Homeಕರ್ನಾಟಕ‘ಹತ್ತು ದಿನದಲ್ಲಿ ಪಠ್ಯದಲ್ಲಿರುವ ಲೋಪ ತಿದ್ದಿ’: ಸರ್ಕಾರಕ್ಕೆ ಗಡುವು ನೀಡಿದ ಲಿಂಗಾಯತ ಮಠಾಧೀಶರು

‘ಹತ್ತು ದಿನದಲ್ಲಿ ಪಠ್ಯದಲ್ಲಿರುವ ಲೋಪ ತಿದ್ದಿ’: ಸರ್ಕಾರಕ್ಕೆ ಗಡುವು ನೀಡಿದ ಲಿಂಗಾಯತ ಮಠಾಧೀಶರು

- Advertisement -
- Advertisement -

ಸಮಾಜ ಸುಧಾರಕ ಬಸವಣ್ಣನವರ ಬಗ್ಗೆ ಶಾಲಾ ಪಠ್ಯ ಪುಸ್ತಕದಲ್ಲಿ ಆಗಿರುವ ಲೋಪದೋಷಗಳನ್ನು ಸರ್ಕಾರ ಹತ್ತು ದಿನಗಳ ಒಳಗಾಗಿ ಸರಿಪಡಿಸಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಉತ್ತರ ಕರ್ನಾಟಕದ ಪ್ರಮುಖ ಲಿಂಗಾಯತ ಮಠಾಧೀಶರು ಸರ್ಕಾರಕ್ಕೆ ಎಚ್ಚರಿಕೆಯ ಜೊತೆಗೆ ಗಡುವು ನೀಡಿದ್ದಾರೆ. ಧಾರವಾಡದ ಕಲ್ಯಾಣ ನಗರದಲ್ಲಿರುವ ಶ್ರೀಸಿದ್ದರಾಮೇಶ್ವರ ಮಾರ್ಗದರ್ಶಿಯಲ್ಲಿ ಮಂಗಳವಾರ ಸುದೀರ್ಘ ಐದು ಗಂಟೆಗಳ ಸಭೆ ನಡೆಸಿದ 21 ಲಿಂಗಾಯತ ಮಠಾಧೀಶರು ಈ ನಿರ್ಣಯ ಅಂಗೀಕರಿಸಿ ಸರ್ಕಾರಕ್ಕೆ ಕಳುಹಿಸಿಕೊಟ್ಟಿದ್ದಾರೆ.

“ಸಮಾಜ ವಿಜ್ಞಾನ ಭಾಗ-1ರ 9ನೇ ತರಗತಿ ಪಠ್ಯಪುಸ್ತಕವನ್ನು ಶೀಘ್ರ ಬದಲಿಸಬೇಕು. ಹತ್ತು ದಿನಗಳ ಒಳಗೆ ಬದಲಿಸಲು ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಉಗ್ರ ಪ್ರತಿಭಟನೆ ರೂಪಿಸುತ್ತೇವೆ” ಎಂದು ಸಾಣೆಹಳ್ಳಿ ತರಳುಬಾಳು ಮಹಾಸಂಸ್ಥಾನದ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಠಾಧೀಶರ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಾಣೆಹಳ್ಳಿ ಸ್ವಾಮೀಜಿ, “9ನೇ ತರಗತಿಗೆ ಇರುವ ಸಮಾಜ ವಿಜ್ಞಾನ ಭಾಗ 1ರ ಪಠ್ಯದಲ್ಲಿ ಹಲವು ದೋಷಗಳನ್ನು ಗುರುತಿಸಿದ್ದೇನೆ. ವೈದಿಕ ಪರಂಪರೆಯನ್ನು ಬಿಂಬಿಸುವ ಕೆಲಸವನ್ನು ವ್ಯವಸ್ಥಿತವಾಗಿ ಈ ಪಠ್ಯದಲ್ಲಿ ನಡೆಸಲಾಗಿದೆ” ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್‌ ಹೆಗಡೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ನಾಯಕರೆಂದು ಗುರುತಿಸಿದ ಬಿಜೆಪಿ

