Homeಮುಖಪುಟಮಿಡತೆ ದಾಳಿ ಜುಲೈ ತಿಂಗಳಿನವರೆಗೂ ಮುಂದುವರೆಯಲಿದೆ: ಆಹಾರ ಮತ್ತು ಕೃಷಿ ಸಂಸ್ಥೆ

ಮಿಡತೆ ದಾಳಿ ಜುಲೈ ತಿಂಗಳಿನವರೆಗೂ ಮುಂದುವರೆಯಲಿದೆ: ಆಹಾರ ಮತ್ತು ಕೃಷಿ ಸಂಸ್ಥೆ

- Advertisement -
- Advertisement -

ಭಾರತದಲ್ಲಿ ಮಿಡತೆಗಳ ದಾಳಿ ಜುಲೈ ತಿಂಗಳವರೆಗೂ ಮುಂದುವರೆಯಲಿದ್ದು, ಇದಕ್ಕೆ ಕನಿಷ್ಠ ಏಳು ರಾಜ್ಯಗಳು ಗುರಿಯಾಗುವ ಸಾಧ್ಯತೆಯಿದೆ ಎಂದು ವಿಶ್ವಸಂಸ್ಥೆಯ ‘ಆಹಾರ ಮತ್ತು ಕೃಷಿ ಸಂಸ್ಥೆ (ಎಫ್‌ಎಓ)’ ಹೇಳಿದೆ.

ಜೂನ್ ತಿಂಗಳಿನ ಅಂತ್ಯದೊಳಗೆ ಮಿಡತೆಗಳ ದಾಳಿಯನ್ನು ತಡೆಯುವಲ್ಲಿ ಸರ್ಕಾರಗಳ ವಿಫಲವಾದರೆ, ದೊಡ್ಡ ಪ್ರಮಾಣದಲ್ಲಿ ಬೆಳೆ ನಷ್ಟವವನ್ನು ಎದುರಿಸಬೇಕಾಗುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಜೂನ್ ಅಂತ್ಯದಲ್ಲಿ ಮಿಡತೆಗಳು ರಾಜಸ್ಥಾನಕ್ಕೆ ಮರಳುವ ಮೊದಲು ಉತ್ತರ ಭಾರತದಲ್ಲಿ ವ್ಯಾಪಕವಾಗು ಹರಡಲಿರುವ ಬಗ್ಗೆ ಮರುಭೂಮಿ ಮಿಡತೆ ಬುಲೆಟಿನ್‌ನಲ್ಲಿ ಎಫ್‌ಎಓ ತಿಳಿಸಿದೆ.

ಭಾರತವು ಕಳೆದ ದಶಕಗಳಲ್ಲಿ ಇಂದೆದೂ ಎದುರಿಸಂದತಹ ಮಿಡತೆ ದಾಳಿಯನ್ನು ಕಳೆದ ತಿಂಗಳು ಎದುರಿಸಿದೆ. ಮಿಡತೆಗಳು ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ ಮತ್ತು ಹರಿಯಾಣದಲ್ಲಿ ಬೆಳೆಗಳನ್ನು ನಾಶಪಡಿಸಿದ್ದು, ನಂತರ ಮಿಡತಗಳು ಹಿಂಡು ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಪಂಜಾಬ್‌ಗೆ ನುಗ್ಗಿವೆ.

“ಇರಾನ್ ಮತ್ತು ಪಾಕಿಸ್ತಾನದಿಂದ ಬಂದಿರುವ ಮಿಡತೆಗಳ ಹಿಂಡುಗಳು ಜೂನ್‌ ಅಂತ್ಯದಲ್ಲಿ ರಾಜಸ್ಥಾನಕ್ಕೆ ಬರಲಿದ್ದು, ಅದರ ಜೊತೆಗೆ ಜುಲೈ ಆರಂಭದಲ್ಲಿ ಪೂರ್ವ ಆಫ್ರಿಕಾದಿಂದ   ಹೆಚ್ಚುವರಿ ಹಿಂಡುಗಳು ಗುಜರಾತ್ ಮತ್ತು ರಾಜಸ್ಥಾನಕ್ಕೆ ಬರುತ್ತವೆ” ಎಂದು ಬುಲೆಟಿನ್ ಹೇಳಿದೆ.

