Homeಚಳವಳಿಲಕ್ಷಾಂತರ ರೈತರ ಜೀವಕ್ಕಿಂತ ನನ್ನ ಜೀವ ಮುಖ್ಯವಲ್ಲ - ರೈತ ನಾಯಕ ದಲ್ಲೆವಾಲ್

ಲಕ್ಷಾಂತರ ರೈತರ ಜೀವಕ್ಕಿಂತ ನನ್ನ ಜೀವ ಮುಖ್ಯವಲ್ಲ – ರೈತ ನಾಯಕ ದಲ್ಲೆವಾಲ್

- Advertisement -
- Advertisement -

ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಪಂಜಾಬ್-ಹರಿಯಾಣದ ಖಾನೌರಿ ಗಡಿಯಲ್ಲಿ ಕಿಸಾನ್ ಮಹಾಪಂಚಾಯತ್ ಅನ್ನು ಉದ್ದೇಶಿಸಿ ಶನಿವಾರ ಮಾತನಾಡಿದ್ದು, ಈಗಾಗಲೇ ಏಳು ಲಕ್ಷಕ್ಕೂ ಹೆಚ್ಚು ರೈತರು ಕೃಷಿ ವಲಯದಲ್ಲಿನ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಸಂಕಷ್ಟದಲ್ಲಿ ತತ್ತರಿಸುತ್ತಿರುವ ಲಕ್ಷಾಂತರ ಭಾರತೀಯ ರೈತರ ಜೀವಕ್ಕಿಂತ ನನ್ನ ಜೀವ ಮುಖ್ಯವಲ್ಲ ಎಂದು ಹೇಳಿದ್ದಾರೆ. ಲಕ್ಷಾಂತರ ರೈತರ

ಆಮರಣಾಂತ ಉಪವಾಸ ಸತ್ಯಾಗ್ರಹದ 40ನೇ ದಿನದಂದು ರೈತರ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ದಲ್ಲೆವಾಲ್ ಅವರು, ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಅಡಿಯಲ್ಲಿ ರೈತರು ಖಾನೌರಿ ಗಡಿಯಲ್ಲಿರುವ ಪ್ರತಿ ಹಳ್ಳಿಯಿಂದ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ದೆಹಲಿಗೆ ಮೆರವಣಿಗೆ ಹೊರಟಿದ್ದ ರೈತರನ್ನು ಹರಿಯಾಣ ಪೊಲೀಸರು ತಡೆದ ನಂತರ ಕಳೆದ ವರ್ಷ ಫೆಬ್ರವರಿ 13 ರಿಂದ ಅವರು ಅಲ್ಲಿ ತಂಗಿದ್ದಾರೆ.

“ನೀವು ಇಂದು ಈ ಮಟ್ಟಿನ ಸಂಖ್ಯೆಯಲ್ಲಿ ಬಂದಿದ್ದೀರಿ, ಅದೇ ರೀತಿ ಈ ಹೋರಾಟವನ್ನು ಬಲಪಡಿಸಲು ಪ್ರತಿ ಹಳ್ಳಿಯಿಂದ ಒಂದು ಟ್ರಾಲಿ ಖಾನೌರಿಗೆ ತಲುಪಬೇಕು” ಎಂದು ದಲ್ಲೆವಾಲ್ ಹೇಳಿದ್ದಾರೆ. ತಮ್ಮ ಉಪವಾಸದ ಬಗ್ಗೆ ಮಾತನಾಡಿದ ಅವರು, ದುರ್ಬಲ ದಲ್ಲೆವಾಲ್‌ನನ್ನು ಆಸ್ಪತ್ರೆಗೆ ಕರೆದೊಯ್ಯಲು ಪೊಲೀಸರು ಹಲವಾರು ಪ್ರಯತ್ನಗಳನ್ನು ಮಾಡಿದ್ದಾರೆ, ಆದರೆ ಸ್ವಯಂಸೇವಕರು ಅದನ್ನು ವಿಫಲಗೊಳಿಸಿದರು ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪೊಲೀಸರು ನಮ್ಮನ್ನು ಇಲ್ಲಿಂದ ಹೊರಹಾಕಲಿದ್ದಾರೆ ಎಂದು ನಮಗೆ ಮಾಹಿತಿ ಸಿಕ್ಕಿದ ಅದೇ ರಾತ್ರಿ ಹಲವಾರು ಯುವಕರು ಪಂಜಾಬ್ ಮತ್ತು ಹರಿಯಾಣದಿಂದ ಖಾನೌರಿಗೆ ತಲುಪಿದ, ಹೋರಾಟದ ಉಸ್ತುವಾರಿ ವಹಿಸಿಕೊಂಡರು” ಎಂದು ದಲ್ಲೆವಾಲ್ ಹೇಳಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾದ (ರಾಜಕೀಯೇತರ) ಸಂಚಾಲಕರಾಗಿರುವ ದಲ್ಲೆವಾಲ್ ಅವರು ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಕಾತರಿ ನೀಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟು ಆಮರಣಾಂತ ಉಪವಾಸ ಕೈಗೊಂಡಿದ್ದಾರೆ. ಜೊತೆಗೆ ಯಾವುದೇ ವೈದ್ಯಕೀಯ ನೆರವು ಪಡೆಯಲು ನಿರಾಕರಿಸಿದ್ದಾರೆ, ಹಾಗಾಗಿ ಅವರ ಆರೋಗ್ಯ ಹದಗೆಡುತ್ತಿದೆ ಎಂದು ವರದಿಯಾಗಿದೆ.

