Homeಕರ್ನಾಟಕಸರ್ಕಾರಕ್ಕೆ ರೈತರ ಒಗ್ಗಟ್ಟು ಕೊಟ್ಟ ಪೆಟ್ಟು ಮತ್ತೆ ಮರುಕಳಿಸಲಿದೆ: ಕಾರ್ಮಿಕರ ಸಮಾವೇಶ ಎಚ್ಚರಿಕೆ

ಸರ್ಕಾರಕ್ಕೆ ರೈತರ ಒಗ್ಗಟ್ಟು ಕೊಟ್ಟ ಪೆಟ್ಟು ಮತ್ತೆ ಮರುಕಳಿಸಲಿದೆ: ಕಾರ್ಮಿಕರ ಸಮಾವೇಶ ಎಚ್ಚರಿಕೆ

ಬೆಂಗಳೂರಿನಲ್ಲಿ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ ನಡೆದಿದ್ದು, ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಾಪಸ್ ಪಡೆಯದಿದ್ದರೆ ಸರ್ಕಾರ ಮತ್ತೊಂದು ಚಳವಳಿಯನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

- Advertisement -
- Advertisement -

ಒಂದು ವರ್ಷಕ್ಕೂ ಹೆಚ್ಚು ಕಾಲ ರೈತರು ನಡೆಸಿದ ಮಹಾ ಚಳವಳಿಗೆ ಮಣಿದ ಕೇಂದ್ರ ಸರ್ಕಾರ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆದ ರೀತಿಯಲ್ಲಿಯೇ ಕಾರ್ಪೋರೇಟ್‌ ಪರವಾದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಬೇಕು. ಕನಿಷ್ಠ ವೇತನ ಸೇರಿದಂತೆ ಇತರ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು. ಇಲ್ಲವಾದರೆ ರೈತ ಹೋರಾಟದಂತೆಯೇ ಕಾರ್ಮಿಕ ಚಳವಳಿಯನ್ನೂ ಸರ್ಕಾರ ಎದುರಿಸಬೇಕಾಗುತ್ತದೆ ಎಂದು ಕಾರ್ಮಿಕ ಹಕ್ಕುಗಳ ಹೋರಾಟ ಸಮಿತಿ (ಮಾಸಾ) ನಾಯಕರು ಎಚ್ಚರಿಕೆ ನೀಡಿದ್ದಾರೆ.

ಕಾರ್ಮಿಕ ಹಕ್ಕುಗಳ ಹೋರಾಟ ಸಮಿತಿ (ಎಂಎಎಸ್‌ಎ) ಅಡಿಯಲ್ಲಿ ಟ್ರೇಡ್‌ ಯೂನಿಯನ್‌ ಸೆಂಟರ್‌ ಆಫ್‌ ಇಂಡಿಯಾ (ಟಿಯುಸಿಐ), ಕರ್ನಾಟಕ ಶ್ರಮಿಕ ಶಕ್ತಿ (ಕೆಎಸ್‌ಎಸ್‌), ಬಿಡಬ್ಲ್ಯೂಎಸ್‌ಎಸ್‌ಬಿ ಗುತ್ತಿಗೆ ಕಾರ್ಮಿಕರ ಸಂಘ, ಬೆಂಗಳೂರು ರೇಸ್‌ ಕೋರ್ಸ್ ಕಾರ್ಮಿಕರ ಸಂಘ, ಬಿಬಿಎಂಪಿ ಗುತ್ತಿಗೆ ಪೌರ ಕಾರ್ಮಿಕರ ಸಂಘ, ಕರ್ನಾಟಕ ರಾಜ್ಯ ಲೋಡಿಂಗ್‌ ಅಂಡ್‌ ಅನ್ ಲೋಡಿಂಗ್‌ ಕಾರ್ಮಿಕರ ಒಕ್ಕೂಟ, ವಲಸೆ ಕಾರ್ಮಿಕರ ಸೌಹಾರ್ದ ಕೇಂದ್ರ (ಎಂಡಬ್ಲೂಎಸ್‌ಎನ್‌), ಮಂಡ್ಯ ರೈಲ್ವೆ ಗೂಡ್ಸ್‌ ಶೆಡ್ ಕಾರ್ಮಿಕರ ಸಂಘ, ಕೆಎಸ್‌‌ಬಿಸಿಎಲ್‌ ಲೋಡಿಂಗ್ ಕಾರ್ಮಿಕರ ಸಂಘ, ಕೂಲಿ ನೇಕಾರ ಕಾರ್ಮಿಕರ ಬಳಗ ಒಂದುಗೂಡಿ ಬೆಂಗಳೂರಿನಲ್ಲಿ ಭಾನುವಾರ ನಡೆಸಿದ ಬೃಹತ್‌ ಸಮಾವೇಶವು ಕಾರ್ಮಿಕ ಒಗ್ಗಟ್ಟನ್ನು ಪ್ರದರ್ಶಿಸಿತು.

