HomeUncategorizedಏಕಾಏಕಿ ಲಾಕ್‌ಡೌನ್‌ ಘೋಷಿಸಿದ ಸರ್ಕಾರ; ದುಸ್ತರಗೊಂಡಿದೆ ’ಕಲ್ಲಂಗಡಿ’ ಬೆಳೆದ ರೈತರ ಬದುಕು

ಏಕಾಏಕಿ ಲಾಕ್‌ಡೌನ್‌ ಘೋಷಿಸಿದ ಸರ್ಕಾರ; ದುಸ್ತರಗೊಂಡಿದೆ ’ಕಲ್ಲಂಗಡಿ’ ಬೆಳೆದ ರೈತರ ಬದುಕು

- Advertisement -
- Advertisement -

ಬೇಸಿಗೆ ಬಂತೆಂದರೆ ಕರಬೂಜ, ಕಲ್ಲಂಗಡಿ ಎಲ್ಲೆಲ್ಲೂ ಕಂಡುಬರುವುದು ಸಾಮಾನ್ಯ. ರಸ್ತೆಗಳ ಬದಿಯಲ್ಲಿ ರಾಶಿ ರಾಶಿ ಹಾಕಿಕೊಂಡಿರುತ್ತಿದ್ದ ಕಲ್ಲಂಗಡಿ, ಕರಬೂಜ ಹಣ್ಣುಗಳು ಈ ಬಾರಿ ಕಣ್ಮರೆಯಾಗಿವೆ. ಬೇಸಿಗೆ ಬಿರುಬಿಸಿಲಿನ ಧಗೆಯಿಂದ ನಿವಾರಿಸಿಕೊಳ್ಳಲು ಜನರು ಈ ಹಣ್ಣು ತಿಂದು, ಜ್ಯೂಸ್ ಕುಡಿದು ದೇಹ ತಂಪು ಮಾಡಿಕೊಳ್ಳುತ್ತಿದ್ದರು. ಕೊರೊನ ವೈರಸ್ ವ್ಯಾಪಿಸಿದ ಹಿನ್ನೆಲೆಯಲ್ಲಿ ದೇಶ ಲಾಕ್‌ಡೌನ್ ಮಾಡಿದ ಮೇಲೆ ಕಲ್ಲಂಗಡಿ ಮತ್ತು ಕರಬೂಜ ಬೆಳೆಗಾರರು ಮತ್ತು ಮಾರಾಟಗಾರರು ಹಾಕಿದ ಬಂಡವಾಳವೂ ಬರದೆ ತೀವ್ರ ನಷ್ಟ ಅನುಭವಿಸುವಂತಾಗಿದೆ.

ಮಾರುಕಟ್ಟೆಗಳು, ಪ್ರಮುಖ ರಸ್ತೆಗಳು, ಆಸ್ಪತ್ರೆಗಳು, ಕಾಲೇಜು ಮೈದಾನದ ಬಳಿ – ಹೀಗೆ ಕಲ್ಲಂಗಡಿ ಮತ್ತು ಕರಬೂಜದ ಹಣ್ಣುಗಳನ್ನು ಇಟ್ಟುಕೊಂಡು ಸಣ್ಣತುಂಡುಗಳಾಗಿ ಕೊಯ್ದು ಮಾರಾಟ ಮಾಡುತ್ತಿದ್ದರು. ಪ್ರತಿ ತುಂಡಿಗೆ 10 ರೂಪಾಯಿ ಬೆಲೆ ನಿಗದಿಪಡಿಸುತ್ತಿದ್ದರು. ಬಿಸಿಲಿನಿಂದ ಬಳಲಿ ಬಂದವರು ಕಲ್ಲಂಗಡಿ ಹಣ್ಣು ತಿಂದು ನಿರಾಳವಾಗಿ ಮನೆಗೆ ತೆರಳುತ್ತಿದ್ದರು. ಜೊತೆಗೆ ಅಂಗಡಿಗಳಲ್ಲಿ ಈ ಹಣ್ಣುಗಳ ಜ್ಯೂಸ್  ಕುಡಿದು ಬಳಲಿಕೆಯಿಂದ ಸ್ವಲ್ಪ ಮಟ್ಟಿಗೆ ಚೇತರಿಸಿಕೊಳ್ಳುತ್ತಿದ್ದರು. ಕೊರೊನ ವೈರಸ್ ವ್ಯಾಪಕವಾಗಿ ಹರಡುವ ಮೊದಲು ಮಾರಾಟಗಾರರು ಕಲ್ಲಂಗಡಿ ಹಣ್ಣುಗಳನ್ನು ಮಾರಾಟ ಮಾಡಿದರು. ಕೆಜಿ ಗೆ 20 ರಿಂದ 25 ರೂಪಾಯಿಯಂತೆ ಒಂದು ಕಲ್ಲಂಗಡಿ ಹಣ್ಣಿಗೆ 200 ರೂಪಾಯಿ ದೊರೆಯುತ್ತಿತ್ತು. ಭಾರತವೇ ಲಾಕ್‌ಡೌನ್ ಆದ ಮೇಲೆ ಇವರ ಬದುಕು ದುಸ್ಥರವಾಗಿದೆ.

