Homeಕರ್ನಾಟಕ‘ಹತ್ತು ದಿನದಲ್ಲಿ ಪಠ್ಯದಲ್ಲಿರುವ ಲೋಪ ತಿದ್ದಿ’: ಸರ್ಕಾರಕ್ಕೆ ಗಡುವು ನೀಡಿದ ಲಿಂಗಾಯತ ಮಠಾಧೀಶರು

‘ಹತ್ತು ದಿನದಲ್ಲಿ ಪಠ್ಯದಲ್ಲಿರುವ ಲೋಪ ತಿದ್ದಿ’: ಸರ್ಕಾರಕ್ಕೆ ಗಡುವು ನೀಡಿದ ಲಿಂಗಾಯತ ಮಠಾಧೀಶರು

- Advertisement -
- Advertisement -

ಸಮಾಜ ಸುಧಾರಕ ಬಸವಣ್ಣನವರ ಬಗ್ಗೆ ಶಾಲಾ ಪಠ್ಯ ಪುಸ್ತಕದಲ್ಲಿ ಆಗಿರುವ ಲೋಪದೋಷಗಳನ್ನು ಸರ್ಕಾರ ಹತ್ತು ದಿನಗಳ ಒಳಗಾಗಿ ಸರಿಪಡಿಸಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಉತ್ತರ ಕರ್ನಾಟಕದ ಪ್ರಮುಖ ಲಿಂಗಾಯತ ಮಠಾಧೀಶರು ಸರ್ಕಾರಕ್ಕೆ ಎಚ್ಚರಿಕೆಯ ಜೊತೆಗೆ ಗಡುವು ನೀಡಿದ್ದಾರೆ. ಧಾರವಾಡದ ಕಲ್ಯಾಣ ನಗರದಲ್ಲಿರುವ ಶ್ರೀಸಿದ್ದರಾಮೇಶ್ವರ ಮಾರ್ಗದರ್ಶಿಯಲ್ಲಿ ಮಂಗಳವಾರ ಸುದೀರ್ಘ ಐದು ಗಂಟೆಗಳ ಸಭೆ ನಡೆಸಿದ 21 ಲಿಂಗಾಯತ ಮಠಾಧೀಶರು ಈ ನಿರ್ಣಯ ಅಂಗೀಕರಿಸಿ ಸರ್ಕಾರಕ್ಕೆ ಕಳುಹಿಸಿಕೊಟ್ಟಿದ್ದಾರೆ.

“ಸಮಾಜ ವಿಜ್ಞಾನ ಭಾಗ-1ರ 9ನೇ ತರಗತಿ ಪಠ್ಯಪುಸ್ತಕವನ್ನು ಶೀಘ್ರ ಬದಲಿಸಬೇಕು. ಹತ್ತು ದಿನಗಳ ಒಳಗೆ ಬದಲಿಸಲು ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಉಗ್ರ ಪ್ರತಿಭಟನೆ ರೂಪಿಸುತ್ತೇವೆ” ಎಂದು ಸಾಣೆಹಳ್ಳಿ ತರಳುಬಾಳು ಮಹಾಸಂಸ್ಥಾನದ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಠಾಧೀಶರ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಾಣೆಹಳ್ಳಿ ಸ್ವಾಮೀಜಿ, “9ನೇ ತರಗತಿಗೆ ಇರುವ ಸಮಾಜ ವಿಜ್ಞಾನ ಭಾಗ 1ರ ಪಠ್ಯದಲ್ಲಿ ಹಲವು ದೋಷಗಳನ್ನು ಗುರುತಿಸಿದ್ದೇನೆ. ವೈದಿಕ ಪರಂಪರೆಯನ್ನು ಬಿಂಬಿಸುವ ಕೆಲಸವನ್ನು ವ್ಯವಸ್ಥಿತವಾಗಿ ಈ ಪಠ್ಯದಲ್ಲಿ ನಡೆಸಲಾಗಿದೆ” ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್‌ ಹೆಗಡೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ನಾಯಕರೆಂದು ಗುರುತಿಸಿದ ಬಿಜೆಪಿ