ಕೇಂದ್ರೀಯ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ಕಾರ್ಮಿಕರು ಬೃಹತ್‌ ಮೆರವಣಿಗೆ ನಡೆಸಿದರು. ರ್‍ಯಾಲಿಗೆ ಚಾಲನೆ ನೀಡಿ ಮಾತನಾಡಿದ ಕರ್ನಾಟಕ ಜನಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷರಾದ ನೂರ್‌ ಶ್ರೀಧರ್‌, “ರೈತ ಮತ್ತು ಕಾರ್ಮಿಕ ಎಂಬ ಎರಡು ಹೆಜ್ಜೇನು ಗೂಡಿಗೆ ಇವರು ಕಲ್ಲು ಹೊಡೆದಿದ್ದಾರೆ. ವಿನಾಶಕಾಲೇ ವಿಪರೀತ ಬುದ್ಧಿ ಎಂಬಂತೆ ಇವರ ವಿನಾಶಕ್ಕೆ ಇದು ನಾಂದಿಯಾಗಲಿದೆ. ಎದ್ದೇಳುವ ಹೆಜ್ಜೇನುಗಳು ಸುಮ್ಮನೆ ಬಿಡುವುದಿಲ್ಲ. ಹೀಗಾಗಲೇ ರೈತ ಜೇನುಗೂಡಿಗೆ ಕಲ್ಲು ಹೊಡೆದು ಕಚ್ಚಿಸಿಕೊಂಡು, ಮೈಯೆಲ್ಲ ಕೆರೆದುಕೊಂಡು ಒಂದು ವರ್ಷದ ಬಳಿಕ ಮೂರು ಕಾಯ್ದೆಗಳನ್ನು ವಾಪಸ್ ತೆಗೆದುಕೊಂಡಿದ್ದಾರೆ. ರೈತರು ಹೇಳಿದಂತೆ ನಡೆದುಕೊಳ್ಳುತ್ತೇವೆ ಎಂದು ನಾಟಕವನ್ನಾದರೂ ಆಡುವ ಪರಿಸ್ಥಿತಿಗೆ ಬಂದಿದ್ದಾರೆ” ಎಂದರು.

“ನಿಮಗೆ ಹೇಳಲು ಬಯಸುವುದೇನೆಂದರೆ ಈಗ ರೈತರ ರುಚಿ ನೋಡಿದ್ದೀರಿ. ಮುಂದೆ ಕಾರ್ಮಿಕರ ರುಚಿ ನೋಡಲಿದ್ದೀರಿ. ಈ ಹೆಜ್ಜೇನನ್ನು ಒಡೆಯಬಹುದೆಂಬ ಭ್ರಮೆಯಲ್ಲಿದ್ದಾರೆ. ಎಲ್ಲಾ ಕಾರ್ಮಿಕ ಸಂಘಟನೆಗಳು ಒಗ್ಗೂಡುವ ಪರಂಪರೆ ಶುರುವಾಗಿದೆ. ಎಸ್‌ಕೆಎಂ ಅಡಿಯಲ್ಲಿ ರೈತರು ಒಗ್ಗೂಡಿದಂತೆ ಕಾರ್ಮಿಕರು ಒಂದು ವೇದಿಕೆಗೆ ಬರುತ್ತಿದ್ದಾರೆ. ಈ ದೊಡ್ಡ ಶಕ್ತಿ ನಿಮ್ಮ ಮೇಲೆ ಪ್ರಹಾರ ಮಾಡಲಿದೆ. ಇಂದು ಬೆಂಗಳೂರು, ನಾಳೆ ದಿಲ್ಲಿಯಲ್ಲಿ ಹೋರಾಟ ಶುರುವಾಗಲಿದೆ” ಎಂದು ಎಚ್ಚರಿಸಿದರು.