ಹದಗೆಟ್ಟಿರುವ ಅವರ ಆರೋಗ್ಯವನ್ನು ಪರಿಗಣಿಸಿ ಆಸ್ಪತ್ರೆಗೆ ಸ್ಥಳಾಂತರಿಸದ ಪಂಜಾಬ್ ಸರ್ಕಾರವನ್ನು ಸುಪ್ರೀಂ ಕೋರ್ಟ್ ಇತ್ತೀಚೆಗೆ ತರಾಟೆಗೆ ತೆಗೆದುಕೊಂಡಿತು ಮತ್ತು ಅವರಿಗೆ ತಕ್ಷಣ ವೈದ್ಯಕೀಯ ನೆರವು ನೀಡುವಂತೆ ಸೂಚಿಸಿದೆ. ಆದಾಗ್ಯೂ, ಈ ಆದೇಶವು ದಲ್ಲೆವಾಲ್ ಅವರ ಉಪವಾಸವನ್ನು ಮುರಿಯುವ ಉದ್ದೇಶವನ್ನು ಹೊಂದಿಲ್ಲ ಎಂದು ಸುಪ್ರೀಂಕೋರ್ಟ್‌ ಸ್ಪಷ್ಟಪಡಿಸಿದೆ. ಲಕ್ಷಾಂತರ ರೈತರ

“ದಲ್ಲೆವಾಲ್ ಅವರ ಜೀವ ಮುಖ್ಯ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ಹೇಳಿತ್ತು. ನಾನು ಅದೇ ದಿನ ಗೌರವಾನ್ವಿತ ಸುಪ್ರೀಂ ಕೋರ್ಟ್‌ನಲ್ಲಿ ಹೇಳಿದ್ದೆ, ನಾನು ಸಹ ಮನುಷ್ಯ, ಸರಿ, ಆದರೆ ಆತ್ಮಹತ್ಯೆ ಮಾಡಿಕೊಂಡ 7 ಲಕ್ಷ ರೈತರ ಕುಟುಂಬಗಳ ಬಗ್ಗೆ ಏನು ಹೇಳುತ್ತೀರಿ. ಭವಿಷ್ಯದಲ್ಲಿ ಈ ಆತ್ಮಹತ್ಯೆಗಳನ್ನು ನಿಲ್ಲಿಸಬೇಕಿದೆ” ಎಂದು ದಲ್ಲೆವಾಲ್ ಒತ್ತಿ ಹೇಳಿದ್ದಾರೆ. ಪ್ರತಿಭಟನಾ ನಿರತ ರೈತರ ನಿರಂತರ ಬೆಂಬಲಕ್ಕೆ ಧನ್ಯವಾದ ಹೇಳಿದ ದಲ್ಲೆವಾಲ್ ಅವರು ಹೋರಾಟದಲ್ಲಿ ಒಗ್ಗಟ್ಟಾಗಿ ನಿಲ್ಲುವಂತೆ ಒತ್ತಾಯಿಸಿದ್ದಾರೆ.

ರೈತರ ಮಹಾಪಂಚಾಯತ್‌ ಕಾರಣಕ್ಕೆ ಪ್ರತಿಭಟನಾ ನಿರತರು ಖಾನೌರಿಯ ಹೆದ್ದಾರಿಯ ಉದ್ದಕ್ಕೂ ನಾಲ್ಕು ಕಿಲೋಮೀಟರ್ ವಿಸ್ತಾರದಲ್ಲಿ ಹರಡಿಕೊಂಡಿದ್ದರು ಎಂದು TNIE ವರದಿ ಮಾಡಿದೆ. ಇದೇ ವೇಳೆ ದಲ್ಲೇವಾಲ್ ಅವರು ತೋಹಾನಾದಲ್ಲಿ ನಡೆದ ಸಮಾನಾಂತರ ಮಹಾಪಂಚಾಯತ್‌ನಲ್ಲಿ ಭಾಗವಹಿಸಲು ಪ್ರಯಾಣಿಸುತ್ತಿದ್ದಾಗ ಅಪಘಾತದಲ್ಲಿ ಮೂವರು ಮಹಿಳೆಯರು ಸಾವಿಗೆ ಸಂತಾಪ ಸೂಚಿಸಿದ್ದಾರೆ.

ಇದನ್ನೂಓದಿ:  ರೈತ ಮುಖಂಡ ದಲ್ಲೆವಾಲ್‌ರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಕುರಿತ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್.

ರೈತ ಮುಖಂಡ ದಲ್ಲೆವಾಲ್‌ರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಕುರಿತ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....