ಮಿಡತೆಗಳು ಬೆಳೆ ಪ್ರದೇಶಗಳಲ್ಲಿ ನೆಲೆಸುತ್ತಿದ್ದು, ಮಧ್ಯಪ್ರದೇಶ, ಉತ್ತರ ಪ್ರದೇಶ, ಮಹಾರಾಷ್ಟ್ರ, ಛತ್ತಿಸ್‌ಘಡ ಮತ್ತು ಪೂರ್ವಕ್ಕೆ ಬಿಹಾರ ಮತ್ತು ಒಡಿಶಾದವರೆಗೆ ಮುಂದುವರಿಯುವ ಸಾಧ್ಯತೆಯಿದೆ. ಈ ವೇಳೆಗೆ ವ್ಯಾಪಕಗೊಳ್ಳುವ ಹಿಂಡುಗಳು ಜುಲೈ ಆರಂಭದಲ್ಲಿ ಮಾನ್ಸೂನ್ ಆರಂಭದೊಂದಿಗೆ ರಾಜಸ್ಥಾನಕ್ಕೆ ಬರುತ್ತವೆ ಎಂದು ವಿಶ್ವಸಂಸ್ಥೆ ತಿಳಿಸಿದೆ.

ಮಾನ್ಸೂನ್‌ಗೆ ಮುಂಚಿತವಾಗಿ ಮೇ ತಿಂಗಳಲ್ಲಿ ನೈರುತ್ಯ ಪಾಕಿಸ್ತಾನದಿಂದ ರಾಜಸ್ಥಾನಕ್ಕೆ ಮಿಡತೆ ಹಿಂಡುಗಳ ವಲಸೆ ಆರಂಭವಾಗಿದ್ದು, 1962ರ ನಂತರ ಮೊದಲ ಬಾರಿಗೆ ಉತ್ತರ ರಾಜ್ಯಗಳಿಗೆ ಪ್ರಯಾಣ ಬೆಳೆಸಿವೆ ಎಂದು ಎಂದು ಎಫ್‌ಎಒ ಹೇಳಿದೆ.

ಹಿಂದೂಸ್ತಾನ್ ಟೈಮ್ಸ್ ಪ್ರಕಾರ, ರಾಜಸ್ಥಾನದ ಬಾರ್ಮರ್ ಮತ್ತು ಜೋಧ್ಪುರ್ ಜಿಲ್ಲೆಗಳ ಅನೇಕ ಗ್ರಾಮಗಳು ಮಿಡತೆ ದಾಳಿಗೆ ಒಳಗಾಗುತ್ತವೆ ಎಂದು ಕೇಂದ್ರ ಕೃಷಿ ಸಚಿವಾಲಯದ ಲೋಕಸ್ಟ್ ಎಚ್ಚರಿಕೆ ಸಂಸ್ಥೆ ತಿಳಿಸಿದೆ.

“ಇದುವರೆಗೆ 65,000 ಹೆಕ್ಟೇರ್ ಪ್ರದೇಶದಲ್ಲಿ ಮಿಡತೆಗಳನ್ನು ನಿಯಂತ್ರಿಸಲಾಗಿದೆ. ಮುಂಬ

ರುವ ದಿನಗಳಲ್ಲಿ ಮಿಡತೆಯ ಮೇಲೆ ಆಕ್ರಮಣಕ್ಕಾಗಿ ಜಾಗರೂಕತೆ ಮುಂದುವರಿಯುತ್ತದೆ” ಎಲ್‌ಡಬ್ಲ್ಯುಒ ಉಪನಿರ್ದೇಶಕ ಕೆ.ಎಲ್.ಗುರ್ಜರ್ ತಿಳಿಸಿದ್ದಾರೆ.