ಇದನ್ನೂ ಓದಿರಿ: ಮಂಡ್ಯದ ಬೂಕನಕೆರೆಯಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ ಆರೋಪ: ನಾಳೆ ಪ್ರತಿಭಟನೆ

ಅಸ್ಮಿತೆಯ ಹೆಸರಲ್ಲಿ ಕಾರ್ಮಿಕರನ್ನು ಒಡೆಯುವ ಯತ್ನ: ಆರ್‌.ಮಾನಸಯ್ಯ

ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದ ಟಿಯುಸಿಐ ರಾಜ್ಯಾಧ್ಯಕ್ಷರಾದ ಆರ್‌‌.ಮಾನಸಯ್ಯ, “ದೆಹಲಿ ಗಡಿಯಲ್ಲಿ ರೈತರು ಪಟ್ಟು ಹಿಡಿದು ಕುಳಿತು ಮೋದಿ ಸರ್ಕಾರವನ್ನು ಸೋಲಿಸಿದಂತೆ ಎಲ್ಲಾ ಕಾರ್ಮಿಕರ ಸಂಟನೆಗಳನ್ನು ಒಂದು ವೇದಿಕೆಯಲ್ಲಿ ತಂದು ಅದೇ ಮಾದರಿ ಹೋರಾಟಕ್ಕೆ ಕಾರ್ಮಿಕರು ಹೋಗಬೇಕಾಗಿದೆ. ಕಾರ್ಮಿಕರ ನಡುವೆ ಐಡೆಂಟಿಟಿ ಪೊಲಿಟಿಕ್ಸ್‌ ಬಿತ್ತುತ್ತಿದ್ದಾರೆ. ನೀವು ಪೌರ ಕಾರ್ಮಿಕರು, ಹಾಗಾಗಿ ಸಕ್ಕರೆ ಕಾರ್ಖಾನೆ ಕಾರ್ಮಿಕರ ಜೊತೆ ಹೋಗಬಾರದು ಎಂದು ಹೇಳುತ್ತಾರೆ. ನೀವು ಸಕ್ಕರೆ ಕಾರ್ಮಿಕರು ಉಕ್ಕಿನ ಕಾರ್ಮಿಕರ ಜೊತೆ ಹೋಗಬಾರದು ಎಂದು ಹೇಳುತ್ತಾರೆ. ನೀವು ಸರ್ಕಾರಿ ನೌಕರರು ಸ್ಟೀಲ್ ಕಾರ್ಮಿಕರ ಜೊತೆ ಹೋಗಬಾರದು ಎಂದು ಹೇಳುತ್ತಾರೆ. ನೀವು ಸಾರಿಗೆ ಕಾರ್ಮಿಕರು, ಅಂಗನವಾಡಿ ಕಾರ್ಮಿಕರ ಜೊತೆ ಹೋಗಬಾರದು ಅಂತಾರೆ. ಈ ರೀತಿಯಲ್ಲಿ ನಮ್ಮ ನಡುವೆ ಅಸ್ಮಿತೆಯ ರಾಜಕಾರಣವನ್ನು ಹರಡುವ ಮೂಲಕ ಕಾರ್ಮಿಕರನ್ನು ತುಂಡರಿಸಿದ್ದಾರೆ. ಕಾರ್ಮಿಕರಲ್ಲಿ ಮೂಢನಂಬಿಕೆಗಳನ್ನು ಬಿತ್ತುತ್ತಿದ್ದಾರೆ ಎಂದು ತಿಳಿಸಿದರು.