“ವೈದಿಕ ಪರಂಪರೆ ಧಿಕ್ಕರಿಸಿದ್ದ ಬಸವಣ್ಣನವರಿಗೆ ಯಾವುದೇ ಶೈವ ಗುರುಗಳು ದೀಕ್ಷೆ ಕೊಟ್ಟಿಲ್ಲ. ಆದರೆ ಪುಸ್ತಕದಲ್ಲಿ ಮಾತ್ರ ಶೈವ ಗುರುಗಳು ದೀಕ್ಷೆ ಕೊಟ್ಟರು ಎಂಬ ಉಲ್ಲೇಖವಿದೆ. ಈ ಸಂಬಂಧ ನಾವು ಮಠಾಧೀಶರು ಈಗಾಗಲೇ ಮುಖ್ಯಮಂತ್ರಿಗೆ ಮನವಿ ಕೊಟ್ಟಿದ್ದೇವೆ. ಅವರು ಬಸವೇಶ್ವರರ ಪಠ್ಯದಲ್ಲಿರುವ ದೋಷಗಳನ್ನು ಸರಿಪಡಿಸುವುದಾಗಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಇವತ್ತು ಸಮಗ್ರವಾಗಿ ಚರ್ಚೆ ಮಾಡಿದ್ದೇವೆ. ಮುಂದೆ ಪಠ್ಯದಲ್ಲಿ ಎಲ್ಲಿಯೂ ಕೂಡ ಬಸವ ತತ್ವಕ್ಕೆ ಅಪಚಾರ ಆಗಬಾರದು. ಬಸವ ತತ್ವವನ್ನು ಸರಳವಾಗಿ ಬಿಂಬಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಬಸವೇಶ್ವರರು ಮತ್ತು ಅವರ ಪ್ರತಿಪಾದಿಸುತ್ತಿದ್ದ ವಿಷಯಗಳ ಬಗ್ಗೆ ನಾವೇ ಹೊಸ ಪಠ್ಯವೊಂದನ್ನು ರಚಿಸಿ, ಮುಖ್ಯಮಂತ್ರಿಗೆ ಕಳುಹಿಸುತ್ತೇವೆ. ಅದನ್ನು ಸರ್ಕಾರ ಒಪ್ಪಿಕೊಂಡರೆ ಸಂತೋಷ ಪಡುತ್ತೇವೆ. ನಾಳೆಯೇ ಎಲ್ಲರೂ ಸೇರಿ ಒಂದು ಮನವಿ ಕೊಡುತ್ತೇವೆ. ಈಗ ಇರುವ ಪಠ್ಯವನ್ನು ಹತ್ತು ದಿನಗಳಲ್ಲಿ ಬದಲಿಸಬೇಕು. ಇಲ್ಲವಾದಲ್ಲಿ ಸರ್ಕಾರದ ವಿರುದ್ಧ ಉಗ್ರ ರೀತಿಯ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಅವರು ಎಚ್ಚರಿಸಿದ್ದಾರೆ.

ಎಲ್ಲ ಮಹನೀಯರ ಪಠ್ಯವೂ ಸರಿಯಾಗಲಿ

ಪಠ್ಯ ಪುಸ್ತಕದಲ್ಲಿ ಕೇವಲ ಬಸವಣ್ಣ ಮಾತ್ರವಲ್ಲ, ಕುವೆಂಪು, ಡಾ ಬಿ.ಆರ್.ಅಂಬೇಡ್ಕರ್, ನಾರಾಯಣಗುರು ಸೇರಿದಂತೆ ಎಲ್ಲ ಮಹನೀಯರ ಕುರಿತು ಆಗಿರುವ ಲೋಪದೋಷಗಳನ್ನು ಕೂಡಲೇ ಸರ್ಕಾರ ಸರಿ ಮಾಡಬೇಕು. ಕೆಲವು ಸಾಹಿತಿಗಳು ಈಗಾಗಲೇ ತಮ್ಮ ಲೇಖನಗಳನ್ನು ಹಿಂದಕ್ಕೆ ಪಡೆದುಕೊಳ್ಳುತ್ತಿದ್ದಾರೆ. ಆದರೆ ಲೋಪದೋಷ ಸರಿಪಡಿಸಿದರೆ ಅವರು ಮರಳಿ ಕೊಡುವ ವಿಶ್ವಾಸವಿದೆ ಎಂದು ಗದಗ ತೋಂಟದಾರ್ಯ ಮಠದ ಡಾ ತೋಂಟದ ಸಿದ್ದರಾಮ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಭೀಕರ ಹತ್ಯೆ: ನಾಲೆಯಲ್ಲಿ ತೇಲಿ ಬಂದ ಅರ್ಧ ಕತ್ತರಿಸಿದ ಮಹಿಳೆಯರ ಮೃತದೇಹಗಳು

ಬಸವಣ್ಣನವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಅವುಗಳಿಗೆ ಸರ್ಕಾರ ಗಮನ ಕೊಡದೇ ನೇರವಾಗಿ ಬಸವ ತತ್ವ ಮತ್ತು ವಚನ ಸಾಹಿತ್ಯವನ್ನು ಗಮನದಲ್ಲಿಟ್ಟುಕೊಂಡು ಲೋಪದೋಷಗಳನ್ನು ತಿದ್ದುಪಡಿ ಮಾಡಬೇಕು ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಸ್ವಾಮೀಜಿಗಳು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...