇ ಜೀವನ ಸಾಗಿಸುತ್ತಿದ್ದರು. ಈಗ ಬೆಳೆ ಬೆಳೆದರೂ ಅದು ಹಣವಾಗಿ ಪರಿವರ್ತನೆಯಾಗುವ ಹೊತ್ತಿಗೆ ಕೊರೊನ ಬಂದು ರೈತರ ಬದುಕನ್ನೇ ನಾಶ ಮಾಡಿದೆ. ಕಲ್ಲಂಗಡಿಯೂ ಇಲ್ಲ, ಕರಬೂಜವೂ ಇಲ್ಲ, ಎಳೆನೀರು ಸಿಗುತ್ತಿಲ್ಲ. ಬೇಸಿಗೆಯ ಬೆಳೆಯಿಂದ ಸಂಪೂರ್ಣ ಕೈಸುಟ್ಟುಕೊಂಡಿರುವ ರೈತರ ನೆರವಿಗೆ ಸರ್ಕಾರ ಧಾವಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...