ಬಂಡವಾಳಶಾಹಿಗಳ ಪರವಾಗಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನಿಂತಿದೆ. 44 ಕಾರ್ಮಿಕ ಕಾಯ್ದೆಗಳನ್ನು ತೆರವುಗೊಳಿಸಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ತಂದಿದ್ದಾರೆ. ಈ ಸಂಹಿತೆಗಳಲ್ಲಿ ವೇತನ ಭದ್ರತೆ, ಆರೋಗ್ಯ ಸುರಕ್ಷತೆ, ಜೀವನ ಭದ್ರತೆ ಇಲ್ಲ. ಮಾಲಿಕರ, ಅಧಿಕಾರಿಗಳ, ಮೇಲ್ಜಾತಿಗಳ, ಶ್ರೀಮಂತರ ಸುರಕ್ಷತೆ ಮಾತ್ರ ಇದೆ. ಹೀಗಾಗಿ ಇದರ ವಿರುದ್ಧ ಒಂದು ದೊಡ್ಡ ಹೋರಾಟವನ್ನು ಕಟ್ಟಬೇಕಾಗಿದೆ ಎಂದು ಹೇಳಿದರು.

ಕಾರ್ಮಿಕರಿಗೆ ಕನಿಷ್ಠ 25,000 ರೂ. ಮಾಸಿಕ ವೇತನ ಕಡ್ಡಾಯ ಮಾಡಲೇಬೇಕು. ಗುತ್ತಿಗೆ ಪದ್ಧತಿ ರದ್ದುಗೊಳಿಸಬೇಕು. ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಲೇಬೇಕು. ಇಲ್ಲವಾದರೆ ನಮ್ಮ ಕೈಯಲ್ಲಿರುವ ಪೊರಕೆ, ಗುದ್ದಲಿ, ಸುತ್ತಿಗೆಗಳು ಮಾತನಾಡುತ್ತವೆ. ಕಾರ್ಮಿಕರೆಂದರೆ ಕನಿಷ್ಠರಲ್ಲ. ಈ ದೇಶದ ಕಟ್ಟಾಳುಗಳು ಎಂದು ಬಣ್ಣಿಸಿದರು.

ದೇಶ ಕಟ್ಟೋರು ಕಾರ್ಮಿಕರೇ ಹೊರತು ಎಸ್‌ಎಸ್‌ಎಸ್‌, ಬಜರಂಗದಳ, ವಿಎಚ್‌ಪಿಗಳಲ್ಲ, ಇನ್ಯಾವುದೇ ಸ್ವಾಮೀಜಿಗಳಲ್ಲ. ಘಂಟೆ ಭಾರಿಸಿದರೆ ದೇಶ ನಡೆಯುವುದಿಲ್ಲ, ಮಂತ್ರ ಹೇಳಿದರೆ ದೇಶ ನಡೆಯುವುದಿಲ್ಲ. ಹೀಗಾಗಿ ಮಂತ್ರ ಹೇಳುವ ತುಟಿಗಳಿಗಿಂತ ಮಣ್ಣು ಅಗೆಯುವ ಕೈಗಳನ್ನು ಪ್ರೀತಿಸಿ ಎಂದು ಮಾರ್ಮಿಕವಾಗಿ ನುಡಿದರು.

