Homeಕರ್ನಾಟಕ‘ಹತ್ತು ದಿನದಲ್ಲಿ ಪಠ್ಯದಲ್ಲಿರುವ ಲೋಪ ತಿದ್ದಿ’: ಸರ್ಕಾರಕ್ಕೆ ಗಡುವು ನೀಡಿದ ಲಿಂಗಾಯತ ಮಠಾಧೀಶರು

‘ಹತ್ತು ದಿನದಲ್ಲಿ ಪಠ್ಯದಲ್ಲಿರುವ ಲೋಪ ತಿದ್ದಿ’: ಸರ್ಕಾರಕ್ಕೆ ಗಡುವು ನೀಡಿದ ಲಿಂಗಾಯತ ಮಠಾಧೀಶರು

- Advertisement -
- Advertisement -

ಸಮಾಜ ಸುಧಾರಕ ಬಸವಣ್ಣನವರ ಬಗ್ಗೆ ಶಾಲಾ ಪಠ್ಯ ಪುಸ್ತಕದಲ್ಲಿ ಆಗಿರುವ ಲೋಪದೋಷಗಳನ್ನು ಸರ್ಕಾರ ಹತ್ತು ದಿನಗಳ ಒಳಗಾಗಿ ಸರಿಪಡಿಸಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಉತ್ತರ ಕರ್ನಾಟಕದ ಪ್ರಮುಖ ಲಿಂಗಾಯತ ಮಠಾಧೀಶರು ಸರ್ಕಾರಕ್ಕೆ ಎಚ್ಚರಿಕೆಯ ಜೊತೆಗೆ ಗಡುವು ನೀಡಿದ್ದಾರೆ. ಧಾರವಾಡದ ಕಲ್ಯಾಣ ನಗರದಲ್ಲಿರುವ ಶ್ರೀಸಿದ್ದರಾಮೇಶ್ವರ ಮಾರ್ಗದರ್ಶಿಯಲ್ಲಿ ಮಂಗಳವಾರ ಸುದೀರ್ಘ ಐದು ಗಂಟೆಗಳ ಸಭೆ ನಡೆಸಿದ 21 ಲಿಂಗಾಯತ ಮಠಾಧೀಶರು ಈ ನಿರ್ಣಯ ಅಂಗೀಕರಿಸಿ ಸರ್ಕಾರಕ್ಕೆ ಕಳುಹಿಸಿಕೊಟ್ಟಿದ್ದಾರೆ.

“ಸಮಾಜ ವಿಜ್ಞಾನ ಭಾಗ-1ರ 9ನೇ ತರಗತಿ ಪಠ್ಯಪುಸ್ತಕವನ್ನು ಶೀಘ್ರ ಬದಲಿಸಬೇಕು. ಹತ್ತು ದಿನಗಳ ಒಳಗೆ ಬದಲಿಸಲು ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಉಗ್ರ ಪ್ರತಿಭಟನೆ ರೂಪಿಸುತ್ತೇವೆ” ಎಂದು ಸಾಣೆಹಳ್ಳಿ ತರಳುಬಾಳು ಮಹಾಸಂಸ್ಥಾನದ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಠಾಧೀಶರ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಾಣೆಹಳ್ಳಿ ಸ್ವಾಮೀಜಿ, “9ನೇ ತರಗತಿಗೆ ಇರುವ ಸಮಾಜ ವಿಜ್ಞಾನ ಭಾಗ 1ರ ಪಠ್ಯದಲ್ಲಿ ಹಲವು ದೋಷಗಳನ್ನು ಗುರುತಿಸಿದ್ದೇನೆ. ವೈದಿಕ ಪರಂಪರೆಯನ್ನು ಬಿಂಬಿಸುವ ಕೆಲಸವನ್ನು ವ್ಯವಸ್ಥಿತವಾಗಿ ಈ ಪಠ್ಯದಲ್ಲಿ ನಡೆಸಲಾಗಿದೆ” ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್‌ ಹೆಗಡೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ನಾಯಕರೆಂದು ಗುರುತಿಸಿದ ಬಿಜೆಪಿ

