Homeಕರ್ನಾಟಕ‘ಹತ್ತು ದಿನದಲ್ಲಿ ಪಠ್ಯದಲ್ಲಿರುವ ಲೋಪ ತಿದ್ದಿ’: ಸರ್ಕಾರಕ್ಕೆ ಗಡುವು ನೀಡಿದ ಲಿಂಗಾಯತ ಮಠಾಧೀಶರು

‘ಹತ್ತು ದಿನದಲ್ಲಿ ಪಠ್ಯದಲ್ಲಿರುವ ಲೋಪ ತಿದ್ದಿ’: ಸರ್ಕಾರಕ್ಕೆ ಗಡುವು ನೀಡಿದ ಲಿಂಗಾಯತ ಮಠಾಧೀಶರು

- Advertisement -
- Advertisement -

ಸಮಾಜ ಸುಧಾರಕ ಬಸವಣ್ಣನವರ ಬಗ್ಗೆ ಶಾಲಾ ಪಠ್ಯ ಪುಸ್ತಕದಲ್ಲಿ ಆಗಿರುವ ಲೋಪದೋಷಗಳನ್ನು ಸರ್ಕಾರ ಹತ್ತು ದಿನಗಳ ಒಳಗಾಗಿ ಸರಿಪಡಿಸಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಉತ್ತರ ಕರ್ನಾಟಕದ ಪ್ರಮುಖ ಲಿಂಗಾಯತ ಮಠಾಧೀಶರು ಸರ್ಕಾರಕ್ಕೆ ಎಚ್ಚರಿಕೆಯ ಜೊತೆಗೆ ಗಡುವು ನೀಡಿದ್ದಾರೆ. ಧಾರವಾಡದ ಕಲ್ಯಾಣ ನಗರದಲ್ಲಿರುವ ಶ್ರೀಸಿದ್ದರಾಮೇಶ್ವರ ಮಾರ್ಗದರ್ಶಿಯಲ್ಲಿ ಮಂಗಳವಾರ ಸುದೀರ್ಘ ಐದು ಗಂಟೆಗಳ ಸಭೆ ನಡೆಸಿದ 21 ಲಿಂಗಾಯತ ಮಠಾಧೀಶರು ಈ ನಿರ್ಣಯ ಅಂಗೀಕರಿಸಿ ಸರ್ಕಾರಕ್ಕೆ ಕಳುಹಿಸಿಕೊಟ್ಟಿದ್ದಾರೆ.

“ಸಮಾಜ ವಿಜ್ಞಾನ ಭಾಗ-1ರ 9ನೇ ತರಗತಿ ಪಠ್ಯಪುಸ್ತಕವನ್ನು ಶೀಘ್ರ ಬದಲಿಸಬೇಕು. ಹತ್ತು ದಿನಗಳ ಒಳಗೆ ಬದಲಿಸಲು ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಉಗ್ರ ಪ್ರತಿಭಟನೆ ರೂಪಿಸುತ್ತೇವೆ” ಎಂದು ಸಾಣೆಹಳ್ಳಿ ತರಳುಬಾಳು ಮಹಾಸಂಸ್ಥಾನದ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಠಾಧೀಶರ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಾಣೆಹಳ್ಳಿ ಸ್ವಾಮೀಜಿ, “9ನೇ ತರಗತಿಗೆ ಇರುವ ಸಮಾಜ ವಿಜ್ಞಾನ ಭಾಗ 1ರ ಪಠ್ಯದಲ್ಲಿ ಹಲವು ದೋಷಗಳನ್ನು ಗುರುತಿಸಿದ್ದೇನೆ. ವೈದಿಕ ಪರಂಪರೆಯನ್ನು ಬಿಂಬಿಸುವ ಕೆಲಸವನ್ನು ವ್ಯವಸ್ಥಿತವಾಗಿ ಈ ಪಠ್ಯದಲ್ಲಿ ನಡೆಸಲಾಗಿದೆ” ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್‌ ಹೆಗಡೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ನಾಯಕರೆಂದು ಗುರುತಿಸಿದ ಬಿಜೆಪಿ