ಸಮಾನ ವೇತನ ನೀಡಿರೆಂದರೆ ಮೊಟ್ಟೆ ಬಗ್ಗೆ ಮಾತನಾಡುತ್ತಾರೆ: ಬಾಲನ್‌

ಸಮಾವೇಶದ ಉದ್ಘಾಟನಾ ಭಾಷಣ ಮಾಡಿದ ಹೈಕೋರ್ಟ್ ಹಿರಿಯ ವಕೀಲರಾದ ಬಾಲನ್‌, “ನಮ್ಮ ಕೆಲಸದ ಹಕ್ಕುಗಳು ಇರುವ ಕಾನೂನನ್ನು, ನಮ್ಮ ಸಂಬಳದ ಹಕ್ಕಿನ ಕಾನೂನುಗಳನ್ನು, ನಮ್ಮ ಸಾಮಾಜಿಕ ಹಕ್ಕುಗಳಾದ ಪಿಎಫ್‌, ಗ್ರಾಚ್ಯುಟಿ, ರಜೆ ಇತ್ಯಾದಿಗಳನ್ನು ನೀಡಿದ ಕಾನೂನುಗಳನ್ನು ಕಿತ್ತುಕೊಂಡಿದ್ದಾರೆ. ನೌಕರರಾಗಬೇಕಿದ್ದವರನ್ನು ಕೂಲಿಗಳನ್ನಾಗಿ ಮಾಡಿದ್ದಾರೆ. ಒಂದೇ ಕೆಲಸ, ಒಂದೇ ಪೊರಕೆ. ಆದರೆ ಗುತ್ತಿಗೆಯವರಿಗೆ ಹಾಗೂ ಕಾಯಂ ನೌಕರರಿಗೆ ಬೇರೆ ಬೇರೆ ಸಂಬಳ ನೀಡುತ್ತಿದ್ದಾರೆ ಎಂದು ವಿವರಿಸಿದರು.

“ನೀವು ಕಾನೂನು ಮಾಡ್ರಯ್ಯ, ಸಮಾನ ಕೆಲಸಕ್ಕೆ ಸಮಾನ ವೇತನ ಎಂಬ ಕಾನೂನು ಮಾಡಿ. ಕೆಲಸದಿಂದ ತೆಗೆಯಬಾರದೆಂದು ಕಾನೂನು ಮಾಡಿ. ಅದನ್ನು ಬಿಟ್ಟು ಮೊಟ್ಟೆ ತಿನ್ನಬಾರದೆಂದು, ಮಟನ್‌ ತಿನ್ನಬಾರದೆಂದು, ದನದ ಮಾಂಸ ತಿನ್ನಬಾರದೆಂದು, ನೀರು ಕುಡಿಯಬಾರದೆಂದು ಕಾನೂನು ಮಾಡುತ್ತಿದ್ದಾರೆ. ಎಂಥ ಕಾನೂನು ಮಾಡ್ತಾ ಇದ್ದಿರಯ್ಯ ಬೊಮ್ಮಾಯಿ? ನೀವು ಈ ರೀತಿ ಕೆಲಸ ಮಾಡಿದರೆ- ಮುಂದಿನ ಚುನಾವಣೆಯಲ್ಲಿ ಬೊಮ್ಮಾಯಿ ಆಪ್‌ ನಹೀ ನಹೀ ಎಂದು ಚಾಟಿ ಬೀಸಿದರು.

ಇದನ್ನೂ ಓದಿರಿ: RSS ಮುಖ್ಯಸ್ಥರಿಗೆ ಕಲಬುರಗಿ ಕೇಂದ್ರೀಯ ವಿವಿ ರಿಜಿಸ್ಟ್ರಾರ್ ಡೋಣೂರರ ಪತ್ರ: ಅಕ್ರಮ ನೇಮಕಾತಿ ಕಾರಣವೇ?