ನಾನುಗೌರಿ.ಕಾಮ್ ಜೊತೆ ದೂರವಾಣಿಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ ಪಟೇಲ್ “ಕಲ್ಲಂಗಡಿ ಅಷ್ಟೇ ಅಲ್ಲ, ಅಲ್ಪಾವಧಿ ಬೆಳೆಗಳಿಗೆ ಮಾರುಕಟ್ಟೆಯೇ ಇಲ್ಲ. ಈ ಹಿನ್ನೆಲೆಯಲ್ಲಿ ರೈತರು ಆತ್ಮಹತ್ಯೆಯ ಹಾದಿ ಹಿಡಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರು ಬಹುಸಂಖ್ಯಾತರು ಅವರ ಬಗ್ಗೆ ಆಡಳಿತ ಪಕ್ಷಗಳು ಯೋಚನೆ ಮಾಡುತ್ತಿಲ್ಲ. ಅಲ್ಪಾವಧಿ ಬೆಳೆಗಳಿಗೆ ವ್ಯವಸ್ಥಿತ ಮಾರುಕಟ್ಟೆ ಸಿಗದೆ ನಷ್ಟವಾಗಿದೆ  ದೇಶದ ಯಾವುದೇ ಭಾಗದಲ್ಲಿಯೂ ಶೀತಲ ಕೇಂದ್ರಗಳಿಲ್ಲ. ಹಣ್ಣು ತರಕಾರಿಗಳನ್ನು ಕೋಲ್ಡ್ ಸ್ಟೋರೇಜ್ ನಲ್ಲಿಟ್ಟು ಬೆಲೆ ಬಂದಾಗ ಮಾರಾಟ ಮಾಡಿದರೆ ರೈತರಿಗೆ ಲಾಭವಾಗುತ್ತದೆ. ಆದರೆ ಆ ಪರಿಸ್ಥಿತಿ ದೇಶದಲ್ಲಿ ಎಲ್ಲಿಯೂ ಇಲ್ಲ. ಮುಂದಾಲೋಚನೆಯಿಲ್ಲದ ರಾಜಕಾರಣಿಗಳಿಂದ ಎಲ್ಲಾ ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಕೇಳಿದರೆ ಕೊರೊನ ಕಡೆ ಕೈ ತೋರಿಸುತ್ತಾರೆ” ಎಂದು ಹೇಳಿದರು.

