HomeUncategorizedಏಕಾಏಕಿ ಲಾಕ್‌ಡೌನ್‌ ಘೋಷಿಸಿದ ಸರ್ಕಾರ; ದುಸ್ತರಗೊಂಡಿದೆ ’ಕಲ್ಲಂಗಡಿ’ ಬೆಳೆದ ರೈತರ ಬದುಕು

ಏಕಾಏಕಿ ಲಾಕ್‌ಡೌನ್‌ ಘೋಷಿಸಿದ ಸರ್ಕಾರ; ದುಸ್ತರಗೊಂಡಿದೆ ’ಕಲ್ಲಂಗಡಿ’ ಬೆಳೆದ ರೈತರ ಬದುಕು

- Advertisement -
- Advertisement -

ಬೇಸಿಗೆ ಬಂತೆಂದರೆ ಕರಬೂಜ, ಕಲ್ಲಂಗಡಿ ಎಲ್ಲೆಲ್ಲೂ ಕಂಡುಬರುವುದು ಸಾಮಾನ್ಯ. ರಸ್ತೆಗಳ ಬದಿಯಲ್ಲಿ ರಾಶಿ ರಾಶಿ ಹಾಕಿಕೊಂಡಿರುತ್ತಿದ್ದ ಕಲ್ಲಂಗಡಿ, ಕರಬೂಜ ಹಣ್ಣುಗಳು ಈ ಬಾರಿ ಕಣ್ಮರೆಯಾಗಿವೆ. ಬೇಸಿಗೆ ಬಿರುಬಿಸಿಲಿನ ಧಗೆಯಿಂದ ನಿವಾರಿಸಿಕೊಳ್ಳಲು ಜನರು ಈ ಹಣ್ಣು ತಿಂದು, ಜ್ಯೂಸ್ ಕುಡಿದು ದೇಹ ತಂಪು ಮಾಡಿಕೊಳ್ಳುತ್ತಿದ್ದರು. ಕೊರೊನ ವೈರಸ್ ವ್ಯಾಪಿಸಿದ ಹಿನ್ನೆಲೆಯಲ್ಲಿ ದೇಶ ಲಾಕ್‌ಡೌನ್ ಮಾಡಿದ ಮೇಲೆ ಕಲ್ಲಂಗಡಿ ಮತ್ತು ಕರಬೂಜ ಬೆಳೆಗಾರರು ಮತ್ತು ಮಾರಾಟಗಾರರು ಹಾಕಿದ ಬಂಡವಾಳವೂ ಬರದೆ ತೀವ್ರ ನಷ್ಟ ಅನುಭವಿಸುವಂತಾಗಿದೆ.

ಮಾರುಕಟ್ಟೆಗಳು, ಪ್ರಮುಖ ರಸ್ತೆಗಳು, ಆಸ್ಪತ್ರೆಗಳು, ಕಾಲೇಜು ಮೈದಾನದ ಬಳಿ – ಹೀಗೆ ಕಲ್ಲಂಗಡಿ ಮತ್ತು ಕರಬೂಜದ ಹಣ್ಣುಗಳನ್ನು ಇಟ್ಟುಕೊಂಡು ಸಣ್ಣತುಂಡುಗಳಾಗಿ ಕೊಯ್ದು ಮಾರಾಟ ಮಾಡುತ್ತಿದ್ದರು. ಪ್ರತಿ ತುಂಡಿಗೆ 10 ರೂಪಾಯಿ ಬೆಲೆ ನಿಗದಿಪಡಿಸುತ್ತಿದ್ದರು. ಬಿಸಿಲಿನಿಂದ ಬಳಲಿ ಬಂದವರು ಕಲ್ಲಂಗಡಿ ಹಣ್ಣು ತಿಂದು ನಿರಾಳವಾಗಿ ಮನೆಗೆ ತೆರಳುತ್ತಿದ್ದರು. ಜೊತೆಗೆ ಅಂಗಡಿಗಳಲ್ಲಿ ಈ ಹಣ್ಣುಗಳ ಜ್ಯೂಸ್  ಕುಡಿದು ಬಳಲಿಕೆಯಿಂದ ಸ್ವಲ್ಪ ಮಟ್ಟಿಗೆ ಚೇತರಿಸಿಕೊಳ್ಳುತ್ತಿದ್ದರು. ಕೊರೊನ ವೈರಸ್ ವ್ಯಾಪಕವಾಗಿ ಹರಡುವ ಮೊದಲು ಮಾರಾಟಗಾರರು ಕಲ್ಲಂಗಡಿ ಹಣ್ಣುಗಳನ್ನು ಮಾರಾಟ ಮಾಡಿದರು. ಕೆಜಿ ಗೆ 20 ರಿಂದ 25 ರೂಪಾಯಿಯಂತೆ ಒಂದು ಕಲ್ಲಂಗಡಿ ಹಣ್ಣಿಗೆ 200 ರೂಪಾಯಿ ದೊರೆಯುತ್ತಿತ್ತು. ಭಾರತವೇ ಲಾಕ್‌ಡೌನ್ ಆದ ಮೇಲೆ ಇವರ ಬದುಕು ದುಸ್ಥರವಾಗಿದೆ.