ಕ್ಯಾಂಟೀನ್‌ ನಮ್ಮ ಹಕ್ಕು. ಮಧ್ಯಾಹ್ನ ಊಟ ಕೊಡಬೇಕು. ಒಂದು ಕಾಲದಲ್ಲಿ ಇದೆಲ್ಲ ಇತ್ತು. 1996ರಲ್ಲಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿ, ರೈಲ್ವೆ, ಬಿಬಿಎಂಪಿ, ಆಸ್ಪತ್ರೆ ಸೇರಿದಂತೆ ಹಲವು ಕಡೆಗಳಲ್ಲಿ ಗುತ್ತಿಗೆ ಪದ್ಧತಿ ಇರಬಾರದೆಂದು ಹೇಳಿತ್ತು. ಆದರೆ 2001ನೇ ಇಸವಿಯಲ್ಲಿ ವಾಜಪೇಯಿ ಆ ಕಾನೂನನ್ನು ಕಿತ್ತು ಹಾಕಿ, ನಿಮ್ಮ ಬಾಯಿಗೆ ಮಣ್ಣು ಹಾಕಿದರು. 2002ರಲ್ಲಿ ಸುಪ್ರೀಂ ಕೋರ್ಟ್, ಸ್ಟೀಲ್‌ ಅಥಾರಿಟಿ ಆಫ್‌ ಇಂಡಿಯಾದಲ್ಲಿ ಗುತ್ತಿಗೆ ಪದ್ಧತಿಯ ಪರವಾಗಿ ತೀರ್ಪು ನೀಡಿತು. ನಾನು ಸುಪ್ರಿಂ ಕೋರ್ಟ್‌‌ಗೆ ದಿಕ್ಕಾರ ಹೇಳುತ್ತೇನೆ. ನಿಮ್ಮ ಬಾಯಿಗೆ ಸುಪ್ರಿಂಕೋರ್ಟ್ ಮಣ್ಣು ಹಾಕಿದೆ. ನೀವು ಗುತ್ತಿಗೆ ಪದ್ಧತಿಯಲ್ಲಿ ಕೆಲಸ ಮಾಡುತ್ತಿದ್ದರೆ ಅದಕ್ಕೆ ಬಿಜೆಪಿ ಮತ್ತು ಸುಪ್ರೀಂ ಕೋರ್ಟ್ ಕಾರಣ ಎಂದು ಆರೋಪಿಸಿದರು.

ಸಮಾವೇಶದಲ್ಲಿ ಕರ್ನಾಟಕ ಶ್ರಮಿಕ ಶಕ್ತಿ ಸಂಘಟನೆಯ ವರದರಾಜೇಂದ್ರ ಅವರು ಪ್ರಸ್ತಾವಿಕವಾಗಿ ಮಾತನಾಡಿದರು. ಹರಿಯಾಣದ ಜನಸಂಘರ್ಷ ಮಂಚ್‌ನ ಸುದೇಶ್‌ಕುಮಾರಿ, ಆಂಧ್ರಪ್ರದೇಶದ ಐಎಫ್‌‌ಟಿಯು ಸಂಘಟನೆಯ ಎಸ್.ವೆಂಕಟೇಶ್ವರ ರಾವ್‌, ಉತ್ತರಾಖಾಂಡ್‌ನ ಇಂಕಿಲಾಬಿ ಮಜ್ದೂರ್‌ ಕೇಂದ್ರದ ಕೈಲಾಶ್‌, ಬಿಹಾರದ ಐಎಫ್‌ಟಿಯು ಸಂಘಟನೆಯ ಸಿದ್ಧಾಂತ್‌ ವೇದಿಕೆಯಲ್ಲಿ ಹಾಜರಿದ್ದರು. ಕಾರ್ಮಿಕ ಇಲಾಖೆಯ ಡಿಎಲ್‌ಸಿ ರವಿಕುಮಾರ್‌ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಮಿಕರ ಹಕ್ಕೋತ್ತಾಯಗಳನ್ನು ಸ್ವೀಕರಿಸಿದರು.

ಸಮಾವೇಶದ ಹಕ್ಕೋತ್ತಾಯಗಳು


ಇದನ್ನೂ ಓದಿರಿ: ಹನುಮ ಜಯಂತಿ: ಕೆ.ಆರ್‌.ಪೇಟೆಯಲ್ಲಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 27 ಮಂದಿ ಸವರ್ಣೀಯರ ಮೇಲೆ ಎಫ್‌ಐಆರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...