ಕಲ್ಲಂಗಡಿ-ಕರಬೂಜ ಬೆಳೆದ ರೈತರು ತಮ್ಮ ಬೆಳೆಗೆ ಸರಿಯಾದ ಮಾರಕಟ್ಟೆ ಲಭಿಸದೆ ಲಕ್ಷಾಂತರ ರೂ ನಷ್ಟ  ಅನುಭವಿಸಿದ್ದಾರೆ. ಕೊಳ್ಳುವವರೂ ಇಲ್ಲದೆ, ಮಾರಾಟವೂ ಆಗದೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಾರಿಗೆ ಉತ್ತಮ ಕಲ್ಲಂಗಡಿ ಬೆಳೆ ಬಂದಿತ್ತು. ಆದರೆ ಮಾರಾಟವಾಗದೆ, ಹಾಕಿದ ಬಂಡವಾಳ ಮತ್ತು ಮಾಡಿದ ಸಾಲವನ್ನು ತೀರಿಸುವುದು ಕಷ್ಟವಾಗಿದೆ. ಕಲ್ಲಂಗಡಿ ಮತ್ತು ಕರಬೂಜ ಬೆಳೆಯಲು ಸಾವಿರಾರು ರೂ. ಸಾಲ ಮಾಡಿದ್ದೆವು. ಕೊರೊನ ರೋಗದಿಂದ ಇಡೀ ಬೆಳೆಯೇ ನಾಶವಾಯಿತು . ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ಬೆಳೆಗಾರರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಸಿ. ಅಜ್ಜಪ್ಪ “ಏಕಾಏಕಿ ಲಾಕ್‌ಡೌನ್ ಮಾಡಿದ್ದರಿಂದ ಕೃಷಿಕರಿಗೆ, ರೈತರಿಗೆ ಭಾರೀ ಅನ್ಯಾಯವಾಗಿದೆ. ಲಾಕ್‌ಡೌನ್ ಮಾಡುವ ಮೊದಲು ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು. ಅದನ್ನು ಮಾಡಿಲ್ಲ. ಹೀಗಾಗಿ ರೈತರು ಬೆಳೆದ ಟೊಮೋಟ, ಕಲ್ಲಂಗಡಿ ಹಣ್ಣನ್ನು ಸರ್ಕಾರವೇ ನೇರ ಖರೀದಿ ಮಾಡಬೇಕು. ರೈತರ ನೆರವಿಗೆ ಬರಬೇಕು. ಕೇಂದ್ರ ಸರ್ಕಾರದ ಕ್ರಮದಿಂದ ಬೆಳೆದ ಹಣ್ಣುಗಳು ತಿನ್ನಲೂ ಆಗದೆ ಮಣ್ಣು ಪಾಲಾಗುತ್ತಿವೆ. ಇದರಿಂದ ಸರ್ಕಾರ ಖರೀದಿ ಮಾಡಿ ಜನರಿಗೆ ವಿತರಿಸುವ ಕೆಲಸ ಮಾಡಬೇಕು” ಎಂದು ಆಗ್ರಹಿಸಿದರು.

ಲಾಕ್‌ಡೌನ್ ಪರಿಣಾಮ ಹಣ್ಣಿಗೆ ವೈಜ್ಞಾನಿಕ ಬೆಲೆ ಮತ್ತು ಮಾರುಕಟ್ಟೆ ಸಿಗದೆ ಕಲಬುರಗಿಯಲ್ಲಿ ರೈತರೊಬ್ಬರು ಮೃತಪಟ್ಟಿದ್ದಾರೆ. ವರ್ಷಕ್ಕೊಮ್ಮೆ ಬರುವ ಈ ಬೆಳೆಯಿಂದ ಒಟ್ಟಿಗೆ ಒಂದಿಷ್ಟು ಹಣವನ್ನು ರೈತರು ಮತ್ತು ಮಾರಾಟಗಾರರು ಪಡೆದು ಅದರಲ್ಲೇ ಜೀವನ ಸಾಗಿಸುತ್ತಿದ್ದರು. ಈಗ ಬೆಳೆ ಬೆಳೆದರೂ ಅದು ಹಣವಾಗಿ ಪರಿವರ್ತನೆಯಾಗುವ ಹೊತ್ತಿಗೆ ಕೊರೊನ ಬಂದು ರೈತರ ಬದುಕನ್ನೇ ನಾಶ ಮಾಡಿದೆ. ಕಲ್ಲಂಗಡಿಯೂ ಇಲ್ಲ, ಕರಬೂಜವೂ ಇಲ್ಲ, ಎಳೆನೀರು ಸಿಗುತ್ತಿಲ್ಲ. ಬೇಸಿಗೆಯ ಬೆಳೆಯಿಂದ ಸಂಪೂರ್ಣ ಕೈಸುಟ್ಟುಕೊಂಡಿರುವ ರೈತರ ನೆರವಿಗೆ ಸರ್ಕಾರ ಧಾವಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...