“ವೈದಿಕ ಪರಂಪರೆ ಧಿಕ್ಕರಿಸಿದ್ದ ಬಸವಣ್ಣನವರಿಗೆ ಯಾವುದೇ ಶೈವ ಗುರುಗಳು ದೀಕ್ಷೆ ಕೊಟ್ಟಿಲ್ಲ. ಆದರೆ ಪುಸ್ತಕದಲ್ಲಿ ಮಾತ್ರ ಶೈವ ಗುರುಗಳು ದೀಕ್ಷೆ ಕೊಟ್ಟರು ಎಂಬ ಉಲ್ಲೇಖವಿದೆ. ಈ ಸಂಬಂಧ ನಾವು ಮಠಾಧೀಶರು ಈಗಾಗಲೇ ಮುಖ್ಯಮಂತ್ರಿಗೆ ಮನವಿ ಕೊಟ್ಟಿದ್ದೇವೆ. ಅವರು ಬಸವೇಶ್ವರರ ಪಠ್ಯದಲ್ಲಿರುವ ದೋಷಗಳನ್ನು ಸರಿಪಡಿಸುವುದಾಗಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಇವತ್ತು ಸಮಗ್ರವಾಗಿ ಚರ್ಚೆ ಮಾಡಿದ್ದೇವೆ. ಮುಂದೆ ಪಠ್ಯದಲ್ಲಿ ಎಲ್ಲಿಯೂ ಕೂಡ ಬಸವ ತತ್ವಕ್ಕೆ ಅಪಚಾರ ಆಗಬಾರದು. ಬಸವ ತತ್ವವನ್ನು ಸರಳವಾಗಿ ಬಿಂಬಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಬಸವೇಶ್ವರರು ಮತ್ತು ಅವರ ಪ್ರತಿಪಾದಿಸುತ್ತಿದ್ದ ವಿಷಯಗಳ ಬಗ್ಗೆ ನಾವೇ ಹೊಸ ಪಠ್ಯವೊಂದನ್ನು ರಚಿಸಿ, ಮುಖ್ಯಮಂತ್ರಿಗೆ ಕಳುಹಿಸುತ್ತೇವೆ. ಅದನ್ನು ಸರ್ಕಾರ ಒಪ್ಪಿಕೊಂಡರೆ ಸಂತೋಷ ಪಡುತ್ತೇವೆ. ನಾಳೆಯೇ ಎಲ್ಲರೂ ಸೇರಿ ಒಂದು ಮನವಿ ಕೊಡುತ್ತೇವೆ. ಈಗ ಇರುವ ಪಠ್ಯವನ್ನು ಹತ್ತು ದಿನಗಳಲ್ಲಿ ಬದಲಿಸಬೇಕು. ಇಲ್ಲವಾದಲ್ಲಿ ಸರ್ಕಾರದ ವಿರುದ್ಧ ಉಗ್ರ ರೀತಿಯ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಅವರು ಎಚ್ಚರಿಸಿದ್ದಾರೆ.

ಎಲ್ಲ ಮಹನೀಯರ ಪಠ್ಯವೂ ಸರಿಯಾಗಲಿ

ಪಠ್ಯ ಪುಸ್ತಕದಲ್ಲಿ ಕೇವಲ ಬಸವಣ್ಣ ಮಾತ್ರವಲ್ಲ, ಕುವೆಂಪು, ಡಾ ಬಿ.ಆರ್.ಅಂಬೇಡ್ಕರ್, ನಾರಾಯಣಗುರು ಸೇರಿದಂತೆ ಎಲ್ಲ ಮಹನೀಯರ ಕುರಿತು ಆಗಿರುವ ಲೋಪದೋಷಗಳನ್ನು ಕೂಡಲೇ ಸರ್ಕಾರ ಸರಿ ಮಾಡಬೇಕು. ಕೆಲವು ಸಾಹಿತಿಗಳು ಈಗಾಗಲೇ ತಮ್ಮ ಲೇಖನಗಳನ್ನು ಹಿಂದಕ್ಕೆ ಪಡೆದುಕೊಳ್ಳುತ್ತಿದ್ದಾರೆ. ಆದರೆ ಲೋಪದೋಷ ಸರಿಪಡಿಸಿದರೆ ಅವರು ಮರಳಿ ಕೊಡುವ ವಿಶ್ವಾಸವಿದೆ ಎಂದು ಗದಗ ತೋಂಟದಾರ್ಯ ಮಠದ ಡಾ ತೋಂಟದ ಸಿದ್ದರಾಮ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಭೀಕರ ಹತ್ಯೆ: ನಾಲೆಯಲ್ಲಿ ತೇಲಿ ಬಂದ ಅರ್ಧ ಕತ್ತರಿಸಿದ ಮಹಿಳೆಯರ ಮೃತದೇಹಗಳು

ಬಸವಣ್ಣನವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಅವುಗಳಿಗೆ ಸರ್ಕಾರ ಗಮನ ಕೊಡದೇ ನೇರವಾಗಿ ಬಸವ ತತ್ವ ಮತ್ತು ವಚನ ಸಾಹಿತ್ಯವನ್ನು ಗಮನದಲ್ಲಿಟ್ಟುಕೊಂಡು ಲೋಪದೋಷಗಳನ್ನು ತಿದ್ದುಪಡಿ ಮಾಡಬೇಕು ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಸ್ವಾಮೀಜಿಗಳು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...