“ಮಿಡತೆಗಳ ನಿಯಂತ್ರಣ ಕಾರ್ಯಾಚರಣೆಯನ್ನು ಚುರುಕುಗೊಳಿಸಲಾಗಿದೆ ಮತ್ತು ಪೀಡಿತ ರಾಜ್ಯಗಳಲ್ಲಿ ಕೀಟನಾಶಕಗಳನ್ನು ವೈಮಾನಿಕವಾಗಿ ಸಿಂಪಡಿಸಲು ಡ್ರೋನ್‌ಗಳನ್ನು ನಿಯೋಜಿಸಲಾಗುವುದು ಎಂದು ಕೃಷಿ ಸಚಿವಾಲಯವು ಮೇ 27 ರಂದು ತಿಳಿಸಿತ್ತು.

ರಾಜಸ್ಥಾನದ 21, ಮಧ್ಯಪ್ರದೇಶದಲ್ಲಿ 18, ಗುಜರಾತ್‌ನಲ್ಲಿ ಎರಡು ಮತ್ತು ಪಂಜಾಬ್‌ನಲ್ಲಿ ಒಂದು ಜಿಲ್ಲೆಗಳಲ್ಲಿ ಬುಧವಾರದವರೆಗೆ 47,000 ಹೆಕ್ಟೇರ್‌ಗಿಂತಲೂ ಹೆಚ್ಚು ವಿಸ್ತಾರವಾದ 303 ಸ್ಥಳಗಳಲ್ಲಿ ಮಿಡತೆ ನಾಶಕ್ಕೆ ಔಷಧಿ ಸಿಂಪಡಿಸುವ ಕಾರ್ಯಾಚರಣೆ ನಡೆಸಲಾಗಿದೆ.

ಸಾಮಾನ್ಯವಾಗಿ, ಮಾನ್ಸೂನ್ ಆಗಮನದ ಸಂದರ್ಭದಲ್ಲಿ, ಮಿಡತೆ ಹಿಂಡುಗಳು ಜೂನ್-ಜುಲೈನಲ್ಲಿ ಸಂತಾನೋತ್ಪತ್ತಿಗಾಗಿ ಪಾಕಿಸ್ತಾನದ ಮೂಲಕ ಭಾರತದ ಮರುಭೂಮಿ ಪ್ರದೇಶಗಳಿಗೆ ಪ್ರವೇಶಿಸುತ್ತವೆ. ಆದರೆ ಈ ವರ್ಷ ಏಪ್ರಿಲ್ 30ಕ್ಕೂ ಹಿಂದೆಯೇ ರಾಜಸ್ಥಾನ ಮತ್ತು ಪಂಜಾಬ್‌ನಲ್ಲಿ ಮಿಡತೆಗಳು ಧಾವಿಸಿರುವುದು ವರದಿಯಾಗಿವೆ.

ಮಿಡತೆಗಳ ಸೈನ್ಯವು ಈ ವರ್ಷ ಭಾರತದ ಕೃಷಿಗೆ “ತೀವ್ರ ಅಪಾಯ” ಉಂಟುಮಾಡುತ್ತದೆ ಎಂದು ವಿಶ್ವಸಂಸ್ಥೆಯು ಈ ತಿಂಗಳ ಆರಂಭದಲ್ಲಿ ಎಚ್ಚರಿಸಿತ್ತು.


ಓದಿ: ಭಾರತಕ್ಕೆ ದಾಳಿ ಇಟ್ಟ ಮಿಡತೆಗಳು, ಕರ್ನಾಟಕಕ್ಕಿಲ್ಲ ಭಯ; ಏಕೆ ಗೊತ್ತಾ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...