“ವೈದಿಕ ಪರಂಪರೆ ಧಿಕ್ಕರಿಸಿದ್ದ ಬಸವಣ್ಣನವರಿಗೆ ಯಾವುದೇ ಶೈವ ಗುರುಗಳು ದೀಕ್ಷೆ ಕೊಟ್ಟಿಲ್ಲ. ಆದರೆ ಪುಸ್ತಕದಲ್ಲಿ ಮಾತ್ರ ಶೈವ ಗುರುಗಳು ದೀಕ್ಷೆ ಕೊಟ್ಟರು ಎಂಬ ಉಲ್ಲೇಖವಿದೆ. ಈ ಸಂಬಂಧ ನಾವು ಮಠಾಧೀಶರು ಈಗಾಗಲೇ ಮುಖ್ಯಮಂತ್ರಿಗೆ ಮನವಿ ಕೊಟ್ಟಿದ್ದೇವೆ. ಅವರು ಬಸವೇಶ್ವರರ ಪಠ್ಯದಲ್ಲಿರುವ ದೋಷಗಳನ್ನು ಸರಿಪಡಿಸುವುದಾಗಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಇವತ್ತು ಸಮಗ್ರವಾಗಿ ಚರ್ಚೆ ಮಾಡಿದ್ದೇವೆ. ಮುಂದೆ ಪಠ್ಯದಲ್ಲಿ ಎಲ್ಲಿಯೂ ಕೂಡ ಬಸವ ತತ್ವಕ್ಕೆ ಅಪಚಾರ ಆಗಬಾರದು. ಬಸವ ತತ್ವವನ್ನು ಸರಳವಾಗಿ ಬಿಂಬಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಬಸವೇಶ್ವರರು ಮತ್ತು ಅವರ ಪ್ರತಿಪಾದಿಸುತ್ತಿದ್ದ ವಿಷಯಗಳ ಬಗ್ಗೆ ನಾವೇ ಹೊಸ ಪಠ್ಯವೊಂದನ್ನು ರಚಿಸಿ, ಮುಖ್ಯಮಂತ್ರಿಗೆ ಕಳುಹಿಸುತ್ತೇವೆ. ಅದನ್ನು ಸರ್ಕಾರ ಒಪ್ಪಿಕೊಂಡರೆ ಸಂತೋಷ ಪಡುತ್ತೇವೆ. ನಾಳೆಯೇ ಎಲ್ಲರೂ ಸೇರಿ ಒಂದು ಮನವಿ ಕೊಡುತ್ತೇವೆ. ಈಗ ಇರುವ ಪಠ್ಯವನ್ನು ಹತ್ತು ದಿನಗಳಲ್ಲಿ ಬದಲಿಸಬೇಕು. ಇಲ್ಲವಾದಲ್ಲಿ ಸರ್ಕಾರದ ವಿರುದ್ಧ ಉಗ್ರ ರೀತಿಯ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಅವರು ಎಚ್ಚರಿಸಿದ್ದಾರೆ.

ಎಲ್ಲ ಮಹನೀಯರ ಪಠ್ಯವೂ ಸರಿಯಾಗಲಿ

ಪಠ್ಯ ಪುಸ್ತಕದಲ್ಲಿ ಕೇವಲ ಬಸವಣ್ಣ ಮಾತ್ರವಲ್ಲ, ಕುವೆಂಪು, ಡಾ ಬಿ.ಆರ್.ಅಂಬೇಡ್ಕರ್, ನಾರಾಯಣಗುರು ಸೇರಿದಂತೆ ಎಲ್ಲ ಮಹನೀಯರ ಕುರಿತು ಆಗಿರುವ ಲೋಪದೋಷಗಳನ್ನು ಕೂಡಲೇ ಸರ್ಕಾರ ಸರಿ ಮಾಡಬೇಕು. ಕೆಲವು ಸಾಹಿತಿಗಳು ಈಗಾಗಲೇ ತಮ್ಮ ಲೇಖನಗಳನ್ನು ಹಿಂದಕ್ಕೆ ಪಡೆದುಕೊಳ್ಳುತ್ತಿದ್ದಾರೆ. ಆದರೆ ಲೋಪದೋಷ ಸರಿಪಡಿಸಿದರೆ ಅವರು ಮರಳಿ ಕೊಡುವ ವಿಶ್ವಾಸವಿದೆ ಎಂದು ಗದಗ ತೋಂಟದಾರ್ಯ ಮಠದ ಡಾ ತೋಂಟದ ಸಿದ್ದರಾಮ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಭೀಕರ ಹತ್ಯೆ: ನಾಲೆಯಲ್ಲಿ ತೇಲಿ ಬಂದ ಅರ್ಧ ಕತ್ತರಿಸಿದ ಮಹಿಳೆಯರ ಮೃತದೇಹಗಳು

ಬಸವಣ್ಣನವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಅವುಗಳಿಗೆ ಸರ್ಕಾರ ಗಮನ ಕೊಡದೇ ನೇರವಾಗಿ ಬಸವ ತತ್ವ ಮತ್ತು ವಚನ ಸಾಹಿತ್ಯವನ್ನು ಗಮನದಲ್ಲಿಟ್ಟುಕೊಂಡು ಲೋಪದೋಷಗಳನ್ನು ತಿದ್ದುಪಡಿ ಮಾಡಬೇಕು ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಸ್ವಾಮೀಜಿಗಳು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...