ನಾನುಗೌರಿ.ಕಾಮ್ ಜೊತೆ ದೂರವಾಣಿಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ ಪಟೇಲ್ “ಕಲ್ಲಂಗಡಿ ಅಷ್ಟೇ ಅಲ್ಲ, ಅಲ್ಪಾವಧಿ ಬೆಳೆಗಳಿಗೆ ಮಾರುಕಟ್ಟೆಯೇ ಇಲ್ಲ. ಈ ಹಿನ್ನೆಲೆಯಲ್ಲಿ ರೈತರು ಆತ್ಮಹತ್ಯೆಯ ಹಾದಿ ಹಿಡಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರು ಬಹುಸಂಖ್ಯಾತರು ಅವರ ಬಗ್ಗೆ ಆಡಳಿತ ಪಕ್ಷಗಳು ಯೋಚನೆ ಮಾಡುತ್ತಿಲ್ಲ. ಅಲ್ಪಾವಧಿ ಬೆಳೆಗಳಿಗೆ ವ್ಯವಸ್ಥಿತ ಮಾರುಕಟ್ಟೆ ಸಿಗದೆ ನಷ್ಟವಾಗಿದೆ  ದೇಶದ ಯಾವುದೇ ಭಾಗದಲ್ಲಿಯೂ ಶೀತಲ ಕೇಂದ್ರಗಳಿಲ್ಲ. ಹಣ್ಣು ತರಕಾರಿಗಳನ್ನು ಕೋಲ್ಡ್ ಸ್ಟೋರೇಜ್ ನಲ್ಲಿಟ್ಟು ಬೆಲೆ ಬಂದಾಗ ಮಾರಾಟ ಮಾಡಿದರೆ ರೈತರಿಗೆ ಲಾಭವಾಗುತ್ತದೆ. ಆದರೆ ಆ ಪರಿಸ್ಥಿತಿ ದೇಶದಲ್ಲಿ ಎಲ್ಲಿಯೂ ಇಲ್ಲ. ಮುಂದಾಲೋಚನೆಯಿಲ್ಲದ ರಾಜಕಾರಣಿಗಳಿಂದ ಎಲ್ಲಾ ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಕೇಳಿದರೆ ಕೊರೊನ ಕಡೆ ಕೈ ತೋರಿಸುತ್ತಾರೆ” ಎಂದು ಹೇಳಿದರು.