“ವೈದಿಕ ಪರಂಪರೆ ಧಿಕ್ಕರಿಸಿದ್ದ ಬಸವಣ್ಣನವರಿಗೆ ಯಾವುದೇ ಶೈವ ಗುರುಗಳು ದೀಕ್ಷೆ ಕೊಟ್ಟಿಲ್ಲ. ಆದರೆ ಪುಸ್ತಕದಲ್ಲಿ ಮಾತ್ರ ಶೈವ ಗುರುಗಳು ದೀಕ್ಷೆ ಕೊಟ್ಟರು ಎಂಬ ಉಲ್ಲೇಖವಿದೆ. ಈ ಸಂಬಂಧ ನಾವು ಮಠಾಧೀಶರು ಈಗಾಗಲೇ ಮುಖ್ಯಮಂತ್ರಿಗೆ ಮನವಿ ಕೊಟ್ಟಿದ್ದೇವೆ. ಅವರು ಬಸವೇಶ್ವರರ ಪಠ್ಯದಲ್ಲಿರುವ ದೋಷಗಳನ್ನು ಸರಿಪಡಿಸುವುದಾಗಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಇವತ್ತು ಸಮಗ್ರವಾಗಿ ಚರ್ಚೆ ಮಾಡಿದ್ದೇವೆ. ಮುಂದೆ ಪಠ್ಯದಲ್ಲಿ ಎಲ್ಲಿಯೂ ಕೂಡ ಬಸವ ತತ್ವಕ್ಕೆ ಅಪಚಾರ ಆಗಬಾರದು. ಬಸವ ತತ್ವವನ್ನು ಸರಳವಾಗಿ ಬಿಂಬಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಬಸವೇಶ್ವರರು ಮತ್ತು ಅವರ ಪ್ರತಿಪಾದಿಸುತ್ತಿದ್ದ ವಿಷಯಗಳ ಬಗ್ಗೆ ನಾವೇ ಹೊಸ ಪಠ್ಯವೊಂದನ್ನು ರಚಿಸಿ, ಮುಖ್ಯಮಂತ್ರಿಗೆ ಕಳುಹಿಸುತ್ತೇವೆ. ಅದನ್ನು ಸರ್ಕಾರ ಒಪ್ಪಿಕೊಂಡರೆ ಸಂತೋಷ ಪಡುತ್ತೇವೆ. ನಾಳೆಯೇ ಎಲ್ಲರೂ ಸೇರಿ ಒಂದು ಮನವಿ ಕೊಡುತ್ತೇವೆ. ಈಗ ಇರುವ ಪಠ್ಯವನ್ನು ಹತ್ತು ದಿನಗಳಲ್ಲಿ ಬದಲಿಸಬೇಕು. ಇಲ್ಲವಾದಲ್ಲಿ ಸರ್ಕಾರದ ವಿರುದ್ಧ ಉಗ್ರ ರೀತಿಯ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಅವರು ಎಚ್ಚರಿಸಿದ್ದಾರೆ.

ಎಲ್ಲ ಮಹನೀಯರ ಪಠ್ಯವೂ ಸರಿಯಾಗಲಿ

ಪಠ್ಯ ಪುಸ್ತಕದಲ್ಲಿ ಕೇವಲ ಬಸವಣ್ಣ ಮಾತ್ರವಲ್ಲ, ಕುವೆಂಪು, ಡಾ ಬಿ.ಆರ್.ಅಂಬೇಡ್ಕರ್, ನಾರಾಯಣಗುರು ಸೇರಿದಂತೆ ಎಲ್ಲ ಮಹನೀಯರ ಕುರಿತು ಆಗಿರುವ ಲೋಪದೋಷಗಳನ್ನು ಕೂಡಲೇ ಸರ್ಕಾರ ಸರಿ ಮಾಡಬೇಕು. ಕೆಲವು ಸಾಹಿತಿಗಳು ಈಗಾಗಲೇ ತಮ್ಮ ಲೇಖನಗಳನ್ನು ಹಿಂದಕ್ಕೆ ಪಡೆದುಕೊಳ್ಳುತ್ತಿದ್ದಾರೆ. ಆದರೆ ಲೋಪದೋಷ ಸರಿಪಡಿಸಿದರೆ ಅವರು ಮರಳಿ ಕೊಡುವ ವಿಶ್ವಾಸವಿದೆ ಎಂದು ಗದಗ ತೋಂಟದಾರ್ಯ ಮಠದ ಡಾ ತೋಂಟದ ಸಿದ್ದರಾಮ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಭೀಕರ ಹತ್ಯೆ: ನಾಲೆಯಲ್ಲಿ ತೇಲಿ ಬಂದ ಅರ್ಧ ಕತ್ತರಿಸಿದ ಮಹಿಳೆಯರ ಮೃತದೇಹಗಳು

ಬಸವಣ್ಣನವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಅವುಗಳಿಗೆ ಸರ್ಕಾರ ಗಮನ ಕೊಡದೇ ನೇರವಾಗಿ ಬಸವ ತತ್ವ ಮತ್ತು ವಚನ ಸಾಹಿತ್ಯವನ್ನು ಗಮನದಲ್ಲಿಟ್ಟುಕೊಂಡು ಲೋಪದೋಷಗಳನ್ನು ತಿದ್ದುಪಡಿ ಮಾಡಬೇಕು ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಸ್ವಾಮೀಜಿಗಳು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...