Homeಕರ್ನಾಟಕಕೆಆರ್‌ಎಸ್‌ನ ಬೀಗ ನಮ್ಮ ಕೈಯಲ್ಲಿಲ್ಲ? ಕೇಂದ್ರದ ಕೈಯಲ್ಲಿದೆ: ಬೊಮ್ಮಾಯಿಗೆ ಡಿಕೆಶಿ ತಿರುಗೇಟು

ಕೆಆರ್‌ಎಸ್‌ನ ಬೀಗ ನಮ್ಮ ಕೈಯಲ್ಲಿಲ್ಲ? ಕೇಂದ್ರದ ಕೈಯಲ್ಲಿದೆ: ಬೊಮ್ಮಾಯಿಗೆ ಡಿಕೆಶಿ ತಿರುಗೇಟು

- Advertisement -
- Advertisement -

”ಕೆಆರ್‌ಎಸ್ ಅಣೆಕಟ್ಟಿನ ಬೀಗ ನಮ್ಮ ಕೈಯಲ್ಲಿ ಇಲ್ಲ, ಅದು ಕೇಂದ್ರ ಸರ್ಕಾರದ ಕೈಯಲ್ಲಿದೆ. ಈ ಕಾನೂನು ಬಗ್ಗೆ ಬೊಮ್ಮಾಯಿ ಅವರಿಗೆ ಗೊತ್ತಿಲ್ಲವೆ? ರಾಜಕಾರಣ ಯಾವ ವಿಚಾರದಲ್ಲಿ ಮಾಡಬೇಕೊ ಅದರಲ್ಲಿ ಮಾಡಬೇಕು, ಎಲ್ಲಾ ವಿಚಾರದಲ್ಲೂ ಅಲ್ಲ” ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ.

ಸರ್ಕಾರ ರಾಜ್ಯದ ರೈತರ ಹಿತ ಮರೆತು ತಮಿಳುನಾಡಿಗೆ ಕಾವೇರಿ ನೀರು ಹರಿಸಿದೆ ಎಂಬ ಮಾಜಿ ಸಿಎಂ ಬೊಮ್ಮಾಯಿ ಹಾಗೂ ಬಿಜೆಪಿ ನಾಯಕರ ಟೀಕೆ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, ”ತಮಿಳುನಾಡಿಗೆ ನೀರು ಬಿಡುವವರು ನಾವಲ್ಲ‌. ಅದರ ಅಧಿಕಾರ ಕೇಂದ್ರ ಸರ್ಕಾರದ ಬಳಿ ಇದೆ. ಈ ಬಗ್ಗೆ ಬೊಮ್ಮಾಯಿ ಅವರಿಗೆ ಗೊತ್ತಿಲ್ಲವೇ?” ಎಂದು ಕೇಳಿದ್ದಾರೆ.

”ರಾಜ್ಯದ ರೈತರ ಹಿತ ಕಾಪಾಡುವುದಕ್ಕೆ ನಮ್ಮ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಈ ಕಾರಣಕ್ಕೆ ಈಗಾಗಲೇ ನಾನು ಸಚಿವನಾದ ಬಳಿಕ 2 ಬಾರಿ ಬೆಳೆಗಳಿಗೆ ನೀರು ಹರಿಸಲು ಅನುಮತಿ ನೀಡಿದ್ದೇನೆ. ತಮಿಳುನಾಡಿನವರು 27 ಟಿಎಂಸಿ ನೀರು ಕೇಳಿದ್ದಾರೆ, ಅವರು ಕೇಳಿದಷ್ಟು ನೀರು ಕೊಟ್ಟಿಲ್ಲ. ನಾವು ನಮಗೆ ಇಚ್ಛೆ ಬಂದಂತೆ ವರ್ತಿಸಿದರೆ ಕೋರ್ಟ್ ಕೇಳಬೇಕಲ್ಲ” ಎಂದಿದ್ದಾರೆ.

”ತಮಿಳುನಾಡು ಸರ್ಕಾರ ಇತ್ತೀಚೆಗೆ ನಡೆದ ಕಾವೇರಿ ಟ್ರಿಬ್ಯುನಲ್ ಸಭೆಯನ್ನು ಬಹಿಷ್ಕರಿಸಿ ಹೋಗಿದೆ. ತಮಿಳುನಾಡಿನವರು ಹೀಗೆ ಸಂಘರ್ಷ ಮಾಡಿಕೊಂಡು ಇರಲು ಆಗುತ್ತದೆಯೇ? ಸರ್ಕಾರ ನಡೆಸುವವರು ಎಲ್ಲಾ ರೀತಿಯಲ್ಲೂ ಆಲೋಚನೆ ಮಾಡಬೇಕು. ನಾವು ಕಾನೂನು ತಜ್ಞರ ಸಲಹೆ ಕೇಳಿ ಅದರ ಅನುಗುಣವಾಗಿ ಹೆಜ್ಜೆ ಇಡಬೇಕಿದೆ. ಇಲ್ಲದಿದ್ದರೆ ಇನ್ನಷ್ಟು ದೊಡ್ಡ ನಷ್ಟವನ್ನು ನಾವು ಅನುಭವಿಸಬೇಕಾಗುತ್ತದೆ” ಎಂದು ಹೇಳಿದರು.

ಇದೇ ವೇಳೆ ರೈತರು ಪ್ರತಿಭಟನೆಗೆ ಮುಂದಾಗಿರುವ ವಿಚಾರದ ಬಗ್ಗೆ ಕೇಳಿದಾಗ, ”ಪ್ರತಿಭಟನೆ ಮಾಡುತ್ತಿರುವವರು ನಮ್ಮ ರೈತರೇ, ಪ್ರತಿಭಟನೆ ಅವರ ಹಕ್ಕು. ಆದರೆ ಸುಪ್ರಿಂ ಕೋರ್ಟ್ ನಮ್ಮ ಮಾತು ಕೇಳಬೇಕಲ್ಲ. ರೈತರಿಗೂ ನ್ಯಾಯಲಯದಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈ ಹಿಂದೆಯೂ ಅನೇಕ ಬಾರಿ ಕಾನೂನು ಹೋರಾಟ ನಡೆದಿದೆ” ಎಂದು ಉತ್ತರಿಸಿದರು.

”ಕಳೆದ 30-40 ವರ್ಷಗಳಲ್ಲಿ ಈ ವರ್ಷ ಕಡಿಮೆ ಪ್ರಮಾಣದ ಮಳೆ ಬಿದ್ದಿದೆ. ಇಂತಹ ಸಂಕಷ್ಟದ ಕಾಲದಲ್ಲೂ ನಾವು ನಮ್ಮ ರಾಜ್ಯದ ರೈತರ ಪರವಾಗಿಯೂ ಇದ್ದೇವೆ ಹಾಗೂ ಕಾನೂನಿಗೂ ಗೌರವ ನೀಡುತ್ತಿದ್ದೇವೆ ಎನ್ನುವ ಕಾರಣಕ್ಕೆ ನೀರು ಬಿಡುಗಡೆ ಮಾಡಿದ್ದೇವೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...