ಕಲ್ಲಂಗಡಿ-ಕರಬೂಜ ಬೆಳೆದ ರೈತರು ತಮ್ಮ ಬೆಳೆಗೆ ಸರಿಯಾದ ಮಾರಕಟ್ಟೆ ಲಭಿಸದೆ ಲಕ್ಷಾಂತರ ರೂ ನಷ್ಟ  ಅನುಭವಿಸಿದ್ದಾರೆ. ಕೊಳ್ಳುವವರೂ ಇಲ್ಲದೆ, ಮಾರಾಟವೂ ಆಗದೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಾರಿಗೆ ಉತ್ತಮ ಕಲ್ಲಂಗಡಿ ಬೆಳೆ ಬಂದಿತ್ತು. ಆದರೆ ಮಾರಾಟವಾಗದೆ, ಹಾಕಿದ ಬಂಡವಾಳ ಮತ್ತು ಮಾಡಿದ ಸಾಲವನ್ನು ತೀರಿಸುವುದು ಕಷ್ಟವಾಗಿದೆ. ಕಲ್ಲಂಗಡಿ ಮತ್ತು ಕರಬೂಜ ಬೆಳೆಯಲು ಸಾವಿರಾರು ರೂ. ಸಾಲ ಮಾಡಿದ್ದೆವು. ಕೊರೊನ ರೋಗದಿಂದ ಇಡೀ ಬೆಳೆಯೇ ನಾಶವಾಯಿತು . ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ಬೆಳೆಗಾರರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಸಿ. ಅಜ್ಜಪ್ಪ “ಏಕಾಏಕಿ ಲಾಕ್‌ಡೌನ್ ಮಾಡಿದ್ದರಿಂದ ಕೃಷಿಕರಿಗೆ, ರೈತರಿಗೆ ಭಾರೀ ಅನ್ಯಾಯವಾಗಿದೆ. ಲಾಕ್‌ಡೌನ್ ಮಾಡುವ ಮೊದಲು ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು. ಅದನ್ನು ಮಾಡಿಲ್ಲ. ಹೀಗಾಗಿ ರೈತರು ಬೆಳೆದ ಟೊಮೋಟ, ಕಲ್ಲಂಗಡಿ ಹಣ್ಣನ್ನು ಸರ್ಕಾರವೇ ನೇರ ಖರೀದಿ ಮಾಡಬೇಕು. ರೈತರ ನೆರವಿಗೆ ಬರಬೇಕು. ಕೇಂದ್ರ ಸರ್ಕಾರದ ಕ್ರಮದಿಂದ ಬೆಳೆದ ಹಣ್ಣುಗಳು ತಿನ್ನಲೂ ಆಗದೆ ಮಣ್ಣು ಪಾಲಾಗುತ್ತಿವೆ. ಇದರಿಂದ ಸರ್ಕಾರ ಖರೀದಿ ಮಾಡಿ ಜನರಿಗೆ ವಿತರಿಸುವ ಕೆಲಸ ಮಾಡಬೇಕು” ಎಂದು ಆಗ್ರಹಿಸಿದರು.

ಲಾಕ್‌ಡೌನ್ ಪರಿಣಾಮ ಹಣ್ಣಿಗೆ ವೈಜ್ಞಾನಿಕ ಬೆಲೆ ಮತ್ತು ಮಾರುಕಟ್ಟೆ ಸಿಗದೆ ಕಲಬುರಗಿಯಲ್ಲಿ ರೈತರೊಬ್ಬರು ಮೃತಪಟ್ಟಿದ್ದಾರೆ. ವರ್ಷಕ್ಕೊಮ್ಮೆ ಬರುವ ಈ ಬೆಳೆಯಿಂದ ಒಟ್ಟಿಗೆ ಒಂದಿಷ್ಟು ಹಣವನ್ನು ರೈತರು ಮತ್ತು ಮಾರಾಟಗಾರರು ಪಡೆದು ಅದರಲ್ಲೇ ಜೀವನ ಸಾಗಿಸುತ್ತಿದ್ದರು. ಈಗ ಬೆಳೆ ಬೆಳೆದರೂ ಅದು ಹಣವಾಗಿ ಪರಿವರ್ತನೆಯಾಗುವ ಹೊತ್ತಿಗೆ ಕೊರೊನ ಬಂದು ರೈತರ ಬದುಕನ್ನೇ ನಾಶ ಮಾಡಿದೆ. ಕಲ್ಲಂಗಡಿಯೂ ಇಲ್ಲ, ಕರಬೂಜವೂ ಇಲ್ಲ, ಎಳೆನೀರು ಸಿಗುತ್ತಿಲ್ಲ. ಬೇಸಿಗೆಯ ಬೆಳೆಯಿಂದ ಸಂಪೂರ್ಣ ಕೈಸುಟ್ಟುಕೊಂಡಿರುವ ರೈತರ ನೆರವಿಗೆ ಸರ್ಕಾರ ಧಾವಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...